Homeಕರೋನಾ ತಲ್ಲಣಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಬಿಜೆಪಿಯದ್ದು ಜೀವವಿರೋಧಿ, ಮನುಷತ್ವ ವಿರೋಧಿ ಸಿದ್ಧಾಂತ ಎಂದು ಪದೇ ಪದೇ ಸಾಬೀತುಪಡಿಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಗಳೆದ್ದಿದೆ.

- Advertisement -
- Advertisement -

ಜನರು ಆಮ್ಲಜನಕವಿಲ್ಲದೆ ಕಷ್ಟಕ್ಕೊಳಗಾಗುತ್ತಿದ್ದಾರೆ, ಇದನ್ನು ಸರಿಪಡಿಸಬೇಕಿದ್ದ ಆಡಳಿತರೂಢ ಬಿಜೆಪಿ ಸರ್ಕಾರವು ಬೆಂಗಳೂರಿನ ಹೊರವಲಯದ ಗಿಡ್ಡೇನಹಳ್ಳಿಯ ಬಳಿ ಕೋವಿಡ್‌ನಿಂದ ಮೃತಪಟ್ಟವ ಶವಸಂಸ್ಕಾರಕ್ಕೆ ತೆರಳುವವರಿಗೆ, “ಉಚಿತ ನೀರು, ಟೀ, ಕಾಫಿ, ತಿಂಡಿ, ಊಟದ ವ್ಯವಸ್ಥೆ ಮಾಡಿದ್ದೇವೆ” ಎಂದು ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಆರ್‌. ಅಶೋಕ್‌, ಬಿಡಿಎ ಅಧ್ಯಕ್ಷ, ಶಾಸಕ ಎಸ್. ಆರ್‌. ವಿಶ್ವನಾಥ್‌ ಸೇರಿದಂತೆ ಇನ್ನಿಬ್ಬರ ನಗುಮುಖದ ಫ್ಲೆಕ್ಸ್‌ ಹಾಕಿ ಅಸೂಕ್ಷತೆ ಮರೆದಿದ್ದಾರೆ.

ಕೊರೊನಾ ಎರಡನೆ ಅಲೆ ರಾಜ್ಯದಲ್ಲಿ ತೀವ್ರಗೊಳ್ಳುತ್ತಿದೆ. ರಾಜ್ಯದಾದ್ಯಂತ ಬೆಡ್‌ಗಳ ಕೊರತೆ, ಐಸಿಯುಗಳ ಕೊರತೆ ಬಗ್ಗೆ ನಿರಂತರವಾಗಿ ವರದಿಯಾಗುತ್ತಲೆ ಇದೆ. ಆದರೆ ರಾಜ್ಯ ಸರ್ಕಾರ ಮಾತ್ರ ಈ ಬಗ್ಗೆ ಎಲ್ಲವೂ ಸರಿಯಾಗಿದೆ ಎಂದು ಹೇಳುತ್ತಲೆ ಬಂದಿತ್ತು. ಈ ನಡುವೆ ನಿನ್ನೆ ನಡೆದ ಚಾಮರಾಜನಗರದ ದುರಂತವು ರಾಜ್ಯ ಸರ್ಕಾರದ ವೈಫಲ್ಯವನ್ನು ರಾಜ್ಯದ ಜನತೆಗೆ ಬಿಚ್ಚಿಟ್ಟಿದೆ. ಆದರೆ ಘಟನೆಗೆ ರಾಜ್ಯ ಸರ್ಕಾರ ಜನರನ್ನು ಮತ್ತು ಅಧಿಕಾರಿಗಳನ್ನು ಹೊಣೆ ಮಾಡಿದೆ. ಇಷ್ಟೇ ಅಲ್ಲದೆ ಕಲಬುರ್ಗಿಯಲ್ಲೂ ಆಮ್ಲಜನಕ ಕೊರೊತೆಯಿಂದ ಐದು ಸೋಂಕಿತರು ಮೃತಪಟ್ಟದ್ದಾರೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಗಳೆದ್ದಿದ್ದು ಸರ್ಕಾರವು ತನ್ನ ತಪ್ಪನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ ಎಂದು ಟೀಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಜನರು ಪ್ರಾಣವಾಯು ಇಲ್ಲದೆ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಾ ಆಸ್ಪತ್ರೆಯ ಬಳಿ ನರಳಾಡುತ್ತಾ ಇದ್ದರೆ, ಬಿಜೆಪಿ ಸಾವಿನ ವಿಚಾರವನ್ನೂ ತನ್ನ ಲಾಭಕ್ಕೆ ಬಳಸಿಕೊಳ್ಳುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ರಾತ್ರೋ ರಾತ್ರಿ ಫ್ಲೆಕ್ಸ್‌ ಅನ್ನು ಎತ್ತಂಗಡಿ ಮಾಡಲಾಗಿದೆ.

ಫ್ಲೆಕ್ಸ್‌ನಲ್ಲಿ, ‘‘ಕೋವಿ‌ಡ್‌‌ನಿಂದ ಮೃತಪಟ್ಟವರ ಉಚಿತ ಅಂತ್ಯ ಸಂಸ್ಕಾರಕ್ಕೆ ಗಿಡ್ಡೇನಹಳ್ಳಿಗೆ ಹೋಗುವ ದಾರಿ. ಕೋವಿಡ್‌ನಿಂದ ಮೃತಪಟ್ಟವರನ್ನು ‘ಸಕಲ ಸರ್ಕಾರಿ ಮರ್ಯಾದೆ’ಯೊಂದಿಗೆ ಅಂತ್ಯಸಂಸ್ಕಾರ ಮಾಡಲು ಜಿಲ್ಲಾಡಳಿತ ವತಿಯಿಂದ ವ್ಯವಸ್ಥೆಯಾಗಿದೆ. ಈ ಕಾರ್ಯಕ್ಕೆ ಉಚಿತವಾಗಿ ನೀರು, ಕಾಫಿ, ಟೀ, ತಿಂಡಿ, ಊಟದ ವ್ಯವಸ್ಥೆಯನ್ನು ಮಾಡಲಾಗಿದೆ’’ ಎಂದು ಬರೆಯಲಾಗಿದೆ.

ಜೊತೆಗೆ, “ಟಿ-ಕಾಫಿಯ ಉಚಿತ ವ್ಯವಸ್ಥೆಯನ್ನು ಯಲಹಂಕದ ಶಾಸಕರಾದ ಎಸ್. ಆರ್‌. ವಿಶ್ವನಾಥ್‌ ಮಾರ್ಗದರ್ಶನದಲ್ಲಿ, ನೆಲಮಂಗಲ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಎಸ್‌. ಮಲ್ಲಯ್ಯನವರ ನೇತೃತ್ವದಲ್ಲಿ ಮಾಡಲಾಗಿದೆ” ಎಂದು ಕೂಡಾ ಬರೆದು, ಅವರ ನಗುಮುಖದ ಚಿತ್ರವನ್ನು ಹಾಕಲಾಗಿದೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

 

ಈ ಫ್ಲೆಕ್ಸ್‌ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪತ್ರಕರ್ತ ಅಲ್‌ಮೈಡಾ ಗ್ಲಾಡ್‌ಸನ್‌ ಅವರು, “ಬಿಜೆಪಿಯನ್ನು ನಾನ್ಯಾಕೆ ವಿರೋಧಿಸುತ್ತೇನೆಂದು ಕೇಳುವವರು ಇದನ್ನೊಮ್ಮೆ ನೋಡಿ. ಅವರದ್ದು ಜೀವವಿರೋಧಿ, ಮನುಷತ್ವ ವಿರೋಧಿ ಸಿದ್ಧಾಂತ ಎಂದು ಅವರು ಪದೇ ಪದೇ ಸಾಬೀತುಪಡಿಸುತ್ತಿದ್ದಾರೆ. ಮನುಷ್ಯನಿರಬೇಕಾದ ಕನಿಷ್ಟ ಸಂವೇದನೆಗಳೂ ಇಲ್ಲ ಇವಕ್ಕೆ. ಸೋಂಕು ಹೆಚ್ಚಾದರೆ ಕರೆದುಕೊಂಡು ಹೋಗಲು ಅಂಬುಲೆನ್ಸ್ ಇಲ್ಲ.

ಒಂದೊಮ್ಮೆ ಅಂಬುಲೆನ್ಸ್ ಸಿಕ್ಕರೆ ಆಸ್ಪತ್ರೆ/ಬೆಡ್ ಇಲ್ಲ. ಹತ್ತಾರು ಕಿ.ಮೀ ಅಲೆದು ಆಸ್ಪತ್ರೆ ಸಿಕ್ಕರೆ ಐಸಿಯುವಿನಲ್ಲಿ ಜಾಗವಿಲ್ಲ, ವೆಂಟಿಲೇಟರ್ ಇಲ್ಲ, ಆಕ್ಸಿಜನ್ ಇಲ್ಲ. ಕೊನೆಗೆ ಸತ್ತವರ ಅಂತ್ಯ ಸಂಸ್ಕಾರಕ್ಕೂ ಜಾಗವಿಲ್ಲ. ಇಂಥ ಪರಿಸ್ಥಿತಿಯಲ್ಲಿ ಈ ಬಿಜೆಪಿಗರು ಕೋವಿಡ್ ಸೋಂಕಿನಿಂದ ಸತ್ತವರ ಅಂತ್ಯ ಸಂಸ್ಕಾರವನ್ನೂ ಒಂದು ಈವೆಂಟ್ ಮಾಡುತ್ತಿದ್ದಾರೆ. ಉಚಿತ ಚಾ, ಕಾಫಿ, ಊಟವಂತೆ. ಈ ಚಿತ್ರದ ಮೇಲಿರುವ ‘No’ ಗಳ ಬೋರ್ಡೇ ಇವರ ಅದಕ್ಷತೆ, ಅಸಾಮರ್ಥ್ಯ ಹಾಗೂ ಕ್ರೌರ್ಯಕ್ಕೆ ಸಾಕ್ಷಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಅಲ್ಲಿನ ಬ್ಯಾನರನ್ನು ತೆರವು ಗೊಳಿಸಲಾಗಿದೆ.

ಘಟನೆಗೆ ಶಾಸಕ ವಿಶ್ವನಾಥ್‌‌ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ. ‘‘ಗಿಡ್ಡೇನಹಳ್ಳಿ ಸುತ್ತ–ಮುತ್ತ ಜನ ವಾಸವಿಲ್ಲ. ಸುತ್ತಲೂ ಕಲ್ಲು ಬಂಡೆಗಳು ಇವೆ. ಅಲ್ಲಿ ಕುಡಿಯಲು ನೀರು ಸೇರಿದಂತೆ ಯಾವುದೇ ಸೌಲಭ್ಯವೂ ಇಲ್ಲ. ಶವಸಂಸ್ಕಾರಕ್ಕೆ ಬರುವವರಿಗೆ ತೊಂದರೆಯಾಗಬಾರದು, ಅವರಿಗೆ ನೀರು ಮತ್ತು ಆಹಾರ ಪೂರೈಕೆ ಮಾಡುವಂತೆ ಮಾನವೀಯತೆಯ ದೃಷ್ಟಿಯಿಂದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಆದರೆ, ಈ ಬಗ್ಗೆ ಪ್ರಧಾನಿ, ಮುಖ್ಯಮಂತ್ರಿ ಮತ್ತು ನನ್ನ ಫೋಟೊ ಇರುವ ಫ್ಲೆಕ್ಸ್‌ ಹಾಕಿರುವುದು ಸರಿಯಾದ ಕ್ರಮವಲ್ಲ. ಇದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ” ಎಂದಿದ್ದಾರೆ ಎಂದು ಪತ್ರಿಕೆ ತನ್ನ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶವಸಂಸ್ಕಾರದಲ್ಲೂ ರಾಜಕೀಯ, ಪ್ರಚಾರ ಬಯಸುವುದು ಮನಷ್ಯತ್ವ ಅಲ್ಲ. ಮನುವಾದಿಗಳು ಮಾನವೀಯತೆಯನ್ನೂ ಮರೆತು, ಎಲ್ಲದರಲ್ಲೂ ಪ್ರಚಾರ ಪಡೆಯಲು ಹೊರಟಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...