Homeಮುಖಪುಟಬಂಗಾಳಕ್ಕೆ ‘ದೀದಿ’, ತಮಿಳುನಾಡಿಗೆ ‘ಸ್ಟಾಲಿನ್’, ಕೇರಳಕ್ಕೆ ‘ವಿಜಯನ್’!

ಬಂಗಾಳಕ್ಕೆ ‘ದೀದಿ’, ತಮಿಳುನಾಡಿಗೆ ‘ಸ್ಟಾಲಿನ್’, ಕೇರಳಕ್ಕೆ ‘ವಿಜಯನ್’!

ಸಂಪೂರ್ಣ ಫಲಿತಾಂಶದ ಪಟ್ಟಿ ಹೀಗಿದೆ

- Advertisement -
- Advertisement -

Election Results 2021 Live Updates | Assembly election 2021 result | latest election results | latest election news | NaanuGauri

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಶನಿವಾರ ಮುಗಿದಿದೆ. ದೇಶದ ಜನರ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸ್ಪಷ್ಟ ಬಹುಮತ ಪಡೆದಿದೆ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಒಂದು ಕಾಲದ ಆಪ್ತ, ಬಿಜೆಪಿಯ ಅಭ್ಯರ್ಥಿ ಸುವೆಂಧು ಅಧಿಕಾರಿ ವಿರುದ್ದ ನಂದಿಗ್ರಾಮದಲ್ಲಿ ಸೋಲುಂಡಿದ್ದಾರೆ. ಕೇರಳದಲ್ಲಿ ಸತತವಾಗಿ ಎಡಕ್ಷಗಳು ಗದ್ದುಗೆಗೆ ಏರಿದೆ. ತಮಿಳುನಾಡಿನಲ್ಲಿ ಡಿಎಂಕೆ ದಶಕಗಳ ನಂತರ ರಾಜ್ಯವನ್ನು ಗೆದ್ದುಕೊಂಡಿದೆ. ಅಸ್ಸಾಂ ಮತ್ತೆ ಬಿಜೆಪಿಯ ತೆಕ್ಕೆಗೆ ಬಿದ್ದರೆ, ಪುದುಚೇರಿಯಲ್ಲಿ ಕೂಡಾ ಬಿಜೆಪಿ ಬಹುಮತಕ್ಕೇರಿದೆ.

ತಮ್ಮ ಸೋಲಿನ ಕುರಿತು ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, “ನಂದಿಗ್ರಾಮದ ಜನತೆ ಯಾವುದೇ ತೀರ್ಪು ಕೊಟ್ಟರೂ ಸ್ವೀಕರಿಸುತ್ತೇನೆ. ನಮ್ಮ ಬೃಹತ್ ವಿಜಯದಲ್ಲಿ ನಂದಿಗ್ರಾಮವನ್ನು ತ್ಯಾಗಮಾಡಬೇಕಾಗಿ ಬಂದಿದೆ. ಆದರೆ ನಾವು ಇಡೀ ರಾಜ್ಯವನ್ನು ಗೆದ್ದಿದ್ದೇವೆ. ಇದುವರೆಗೆ ಏನಾಗಿದೆಯೊ ಅದು ನಮಗೆ ಒಳಿತಾಗಿದೆ. ಆದರೆ ನಾನು ನಂದಿಗ್ರಾಮದ ಫಲಿತಾಂಶದ ವಿಚಾರದಲ್ಲಿ ಕೋರ್ಟಿಗೆ ಹೋಗುತ್ತೇನೆ. ಅಲ್ಲಿ ಕೆಲವು ದುಷ್ಕೃತ್ಯಗಳು ನಡೆದಿವೆ ಎಂದು ನಾನು ಕೇಳಿದ್ದೇನೆ” ಎಂದು ತಿಳಿಸಿದ್ದಾರೆ.

ಪಶ್ಚಿಮಬಂಗಾಳ – 292 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 148

TMC ► 214
BJP ► 76
Cong & Left ► 1
ಇತರೆ ► 1

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌


ಕೇರಳ – 140 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 71

ಕೇರಳದ ರಾಜಕೀಯ ಸಂಪ್ರದಾಯವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಬದಲಾಯಿಸಿದೆ. ನಾಲ್ಕು ದಶಕಗಳ ನಂತರ ಕೇರಳದಲ್ಲಿ ಸತತವಾಗಿ ಮೈತ್ರಿಕೂಟವೊಂದು ಅಧಿಕಾರ ಹಿಡಿಯಲಿದೆ. ಆದರೆ ಈ ಹಿಂದೆ ಇದ್ದ ಒಂದು ಕ್ಷೇತ್ರವನ್ನು ಕೂಡಾ ಬಿಜೆಪಿ ಕಳೆದುಕೊಂಡಿದೆ.

ಆರಂಭದಲ್ಲಿ ಕೇರಳದ ಪಾಲಕ್ಕಾಡ್, ಕಾಸರಗೋಡ್‌, ನೇಮಂನಲ್ಲಿ ಬಿಜೆಪಿ ಮುನ್ನಡೆಯಲ್ಲಿತ್ತಾದರೂ ಅಂತಿಮ ಘಟ್ಟದಲ್ಲಿ ಬಿಜೆಪಿ ಮುಗ್ಗರಿಸಿದೆ. ರಾಜ್ಯದಲ್ಲಿ ಬಿಜೆಪಿ ಈ ಹಿಂದೆ ಇದ್ದ ಒಂದು ಕ್ಷೇತ್ರವನ್ನು ಕೂಡಾ ಕಳೆದುಕೊಂಡಿದೆ.

ಮುಖ್ಯಮಂತ್ರಿ ಪಿಣರಾಯಿ ಈ ಹಿಂದೆ ಬಿಜೆಪಿಗೆ ಇರುವ ಒಂದು ಕ್ಷೇತ್ರವನ್ನು ಕೂಡಾ ‘ಕ್ಲೋಸ್’ ಮಾಡುವುದಾಗಿ ಹೇಳಿದ್ದರು. ಇದೀಗ ಕೇರಳದಲ್ಲಿ ಎಲ್‌ಡಿಎಫ್‌ 99 ಕ್ಷೇತ್ರಗಳೊಂದಿಗೆ ಬಹುಮತ ಪಡೆದಿದೆ.

ಸಿಪಿಎಂ ನೇತೃತ್ವದ LDF ► 99 Wins
ಕಾಂಗ್ರೆಸ್ ನೇತೃತ್ವದ UDF ► 41 
ಬಿಜೆಪಿ ನೇತೃತ್ವದ NDA► 0 Wins


ತಮಿಳುನಾಡು- 234 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 118 

ತಮಿಳುನಾಡಿನಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಮಾಹಿತಿಯಂತೆ ವಿರೋಧ ಪಕ್ಷವಾದ ಡಿಎಂಕೆ ದಶಕಗಳ ನಂತರ ಅಧಿಕಾರ ಹಿಡಿಯುವತ್ತ ಹೊರಟಿದೆ. ಆದರೆ ಡ್ರಾವಿಡನಾಡಿನಲ್ಲಿ ಬಿಜೆಪಿಯು ಮೊದಲ ಬಾರಿಗೆ ತನ್ನ ಖಾತೆಯನ್ನು ತೆರೆದಿದೆ.

DMK ಒಕ್ಕೂಟ ► 160
AIADMK ಒಕ್ಕೂಟ ► 74

ಇದನ್ನೂ ಓದಿ: `ಕೇರಳ 99′ – ಎಡ ಮೈತ್ರಿಯಲ್ಲಿರುವ ಎಲ್ಲಾ ಪಕ್ಷಗಳಿಗೂ ಸ್ಥಾನ


ಅಸ್ಸಾಂ – 126 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 64 

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಆಡಳಿತ ಪಕ್ಷಗಳ ಮೈತ್ರಿಕೂಟಕ್ಕೆ ಬಹುಮತ ದೊರಕಿದೆ. ಈ ಮೂಲಕ ಆಡಳಿತರೂಢ ಬಿಜೆಪಿ ನೇತೃತ್ವದ ಮೈತ್ರಿ ಮತ್ತೆಅಧಿಕಾರ ಹಿಡಿಯುವತ್ತ ದಾಪುಗಾಲಿಟ್ಟಿದೆ.

BJP ಮೈತ್ರಿ ► 75
ಕಾಂಗ್ರೆಸ್ ಮೈತ್ರಿ ► 50
ಇತರೆ ► 1


ಪುದುಚೇರಿ – 30 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 16

ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಬಹುಮತ ದೊರಕಿದೆ. ಇಲ್ಲಿ ಈ ಹಿಂದೆ ಬಿಜೆಪಿಯು ಆಪರೇಷನ್ ಕಮಲ ನಡೆಸಿ ಸರ್ಕಾರವನ್ನು ಕೆಡವಿಹಾಕಿತ್ತು.

BJP ಮೈತ್ರಿ ► 16
ಕಾಂಗ್ರೆಸ್ ಮೈತ್ರಿ ► 9
ಪಕ್ಷೇತರ ► 5


ಇದನ್ನೂ ಓದಿ: ಸುವೆಂದು ಅಧಿಕಾರಿ ವಿರುದ್ಧ ಸೋಲು: ಕೋರ್ಟಿಗೆ ಹೋಗುತ್ತೇನೆಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...