Homeಮುಖಪುಟಬಂಗಾಳಕ್ಕೆ ‘ದೀದಿ’, ತಮಿಳುನಾಡಿಗೆ ‘ಸ್ಟಾಲಿನ್’, ಕೇರಳಕ್ಕೆ ‘ವಿಜಯನ್’!

ಬಂಗಾಳಕ್ಕೆ ‘ದೀದಿ’, ತಮಿಳುನಾಡಿಗೆ ‘ಸ್ಟಾಲಿನ್’, ಕೇರಳಕ್ಕೆ ‘ವಿಜಯನ್’!

ಸಂಪೂರ್ಣ ಫಲಿತಾಂಶದ ಪಟ್ಟಿ ಹೀಗಿದೆ

- Advertisement -
- Advertisement -

Election Results 2021 Live Updates | Assembly election 2021 result | latest election results | latest election news | NaanuGauri

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಶನಿವಾರ ಮುಗಿದಿದೆ. ದೇಶದ ಜನರ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸ್ಪಷ್ಟ ಬಹುಮತ ಪಡೆದಿದೆ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಒಂದು ಕಾಲದ ಆಪ್ತ, ಬಿಜೆಪಿಯ ಅಭ್ಯರ್ಥಿ ಸುವೆಂಧು ಅಧಿಕಾರಿ ವಿರುದ್ದ ನಂದಿಗ್ರಾಮದಲ್ಲಿ ಸೋಲುಂಡಿದ್ದಾರೆ. ಕೇರಳದಲ್ಲಿ ಸತತವಾಗಿ ಎಡಕ್ಷಗಳು ಗದ್ದುಗೆಗೆ ಏರಿದೆ. ತಮಿಳುನಾಡಿನಲ್ಲಿ ಡಿಎಂಕೆ ದಶಕಗಳ ನಂತರ ರಾಜ್ಯವನ್ನು ಗೆದ್ದುಕೊಂಡಿದೆ. ಅಸ್ಸಾಂ ಮತ್ತೆ ಬಿಜೆಪಿಯ ತೆಕ್ಕೆಗೆ ಬಿದ್ದರೆ, ಪುದುಚೇರಿಯಲ್ಲಿ ಕೂಡಾ ಬಿಜೆಪಿ ಬಹುಮತಕ್ಕೇರಿದೆ.

ತಮ್ಮ ಸೋಲಿನ ಕುರಿತು ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, “ನಂದಿಗ್ರಾಮದ ಜನತೆ ಯಾವುದೇ ತೀರ್ಪು ಕೊಟ್ಟರೂ ಸ್ವೀಕರಿಸುತ್ತೇನೆ. ನಮ್ಮ ಬೃಹತ್ ವಿಜಯದಲ್ಲಿ ನಂದಿಗ್ರಾಮವನ್ನು ತ್ಯಾಗಮಾಡಬೇಕಾಗಿ ಬಂದಿದೆ. ಆದರೆ ನಾವು ಇಡೀ ರಾಜ್ಯವನ್ನು ಗೆದ್ದಿದ್ದೇವೆ. ಇದುವರೆಗೆ ಏನಾಗಿದೆಯೊ ಅದು ನಮಗೆ ಒಳಿತಾಗಿದೆ. ಆದರೆ ನಾನು ನಂದಿಗ್ರಾಮದ ಫಲಿತಾಂಶದ ವಿಚಾರದಲ್ಲಿ ಕೋರ್ಟಿಗೆ ಹೋಗುತ್ತೇನೆ. ಅಲ್ಲಿ ಕೆಲವು ದುಷ್ಕೃತ್ಯಗಳು ನಡೆದಿವೆ ಎಂದು ನಾನು ಕೇಳಿದ್ದೇನೆ” ಎಂದು ತಿಳಿಸಿದ್ದಾರೆ.

ಪಶ್ಚಿಮಬಂಗಾಳ – 292 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 148

TMC ► 214
BJP ► 76
Cong & Left ► 1
ಇತರೆ ► 1

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌


ಕೇರಳ – 140 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 71

ಕೇರಳದ ರಾಜಕೀಯ ಸಂಪ್ರದಾಯವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಬದಲಾಯಿಸಿದೆ. ನಾಲ್ಕು ದಶಕಗಳ ನಂತರ ಕೇರಳದಲ್ಲಿ ಸತತವಾಗಿ ಮೈತ್ರಿಕೂಟವೊಂದು ಅಧಿಕಾರ ಹಿಡಿಯಲಿದೆ. ಆದರೆ ಈ ಹಿಂದೆ ಇದ್ದ ಒಂದು ಕ್ಷೇತ್ರವನ್ನು ಕೂಡಾ ಬಿಜೆಪಿ ಕಳೆದುಕೊಂಡಿದೆ.

ಆರಂಭದಲ್ಲಿ ಕೇರಳದ ಪಾಲಕ್ಕಾಡ್, ಕಾಸರಗೋಡ್‌, ನೇಮಂನಲ್ಲಿ ಬಿಜೆಪಿ ಮುನ್ನಡೆಯಲ್ಲಿತ್ತಾದರೂ ಅಂತಿಮ ಘಟ್ಟದಲ್ಲಿ ಬಿಜೆಪಿ ಮುಗ್ಗರಿಸಿದೆ. ರಾಜ್ಯದಲ್ಲಿ ಬಿಜೆಪಿ ಈ ಹಿಂದೆ ಇದ್ದ ಒಂದು ಕ್ಷೇತ್ರವನ್ನು ಕೂಡಾ ಕಳೆದುಕೊಂಡಿದೆ.

ಮುಖ್ಯಮಂತ್ರಿ ಪಿಣರಾಯಿ ಈ ಹಿಂದೆ ಬಿಜೆಪಿಗೆ ಇರುವ ಒಂದು ಕ್ಷೇತ್ರವನ್ನು ಕೂಡಾ ‘ಕ್ಲೋಸ್’ ಮಾಡುವುದಾಗಿ ಹೇಳಿದ್ದರು. ಇದೀಗ ಕೇರಳದಲ್ಲಿ ಎಲ್‌ಡಿಎಫ್‌ 99 ಕ್ಷೇತ್ರಗಳೊಂದಿಗೆ ಬಹುಮತ ಪಡೆದಿದೆ.

ಸಿಪಿಎಂ ನೇತೃತ್ವದ LDF ► 99 Wins
ಕಾಂಗ್ರೆಸ್ ನೇತೃತ್ವದ UDF ► 41 
ಬಿಜೆಪಿ ನೇತೃತ್ವದ NDA► 0 Wins


ತಮಿಳುನಾಡು- 234 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 118 

ತಮಿಳುನಾಡಿನಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಮಾಹಿತಿಯಂತೆ ವಿರೋಧ ಪಕ್ಷವಾದ ಡಿಎಂಕೆ ದಶಕಗಳ ನಂತರ ಅಧಿಕಾರ ಹಿಡಿಯುವತ್ತ ಹೊರಟಿದೆ. ಆದರೆ ಡ್ರಾವಿಡನಾಡಿನಲ್ಲಿ ಬಿಜೆಪಿಯು ಮೊದಲ ಬಾರಿಗೆ ತನ್ನ ಖಾತೆಯನ್ನು ತೆರೆದಿದೆ.

DMK ಒಕ್ಕೂಟ ► 160
AIADMK ಒಕ್ಕೂಟ ► 74

ಇದನ್ನೂ ಓದಿ: `ಕೇರಳ 99′ – ಎಡ ಮೈತ್ರಿಯಲ್ಲಿರುವ ಎಲ್ಲಾ ಪಕ್ಷಗಳಿಗೂ ಸ್ಥಾನ


ಅಸ್ಸಾಂ – 126 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 64 

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಆಡಳಿತ ಪಕ್ಷಗಳ ಮೈತ್ರಿಕೂಟಕ್ಕೆ ಬಹುಮತ ದೊರಕಿದೆ. ಈ ಮೂಲಕ ಆಡಳಿತರೂಢ ಬಿಜೆಪಿ ನೇತೃತ್ವದ ಮೈತ್ರಿ ಮತ್ತೆಅಧಿಕಾರ ಹಿಡಿಯುವತ್ತ ದಾಪುಗಾಲಿಟ್ಟಿದೆ.

BJP ಮೈತ್ರಿ ► 75
ಕಾಂಗ್ರೆಸ್ ಮೈತ್ರಿ ► 50
ಇತರೆ ► 1


ಪುದುಚೇರಿ – 30 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 16

ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಬಹುಮತ ದೊರಕಿದೆ. ಇಲ್ಲಿ ಈ ಹಿಂದೆ ಬಿಜೆಪಿಯು ಆಪರೇಷನ್ ಕಮಲ ನಡೆಸಿ ಸರ್ಕಾರವನ್ನು ಕೆಡವಿಹಾಕಿತ್ತು.

BJP ಮೈತ್ರಿ ► 16
ಕಾಂಗ್ರೆಸ್ ಮೈತ್ರಿ ► 9
ಪಕ್ಷೇತರ ► 5


ಇದನ್ನೂ ಓದಿ: ಸುವೆಂದು ಅಧಿಕಾರಿ ವಿರುದ್ಧ ಸೋಲು: ಕೋರ್ಟಿಗೆ ಹೋಗುತ್ತೇನೆಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...