Homeಕರೋನಾ ತಲ್ಲಣಆಮ್ಲಜನಕ ಕೊರತೆ; ಕಲಬುರ್ಗಿಯಲ್ಲಿ ಮತ್ತೊಂದು ದುರಂತ - ಸೋಂಕು ವಿಷಮಗೊಂಡಿದ್ದರಿಂದ ಸಾವು ಎಂದ ಸಚಿವ ನಿರಾಣಿ

ಆಮ್ಲಜನಕ ಕೊರತೆ; ಕಲಬುರ್ಗಿಯಲ್ಲಿ ಮತ್ತೊಂದು ದುರಂತ – ಸೋಂಕು ವಿಷಮಗೊಂಡಿದ್ದರಿಂದ ಸಾವು ಎಂದ ಸಚಿವ ನಿರಾಣಿ

- Advertisement -
- Advertisement -

ಆಮ್ಲಜನಕ ಕೊರತೆಯಿಂದ ಚಾಮರಾಜನಗರದಲ್ಲಿ 24 ಜನರು ಮೃತಪಟ್ಟಿದ್ದ ಸುದ್ದಿಗೆ ಸೋಮವಾರ ರಾಜ್ಯವೆ ಬೆಚ್ಚಿ ಬಿದ್ದಿತ್ತು. ಇದೀಗ ಮತ್ತೆ ಆಮ್ಲಜನಕ ಕೊರತೆಯಿಂದ 4 ಕೊರೊನಾ ಸೋಂಕಿತರು ತಡರಾತ್ರಿ ಮೃತಪಟ್ಟಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ಸಂಭವಿಸಿದೆ.

ಚಾಮರಾಜ ನಗರದಲ್ಲಿ ನಿನ್ನೆಯಷ್ಟೇ ಆಮ್ಲಜನಕ ಕೊರತೆಯಿಂದ ಮೃತಪಟ್ಟಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಕಲಬುರ್ಗಿಯ ಖಾಸಗಿ ಆಸ್ಪತ್ರೆಯಲ್ಲಿ ಕೂಡಾ ನಿನ್ನೆ ಐದು ಜನರು ಆಮ್ಲಜನಕ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಶನಿವಾರದಂದು ಕೂಡಾ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದೀಗ ಜಿಲ್ಲೆಯಲ್ಲಿ ಮತ್ತೆ ಪ್ರಾಣವಾಯು ಕೊರತೆಯಿಂದ ನಾಲ್ವರು ಅಸುನೀಗಿದ್ದಾರೆ.

ಕಳೆದ ಮೂರು ದಿನದಿಂದ ಒಟ್ಟು 12 ರೋಗಿಗಳು ಕಲಬುರ್ಗಿ ಜಿಲ್ಲೆಯೊಂದರಲ್ಲೇ ಆಮ್ಲಜನಕ ಕೊರತೆಯಿಂದಾಗಿ ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಜಿಲ್ಲೆಯ ತಾಲೂಕು ಆಸ್ಪತ್ರೆಯಲ್ಲಿ ಒಟ್ಟು 30 ರೋಗಿಗಳು ದಾಖಲಾಗಿದ್ದು, ಸೋಮವಾರದಂದು ಆರು ಸಿಲಿಂಡರ್‌ ಮಾತ್ರ ಇದ್ದವು ಎನ್ನಲಾಗಿದೆ. ಅವುಗಳನ್ನು ಆರು ಮಂದಿಗೆ ನೀಡಲಾಗಿತ್ತಾದರೂ, ಸೋಮವಾರ ತಡರಾತ್ರಿ ಆರೂ ಸಿಲಿಂಡರ್‌ಗಳು ಖಾಲಿ ಆಗಿದ್ದು ನಾಲ್ವರು ಪ್ರಾಣ ಬಿಟ್ಟಿದ್ದಾರೆ.

“ಸಾಕಷ್ಟು ಆಮ್ಲಜನಕದ ಸಿಲಿಂಡರ್‌‌‌‌ಗಳು ಕೂಡಾ ಇಲ್ಲ. ಅಲ್ಲಿರುವ ಸಿಲಿಂಡರ್‌ ಖಾಲಿಯಾಗುತ್ತಿದ್ದಂತೆ ಕಲಬುರ್ಗಿಗೆ ಹೋಗಿ ತುಂಬಿಸಿಕೊಂಡು ಬರುತ್ತಿದ್ದೇವೆ ಎಂದು ಆಸ್ಪತ್ರೆಯ ವೈದ್ಯರು ಹೇಳುತ್ತಿದ್ದಾರೆ. ಸರ್ಕಾರಕ್ಕೆ ಗಂಭೀರತೆ ಇಲ್ಲ. ತಾಲೂಕು ಆಸ್ಪತ್ರೆಯಲ್ಲಿ ಫಿಜಿಷಿಯನ್‌ನ್ನೆ ಇಲ್ಲ. ಅಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವವರು ಯಾರು” ಎಂದು ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ ದೂರಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಈ ನಡುವೆ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಆಮ್ಲಜನಕದ ಕೊರತೆಯಿಂದ ಈ ಸಾವು ಸಂಭವಿಸಿಲ್ಲ ಎಂದು ಪ್ರತಿಪಾದಿಸಿದ್ದಾರೆ. “ಆಸ್ಪತ್ರೆಯಲ್ಲಿ ನಾಲ್ಕು ಆಮ್ಲಜನಕ ಸಿಲಿಂಡರ್‌ ಇವೆ. ಸೋಂಕು ವಿಷಮಗೊಂಡಿದ್ದರಿಂದ ಸೋಮವಾರ ಮೂವರು ಮತ್ತು ಮಂಗಳವಾರ ಒಬ್ಬರು ಮೃತಪಟ್ಟಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...