Homeಕರೋನಾ ತಲ್ಲಣಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

- Advertisement -
- Advertisement -

ಸಾಂಕ್ರಾಮಿಕ ರೋಗದ ತೀವ್ರತೆಯನ್ನು ಅರಿತು ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಹಾಗಾದಾಗ ಅದು ಎಲ್ಲಾ ರಾಜ್ಯಗಳಿಗೆ ಸಮಾನ ಪ್ರಮಾಣದಲ್ಲಿ ಹಂಚಬಹುದಲ್ಲವೇ ಎಂದು ಸುಪ್ರೀಂ ಕೋರ್ಟ್ ನಿನ್ನೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಕೋವಿಡ್ ಲಸಿಕೆಯ ಉತ್ಪಾದನೆ, ದರನಿಗಧಿ ಮತ್ತು ವಿತರಣೆಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಸ್ವಯಂ ವಿಚಾರಣೆಯನ್ನು ಕೈಗತ್ತಿಕೊಂಡಿರುವ ಜಸ್ಟೀಸ್ ಚಂದ್ರಚೂಡ್‌ರವರ ನೇತೃತ್ವದ ಪೀಠ ಹಲವು ವಿಚಾರದಲ್ಲಿ ಕೇಂದ್ರ ಸರ್ಕಾರ ಎಡವುತ್ತಿರುವುದನ್ನು ಬೊಟ್ಟು ಮಾಡಿ ತೋರಿಸಿದೆ.

ಲಸಿಕೆಯ ದರನಿಗಧಿ ಮತ್ತು ವಿತರಣೆಯ ನಿರ್ಧಾರವನ್ನು ತಯಾರಿಕ ಕಂಪನಿಗಳಿಗೆ ಬಿಡಬಾರದು. ಸಾರ್ವಜನಿಕ ಹಿತಾಸಕ್ತಿಯ ಕಾರಣದಿಂದ ಈ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಹೊತ್ತುಕೊಳ್ಳಬೇಕು ಮತ್ತು ತನ್ನ ಅಧಿಕಾರ ಬಳಸಿ ಕಾರ್ಯಗತಗೊಳಿಸಬೇಕು ಎಂದು ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರವರಿಗೆ ಜಸ್ಟೀಸ್ ಚಂದ್ರಚೂಡ್‌ ತಿಳಿಸಿದ್ದಾರೆ.

ಅಸ್ಟ್ರಜನಕಾ ಕಂಪನಿಯು ಅಮೆರಿಕದ ನಾಗರಿಕರಿಗೆ ಅತಿ ಕಡಿಮೆ ಬೆಲೆಗೆ ಲಸಿಕೆ ನೀಡುತ್ತಿದೆ. ಆದರೆ ನಾವು ಮಾತ್ರ ಏಕೆ ಹೆಚ್ಚು ಪಾವತಿ ಮಾಡಬೇಕು? ತಯಾರಕರು ಕೇಂದ್ರ ಸರ್ಕಾರಕ್ಕೆ ಅಂದರೆ ನಿಮಗೆ 150ರೂ ಡೋಸ್ ನೀಡುತ್ತಾರೆ. ಆದರೆ ರಾಜ್ಯಗಳು 300 ಅಥವಾ 400 ರೂ ಭರಿಸಬೇಕು. ದೇಶವೇಕೆ ಇಷ್ಟು ಹಣ ಪಾವತಿ ಮಾಡಬೇಕು ಎಂದು ಜಸ್ಟೀಸ್ ರವೀಂದ್ರ ಭಟ್ ಪ್ರಶ್ನಿಸಿದ್ದಾರೆ.

“ಲಸಿಕೆಯ ಬೆಲೆ ಸಮಸ್ಯೆಗಳು ತೀರಾ ಗಂಭೀರವಾದ ವಿಷಯವಾಗಿದೆ. ಈ ದೇಶದ ಬಹುಸಂಖ್ಯಾತರು ಬಡವರು ಮತ್ತು ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳಾಗಿವೆ. ನಮ್ಮಲ್ಲಿ ಖಾಸಗಿ ವಲಯದ ಮಾದರಿ ಸಾಧ್ಯವಿಲ್ಲ. ಹಾಗಾಗಿ ನಾವು ರಾಷ್ಟ್ರೀಯ ರೋಗನಿರೋಧಕ ಮಾದರಿಯನ್ನು ಅನುಸರಿಸಬೇಕು” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

ರೆಮ್ಡೆಸಿವಿರ್, ಫಾಸಿಪುರಾವಿರ್ ಮತ್ತು ಟೊಸಿಲಿಜುಮಾಬ್ ಮುಂತಾದ ಔಷಧಗಳ ವಿಷಯದಲ್ಲಿ ಪೇಟೆಂಟ್ ಕಾಯ್ದೆಯ ಸೆಕ್ಷನ್ 100 ರ ಅಡಿಯಲ್ಲಿ ಸರ್ಕಾರಿ ಉದ್ದೇಶಗಳಿಗಾಗಿ ಪೇಟೆಂಟ್ ಬಳಸಲು ಉನ್ನತ ನ್ಯಾಯಾಲಯ ಏಕೆ ಅಧಿಕಾರ ನೀಡಬಾರದು? ಅಥವಾ ಪೇಟೆಂಟ್ ಕಾಯ್ದೆಯ ಸೆಕ್ಷನ್ 92 ರ ಅಡಿಯಲ್ಲಿ ಕಡ್ಡಾಯ ಪರವಾನಗಿಗಳನ್ನು ಏಕೆ ನೀಡಬಾರದು? ವಿಶೇಷವಾಗಿ ಅಂತಹ ನಿರ್ದೇಶನವು ಕಾನೂನು ಕ್ರಮಗಳ ಭಯವಿಲ್ಲದೆ ಈ ಔ ಷಧಿಗಳನ್ನು ತಯಾರಿಸಲು ಜೆನೆರಿಕ್ಸ್‌ಗೆ ಅನುವು ಮಾಡಿಕೊಡುತ್ತದೆ ಎಂದು ಸುಪ್ರೀಂ ತಿಳಿಸಿದೆ.

ಕೇಂದ್ರ ಸರ್ಕಾರವು ಖರೀದಿಸುವ ಶೇ.50 ರಷ್ಟು ಲಸಿಕೆಗಳನ್ನು ರಾಜ್ಯಗಳಿಗೆ ಯಾವಾಗ ನೀಡುತ್ತೀರಿ? ಅಲ್ಲದೇ ಕೇಂದ್ರ ಮತ್ತು ರಾಜ್ಯಗಳಿಗೆ ಲಸಿಕೆ ಬೆಲೆಯಲ್ಲಿನ ವ್ಯತ್ಯಾಸಕ್ಕೆ ತರ್ಕವೇನು? ಎಂದು ಕೋರ್ಟ್ ಕೇಂದ್ರವನ್ನು ಪ್ರಶ್ನಿಸಿದೆ.

ಮುಂದಿನ ಆರು ತಿಂಗಳುಗಳವರೆಗೆ ಲಸಿಕೆ ದಾಸ್ತಾನುಗಳ ಪ್ರಸ್ತುತ ಮತ್ತು ಯೋಜಿತ ಲಭ್ಯತೆಯನ್ನು ಕೇಂದ್ರ ಮತ್ತು ರಾಜ್ಯಗಳು ಸೂಚಿಸಬಹುದೇ? ರಾಜ್ಯಗಳಿಗೆ ಸಮಾನವಾಗಿ ಲಸಿಕೆ ಸಿಗುತ್ತದೆಯೇ? ಏಕೆಂದರೆ ಕೆಲ ರಾಜ್ಯಗಳು ಒಮ್ಮೆಗೆ ಹೆಚ್ಚು ಆರ್ಡರ್ ಮಾಡಿದರೆ ಉಳಿದ ರಾಜ್ಯಗಳು ಕಾಯುತ್ತಾ ಕೂರಬೇಕೆ? ಇದನ್ನು ಕೇಂದ್ರ ಸರ್ಕಾರ ಮೇಲ್ವಿಚಾರಣೆ ನಡೆಸುತ್ತದೆಯೇ? ಈಗಾಗಲೇ 45 ವ‍ರ್ಷ ಮೇಲ್ಪಟ್ಟವರಿಗೆ ಲಸಿಕೆ ಕೊರತೆಯಾಗುತ್ತಿದೆ ಎಂಬ ಪ್ರಶ್ನೆಗಳಿಗೆ ಉತ್ತರವೇನು ಎಂದು ಪ್ರಶ್ನಿಸಿದೆ.

18-44 ವಯಸ್ಸಿನವರಿಗೆ ಯಾವಾಗ ಲಸಿಕೆ ನೀಡಲಾಗುತ್ತದೆ? ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು. ಈ ಕುರಿತು ಅಫಿಡವಿಟ್ ಸಲ್ಲಿಸುತ್ತೀರಾ ಎಂದು ಪ್ರಶ್ನಿಸಿರುವ ಕೋರ್ಟ್, ಅನಕ್ಷರಸ್ಥ ಅಥವಾ ಇಂಟರ್ನೆಟ್ ಲಭ್ಯತೆ ಇಲ್ಲದ ವ್ಯಕ್ತಿಗಳಿಗೆ ಲಸಿಕೆ ನೋಂದಣಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೇಗೆ ಶಕ್ತಗೊಳಿಸುತ್ತವೆ ಎಂದಿದೆ.

ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 10 ರಂದು ನಡೆಸುತ್ತೇವೆ ಎಂದು ಕೋರ್ಟ್ ತಿಳಿಸಿದೆ.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...