Homeಫ್ಯಾಕ್ಟ್‌ಚೆಕ್ಇಂದೋರ್‌ನಲ್ಲಿನ ಈ ಕೊರೊನಾ ಆರೈಕೆ ಕೇಂದ್ರ RSS ನಿರ್ಮಿಸಿದ್ದಲ್ಲ!

ಇಂದೋರ್‌ನಲ್ಲಿನ ಈ ಕೊರೊನಾ ಆರೈಕೆ ಕೇಂದ್ರ RSS ನಿರ್ಮಿಸಿದ್ದಲ್ಲ!

ಕೆಲವರು ಕತಾರ್‌ನ ‘ಅಲ್ ಬೈತ್‌’ ಕ್ರೀಡಾಂಗಣದ ಫೋಟೋವನ್ನು ಬಳಸಿಕೊಂಡು ಆರೆಸ್ಸೆಸ್‌ ಮಧ್ಯಪ್ರದೇಶದಲ್ಲಿ ನಿರ್ಮಿಸಿದ ಕೊರೊನಾ ಕೇಂದ್ರ ಎಂದೂ ತಪ್ಪಾಗಿ ಹಂಚಿಕೊಳ್ಳುತ್ತಿದ್ದಾರೆ.

- Advertisement -
- Advertisement -

‘‘ಇದು ಇಂದೋರ್‌ನಲ್ಲಿರುವ ಭಾರತದ ಎರಡನೇ ಅತಿದೊಡ್ಡ ಕೊರೊನಾ ಆರೈಕೆ ಕೇಂದ್ರ. ನಾಲ್ಕು ಆಮ್ಲಜನಕ ಘಟಕಗಳನ್ನು ಹೊಂದಿರುವ, 6000 ಹಾಸಿಗೆಗಳ ಬೃಹತ್ ವೈದ್ಯಕೀಯ ಸೌಲಭ್ಯವಿರುವ ಈ ಕೊರೊನಾ ಆಸ್ಪತ್ರೆಯನ್ನು ಆರೆಸ್ಸೆಸ್‌ ಸ್ಥಾಪಿಸಿದೆ” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಪೋಟೋಗಳನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ಕಳೆದ ಒಂದು ವಾರದಿಂದ ಈ ಸಂದೇಶ ವೈರಲ್ ಆಗಿದ್ದು, ನೋಡಿ ಇದೇ ನಿಜವಾದ ದೇಶಭಕ್ತಿ ಎಂದು ಬಿಜೆಪಿ ಅನುಯಾಯಿಗಳು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಬಿಜೆಪಿ ಬೆಂಬಲಿಗರಾದ ಹರ್ಷವರ್ಧನ್ ಮುಪ್ಪವರಪು, ಅರುಣ್ ಪುದೂರ್ ಇಂತಹ ಪೋಸ್ಟ್‌ಗಳನ್ನು ಸಮಾಜಿಕ ಜಾಲತಾಣದಲ್ಲಿ ಮಾಡಿದ್ದಾರೆ.

ಇದನ್ನೂ ಓದಿ: 85 ವ‍ರ್ಷದ RSSನ ವೃದ್ದರೊಬ್ಬರು ಕೊರೊನಾ ಪೀಡಿತ ಯುವಕನಿಗಾಗಿ ತನ್ನ ಬೆಡ್ ಬಿಟ್ಟು ಕೊಟ್ಟಿದ್ದು ಸುಳ್ಳು, ಹಾಗೊಂದು ಘಟನೆಯೆ ನಡೆದಿಲ್ಲ!

ಬಿಜೆಪಿ ದೆಹಲಿ ಉಪಾಧ್ಯಕ್ಷ ರಾಜನ್ ತಿವಾರಿ ಅವರು ಆರೆಸ್ಸೆಸನ್ನು ಟ್ಯಾಗ್ ಮಾಡಿ ಇಂತಹದೆ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಹಲವಾರು ಬಲಪಂಥೀಯ ಬೆಂಬಲಿಗರು ಈ ಸಂದೇಶವನ್ನು ಹಂಚಿಕೊಂಡಿದ್ದು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದಾಗಿದೆ.

ಫ್ಯಾಕ್ಟ್‌ಚೆಕ್

ಏಪ್ರಿಲ್ 22 ರ ಎಎನ್‌ಐ ವರದಿಯ ಪ್ರಕಾರ, ‘ಮಧ್ಯಪ್ರದೇಶದ ಅತಿದೊಡ್ಡ ಕೊರೊನಾ ಆರೈಕೆ ಕೇಂದ್ರವನ್ನು ಇಂದೋರ್‌ನಲ್ಲಿ ನಿರ್ಮಿಸಲಾಗಿದೆ. ಇದನ್ನು ಮೊದಲಿಗೆ 600 ಹಾಸಿಗೆಗಳೊಂದಿಗೆ ಪ್ರಾರಂಭಿಸಲಾಯಿತು, ನಂತರ ಅದನ್ನು 6000 ಕ್ಕೆ ಹೆಚ್ಚಿಸಲಾಗುತ್ತದೆ. ಇಂದೋರ್‌ನ ರಾಧಾ ಸೋಮಿ ಸತ್ಸಂಗ್ ಬಿಯಾಸ್ ಸಂಸ್ಥೆಯ ಮೈದಾನವನ್ನು ಮಾ ಅಹಿಲ್ಯ ಕೊರೊನಾ ಆರೈಕೆ ಕೇಂದ್ರವಾಗಿ ಪರಿವರ್ತಿಸಲಾಯಿತು’.

ಈ ವರದಿಯಲ್ಲಿ ಮುಖ್ಯಮಂತ್ರಿ ಪರವಾಗಿ ರಾಧಾ ಸೋಮಿ ಸತ್ಸಂಗ್ ಬಿಯಾಸ್ ಅವರಿಗೆ ಧನ್ಯವಾದಗಳನ್ನು ವ್ಯಕ್ತಪಡಿಸುವ ಬಿಜೆಪಿ ಶಾಸಕ ತುಳಸಿ ಸಿಲಾವತ್ ಅವರ ಹೇಳಿಕೆಯೂ ಸೇರಿದೆ.

“ಮೊದಲ ಹಂತದಲ್ಲಿ 600 ಹಾಸಿಗೆಗಳು ಲಭ್ಯವಾಗುತ್ತವೆ. ಅಲ್ಲಿ ಆರೆಸ್ಸೆಸ್‌ ಕಾರ್ಯಕರ್ತರು ಕೂಡಾ ಸ್ವಯಂ ಸೇವಕರಾಗಿದ್ದಾರೆ. ಇಂದೋರ್‌ನ ಅನೇಕ ಕೈಗಾರಿಕೋದ್ಯಮಿಗಳು ಮತ್ತು ಉದ್ಯಮಿಗಳು ಈ ಆರೈಕೆ ಕೇಂದ್ರಕ್ಕಾಗಿ ಹಣ ಮತ್ತು ಉಪಕರಣಗಳನ್ನು ದಾನ ಮಾಡಿದ್ದಾರೆ. ನಾನು ಅವರಿಗೆ ಕೃತಜ್ಞನಾಗಿದ್ದೇನೆ” ಎಂದು ಅವರು ಹೇಳಿದ್ದರು.

ಇದೇ ಸುದ್ದಿಯನ್ನು ನ್ಯೂಸ್18, ಎನ್‌ಡಿಟಿವಿ ಮತ್ತು ಅಮರ್ ಉಜಲಾ ಕೂಡಾ ಮಾಡಿತ್ತು. ಆದರೆ, ಈ ವರದಿಗಳಲ್ಲಿ ಈ ಆಸ್ಪತ್ರೆಯನ್ನು ಆರೆಸ್ಸೆಸ್‌ ನಿರ್ಮಿಸಿದೆ ಎಂದು ಉಲ್ಲೇಖಿಸಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಶಾದ್ಯಂತ ಆಕ್ಸಿಜನ್ ಪ್ಲಾಂಟ್‌ ಸ್ಥಾಪನೆ ವಿಳಂಬಕ್ಕೆ ಮೋದಿ ಸರ್ಕಾರವೇ ಕಾರಣ ಹೊರತು ರಾಜ್ಯಗಳಲ್ಲ

ನ್ಯೂಸ್ 18 ಮಾಡಿರುವ ವರದಿಯೊಂದು ಹೀಗಿದೆ, ‘ಸೇವೆಗಳನ್ನು ಒದಗಿಸಲು ಮತ್ತು ರೋಗಿಗಳನ್ನು ನೋಡಿಕೊಳ್ಳಲು ಆರ್‌ಎಸ್‌ಎಸ್ ಕಾರ್ಯಕರ್ತರು ಕೂಡಾ ಕೇಂದ್ರದಲ್ಲಿ ಇರುತ್ತಾರೆ. ರೋಗಿಗಳ ಸುರಕ್ಷತೆ ಮತ್ತು ಮೇಲ್ವಿಚಾರಣೆಗಾಗಿ ಕ್ಯಾಂಪಸ್‌ನಾದ್ಯಂತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ”

ಈ ಬಗ್ಗೆ ಸ್ಪಷ್ಟೀಕರಣಕ್ಕಾಗಿ ಮಧ್ಯಪ್ರದೇಶದ ಕೊರೊನಾ ಸಲಹಾ ಸಮಿತಿಯ ಸದಸ್ಯ ಡಾ.ನಿಶಾಂತ್ ಖರೆ ಅವರನ್ನು ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ‘ಆಲ್ಟ್‌ನ್ಯೂಸ್‌’ ಸಂಪರ್ಕಿಸಿದ್ದು, ಅವರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಹೇಳಿಕೆಗಳನ್ನು ನಿರಾಕರಿಸಿದ್ದಾರೆ.

“ಮಾ ಅಹಿಲ್ಯ ಕೊರೊನಾ ಕೇರ್ ಸೆಂಟರ್ ಅನ್ನು ರಾಧಾ ಸೋಮಿ ಸತ್ಸಂಗ್ ಬಿಯಾಸ್ ಕ್ಯಾಂಪಸ್‌ನಲ್ಲಿ ನಿರ್ಮಿಸಲಾಗಿದೆ. ಮುಂದಕ್ಕೆ 6000 ಹಾಸಿಗೆಗಳನ್ನು ಇಲ್ಲಿ ವ್ಯವಸ್ಥೆಗೊಳಿಸಲಾಗುತ್ತದೆ. ನಾವು ಮೊದಲ ಹಂತದಲ್ಲಿ 600 ಹಾಸಿಗೆಗಳನ್ನು ವ್ಯವಸ್ಥೆಗೊಳಿಸಿದ್ದೇವೆ. ಮುಂದಕ್ಕೆ 600 ರಂತೆ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುತ್ತೇವೆ. ಇದಕ್ಕೆ ಆಡಳಿತವು ಮೂಲಭೂತ ಸೌಲಭ್ಯಗಳನ್ನು ಒದಗಿಸಿದ್ದು, ಜಿಲ್ಲಾಡಳಿತವು ಅದರ ಮಾಲೀಕತ್ವವನ್ನು ಪಡೆದುಕೊಂಡಿದೆ. ವೈದ್ಯಕೀಯ ಸೌಲಭ್ಯಗಳ ನಿರ್ವಹಣೆ ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ವ್ಯವಸ್ಥೆಗೊಳಿಸುವ ಜವಾಬ್ದಾರಿಯನ್ನು ಮಧ್ಯಪ್ರದೇಶ ಸರ್ಕಾರ ಹೊಂದಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮರಣ ಪ್ರಮಾಣಪತ್ರದಲ್ಲೂ ಮೋದಿ ಚಿತ್ರ?

ರಾಧಾ ಸೋಮಿ ಸತ್ಸಂಗ್ ಬಿಯಾಸ್ ಸಂಸ್ಥೆ ಕೂಡಾ ಪ್ರಮುಖ ಕೊಡುಗೆ ನೀಡಿದ್ದಾರೆ. ಸಂಸ್ಥೆಯು ಎಲ್ಲರಿಗೂ ಆಹಾರ ಮತ್ತು ನೀರಿನ ವ್ಯವಸ್ಥೆಯನ್ನು ನೋಡಿಕೊಳ್ಳುತ್ತಿದೆ. ಇದಲ್ಲದೆ, ನಮಗೆ ವ್ಯಾಪಕವಾದ ಸಾಮಾಜಿಕ ಬೆಂಬಲ ದೊರೆತಿದೆ. ಇದು ತುಂಬಾ ದೊಡ್ಡದಾಗಿದ್ದು, ಸರ್ಕಾರದ ಕೊಡುಗೆ 20% ಕ್ಕೆ ಇಳಿದಿದೆ. ಸ್ಥಳೀಯರ ಸಹಾಯದಿಂದ ಹಾಸಿಗೆಗಳು, ಟೆಂಟ್ ಮನೆಗಳು ಮತ್ತು ಕೂಲಿಂಗ್ ಲಾಗ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.

ರೋಗಿಯ ಕಿಟ್‌ಗಳಂತಹ ಇತರ ಅಗತ್ಯ ವಸ್ತುಗಳು, ಎಲ್ಲಾ ದೈನಂದಿನ ಬಳಕೆಯ ವಸ್ತುಗಳನ್ನು ಸಹ ನಾಗರಿಕರಿಂದ ಸಹಾಯದಿಂದ ಸಂಗ್ರಹಿಸಿದ್ದವೆ. ಇದುವರೆಗೂ 120 ಆಮ್ಲಜನಕ ಸಾಂದ್ರಕಗಳನ್ನು ದೇಣಿಗೆ ರೂಪದಲ್ಲಿ ಸ್ವೀಕರಿಸಿದ್ದೇವೆ. ಸರ್ಕಾರವು ಅವುಗಳನ್ನು ಖರೀದಿಸುವ ಅಗತ್ಯವಿಲ್ಲ. ಇವೆಲ್ಲವನ್ನೂ ಜಿಲ್ಲಾಡಳಿತ ಮತ್ತು ಸಮುದಾಯದ ಸಹಾಯದಿಂದ ಉತ್ತಮವಾಗಿ ನಡೆಸಲಾಗುತ್ತಿದೆ. ಆರೆಸ್ಸೆಸ್‌ ಕೇಂದ್ರವನ್ನು ನಡೆಸುತ್ತಿದೆ ಎಂಬ ಬಗ್ಗೆ ಸಾಮಾಜಿಕ ಮಾಧ್ಯಮಗಳ ಹೇಳಿಕೆ/ಸಂದೇಶ ಸಂಪೂರ್ಣವಾಗಿ ಸುಳ್ಳು. ಇದನ್ನು ಸರ್ಕಾರ ಮತ್ತು ಸಾಮಾಜಿಕ ಬೆಂಬಲದೊಂದಿಗೆ ನಿರ್ಮಿಸಲಾಗಿದೆ.

ವಕೀಲರ ಬಾರ್ ಅಸೋಸಿಯೇಷನ್ ಮತ್ತು ರಿಯಲ್ ಎಸ್ಟೇಟ್ ಅಸೋಸಿಯೇಷನ್‌ ಸಹ ಇದಕ್ಕಾಗಿ ದಾನ ಮಾಡಿವೆ. ಈ ಸೌಲಭ್ಯಕ್ಕಾಗಿ ಪ್ರತಿಯೊಬ್ಬರೂ ಒಂದೊಂದು ರೀತಿಯಲ್ಲಿ ಕೊಡುಗೆ ನೀಡಿದ್ದಾರೆ. ಮುಖ್ಯವಾಗಿ ರಾಧಾ ಸೋಮಿ ಸತ್ಸಂಗ್ ಬಿಯಾಸ್ ಹೆಚ್ಚಿನ ಕೊಡುಗೆ ನಿಡುತ್ತಿದೆ. ಆರೆಸ್ಸೆಸ್‌ ಮತ್ತು ಸೇವಾ ಭಾರತಿಯ 75 ಸ್ವಯಂಸೇವಕರು ಪ್ರತಿದಿನ ಇಲ್ಲಿ ಭದ್ರತಾ ವ್ಯವಸ್ಥೆಗಳನ್ನು ಮತ್ತು ಅಡುಗೆ ಮಾಡುವ ರಾಧಾ ಸ್ವಾಮಿ ಸತ್ಸಂಗದ ಕಾರ್ಯಕರ್ತರಿಗೆ ನೆರವು ಮಾಡುತ್ತಾರೆ” ಎಂದು ಡಾ.ನಿಶಾಂತ್‌ ಖರೆ ಹೇಳಿದ್ದಾರೆ.

ಇದನ್ನೂ ಓದಿ: ಆದಿತ್ಯನಾಥ್ ಕುರಿತ ಪೋಸ್ಟ್ ಕಾರ್ಡ್‌ ಸುಳ್ಳು ಬಯಲು; ವಾಸ್ತವದಲ್ಲಿ ಇದು ಉಲ್ಟಾ ಕೇಸು

ಒಟ್ಟಿನಲ್ಲಿ ಮಧ್ಯಪ್ರದೇಶದಲ್ಲಿ ಅತಿದೊಡ್ಡ ಕೊರೊನಾ ಸೌಲಭ್ಯವನ್ನು ಸ್ಥಳೀಯ ಸಮುದಾಯದ ಬೆಂಬಲದೊಂದಿಗೆ ನಿರ್ಮಿಸಲಾಗಿದೆಯೆ ಹೊರತು ಆರೆಸ್ಸೆಸ್ ಸ್ಥಾಪಿಸಿದೆ ಎಂಬುವುದು ಸುಳ್ಳು ಸುದ್ದಿಯಾಗಿದೆ. ಅಲ್ಲಿ ಕೆಲವೆ ಕೆಲವು ಆರೆಸ್ಸೆಸ್‌ ಕಾರ್ಯಕರ್ತರು ಉಪಕೆಲಸಗಳಿಗೆ ಸಹಾಯ ಮಾಡುತ್ತಿದ್ದಾರೆ.

ಇದರ ಜೊತೆಗೆ ಕತಾರ್‌ನ ‘ಅಲ್ ಬೈತ್‌’ ಕ್ರೀಡಾಂಗಣದ ಫೋಟೋವನ್ನು ಬಳಸಿಕೊಂಡು, ಆರೆಸ್ಸೆಸ್‌‌ ನಿರ್ಮಿಸಿದ ಕೊರೊನಾ ಕೇಂದ್ರ ಎಂದು ಸುಳ್ಳನ್ನ ಹಂಚಿಕೊಳ್ಳುತ್ತಿದ್ದಾರೆ.

ಅದನ್ನು ನೀವು ಇಲ್ಲಿ, ಇಲ್ಲಿ ನೋಡಬಹುದಾಗಿದೆ.

(ಕೃಪೆ: ಅಲ್ಟ್ ನ್ಯೂಸ್)

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮಮತಾ ದರ್ಗಾಕ್ಕೆ ರಹಸ್ಯ ಭೇಟಿ ನೀಡಿಲ್ಲ, ಮಾಧ್ಯಮದ ಸಮ್ಮುಖದಲ್ಲೇ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...