HomeಮುಖಪುಟElection Results 2021 Live Updates: ಚೇತರಿಸಿದ ಅಸ್ಸಾಂ ಕಾಂಗ್ರೆಸ್‌‌; BJP ಗೆ ಗೆಲುವಿನಲ್ಲೂ ಹಿನ್ನಡೆ

Election Results 2021 Live Updates: ಚೇತರಿಸಿದ ಅಸ್ಸಾಂ ಕಾಂಗ್ರೆಸ್‌‌; BJP ಗೆ ಗೆಲುವಿನಲ್ಲೂ ಹಿನ್ನಡೆ

- Advertisement -
- Advertisement -

Election Results 2021 Live Updates | Assembly election 2021 result | latest election results | latest election news | NaanuGauri

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಆಡಳಿತ ಪಕ್ಷಗಳ ಮೈತ್ರಿಕೂಟ ಮುನ್ನಡೆ ಸಾಧಿಸುತ್ತಿದ್ದರೂ, ಕಾಂಗ್ರೆಸ್ ಚೇತರಿಸಿಕೊಳ್ಳುತ್ತಿದೆ. ಬಿಜೆಪಿ ಮೈತ್ರಿಕೂಟ ಇದುವರೆಗೂ 72 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದು ಮೈತ್ರಿ ಕೂಟದ ಕಳೆದ ಬಾರಿಗಿಂತ ಒಂದು ಸ್ಥಾನವು ಕಡಿಮೆಯಾಗಿದೆ. ಕಾಂಗ್ರೆಸ್‌ ಮೈತ್ರಿಕೂಟ 52 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಮೈತ್ರಿಕೂಟದಲ್ಲಿ ಬಿಜೆಪಿಯೊಂದೆ 57 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 60 ಸ್ಥಾನಗಳಲ್ಲಿ ಗೆಲುವು ಪಡೆದಿತ್ತು. ಕಾಂಗ್ರೆಸ್ ಈ ಬಾರಿ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಬಾರಿ ಪಕ್ಷವು 26 ಸ್ಥಾನಗಳನ್ನು ಪಡೆದಿತ್ತು.

ರಾಜ್ಯದಲ್ಲಿ ಇದುವರೆಗೂ ಬಿಜೆಪಿ ಮೈತ್ರಿಕೂಟದಲ್ಲಿ ಬಿಜೆಪಿ ಪಕ್ಷವೊಂದೆ 57 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಅದರ ಮೈತ್ರಿ ಪಕ್ಷಗಳಾದ
AGP ► 10 ಮುನ್ನಡೆ
UPPL ►5 ಮುನ್ನಡೆ ಸಾಧಿಸಿದೆ.

ಕಾಂಗ್ರಸ್ ಮೈತ್ರಿಕೂಟದಲ್ಲಿ ಪಕ್ಷವು 30 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಮೈತ್ರಿಪಕ್ಷಗಳಾದ
AIUDF ► 17 ಮುನ್ನಡೆ.
BPF ► 4 ಮುನ್ನಡೆ.
CPIM ► 1 ಮುನ್ನಡೆ ಸಾಧಿಸಿದೆ.

ಇದುವರೆಗೂ ರಾಜ್ಯದ ಫಲಿತಾಂಶ ಹೀಗಿದೆ.

ಅಸ್ಸಾಂ

126 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

BJP ಮೈತ್ರಿ ► 72 ಮುನ್ನಡೆ. Wins ► 19
ಕಾಂಗ್ರೆಸ್ ಮೈತ್ರಿ ► 52 ಮುನ್ನಡೆ. Wins ► 7
ಇತರೆ ► 2 ಮುನ್ನಡೆ.


ಕೇರಳ

ಕೇರಳದ ಇದುವರೆಗಿನ ರಾಜಕೀಯ ಇತಿಹಾಸವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರವು ಬದಲಾಯಿಸುವತ್ತ ಹೊರಟಿದೆ. ರಾಜ್ಯದಲ್ಲಿ ಸತತವಾಗಿ ಅಧಿಕಾರ ಹಿಡಿಯುವತ್ತ ಎಡರಂಗ ಸರ್ಕಾರ ಮುನ್ನುಗ್ಗುತ್ತಿದೆ. ಆದರೆ ಈ ಹಿಂದೆ ಇದ್ದ ಒಂದು ಕ್ಷೇತ್ರವನ್ನು ಕೂಡಾ ಬಿಜೆಪಿ ಕಳೆದುಕೊಂಡಿದೆ.

ಆರಂಭದಲ್ಲಿ ಕೇರಳದ ಪಾಲಕ್ಕಾಡ್, ಕಾಸರಗೋಡ್‌, ನೇಮಂನಲ್ಲಿ ಬಿಜೆಪಿ ಮುನ್ನಡೆಯಲ್ಲಿತ್ತು. ಇದೀಗ ಎಲ್ಲಾ ಕ್ಷೇತ್ರದಲ್ಲೂ ಬಿಜೆಪಿ ಮುಗ್ಗರಿಸಿದೆ.

ಮುಖ್ಯಮಂತ್ರಿ ಪಿಣರಾಯಿ ಈ ಹಿಂದೆ ಬಿಜೆಪಿಗೆ ಇರುವ ಒಂದು ಕ್ಷೇತ್ರವನ್ನು ಕೂಡಾ ‘ಕ್ಲೋಸ್’ ಮಾಡುವುದಾಗಿ ಹೇಳಿದ್ದರು.

ಈ ವರೆಗೆ ಕೇರಳದಲ್ಲಿ ಸಿಪಿಐ(ಎಂ) 62, ಸಿಪಿಐ 17, ಕಾಂಗ್ರೆಸ್‌ 21, ಮುಸ್ಲಿಂ ಲೀಗ್‌ 14, ಜೆಡಿ(ಎಸ್) 2 ಸ್ಥಾನಗಳಲ್ಲಿ ಮತ್ತು ಇತರೆ 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ರಾಜ್ಯದ 140 ಸ್ಥಾನಗಳ ಮತ ಎಣಿಕೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

ಸಿಪಿಎಂ ನೇತೃತ್ವದ LDF ► 100 ಮುನ್ನಡೆ. Wins ► 47
ಕಾಂಗ್ರೆಸ್ ನೇತೃತ್ವದ UDF ► 40 ಮುನ್ನಡೆ. Wins ► 10
ಬಿಜೆಪಿ ನೇತೃತ್ವದ NDA ► 0
ಇತರೆ ► 0


ತಮಿಳುನಾಡು

ತಮಿಳುನಾಡಿನಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಮಾಹಿತಿಯಂತೆ ವಿರೋಧ ಪಕ್ಷವಾದ ಡಿಎಂಕೆ ದಶಕಗಳ ನಂತರ ಅಧಿಕಾರ ಹಿಡಿಯುವತ್ತ ಹೊರಟಿದೆ. ಇದುವರೆಗಿನ ಮಾಹಿತಿಯಂತೆ ಡಿಎಂಕೆ ಒಕ್ಕೂಟವು 151 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

ಈ ಒಕ್ಕೂಟದಲ್ಲಿ ಡಿಎಂಕೆ ಒಂದೇ ಪಕ್ಷ 118 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಮೈತ್ರಿಪಕ್ಷಗಳಾದ ಕಾಂಗ್ರೆಸ್► 16
VCK► 5
DMK MDMK►4
DMK OTH►4
CPIM►2
CPI►2
ಮುಸ್ಲಿಂಲೀಗ್►0

ಆಡಳಿತ ಪಕ್ಷವಾದ AIADMK ಒಕ್ಕೂಟ 82 ಸ್ಥಾಗಳಲ್ಲಿ ಮಾತ್ರವೆ ಮುನ್ನಡೆ ಸಾಧಿಸಿದೆ. ಈ ಒಕ್ಕೂಟದಲ್ಲಿ AIADMK 73 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಉಳಿದಂತೆ ಮೈತ್ರಿ ಪಕ್ಷಗಳಾದ,
BJP► 3
PMK►5
AIADMK OTH► 1

ಕಮಲ ಹಾಸನ್ ಪಕ್ಷವಾದ ಮಕ್ಕಳ್ ನೀಡಿ ಮಯ್ಯಂ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರವೆ ಮುನ್ನಡೆ ಸಾಧಿಸಿದೆ.

ಇಲ್ಲಿವರೆಗಿನ ಫಲಿತಾಂಶ ಹೀಗಿದೆ.

234 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

DMK ಒಕ್ಕೂಟ ► 151 ಮುನ್ನಡೆ. Wins ► 22
AIADMK ಒಕ್ಕೂಟ ► 82 ಮುನ್ನಡೆ.( ಬಿಜೆಪಿ 3 ಕ್ಷೇತ್ರಗಳಲ್ಲಿ ಮುನ್ನಡೆ) Wins ► 6
ಕಮಲ್ ಹಾಸನ್ MNM ► 1 ಮುನ್ನಡೆ.


ಪಶ್ಚಿಮಬಂಗಾಳ

ಬಂಗಾಳದಲ್ಲಿ ಅಧಿಕಾರ ಹಿಡಿಯುವ ಭಾರಿ ನಿರೀಕ್ಷೆಯಲ್ಲಿದ್ದ ಬಿಜೆಪಿ ಮುಗ್ಗರಿಸುತ್ತಿದೆ. ಆಡಳಿತ ಪಕ್ಷ ಟಿಎಂಸಿ ಬಿಜೆಪಿಗಿಂತ ಎರಡು ಪಟ್ಟು ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಬಂಗಳಾದಲ್ಲಿ ಎಡಪಕ್ಷಗಳು ತಮ್ಮ ಅಸ್ತಿತ್ವ ತೋರುವಲ್ಲಿ ಎಡವಿದೆ.

ರಾಜ್ಯದ ಎಲ್ಲಾ 292 ಕ್ಷೇತ್ರಗಳಲ್ಲಿ ಎಣಿಕೆ ಪ್ರಾರಂಭವಾಗಿದೆ.

TMC ►  210 ಮುನ್ನಡೆ. Wins ► 66
BJP ►  79 ಮುನ್ನಡೆ. Wins ► 16
Cong & Left ► 2 ಮುನ್ನಡೆ.
ಇತರೆ ► 2 ಮುನ್ನಡೆ. Wins ► 1


 

ಪುದುಚೇರಿ

30 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಇದುವರೆಗೂ 20 ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

BJP ಮೈತ್ರಿ ► 12 ಮುನ್ನಡೆ. Wins ► 8
ಕಾಂಗ್ರೆಸ್ ಮೈತ್ರಿ ► 6 ಮುನ್ನಡೆ. Wins ► 3
ಇತರೆ ► 2 ಮುನ್ನಡೆ. Wins ► 1


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...