Homeಕರ್ನಾಟಕಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ - ಸಿಟಿ ರವಿ

ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

- Advertisement -
- Advertisement -

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಟ್ಟಿದ್ದರೆ ಅದಕ್ಕೆ ಸರ್ಕಾರವೆ ಹೊಣೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಮವಾರ ಹೇಳಿದ್ದಾರೆ. ಚಿಕಿತ್ಸೆ ವೈಫಲ್ಯದಿಂದ ಮೃತಪಟ್ಟಿದ್ದರೆ ಅದು ಉದ್ದೇಶಪೂರ್ವಕ ಅಲ್ಲ. ಉದ್ದೇಶಪೂರ್ವಕವಾಗಿ ಮಾಡಿದ್ದರೆ, ಅದಕ್ಕೆ ಕಾರಣರಾದವರೇ ಹೊಣೆ ಹೊರಬೇಕು ಎಂದು ಅವರು ಹೇಳಿದ್ದಾರೆ.

ಆಮ್ಲಜನಕ ಕೊರತೆಯ ಪರಿಣಾಮ 12 ಕೊರೊನಾ ರೋಗಿಗಳ ಸಹಿತ 24 ಜನರು ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆಮ್ಲಜನಕ ಪೂರೈಕೆಯ ಕೊರತೆಯಿಂದಾಗಿ 12 ರೋಗಿಗಳು ಸಾವನ್ನಪ್ಪಿದ್ದು, ಇತರ ರೋಗಿಗಳು ವಿವಿಧ ಬೇರೆ ಕಾರಣಗಳಿಂದಾಗಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಪ್ರತಿಪಾದಿಸಿದೆ. ‘ಅಧಿಕಾರಿಗಳು ಸುಳ್ಳು ಹೇಳುತ್ತಿದ್ದಾರೆ, ಕೊರೊನಾ ಸೋಂಕಿತರಲ್ಲದ ರೋಗಿಗಳು ಕೂಡಾ ಆಮ್ಲಜನಕದ ಕೊರತೆಯಿಂದಾಗಿ ಮೃತಪಟ್ಟಿದ್ದಾರೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ಆಸ್ಪತ್ರೆಯಲ್ಲಿ ದುರಂತ: ಆಮ್ಲಜನಕ ಕೊರತೆಯಿಂದ 24 ಜನರು ಮೃತ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿ.ಟಿ. ರವಿ, “ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಆದ್ಯತೆ ಮೇಲೆ ಮಾಡಬೇಕು. ಇದು ಹೆಲ್ತ್ ಎಮರ್ಜೆನ್ಸಿ, ಕೊರೊನಾ ನಿರ್ವಹಣೆಗೇ ಆಧ್ಯತೆ ಕೊಡಬೇಕು. ಚಾಮರಾಜನಗರ ದುರಂತ ಘೋರ ಅನ್ಯಾಯ. ದುರಂತಕ್ಕೆ ಯಾರೇ ಹೊಣೆಯಾದರೂ ಅವರ ಮೇಲೆ ಕ್ರಮ ಆಗಲೇಬೇಕು. ಬೇರೆ ರಾಜ್ಯಗಳಲ್ಲಿ ನಡೆಯುತ್ತಿದ್ದದ್ದು ನಮ್ಮ ರಾಜ್ಯದಲ್ಲಿ ನಡೆದಿದೆ. ಇದು ದುರ್ದೈವದ ಸಂಗತಿಯಾಗಿದ್ದು, ಕಠಿಣ ಕ್ರಮ ಆದಾಗ ಮಾತ್ರ ಇಂತಹ ಘಟನೆಗಳು ಮರುಕಳಿಸುವುದಿಲ್ಲ” ಎಂದು ಹೇಳಿದ್ದಾರೆ.

“ಘಟನೆ ಕುರಿತು ನಾನು ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ಬೇರೆ ಜಿಲ್ಲೆಗಳ ಆಕ್ಸಿಜನ್ ಕೊರತೆ ಬಗ್ಗೆ ಗಮನಕ್ಕೆ ತಂದಿದ್ದೇನೆ. ಜನರು ಜೀವ ಕೈಯಲ್ಲಿ ಹಿಡಿಯಬೇಕಾದ ಸ್ಥಿತಿ ಇದೆ. ಬೇರೆ ರಾಜ್ಯಗಳ ದುರ್ಘಟನೆಗಳು ನಮಗೆ ಪಾಠ ಆಗಬೇಕಿತ್ತು. ಇದು ಕ್ಷಮೆಗೆ ಅರ್ಹವಿಲ್ಲದ ಘಟನೆ. ಸಚಿವರು ತಪ್ಪಿತಸ್ಥರಾಗಿದ್ದರೆ ಸಚಿವರೇ ಹೊಣೆ ಹೊತ್ತುಕೊಳ್ಳಬೇಕು. ಅಧಿಕಾರಿಗಳು ತಪ್ಪಿತಸ್ಥರಾಗಿದ್ದರೆ ಅವರೇ ಹೊಣೆ. ಸರ್ಕಾರದ ಗಮನಕ್ಕೂ ಬಂದು ನಿರ್ಲಕ್ಷ್ಯ ವಹಿಸಿದರೆ ಸರ್ಕಾರವೇ ಹೊಣೆ’’ ಎಂದು ಸಿ.ಟಿ. ರವಿ ತಿಳಿಸಿದ್ದಾರೆ.

“ಹಿಂದೆ ರಾಜಕೀಯ ತುರ್ತು ಪರಿಸ್ಥಿತಿ‌ ಘೋಷಣೆ ಮಾಡಿದ್ದ ರೀತಿಯಲ್ಲಿ, ಪ್ರಸ್ತುತ ಹೆಲ್ತ್ ಎಮರ್ಜೆನ್ಸಿ ಎಂದು ಸರ್ಕಾರ ಘೋಷಿಸಬೇಕು. ಈ ಮೂಲಕ ಉಳಿದೆಲ್ಲ ಇಲಾಖೆ ಕೆಲಸ ಸ್ಥಗಿತ ಮಾಡಿ, ಆರೋಗ್ಯದ ಸಮಸ್ಯೆಗೆ ಮಾತ್ರ ಒತ್ತು ನೀಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ನೆಲಮಂಗಲದ 10 ಸಾವಿರ ಬೆಡ್‌ನ ಕೊರೊನಾ ಆಸ್ಪತ್ರೆಯ ಬಗ್ಗೆ ಮಾತನಾಡಿದ ಅವರು, “10 ಸಾವಿರ ಬೆಡ್‌ನ ಆಸ್ಪತ್ರೆ ನಿರ್ಮಿಸಿದ್ದು ಹೌದು. ಅದು ಉಪಯೋಗವಾಗದಿದ್ದಾಗ ಅದನ್ನು ಡಿಸ್‌ಮೆಂಟಲ್ ಮಾಡಿದ್ದೆವು. ಈಗ ಪೂರ್ವಯೋಜಿತವಾಗಿ ಹಂತಹಂತವಾಗಿ ಕೇಸು ಹೆಚ್ಚಾಗಿಲ್ಲ, ಒಂದೇ ಸಲಕ್ಕೆ ಪ್ರಕರಣಗಳು ಹೆಚ್ಚಾದವು. ಹೀಗಾಗಿ‌ ನಿಭಾಯಿಸುವಲ್ಲಿ ಸ್ವಲ್ಪ ಕಷ್ಟ ಆಗಿದೆ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಮುಖ್ಯಮಂತ್ರಿ ರಾಜೀನಾಮೆ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಿಎಂ ರಾಜೀನಾಮೆಯಿಂದ ಸಮಸ್ಯೆ ಬಗೆಹರಿಯುತ್ತಾ? ಎಂದು ಪ್ರಶ್ನಿಸಿದ್ದಾರೆ. “ಸಮಸ್ಯೆ ಬಗೆಹರಿಯುತ್ತೆ ಎಂದರೆ ಅಧಿಕಾರ ದೊಡ್ಡದಲ್ಲ. ಬೇರೆ ರಾಜ್ಯಗಳಲ್ಲಿ ಯಾರೂ ಸಿಎಂನ ರಾಜೀನಾಮೆ ಕೇಳಿಲ್ಲ. ಆದರೆ ಇಲ್ಲಿ ಕೇಳುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಆರೋಗ್ಯ ಸಚಿವ ಸುಧಾಕರ್‌ ಮೇಲೆ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದ್ದು, “ಸುಧಾಕರ್ ಕೇವಲ‌ ಚಿಕ್ಕಬಳ್ಳಾಪುರಕ್ಕೆ ಮಾತ್ರ ಸಚಿವರಲ್ಲ, ಇಡೀ ರಾಜ್ಯದ ಆರೋಗ್ಯ ಮಂತ್ರಿ. ಅವರು ತಮ್ಮ ಜಿಲ್ಲೆಗೆ ಹಾಸಿಗೆಗಳನ್ನು ರಿಸರ್ವ್ ಮಾಡಿದ್ದು ಸರಿಯಲ್ಲ. ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡಿಕೊಳ್ಳಬೇಕು. ಹೀಗೆ ಮಾಡಿದರೆ ಅವರು ಸಂಕುಚಿತ ಮನೋಭಾವದರು ಎನಿಸಿಕೊಳ್ಳುತ್ತಾರೆಯೆ ವಿನಃ, ವಿಶಾಲ ಮನೋಭಾವದ ವ್ಯಕ್ತಿ ಎನಿಸಿಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...