HomeಮುಖಪುಟWatch : ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧ ತೇಜ್ ಬಹದ್ದೂರ್ ಆಕ್ರೋಶದ ನುಡಿ...

Watch : ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧ ತೇಜ್ ಬಹದ್ದೂರ್ ಆಕ್ರೋಶದ ನುಡಿ…

- Advertisement -
- Advertisement -
ಜೈ ಹಿಂದ್
ದೇಶದ ನಿವಾಸಿಗಳೆ,
ನಿನ್ನೆ ನೀವೆಲ್ಲರೂ ನೋಡಿರಬಹುದು, ಯಾವ ರೀತಿ ನನ್ನ ನಾಮಪತ್ರ ತಿರಸ್ಕರಿಸಲು ಷಡ್ಯಂತ್ರ ರೂಪಿಸಲಾಗಿದೆ. ಒಂದು ನೋಟಿಸ್ ಮಧ್ಯಾಹ್ನ 3.00 ಗಂಟೆಗೆ ನೀಡಲಾಗುತ್ತದೆ. ಆ ನೋಟಿಸಗೆ ವಕೀಲರನ್ನು ಭೇಟಿಯಾಗಿ ಉತ್ತರ ನೀಡಲು ಬಯಸುತ್ತೇವೆ. ನೋಡಿ‌ ಇಲ್ಲಿಯ ಜಿಲ್ಲಾ ದಂಡಾಧಿಕಾರಿಗಳು/ಜಿಲ್ಲಾ ಚುನಾವಣಾಧಿಕಾರಿಗಳು ನಿಯಮಗಳನ್ನೇ ಬದಲಿಸಿಡುತ್ತಾರೆ. ಅಂದೇ ಸಾಯಂಕಾಲ 6.15 ಗಂಟೆಗೆ ಎರಡನೇಯ ನೋಟಿಸ್ ನೀಡಲಾಗುತ್ತದೆ. ನೋಟಿಸ್ ಮೂಲಕ ತಾವು ಚುನಾವಣಾ ಆಯೋಗ ದೆಹಲಿಗೆ ಹೋಗಿ ಅಲ್ಲಿಂದ ನಾಳೆ ಬೆಳಿಗ್ಗೆ 11.00 ಗಂಟೆಯೊಳಗೆ ನಾನು ಚುನಾವಣೆಗೆ ಸ್ಪರ್ಧಿಸಲು ಅರ್ಹನಿದ್ದೆನೆಯೋ ಇಲ್ಲವೋ ಎಂದು ಬರೆಸಿಕೊಂಡು ಬರಬೇಕು ಎಂದು ಹೇಳುತ್ತದೆ.
ದೇಶದ ನಾಗರಿಕರೆ, ತಾವು ನನಗೆ ಇದನ್ನು ತಿಳಿಸಿ. ಕಾನೂನು ಪ್ರಕಾರ ನಾನು ಪ್ರಮಾಣ ಪತ್ರವನ್ನು ಸಲ್ಲಿಸಿದ್ದೇನೆ, ಎಲ್ಲಾ ದಾಖಲೆಗಳನ್ನು ನೀಡಲಾಗಿದೆ. 24 ಎಪ್ರಿಲ್ ರಂದು ನಾಮಪತ್ರ ಸಲ್ಲಿಸಿದ್ದೇನೆ, ಅಂದು ನನ್ನ ಎಲ್ಲಾ ದಾಖಲೆ ಸರಿಯಿದೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿರುತ್ತಾರೆ. ಮತ್ತೆ 29 ನೇ ಎಪ್ರಿಲ್‌ ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದಾಗ ಅಂದು ಸಹ ನನಗೆ ಚುನಾವಣಾ ಆಯೋಗದಿಂದ ಯಾವುದೇ ವಿರೋಧ ವ್ಯಕ್ತವಾಗಲಿಲ್ಲ.
30ನೇ ಎಪ್ರಿಲ್ ರಂದು ನರೇಂದ್ರ ಮೋದಿಯವರ ಚಮಚಾಗಳು ವಿಶೇಷ ವಿಮಾನದಲ್ಲಿ ವಾರಣಾಸಿಗೆ ಬಂದು ಅಧಿಕಾರಿಗಳ ಮೇಲೆ ಒತ್ತಡವನ್ನು ಹೇರಿ ತೇಜ್ ಬಹುದ್ದೂರು ಅವರ ನಾಮಪತ್ರ ಯಾವುದೇ ಕಾರಣಕ್ಕೂ ಅಂಗೀಕಾರವಾಗಬಾರದು ಬದಲಿಗೆ ತಿರಸ್ಕಾರವಾಗಬೇಕೆಂದು ಹೇಳುತ್ತಾರೆ. ಜಿಲ್ಲಾ ಚುನಾವಣಾ ಅಧಿಕಾರಿ ಒತ್ತಡಕ್ಕೆ ಒಳಗಾಗಿ ಈ ರೀತಿ ನಡೆದುಕೊಂಡಿದ್ದಾರೆ.
ದೇಶದ ನಾಗರೀಕರಲ್ಲಿ ನನ್ನ ವಿನಂತಿ ಇದೆ, ಈಗ ತಾವು ಧ್ವನಿ ಎತ್ತದೆ ಇದ್ದರೆ ಪ್ರಜಾಪ್ರಭುತ್ವದ ಹತ್ಯೆಯಾಗುತ್ತದೆ. ಇವತ್ತು ಒಂದು ಅವಕಾಶವಿದೆ, ತಾವೆಲ್ಲರೂ ರಸ್ತೆಯ ಮೇಲೆ ಬನ್ನಿ ನನ್ನ ಪರವಾಗಿ ಪ್ರತಿಭಟನೆ ಮಾಡಿ. ಯಾಕೆಂದರೆ ಇದು ಸತ್ಯ ಮತ್ತು ಸುಳ್ಳಿನ ಹೋರಾಟವಾಗಿದೆ, ಇದೊಂದು ಶಡ್ಯಂತ್ರ ರಚಿಸಲಾಗಿದೆ. ದೇಶದ ನಿವಾಸಿಗಳೇ, ನೀವು ಎಲ್ಲೆ ಇರಿ, ಪ್ರತಿಭಟನೆ ದಾಖಲು ಮಾಡಿ, ಫೇಸ್‌ಬುಕ್‌, ವಾಟ್ಸ್-ಆಪ್, ಟ್ವಿಟರ್ ಮೂಲಕ ಬರೆಯಿರಿ. ಪ್ರಶ್ನೆ ಮಾಡಿ, ತೇಜ ಬಹುದ್ದೂರ ಅವರ ನಾಮಪತ್ರ ತಿರಸ್ಕರಿಸುವ ಅಧಿಕಾರ ನಿಮಗೆ ಯಾರು ನೀಡಿದ್ದಾರೆ ಎಂದು ಕೇಳಿ, ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.

ವಿಡಿಯೋ ನೋಡಿ

ನಾಮಪತ್ರ ತಿರಸ್ಕೃತಗೊಂಡ ನಂತರ ಮಾಜಿ ಯೋಧನ ಆಕ್ರೋಶದ ಮಾತುಗಳನ್ನು ಕೇಳಿ.

Naanu Gauri यांनी वर पोस्ट केले गुरुवार, २ मे, २०१९

ಈ ವಿಡಿಯೋ ಯಾರು ನೋಡುತ್ತಿದ್ದಿರೋ ಒಂದು ಗಂಟೆಯೊಳಗೆ ಪ್ರತಿಯೊಬ್ಬರು ಬಿಜೆಪಿ ಸರಕಾರವನ್ನು ಅಳ್ಳಾಡಿಸಿ. ಇದೇ ನನ್ನ ವಿನಂತಿಯಿದೆ. ಈಗ ನನಗೆ ನಿಮ್ಮ ಸಹಕಾರ ಬೇಕಿದೆ. ತೇಜ ಬಹದ್ದೂರ್ ಟ್ವಿಟರ್ ನಲ್ಲಿ ಟಾಪ್ ಟೆನ್ ನಲ್ಲಿ ಹೋಗುತ್ತಿದ್ದಾನೆ ಎಂದು ಇವರಿಗೆ ಅನಿಸಿತೋ ಅವಾಗ ಇವರ ತಂಡ ನನ್ನ ವಿರುದ್ದ ಷಡ್ಯಂತ್ರ ರಚಿಸಿದ್ದಾರೆ. ಇಲ್ಲಿ ಯೋಗಿ ಮತ್ತು ಮೋದಿ ರಾತ್ರಿ ಎರಡು ಗಂಟೆಗೆ ಅಧಿಕಾರಿಗಳ ಸಭೆ ಮಾಡುತ್ತಾರೆ. ಅರೇ ಹರಾಮಕೋರೋ ನಿಮಗೆ ಇಷ್ಟು ಹೆದರಿಕೆ ಇದ್ದರೆ, ಬನ್ನಿ ಎದುರಿಗೆ ಬಂದು ರನ್ನನ ನೇರವಾಗಿ ಏದುರಿಸಿ. ನನ್ನ ಬೆನ್ನಿನ ಹಿಂದೆ ಯಾಕೆ ಯುದ್ದ ಮಾಡುತ್ತೀರ? ನಾನು ಚಾಲೆಂಜ್ ಮಾಡುತ್ತೇನೆ ಬನ್ನಿ ನನಗೆ ನೇರವಾಗಿ ಕಣದಲ್ಲಿ ಏದುರಿಸಿ.
– ತೇಜ್ ಬಹದ್ದೂರ್ ಯಾದವ್
ಕನ್ನಡಕ್ಕೆ: ರಜಾಕ್ ಉಸ್ತಾದ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...