Homeಮುಖಪುಟಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ನಿಜವಾಗುತ್ತಿದೆ ಪ್ರಶಾಂತ್ ಕಿಶೋರ್ ಭವಿಷ್ಯ!

ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ನಿಜವಾಗುತ್ತಿದೆ ಪ್ರಶಾಂತ್ ಕಿಶೋರ್ ಭವಿಷ್ಯ!

ಒಂದು ವೇಳೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 100 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ಈ ರಾಜಕೀಯ ಕ್ಷೇತ್ರವನ್ನು ತ್ಯಜಿಸುತ್ತೇನೆ ಎಂದು ಕಿಶೋರ್ ಸವಾಲು ಹಾಕಿದ್ದರು.

- Advertisement -
- Advertisement -

“ಮಾಧ್ಯಮಗಳ ಭಾರೀ ಪ್ರಚಾರದ ನಡುವೆಯೂ ವಾಸ್ತವದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎರಡಂಕಿ ಸ್ಥಾನ ಮುಟ್ಟಲು ಹೆಣಗಾಡುತ್ತಿದೆ. ಒಂದು ವೇಳೆ ಅವರು ಈ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇ ಆದಲ್ಲಿ ನಾನು ಈ ಕ್ಷೇತ್ರ ತ್ಯಜಿಸುತ್ತೇನೆ, ಬರೆದಿಟ್ಟುಕೊಳ್ಳಿ”.. 2020ರ ಡಿಸೆಂಬರ್ 21 ರಂದು ಹೀಗೆ ಹೇಳಿದ್ದು ಸದ್ಯದ ಚುನಾವಣೆಯಲ್ಲಿ ಬಂಗಾಳದಲ್ಲಿ ಟಿಎಂಸಿ ಪರ ಮತ್ತು ತಮಿಳುನಾಡಿನಲ್ಲಿ ಡಿಎಂಕೆ ಪರ ಚುನಾವಣಾ ತಂತ್ರಜ್ಞನಾಗಿ ಕೆಲಸ ಮಾಡಿದ ರಾಜಕೀಯ ಚತುರ ಪ್ರಶಾಂತ್ ಕಿಶೋರ್..

ಅವರು ಈ ಮಾತು ಹೇಳಿ ನಾಲ್ಕು ತಿಂಗಳ ನಂತರ ಅದು ನಿಜವಾಗುತ್ತಿದೆ. ಇಂದು ಪಶ್ಚಿಮ ಬಂಗಾಳ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು 294 ವಿಧಾನಸಭಾ ಕ್ಷೇತ್ರಗಳಲ್ಲಿ 204 ಸ್ಥಾನಗಳಲ್ಲಿ ಟಿಎಂಸಿ ಭರ್ಜರಿ ಮುನ್ನಡೆ ಸಾಧಿಸಿ ಜಯದತ್ತ ಮುನ್ನುಗ್ಗುತ್ತಿದೆ. ಆದರೆ ಬಿಜೆಪಿ 84 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿ ತಿಣುಕಾಡುತ್ತಿದೆ. ಇನ್ನು ಅಂತಿಮ ಫಲಿತಾಂಶ ಘೋಷಣೆಯಾಗಿಲ್ಲದಿದ್ದರೂ ಈಗಿನ ಟ್ರೆಂಡ್‌ಗಳ ಪ್ರಕಾರ ಬಿಜೆಪಿ 100  ಸ್ಥಾನಗಳಲ್ಲಿ ಗೆಲ್ಲುವುದು ಅಸಾಧ್ಯದ ಮಾತು. ಹಾಗಾಗಿ ಪ್ರಶಾಂತ್ ಕಿಶೋರ್ ನುಡಿದಿದ್ದ ಭವಿಷ್ಯ ನಿಜವಾಗುತ್ತಲಿದೆ.

ಇದನ್ನೂ ಓದಿ: ಪ.ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ಒಂದು ವೇಳೆ ಗೆದ್ದರೆ ಈ ಕ್ಷೇತ್ರ ತ್ಯಜಿಸುತ್ತೇನೆ- ಪ್ರಶಾಂತ್ ಕಿಶೋರ್

ಈ ವರ್ಷದ ಫೆಬ್ರವರಿ 27 ರಂದು ಅವರು ತಮ್ಮ ಮಾತನ್ನು ಪುನರುಚ್ಚರಿಸಿದ್ದರು. “ಪ್ರಜಾಪ್ರಭುತ್ವದ ಉಳಿವಿಗಾಗಿ ಭಾರತದಲ್ಲಿ ನಡೆಯುತ್ತಿರುವ ಪ್ರಮುಖ ಕದನಗಳಲ್ಲಿ ಒಂದು ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿದೆ. ಇಲ್ಲಿನ ಜನರು ಸರಿಯಾದುದನ್ನು ಆಯ್ಕೆ ಮಾಡುವ ಮೂಲಕ ತಮ್ಮ ಸ್ಪಷ್ಟ ಸಂದೇಶವನ್ನು ತಿಳಿಸಲು ಸಜ್ಜಾಗಿದ್ದಾರೆ. ಪಶ್ಚಿಮ ಬಂಗಾಳ ತನ್ನ ಸ್ವಂತ ಮಗಳನ್ನು ಬಯಸುತ್ತಿದೆ. ನನ್ನ ಕೊನೆಯ ಟ್ವೀಟ್‌ನಲ್ಲಿ ಹೇಳಿದ್ದನ್ನು ಮಾಡಲು ಮೇ 2ರವರೆಗೆ ಕಾಯಿರಿ” ಎಂದು ಟ್ವೀಟ್ ಮಾಡಿದ್ದರು.

ಅಲ್ಲದೇ ಇಂಡಿಯಾ ಟುಡೆ ನಿರೂಪಕ ರಾಹುಲ್ ಕುನ್ವಾಲ್‌ಗೆ ಸಂದರ್ಶನ ನೀಡಿದ್ದಾಗ ಅವರು, ಬಿಜೆಪಿ 100 ಸ್ಥಾನಗಳನ್ನು ದಾಟುವುದಿಲ್ಲ ಎಂದು ಅವರು ಮತ್ತೆ ಸವಾಲು ಹಾಕಿದ್ದರು. ರಾಹುಲ್ ಕುನ್ವಾಲ್, “ಇದು ನಿಜವೇ? ಎಂದು ಪದೇ ಪದೇ ಕೇಳಿದ್ದರು. ಒಂದು ವೇಳೆ 100 ದಾಟಿದರೆ ನೀವು ಬೇರೆ ಏನು ಕೆಲಸ ಮಾಡುತ್ತೀರಿ” ಎಂದೆಲ್ಲಾ ಪ್ರಶ್ನಿಸಿದ್ದರು. ಆಗ ಪ್ರಶಾಂತ್ ಕಿಶೋರ್ ಆ ಸಂದರ್ಭ ಬಂದಾಗ ಯೋಚಿಸುತ್ತೇನೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದರು.

ಈಗ ಪ್ರಶಾಂತ್ ಕಿಶೋರ್ ಮಾತು ನಿಜವಾಗುತ್ತಿದ್ದು, ಬಂಗಾಳದಲ್ಲಿ ಬಿಜೆಪಿ 100 ಸ್ಥಾನಗಳನ್ನು ದಾಟಲು ಹೆಣಗಾಡುತ್ತಿದೆ. ಅಮಿತ್ ಶಾ ಮತ್ತು ಇತರ ಬಿಜೆಪಿ ನಾಯಕರು 200 ಸ್ಥಾನ ಗೆಲ್ಲುತ್ತೇವೆ, ಮುಂದಿನ ಸರ್ಕಾರ ನಮ್ಮದೆ ಎಂಬ ಹೇಳಿಕೆ ನೀಡಿದ್ದರು.

ಇನ್ನೊಂದೆಡೆ ಪ್ರಶಾಂತ್ ಕಿಶೋರ್ ಡಿಎಂಕೆ ಪರವಾಗಿ ಈ ಚುನಾವಣೆಯಲ್ಲಿ ಕೆಲಸ ಮಾಡಿದ್ದರು. ಡಿಎಂಕೆ ಸಹ ತಮಿಳುನಾಡಿನಲ್ಲಿ ಭರ್ಜರಿ ಜಯಗಳಿಸಿದೆ.


ಇದನ್ನೂ ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ, ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...