Homeಫ್ಯಾಕ್ಟ್‌ಚೆಕ್ಇಂದೋರ್‌ನಲ್ಲಿನ ಈ ಕೊರೊನಾ ಆರೈಕೆ ಕೇಂದ್ರ RSS ನಿರ್ಮಿಸಿದ್ದಲ್ಲ!

ಇಂದೋರ್‌ನಲ್ಲಿನ ಈ ಕೊರೊನಾ ಆರೈಕೆ ಕೇಂದ್ರ RSS ನಿರ್ಮಿಸಿದ್ದಲ್ಲ!

ಕೆಲವರು ಕತಾರ್‌ನ ‘ಅಲ್ ಬೈತ್‌’ ಕ್ರೀಡಾಂಗಣದ ಫೋಟೋವನ್ನು ಬಳಸಿಕೊಂಡು ಆರೆಸ್ಸೆಸ್‌ ಮಧ್ಯಪ್ರದೇಶದಲ್ಲಿ ನಿರ್ಮಿಸಿದ ಕೊರೊನಾ ಕೇಂದ್ರ ಎಂದೂ ತಪ್ಪಾಗಿ ಹಂಚಿಕೊಳ್ಳುತ್ತಿದ್ದಾರೆ.

- Advertisement -
- Advertisement -

‘‘ಇದು ಇಂದೋರ್‌ನಲ್ಲಿರುವ ಭಾರತದ ಎರಡನೇ ಅತಿದೊಡ್ಡ ಕೊರೊನಾ ಆರೈಕೆ ಕೇಂದ್ರ. ನಾಲ್ಕು ಆಮ್ಲಜನಕ ಘಟಕಗಳನ್ನು ಹೊಂದಿರುವ, 6000 ಹಾಸಿಗೆಗಳ ಬೃಹತ್ ವೈದ್ಯಕೀಯ ಸೌಲಭ್ಯವಿರುವ ಈ ಕೊರೊನಾ ಆಸ್ಪತ್ರೆಯನ್ನು ಆರೆಸ್ಸೆಸ್‌ ಸ್ಥಾಪಿಸಿದೆ” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಪೋಟೋಗಳನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ಕಳೆದ ಒಂದು ವಾರದಿಂದ ಈ ಸಂದೇಶ ವೈರಲ್ ಆಗಿದ್ದು, ನೋಡಿ ಇದೇ ನಿಜವಾದ ದೇಶಭಕ್ತಿ ಎಂದು ಬಿಜೆಪಿ ಅನುಯಾಯಿಗಳು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಬಿಜೆಪಿ ಬೆಂಬಲಿಗರಾದ ಹರ್ಷವರ್ಧನ್ ಮುಪ್ಪವರಪು, ಅರುಣ್ ಪುದೂರ್ ಇಂತಹ ಪೋಸ್ಟ್‌ಗಳನ್ನು ಸಮಾಜಿಕ ಜಾಲತಾಣದಲ್ಲಿ ಮಾಡಿದ್ದಾರೆ.

ಇದನ್ನೂ ಓದಿ: 85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ಸುಳ್ಳು, ಹಾಗೊಂದು ಘಟನೆಯೆ ನಡೆದಿಲ್ಲ!

ಬಿಜೆಪಿ ದೆಹಲಿ ಉಪಾಧ್ಯಕ್ಷ ರಾಜನ್ ತಿವಾರಿ ಅವರು ಆರೆಸ್ಸೆಸನ್ನು ಟ್ಯಾಗ್ ಮಾಡಿ ಇಂತಹದೆ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಹಲವಾರು ಬಲಪಂಥೀಯ ಬೆಂಬಲಿಗರು ಈ ಸಂದೇಶವನ್ನು ಹಂಚಿಕೊಂಡಿದ್ದು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದಾಗಿದೆ.

ಫ್ಯಾಕ್ಟ್‌ಚೆಕ್

ಏಪ್ರಿಲ್ 22 ರ ಎಎನ್‌ಐ ವರದಿಯ ಪ್ರಕಾರ, ‘ಮಧ್ಯಪ್ರದೇಶದ ಅತಿದೊಡ್ಡ ಕೊರೊನಾ ಆರೈಕೆ ಕೇಂದ್ರವನ್ನು ಇಂದೋರ್‌ನಲ್ಲಿ ನಿರ್ಮಿಸಲಾಗಿದೆ. ಇದನ್ನು ಮೊದಲಿಗೆ 600 ಹಾಸಿಗೆಗಳೊಂದಿಗೆ ಪ್ರಾರಂಭಿಸಲಾಯಿತು, ನಂತರ ಅದನ್ನು 6000 ಕ್ಕೆ ಹೆಚ್ಚಿಸಲಾಗುತ್ತದೆ. ಇಂದೋರ್‌ನ ರಾಧಾ ಸೋಮಿ ಸತ್ಸಂಗ್ ಬಿಯಾಸ್ ಸಂಸ್ಥೆಯ ಮೈದಾನವನ್ನು ಮಾ ಅಹಿಲ್ಯ ಕೊರೊನಾ ಆರೈಕೆ ಕೇಂದ್ರವಾಗಿ ಪರಿವರ್ತಿಸಲಾಯಿತು’.

ಈ ವರದಿಯಲ್ಲಿ ಮುಖ್ಯಮಂತ್ರಿ ಪರವಾಗಿ ರಾಧಾ ಸೋಮಿ ಸತ್ಸಂಗ್ ಬಿಯಾಸ್ ಅವರಿಗೆ ಧನ್ಯವಾದಗಳನ್ನು ವ್ಯಕ್ತಪಡಿಸುವ ಬಿಜೆಪಿ ಶಾಸಕ ತುಳಸಿ ಸಿಲಾವತ್ ಅವರ ಹೇಳಿಕೆಯೂ ಸೇರಿದೆ.

“ಮೊದಲ ಹಂತದಲ್ಲಿ 600 ಹಾಸಿಗೆಗಳು ಲಭ್ಯವಾಗುತ್ತವೆ. ಅಲ್ಲಿ ಆರೆಸ್ಸೆಸ್‌ ಕಾರ್ಯಕರ್ತರು ಕೂಡಾ ಸ್ವಯಂ ಸೇವಕರಾಗಿದ್ದಾರೆ. ಇಂದೋರ್‌ನ ಅನೇಕ ಕೈಗಾರಿಕೋದ್ಯಮಿಗಳು ಮತ್ತು ಉದ್ಯಮಿಗಳು ಈ ಆರೈಕೆ ಕೇಂದ್ರಕ್ಕಾಗಿ ಹಣ ಮತ್ತು ಉಪಕರಣಗಳನ್ನು ದಾನ ಮಾಡಿದ್ದಾರೆ. ನಾನು ಅವರಿಗೆ ಕೃತಜ್ಞನಾಗಿದ್ದೇನೆ” ಎಂದು ಅವರು ಹೇಳಿದ್ದರು.

ಇದೇ ಸುದ್ದಿಯನ್ನು ನ್ಯೂಸ್18, ಎನ್‌ಡಿಟಿವಿ ಮತ್ತು ಅಮರ್ ಉಜಲಾ ಕೂಡಾ ಮಾಡಿತ್ತು. ಆದರೆ, ಈ ವರದಿಗಳಲ್ಲಿ ಈ ಆಸ್ಪತ್ರೆಯನ್ನು ಆರೆಸ್ಸೆಸ್‌ ನಿರ್ಮಿಸಿದೆ ಎಂದು ಉಲ್ಲೇಖಿಸಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಶಾದ್ಯಂತ ಆಕ್ಸಿಜನ್ ಪ್ಲಾಂಟ್‌ ಸ್ಥಾಪನೆ ವಿಳಂಬಕ್ಕೆ ಮೋದಿ ಸರ್ಕಾರವೇ ಕಾರಣ ಹೊರತು ರಾಜ್ಯಗಳಲ್ಲ

ನ್ಯೂಸ್ 18 ಮಾಡಿರುವ ವರದಿಯೊಂದು ಹೀಗಿದೆ, ‘ಸೇವೆಗಳನ್ನು ಒದಗಿಸಲು ಮತ್ತು ರೋಗಿಗಳನ್ನು ನೋಡಿಕೊಳ್ಳಲು ಆರ್‌ಎಸ್‌ಎಸ್ ಕಾರ್ಯಕರ್ತರು ಕೂಡಾ ಕೇಂದ್ರದಲ್ಲಿ ಇರುತ್ತಾರೆ. ರೋಗಿಗಳ ಸುರಕ್ಷತೆ ಮತ್ತು ಮೇಲ್ವಿಚಾರಣೆಗಾಗಿ ಕ್ಯಾಂಪಸ್‌ನಾದ್ಯಂತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ”

ಈ ಬಗ್ಗೆ ಸ್ಪಷ್ಟೀಕರಣಕ್ಕಾಗಿ ಮಧ್ಯಪ್ರದೇಶದ ಕೊರೊನಾ ಸಲಹಾ ಸಮಿತಿಯ ಸದಸ್ಯ ಡಾ.ನಿಶಾಂತ್ ಖರೆ ಅವರನ್ನು ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ‘ಆಲ್ಟ್‌ನ್ಯೂಸ್‌’ ಸಂಪರ್ಕಿಸಿದ್ದು, ಅವರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಹೇಳಿಕೆಗಳನ್ನು ನಿರಾಕರಿಸಿದ್ದಾರೆ.

“ಮಾ ಅಹಿಲ್ಯ ಕೊರೊನಾ ಕೇರ್ ಸೆಂಟರ್ ಅನ್ನು ರಾಧಾ ಸೋಮಿ ಸತ್ಸಂಗ್ ಬಿಯಾಸ್ ಕ್ಯಾಂಪಸ್‌ನಲ್ಲಿ ನಿರ್ಮಿಸಲಾಗಿದೆ. ಮುಂದಕ್ಕೆ 6000 ಹಾಸಿಗೆಗಳನ್ನು ಇಲ್ಲಿ ವ್ಯವಸ್ಥೆಗೊಳಿಸಲಾಗುತ್ತದೆ. ನಾವು ಮೊದಲ ಹಂತದಲ್ಲಿ 600 ಹಾಸಿಗೆಗಳನ್ನು ವ್ಯವಸ್ಥೆಗೊಳಿಸಿದ್ದೇವೆ. ಮುಂದಕ್ಕೆ 600 ರಂತೆ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುತ್ತೇವೆ. ಇದಕ್ಕೆ ಆಡಳಿತವು ಮೂಲಭೂತ ಸೌಲಭ್ಯಗಳನ್ನು ಒದಗಿಸಿದ್ದು, ಜಿಲ್ಲಾಡಳಿತವು ಅದರ ಮಾಲೀಕತ್ವವನ್ನು ಪಡೆದುಕೊಂಡಿದೆ. ವೈದ್ಯಕೀಯ ಸೌಲಭ್ಯಗಳ ನಿರ್ವಹಣೆ ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ವ್ಯವಸ್ಥೆಗೊಳಿಸುವ ಜವಾಬ್ದಾರಿಯನ್ನು ಮಧ್ಯಪ್ರದೇಶ ಸರ್ಕಾರ ಹೊಂದಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮರಣ ಪ್ರಮಾಣಪತ್ರದಲ್ಲೂ ಮೋದಿ ಚಿತ್ರ?

ರಾಧಾ ಸೋಮಿ ಸತ್ಸಂಗ್ ಬಿಯಾಸ್ ಸಂಸ್ಥೆ ಕೂಡಾ ಪ್ರಮುಖ ಕೊಡುಗೆ ನೀಡಿದ್ದಾರೆ. ಸಂಸ್ಥೆಯು ಎಲ್ಲರಿಗೂ ಆಹಾರ ಮತ್ತು ನೀರಿನ ವ್ಯವಸ್ಥೆಯನ್ನು ನೋಡಿಕೊಳ್ಳುತ್ತಿದೆ. ಇದಲ್ಲದೆ, ನಮಗೆ ವ್ಯಾಪಕವಾದ ಸಾಮಾಜಿಕ ಬೆಂಬಲ ದೊರೆತಿದೆ. ಇದು ತುಂಬಾ ದೊಡ್ಡದಾಗಿದ್ದು, ಸರ್ಕಾರದ ಕೊಡುಗೆ 20% ಕ್ಕೆ ಇಳಿದಿದೆ. ಸ್ಥಳೀಯರ ಸಹಾಯದಿಂದ ಹಾಸಿಗೆಗಳು, ಟೆಂಟ್ ಮನೆಗಳು ಮತ್ತು ಕೂಲಿಂಗ್ ಲಾಗ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.

ರೋಗಿಯ ಕಿಟ್‌ಗಳಂತಹ ಇತರ ಅಗತ್ಯ ವಸ್ತುಗಳು, ಎಲ್ಲಾ ದೈನಂದಿನ ಬಳಕೆಯ ವಸ್ತುಗಳನ್ನು ಸಹ ನಾಗರಿಕರಿಂದ ಸಹಾಯದಿಂದ ಸಂಗ್ರಹಿಸಿದ್ದವೆ. ಇದುವರೆಗೂ 120 ಆಮ್ಲಜನಕ ಸಾಂದ್ರಕಗಳನ್ನು ದೇಣಿಗೆ ರೂಪದಲ್ಲಿ ಸ್ವೀಕರಿಸಿದ್ದೇವೆ. ಸರ್ಕಾರವು ಅವುಗಳನ್ನು ಖರೀದಿಸುವ ಅಗತ್ಯವಿಲ್ಲ. ಇವೆಲ್ಲವನ್ನೂ ಜಿಲ್ಲಾಡಳಿತ ಮತ್ತು ಸಮುದಾಯದ ಸಹಾಯದಿಂದ ಉತ್ತಮವಾಗಿ ನಡೆಸಲಾಗುತ್ತಿದೆ. ಆರೆಸ್ಸೆಸ್‌ ಕೇಂದ್ರವನ್ನು ನಡೆಸುತ್ತಿದೆ ಎಂಬ ಬಗ್ಗೆ ಸಾಮಾಜಿಕ ಮಾಧ್ಯಮಗಳ ಹೇಳಿಕೆ/ಸಂದೇಶ ಸಂಪೂರ್ಣವಾಗಿ ಸುಳ್ಳು. ಇದನ್ನು ಸರ್ಕಾರ ಮತ್ತು ಸಾಮಾಜಿಕ ಬೆಂಬಲದೊಂದಿಗೆ ನಿರ್ಮಿಸಲಾಗಿದೆ.

ವಕೀಲರ ಬಾರ್ ಅಸೋಸಿಯೇಷನ್ ಮತ್ತು ರಿಯಲ್ ಎಸ್ಟೇಟ್ ಅಸೋಸಿಯೇಷನ್‌ ಸಹ ಇದಕ್ಕಾಗಿ ದಾನ ಮಾಡಿವೆ. ಈ ಸೌಲಭ್ಯಕ್ಕಾಗಿ ಪ್ರತಿಯೊಬ್ಬರೂ ಒಂದೊಂದು ರೀತಿಯಲ್ಲಿ ಕೊಡುಗೆ ನೀಡಿದ್ದಾರೆ. ಮುಖ್ಯವಾಗಿ ರಾಧಾ ಸೋಮಿ ಸತ್ಸಂಗ್ ಬಿಯಾಸ್ ಹೆಚ್ಚಿನ ಕೊಡುಗೆ ನಿಡುತ್ತಿದೆ. ಆರೆಸ್ಸೆಸ್‌ ಮತ್ತು ಸೇವಾ ಭಾರತಿಯ 75 ಸ್ವಯಂಸೇವಕರು ಪ್ರತಿದಿನ ಇಲ್ಲಿ ಭದ್ರತಾ ವ್ಯವಸ್ಥೆಗಳನ್ನು ಮತ್ತು ಅಡುಗೆ ಮಾಡುವ ರಾಧಾ ಸ್ವಾಮಿ ಸತ್ಸಂಗದ ಕಾರ್ಯಕರ್ತರಿಗೆ ನೆರವು ಮಾಡುತ್ತಾರೆ” ಎಂದು ಡಾ.ನಿಶಾಂತ್‌ ಖರೆ ಹೇಳಿದ್ದಾರೆ.

ಇದನ್ನೂ ಓದಿ: ಆದಿತ್ಯನಾಥ್ ಕುರಿತ ಪೋಸ್ಟ್ ಕಾರ್ಡ್‌ ಸುಳ್ಳು ಬಯಲು; ವಾಸ್ತವದಲ್ಲಿ ಇದು ಉಲ್ಟಾ ಕೇಸು

ಒಟ್ಟಿನಲ್ಲಿ ಮಧ್ಯಪ್ರದೇಶದಲ್ಲಿ ಅತಿದೊಡ್ಡ ಕೊರೊನಾ ಸೌಲಭ್ಯವನ್ನು ಸ್ಥಳೀಯ ಸಮುದಾಯದ ಬೆಂಬಲದೊಂದಿಗೆ ನಿರ್ಮಿಸಲಾಗಿದೆಯೆ ಹೊರತು ಆರೆಸ್ಸೆಸ್ ಸ್ಥಾಪಿಸಿದೆ ಎಂಬುವುದು ಸುಳ್ಳು ಸುದ್ದಿಯಾಗಿದೆ. ಅಲ್ಲಿ ಕೆಲವೆ ಕೆಲವು ಆರೆಸ್ಸೆಸ್‌ ಕಾರ್ಯಕರ್ತರು ಉಪಕೆಲಸಗಳಿಗೆ ಸಹಾಯ ಮಾಡುತ್ತಿದ್ದಾರೆ.

ಇದರ ಜೊತೆಗೆ ಕತಾರ್‌ನ ‘ಅಲ್ ಬೈತ್‌’ ಕ್ರೀಡಾಂಗಣದ ಫೋಟೋವನ್ನು ಬಳಸಿಕೊಂಡು, ಆರೆಸ್ಸೆಸ್‌‌ ನಿರ್ಮಿಸಿದ ಕೊರೊನಾ ಕೇಂದ್ರ ಎಂದು ಸುಳ್ಳನ್ನ ಹಂಚಿಕೊಳ್ಳುತ್ತಿದ್ದಾರೆ.

ಅದನ್ನು ನೀವು ಇಲ್ಲಿ, ಇಲ್ಲಿ ನೋಡಬಹುದಾಗಿದೆ.

(ಕೃಪೆ: ಅಲ್ಟ್ ನ್ಯೂಸ್)

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮಮತಾ ದರ್ಗಾಕ್ಕೆ ರಹಸ್ಯ ಭೇಟಿ ನೀಡಿಲ್ಲ, ಮಾಧ್ಯಮದ ಸಮ್ಮುಖದಲ್ಲೇ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...