Homeಕರೋನಾ ತಲ್ಲಣಆಮ್ಲಜನಕ ಕೊರತೆ; ಕಲಬುರ್ಗಿಯಲ್ಲಿ ಮತ್ತೊಂದು ದುರಂತ - ಸೋಂಕು ವಿಷಮಗೊಂಡಿದ್ದರಿಂದ ಸಾವು ಎಂದ ಸಚಿವ ನಿರಾಣಿ

ಆಮ್ಲಜನಕ ಕೊರತೆ; ಕಲಬುರ್ಗಿಯಲ್ಲಿ ಮತ್ತೊಂದು ದುರಂತ – ಸೋಂಕು ವಿಷಮಗೊಂಡಿದ್ದರಿಂದ ಸಾವು ಎಂದ ಸಚಿವ ನಿರಾಣಿ

- Advertisement -
- Advertisement -

ಆಮ್ಲಜನಕ ಕೊರತೆಯಿಂದ ಚಾಮರಾಜನಗರದಲ್ಲಿ 24 ಜನರು ಮೃತಪಟ್ಟಿದ್ದ ಸುದ್ದಿಗೆ ಸೋಮವಾರ ರಾಜ್ಯವೆ ಬೆಚ್ಚಿ ಬಿದ್ದಿತ್ತು. ಇದೀಗ ಮತ್ತೆ ಆಮ್ಲಜನಕ ಕೊರತೆಯಿಂದ 4 ಕೊರೊನಾ ಸೋಂಕಿತರು ತಡರಾತ್ರಿ ಮೃತಪಟ್ಟಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ಸಂಭವಿಸಿದೆ.

ಚಾಮರಾಜ ನಗರದಲ್ಲಿ ನಿನ್ನೆಯಷ್ಟೇ ಆಮ್ಲಜನಕ ಕೊರತೆಯಿಂದ ಮೃತಪಟ್ಟಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಕಲಬುರ್ಗಿಯ ಖಾಸಗಿ ಆಸ್ಪತ್ರೆಯಲ್ಲಿ ಕೂಡಾ ನಿನ್ನೆ ಐದು ಜನರು ಆಮ್ಲಜನಕ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಶನಿವಾರದಂದು ಕೂಡಾ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದೀಗ ಜಿಲ್ಲೆಯಲ್ಲಿ ಮತ್ತೆ ಪ್ರಾಣವಾಯು ಕೊರತೆಯಿಂದ ನಾಲ್ವರು ಅಸುನೀಗಿದ್ದಾರೆ.

ಕಳೆದ ಮೂರು ದಿನದಿಂದ ಒಟ್ಟು 12 ರೋಗಿಗಳು ಕಲಬುರ್ಗಿ ಜಿಲ್ಲೆಯೊಂದರಲ್ಲೇ ಆಮ್ಲಜನಕ ಕೊರತೆಯಿಂದಾಗಿ ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಜಿಲ್ಲೆಯ ತಾಲೂಕು ಆಸ್ಪತ್ರೆಯಲ್ಲಿ ಒಟ್ಟು 30 ರೋಗಿಗಳು ದಾಖಲಾಗಿದ್ದು, ಸೋಮವಾರದಂದು ಆರು ಸಿಲಿಂಡರ್‌ ಮಾತ್ರ ಇದ್ದವು ಎನ್ನಲಾಗಿದೆ. ಅವುಗಳನ್ನು ಆರು ಮಂದಿಗೆ ನೀಡಲಾಗಿತ್ತಾದರೂ, ಸೋಮವಾರ ತಡರಾತ್ರಿ ಆರೂ ಸಿಲಿಂಡರ್‌ಗಳು ಖಾಲಿ ಆಗಿದ್ದು ನಾಲ್ವರು ಪ್ರಾಣ ಬಿಟ್ಟಿದ್ದಾರೆ.

“ಸಾಕಷ್ಟು ಆಮ್ಲಜನಕದ ಸಿಲಿಂಡರ್‌‌‌‌ಗಳು ಕೂಡಾ ಇಲ್ಲ. ಅಲ್ಲಿರುವ ಸಿಲಿಂಡರ್‌ ಖಾಲಿಯಾಗುತ್ತಿದ್ದಂತೆ ಕಲಬುರ್ಗಿಗೆ ಹೋಗಿ ತುಂಬಿಸಿಕೊಂಡು ಬರುತ್ತಿದ್ದೇವೆ ಎಂದು ಆಸ್ಪತ್ರೆಯ ವೈದ್ಯರು ಹೇಳುತ್ತಿದ್ದಾರೆ. ಸರ್ಕಾರಕ್ಕೆ ಗಂಭೀರತೆ ಇಲ್ಲ. ತಾಲೂಕು ಆಸ್ಪತ್ರೆಯಲ್ಲಿ ಫಿಜಿಷಿಯನ್‌ನ್ನೆ ಇಲ್ಲ. ಅಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವವರು ಯಾರು” ಎಂದು ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ ದೂರಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಈ ನಡುವೆ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಆಮ್ಲಜನಕದ ಕೊರತೆಯಿಂದ ಈ ಸಾವು ಸಂಭವಿಸಿಲ್ಲ ಎಂದು ಪ್ರತಿಪಾದಿಸಿದ್ದಾರೆ. “ಆಸ್ಪತ್ರೆಯಲ್ಲಿ ನಾಲ್ಕು ಆಮ್ಲಜನಕ ಸಿಲಿಂಡರ್‌ ಇವೆ. ಸೋಂಕು ವಿಷಮಗೊಂಡಿದ್ದರಿಂದ ಸೋಮವಾರ ಮೂವರು ಮತ್ತು ಮಂಗಳವಾರ ಒಬ್ಬರು ಮೃತಪಟ್ಟಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...