Homeಕರೋನಾ ತಲ್ಲಣಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

- Advertisement -
- Advertisement -

ಸಾಂಕ್ರಾಮಿಕ ರೋಗದ ತೀವ್ರತೆಯನ್ನು ಅರಿತು ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಹಾಗಾದಾಗ ಅದು ಎಲ್ಲಾ ರಾಜ್ಯಗಳಿಗೆ ಸಮಾನ ಪ್ರಮಾಣದಲ್ಲಿ ಹಂಚಬಹುದಲ್ಲವೇ ಎಂದು ಸುಪ್ರೀಂ ಕೋರ್ಟ್ ನಿನ್ನೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಕೋವಿಡ್ ಲಸಿಕೆಯ ಉತ್ಪಾದನೆ, ದರನಿಗಧಿ ಮತ್ತು ವಿತರಣೆಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಸ್ವಯಂ ವಿಚಾರಣೆಯನ್ನು ಕೈಗತ್ತಿಕೊಂಡಿರುವ ಜಸ್ಟೀಸ್ ಚಂದ್ರಚೂಡ್‌ರವರ ನೇತೃತ್ವದ ಪೀಠ ಹಲವು ವಿಚಾರದಲ್ಲಿ ಕೇಂದ್ರ ಸರ್ಕಾರ ಎಡವುತ್ತಿರುವುದನ್ನು ಬೊಟ್ಟು ಮಾಡಿ ತೋರಿಸಿದೆ.

ಲಸಿಕೆಯ ದರನಿಗಧಿ ಮತ್ತು ವಿತರಣೆಯ ನಿರ್ಧಾರವನ್ನು ತಯಾರಿಕ ಕಂಪನಿಗಳಿಗೆ ಬಿಡಬಾರದು. ಸಾರ್ವಜನಿಕ ಹಿತಾಸಕ್ತಿಯ ಕಾರಣದಿಂದ ಈ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಹೊತ್ತುಕೊಳ್ಳಬೇಕು ಮತ್ತು ತನ್ನ ಅಧಿಕಾರ ಬಳಸಿ ಕಾರ್ಯಗತಗೊಳಿಸಬೇಕು ಎಂದು ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರವರಿಗೆ ಜಸ್ಟೀಸ್ ಚಂದ್ರಚೂಡ್‌ ತಿಳಿಸಿದ್ದಾರೆ.

ಅಸ್ಟ್ರಜನಕಾ ಕಂಪನಿಯು ಅಮೆರಿಕದ ನಾಗರಿಕರಿಗೆ ಅತಿ ಕಡಿಮೆ ಬೆಲೆಗೆ ಲಸಿಕೆ ನೀಡುತ್ತಿದೆ. ಆದರೆ ನಾವು ಮಾತ್ರ ಏಕೆ ಹೆಚ್ಚು ಪಾವತಿ ಮಾಡಬೇಕು? ತಯಾರಕರು ಕೇಂದ್ರ ಸರ್ಕಾರಕ್ಕೆ ಅಂದರೆ ನಿಮಗೆ 150ರೂ ಡೋಸ್ ನೀಡುತ್ತಾರೆ. ಆದರೆ ರಾಜ್ಯಗಳು 300 ಅಥವಾ 400 ರೂ ಭರಿಸಬೇಕು. ದೇಶವೇಕೆ ಇಷ್ಟು ಹಣ ಪಾವತಿ ಮಾಡಬೇಕು ಎಂದು ಜಸ್ಟೀಸ್ ರವೀಂದ್ರ ಭಟ್ ಪ್ರಶ್ನಿಸಿದ್ದಾರೆ.

“ಲಸಿಕೆಯ ಬೆಲೆ ಸಮಸ್ಯೆಗಳು ತೀರಾ ಗಂಭೀರವಾದ ವಿಷಯವಾಗಿದೆ. ಈ ದೇಶದ ಬಹುಸಂಖ್ಯಾತರು ಬಡವರು ಮತ್ತು ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳಾಗಿವೆ. ನಮ್ಮಲ್ಲಿ ಖಾಸಗಿ ವಲಯದ ಮಾದರಿ ಸಾಧ್ಯವಿಲ್ಲ. ಹಾಗಾಗಿ ನಾವು ರಾಷ್ಟ್ರೀಯ ರೋಗನಿರೋಧಕ ಮಾದರಿಯನ್ನು ಅನುಸರಿಸಬೇಕು” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

ರೆಮ್ಡೆಸಿವಿರ್, ಫಾಸಿಪುರಾವಿರ್ ಮತ್ತು ಟೊಸಿಲಿಜುಮಾಬ್ ಮುಂತಾದ ಔಷಧಗಳ ವಿಷಯದಲ್ಲಿ ಪೇಟೆಂಟ್ ಕಾಯ್ದೆಯ ಸೆಕ್ಷನ್ 100 ರ ಅಡಿಯಲ್ಲಿ ಸರ್ಕಾರಿ ಉದ್ದೇಶಗಳಿಗಾಗಿ ಪೇಟೆಂಟ್ ಬಳಸಲು ಉನ್ನತ ನ್ಯಾಯಾಲಯ ಏಕೆ ಅಧಿಕಾರ ನೀಡಬಾರದು? ಅಥವಾ ಪೇಟೆಂಟ್ ಕಾಯ್ದೆಯ ಸೆಕ್ಷನ್ 92 ರ ಅಡಿಯಲ್ಲಿ ಕಡ್ಡಾಯ ಪರವಾನಗಿಗಳನ್ನು ಏಕೆ ನೀಡಬಾರದು? ವಿಶೇಷವಾಗಿ ಅಂತಹ ನಿರ್ದೇಶನವು ಕಾನೂನು ಕ್ರಮಗಳ ಭಯವಿಲ್ಲದೆ ಈ ಔ ಷಧಿಗಳನ್ನು ತಯಾರಿಸಲು ಜೆನೆರಿಕ್ಸ್‌ಗೆ ಅನುವು ಮಾಡಿಕೊಡುತ್ತದೆ ಎಂದು ಸುಪ್ರೀಂ ತಿಳಿಸಿದೆ.

ಕೇಂದ್ರ ಸರ್ಕಾರವು ಖರೀದಿಸುವ ಶೇ.50 ರಷ್ಟು ಲಸಿಕೆಗಳನ್ನು ರಾಜ್ಯಗಳಿಗೆ ಯಾವಾಗ ನೀಡುತ್ತೀರಿ? ಅಲ್ಲದೇ ಕೇಂದ್ರ ಮತ್ತು ರಾಜ್ಯಗಳಿಗೆ ಲಸಿಕೆ ಬೆಲೆಯಲ್ಲಿನ ವ್ಯತ್ಯಾಸಕ್ಕೆ ತರ್ಕವೇನು? ಎಂದು ಕೋರ್ಟ್ ಕೇಂದ್ರವನ್ನು ಪ್ರಶ್ನಿಸಿದೆ.

ಮುಂದಿನ ಆರು ತಿಂಗಳುಗಳವರೆಗೆ ಲಸಿಕೆ ದಾಸ್ತಾನುಗಳ ಪ್ರಸ್ತುತ ಮತ್ತು ಯೋಜಿತ ಲಭ್ಯತೆಯನ್ನು ಕೇಂದ್ರ ಮತ್ತು ರಾಜ್ಯಗಳು ಸೂಚಿಸಬಹುದೇ? ರಾಜ್ಯಗಳಿಗೆ ಸಮಾನವಾಗಿ ಲಸಿಕೆ ಸಿಗುತ್ತದೆಯೇ? ಏಕೆಂದರೆ ಕೆಲ ರಾಜ್ಯಗಳು ಒಮ್ಮೆಗೆ ಹೆಚ್ಚು ಆರ್ಡರ್ ಮಾಡಿದರೆ ಉಳಿದ ರಾಜ್ಯಗಳು ಕಾಯುತ್ತಾ ಕೂರಬೇಕೆ? ಇದನ್ನು ಕೇಂದ್ರ ಸರ್ಕಾರ ಮೇಲ್ವಿಚಾರಣೆ ನಡೆಸುತ್ತದೆಯೇ? ಈಗಾಗಲೇ 45 ವ‍ರ್ಷ ಮೇಲ್ಪಟ್ಟವರಿಗೆ ಲಸಿಕೆ ಕೊರತೆಯಾಗುತ್ತಿದೆ ಎಂಬ ಪ್ರಶ್ನೆಗಳಿಗೆ ಉತ್ತರವೇನು ಎಂದು ಪ್ರಶ್ನಿಸಿದೆ.

18-44 ವಯಸ್ಸಿನವರಿಗೆ ಯಾವಾಗ ಲಸಿಕೆ ನೀಡಲಾಗುತ್ತದೆ? ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು. ಈ ಕುರಿತು ಅಫಿಡವಿಟ್ ಸಲ್ಲಿಸುತ್ತೀರಾ ಎಂದು ಪ್ರಶ್ನಿಸಿರುವ ಕೋರ್ಟ್, ಅನಕ್ಷರಸ್ಥ ಅಥವಾ ಇಂಟರ್ನೆಟ್ ಲಭ್ಯತೆ ಇಲ್ಲದ ವ್ಯಕ್ತಿಗಳಿಗೆ ಲಸಿಕೆ ನೋಂದಣಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೇಗೆ ಶಕ್ತಗೊಳಿಸುತ್ತವೆ ಎಂದಿದೆ.

ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 10 ರಂದು ನಡೆಸುತ್ತೇವೆ ಎಂದು ಕೋರ್ಟ್ ತಿಳಿಸಿದೆ.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...