Homeಕರೋನಾ ತಲ್ಲಣಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

- Advertisement -
- Advertisement -

ಸಾಂಕ್ರಾಮಿಕ ರೋಗದ ತೀವ್ರತೆಯನ್ನು ಅರಿತು ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಹಾಗಾದಾಗ ಅದು ಎಲ್ಲಾ ರಾಜ್ಯಗಳಿಗೆ ಸಮಾನ ಪ್ರಮಾಣದಲ್ಲಿ ಹಂಚಬಹುದಲ್ಲವೇ ಎಂದು ಸುಪ್ರೀಂ ಕೋರ್ಟ್ ನಿನ್ನೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಕೋವಿಡ್ ಲಸಿಕೆಯ ಉತ್ಪಾದನೆ, ದರನಿಗಧಿ ಮತ್ತು ವಿತರಣೆಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಸ್ವಯಂ ವಿಚಾರಣೆಯನ್ನು ಕೈಗತ್ತಿಕೊಂಡಿರುವ ಜಸ್ಟೀಸ್ ಚಂದ್ರಚೂಡ್‌ರವರ ನೇತೃತ್ವದ ಪೀಠ ಹಲವು ವಿಚಾರದಲ್ಲಿ ಕೇಂದ್ರ ಸರ್ಕಾರ ಎಡವುತ್ತಿರುವುದನ್ನು ಬೊಟ್ಟು ಮಾಡಿ ತೋರಿಸಿದೆ.

ಲಸಿಕೆಯ ದರನಿಗಧಿ ಮತ್ತು ವಿತರಣೆಯ ನಿರ್ಧಾರವನ್ನು ತಯಾರಿಕ ಕಂಪನಿಗಳಿಗೆ ಬಿಡಬಾರದು. ಸಾರ್ವಜನಿಕ ಹಿತಾಸಕ್ತಿಯ ಕಾರಣದಿಂದ ಈ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಹೊತ್ತುಕೊಳ್ಳಬೇಕು ಮತ್ತು ತನ್ನ ಅಧಿಕಾರ ಬಳಸಿ ಕಾರ್ಯಗತಗೊಳಿಸಬೇಕು ಎಂದು ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರವರಿಗೆ ಜಸ್ಟೀಸ್ ಚಂದ್ರಚೂಡ್‌ ತಿಳಿಸಿದ್ದಾರೆ.

ಅಸ್ಟ್ರಜನಕಾ ಕಂಪನಿಯು ಅಮೆರಿಕದ ನಾಗರಿಕರಿಗೆ ಅತಿ ಕಡಿಮೆ ಬೆಲೆಗೆ ಲಸಿಕೆ ನೀಡುತ್ತಿದೆ. ಆದರೆ ನಾವು ಮಾತ್ರ ಏಕೆ ಹೆಚ್ಚು ಪಾವತಿ ಮಾಡಬೇಕು? ತಯಾರಕರು ಕೇಂದ್ರ ಸರ್ಕಾರಕ್ಕೆ ಅಂದರೆ ನಿಮಗೆ 150ರೂ ಡೋಸ್ ನೀಡುತ್ತಾರೆ. ಆದರೆ ರಾಜ್ಯಗಳು 300 ಅಥವಾ 400 ರೂ ಭರಿಸಬೇಕು. ದೇಶವೇಕೆ ಇಷ್ಟು ಹಣ ಪಾವತಿ ಮಾಡಬೇಕು ಎಂದು ಜಸ್ಟೀಸ್ ರವೀಂದ್ರ ಭಟ್ ಪ್ರಶ್ನಿಸಿದ್ದಾರೆ.

“ಲಸಿಕೆಯ ಬೆಲೆ ಸಮಸ್ಯೆಗಳು ತೀರಾ ಗಂಭೀರವಾದ ವಿಷಯವಾಗಿದೆ. ಈ ದೇಶದ ಬಹುಸಂಖ್ಯಾತರು ಬಡವರು ಮತ್ತು ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳಾಗಿವೆ. ನಮ್ಮಲ್ಲಿ ಖಾಸಗಿ ವಲಯದ ಮಾದರಿ ಸಾಧ್ಯವಿಲ್ಲ. ಹಾಗಾಗಿ ನಾವು ರಾಷ್ಟ್ರೀಯ ರೋಗನಿರೋಧಕ ಮಾದರಿಯನ್ನು ಅನುಸರಿಸಬೇಕು” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

ರೆಮ್ಡೆಸಿವಿರ್, ಫಾಸಿಪುರಾವಿರ್ ಮತ್ತು ಟೊಸಿಲಿಜುಮಾಬ್ ಮುಂತಾದ ಔಷಧಗಳ ವಿಷಯದಲ್ಲಿ ಪೇಟೆಂಟ್ ಕಾಯ್ದೆಯ ಸೆಕ್ಷನ್ 100 ರ ಅಡಿಯಲ್ಲಿ ಸರ್ಕಾರಿ ಉದ್ದೇಶಗಳಿಗಾಗಿ ಪೇಟೆಂಟ್ ಬಳಸಲು ಉನ್ನತ ನ್ಯಾಯಾಲಯ ಏಕೆ ಅಧಿಕಾರ ನೀಡಬಾರದು? ಅಥವಾ ಪೇಟೆಂಟ್ ಕಾಯ್ದೆಯ ಸೆಕ್ಷನ್ 92 ರ ಅಡಿಯಲ್ಲಿ ಕಡ್ಡಾಯ ಪರವಾನಗಿಗಳನ್ನು ಏಕೆ ನೀಡಬಾರದು? ವಿಶೇಷವಾಗಿ ಅಂತಹ ನಿರ್ದೇಶನವು ಕಾನೂನು ಕ್ರಮಗಳ ಭಯವಿಲ್ಲದೆ ಈ ಔ ಷಧಿಗಳನ್ನು ತಯಾರಿಸಲು ಜೆನೆರಿಕ್ಸ್‌ಗೆ ಅನುವು ಮಾಡಿಕೊಡುತ್ತದೆ ಎಂದು ಸುಪ್ರೀಂ ತಿಳಿಸಿದೆ.

ಕೇಂದ್ರ ಸರ್ಕಾರವು ಖರೀದಿಸುವ ಶೇ.50 ರಷ್ಟು ಲಸಿಕೆಗಳನ್ನು ರಾಜ್ಯಗಳಿಗೆ ಯಾವಾಗ ನೀಡುತ್ತೀರಿ? ಅಲ್ಲದೇ ಕೇಂದ್ರ ಮತ್ತು ರಾಜ್ಯಗಳಿಗೆ ಲಸಿಕೆ ಬೆಲೆಯಲ್ಲಿನ ವ್ಯತ್ಯಾಸಕ್ಕೆ ತರ್ಕವೇನು? ಎಂದು ಕೋರ್ಟ್ ಕೇಂದ್ರವನ್ನು ಪ್ರಶ್ನಿಸಿದೆ.

ಮುಂದಿನ ಆರು ತಿಂಗಳುಗಳವರೆಗೆ ಲಸಿಕೆ ದಾಸ್ತಾನುಗಳ ಪ್ರಸ್ತುತ ಮತ್ತು ಯೋಜಿತ ಲಭ್ಯತೆಯನ್ನು ಕೇಂದ್ರ ಮತ್ತು ರಾಜ್ಯಗಳು ಸೂಚಿಸಬಹುದೇ? ರಾಜ್ಯಗಳಿಗೆ ಸಮಾನವಾಗಿ ಲಸಿಕೆ ಸಿಗುತ್ತದೆಯೇ? ಏಕೆಂದರೆ ಕೆಲ ರಾಜ್ಯಗಳು ಒಮ್ಮೆಗೆ ಹೆಚ್ಚು ಆರ್ಡರ್ ಮಾಡಿದರೆ ಉಳಿದ ರಾಜ್ಯಗಳು ಕಾಯುತ್ತಾ ಕೂರಬೇಕೆ? ಇದನ್ನು ಕೇಂದ್ರ ಸರ್ಕಾರ ಮೇಲ್ವಿಚಾರಣೆ ನಡೆಸುತ್ತದೆಯೇ? ಈಗಾಗಲೇ 45 ವ‍ರ್ಷ ಮೇಲ್ಪಟ್ಟವರಿಗೆ ಲಸಿಕೆ ಕೊರತೆಯಾಗುತ್ತಿದೆ ಎಂಬ ಪ್ರಶ್ನೆಗಳಿಗೆ ಉತ್ತರವೇನು ಎಂದು ಪ್ರಶ್ನಿಸಿದೆ.

18-44 ವಯಸ್ಸಿನವರಿಗೆ ಯಾವಾಗ ಲಸಿಕೆ ನೀಡಲಾಗುತ್ತದೆ? ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು. ಈ ಕುರಿತು ಅಫಿಡವಿಟ್ ಸಲ್ಲಿಸುತ್ತೀರಾ ಎಂದು ಪ್ರಶ್ನಿಸಿರುವ ಕೋರ್ಟ್, ಅನಕ್ಷರಸ್ಥ ಅಥವಾ ಇಂಟರ್ನೆಟ್ ಲಭ್ಯತೆ ಇಲ್ಲದ ವ್ಯಕ್ತಿಗಳಿಗೆ ಲಸಿಕೆ ನೋಂದಣಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೇಗೆ ಶಕ್ತಗೊಳಿಸುತ್ತವೆ ಎಂದಿದೆ.

ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 10 ರಂದು ನಡೆಸುತ್ತೇವೆ ಎಂದು ಕೋರ್ಟ್ ತಿಳಿಸಿದೆ.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...