Homeಕರ್ನಾಟಕ’ಬಂಗಾಳದಲ್ಲಿ ಮುಸ್ಲಿಮರ ಮೇಲೆ ಭೀಕರ ದಾಳಿ ನಡೆಯಲಿದೆ’- ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕಾಶ್‌‌ ಬೆಳವಾಡಿ

’ಬಂಗಾಳದಲ್ಲಿ ಮುಸ್ಲಿಮರ ಮೇಲೆ ಭೀಕರ ದಾಳಿ ನಡೆಯಲಿದೆ’- ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕಾಶ್‌‌ ಬೆಳವಾಡಿ

- Advertisement -
- Advertisement -

ಯಾವ ಆಯಾಮದಲ್ಲಿ ನೋಡಿದರೂ, ರಂಗಕರ್ಮಿ ಪ್ರಕಾಶ್ ಬೆಳವಾಡಿ ಮಾಡಿರುವ ಫೇಸ್‌ಬುಕ್ ಪೋಸ್ಟ್ ಉದ್ರೇಕಕಾರಿ ಭಾಷೆ ಹೊಂದಿದೆ, ಅದರಲ್ಲಿ ಮುಸ್ಲಿಮರು ಅನ್ಯರು ಎಂಬ ವಾಸನೆ ಇದೆ. 2002 ರ ಗುಜರಾತ್ ಹತ್ಯಾಕಾಂಡದ ಸಮರ್ಥನೆಯಿದೆ. ಗೋಧ್ರಾ ಘಟನೆ ನಂತರ ನಾನು ಊಹಿಸಿದಂತೆ ಅಲ್ಲಿ ದೊಡ್ಡ ಪ್ರತೀಕಾರ ನಡೆಯಿತು ಎಂಬ ’ಹೆಮ್ಮೆಯೂ’ ಇದೆ.

ಅವರ ಪೋಸ್ಟಿನಲ್ಲಿ ಅಲ್ಪಸಂಖ್ಯಾತರ ಮೇಲೆ ’ಸಂಘಪರಿವಾರ’ ನಡೆಸುವ ದಾಳಿಗೆ ಪರೋಕ್ಷ ಬೆಂಬಲವಿದೆ. ಮೊದಲಿನಿಂದಲೂ ಬಿಜೆಪಿ ಆರಾಧಕರೇ ಆಗಿರುವ ಅವರು, ಈ ಮಟ್ಟಿಗೆ ಭಜರಂಗದಳದ ಪುಂಡರ ಭಾಷೆ ಬಳಸುತ್ತಾರೆ, ದ್ವೇಷ ಕಕ್ಕುತ್ತಾರೆ ಎಂಬುದನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಈಗ ಅವರು ಗುಜರಾತ್ ಹತ್ಯಾಕಾಂಡ ಬಂಗಾಳದಲ್ಲಿ ನಡೆದೇ ನಡೆಯುತ್ತದೆ ಎಂದು ಭವಿಷ್ಯ ನುಡಿಯುತ್ತಿದ್ದಾರೆ. ಇಂಗ್ಲಿಷ್‌ನಲ್ಲಿ ಈ ಪೋಸ್ಟ್ ಇರುವ ಕಾರಣಕ್ಕೆ ಬಲಪಂಥೀಯರು ಹಾಗೂ ಬಿಜೆಪಿ ಬೆಂಬಲಿಗರು ಇದನ್ನು ಎಲ್ಲ ರಾಜ್ಯಗಳಿಗೂ ಹರಡತೊಡಗಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

ಅವರ ಪೋಸ್ಟ್ ಮೊದಲು ಓದಿ ಬಿಡಿ:

“27 ಫೆಬ್ರುವರಿ 2002 ರ ಬೆಳಿಗ್ಗೆ, ಗೋದ್ರಾ ಬಳಿ ರೈಲಿನಲ್ಲಿ 59 ಮಂದಿ ಕರಸೇವಕರನ್ನ ಸುಟ್ಟು ಕೊಂದಾಗ, ನನ್ನ ಒಬ್ಬ ಉದಾರವಾದಿ ನಿಲುವಿನ ಲಿಬರಲ್ ಗೆಳೆಯ – ಈಗ ಅವನ ಜೊತೆ ಗೆಳೆತನ ಇಲ್ಲ- ಅಹ್ಮದಾಬಾದಿನಿಂದ ಫೋನ್ ಮಾಡಿ, `ಇದು ಸಂಘಿಗಳಿಗೆ ಸರಿಯಾದ ಪಾಠ ಕಲಿಸುತ್ತದೆ’ ಅಂತ ಏನೋ ಹೇಳಿದ್ದ. ನಾನು ಹೇಳಿದ್ದೆ, ಇದಕ್ಕೆ ನೀಡಲಿರುವ ಪ್ರತೀಕಾರ ತ್ವರಿತವಾಗಿರುತ್ತದೆ ಮತ್ತು ಭೀಕರವಾಗಿರುತ್ತದೆ ಎಂದು. ಅದು ಹಾಗೇ ಆಯ್ತು.

ಹೌದು, ಗುಜರಾತಿನಲ್ಲಿ ಮುಸ್ಲಿಂ ಜನಸಂಖ್ಯೆ ಕೇವಲ 8% ಇರುವ ಕಾರಣ ಆ ಗಲಭೆ ಏಕಪಕ್ಷೀಯವಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಬೇರೆ ಸನ್ನಿವೇಶವಿದೆ. ಮುಸ್ಲಿಮರು 30% ಇದ್ದಾರೆ. ಹೀಗಾಗಿ, ಪ್ರತೀಕಾರ ಅಷ್ಟೊಂದು ತ್ವರಿತವಾಗಿರುವುದಿಲ್ಲ. ಆದರೆ ತಪ್ಪು ತಿಳಿದುಕೊಳ್ಳಬೇಡಿ, ಅದು ಆಗಿಯೇ ಆಗುತ್ತದೆ. ಸಮಯ ಆದ ಹಾಗೆ ಹಿಂದು-ಮುಸ್ಲಿಂ ಗಲಭೆ ಏಳಲಿದೆ. ಅದು ಆದಾಗ, ಅದು ಬಹಳ ದುರಂತಮಯವಾಗಲಿದೆ, ಕ್ರೂರವಾಗಿರಲಿದೆ ಮತ್ತು ಸಂಘಟಿತವಾಗಿ ನಡೆಯಲಿದೆ.

ಈಗ ಬಹಳ ಶಾಂತ ರೀತಿಯಿಂದ ವರ್ತಿಸುವ ರಾಜ್ಯ ಸರ್ಕಾರ ಮತ್ತು ಲಿಬರಲ್‌ಗಳು, ’ಸಂಘಿಗಳಿಗೆ ಹಾಗೆ ಆಗಬೇಕು’ ಎಂತ ತಿಳಿದುಕೊಂಡಿದ್ದಾರೆ… ನಂತರ ಇವರೆಲ್ಲ ಲೆಕ್ಕಾಚಾರ ಮಾಡುವ ಪರಿಸ್ಥಿತಿ ನಿರ್ಮಾಣವಾಗುತದೆ. ಈಗಾಗಲೇ ಇದನ್ನ ತಡೆಯಲು ಬಹಳ ತಡವಾಗಿದೆ” ಎಂದು ಪ್ರಕಾಶ್‌ ಬೆಳವಾಡಿ ಹೇಳಿದ್ದಾರೆ.

ಇದನ್ನೂ ಓದಿ: ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಸರ್ಕಾರದ ಒಂದು ಕೋಟಿ ರೂ. ಅನುದಾನದಲ್ಲಿ ಭೈರಪ್ಪನವರ ’ಪರ್ವ’ ಕೃತಿಯನ್ನು ನಾಟಕವಾಗಿ ರೂಪಾಂತರಿಸುವ ಕೆಲಸದಲ್ಲಿರುವ ಪ್ರಕಾಶ್ ಅವರಿಗೆ, ಬಂಗಾಳ ಚುನಾವಣೆಯಲ್ಲಿ ಬಿಜೆಪಿಗಾದ ಹೀನಾಯ ಸೋಲು ತೀವ್ರವಾಗಿ ತಾಕಿದಂತಿದೆ.

ಚುನಾವಣಾ ಫಲಿತಾಂಶದ ನಂತರ ನೆಡೆಯುವ ಗಲಾಟೆಗಳನ್ನು ದೊಡ್ಡದು ಮಾಡಿ, ಹಳೆಯ ವಿಡಿಯೋಗಳನ್ನು ಹಾಕಿ, ’ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿ’ ಎಂದು ಅಭಿಯಾನ ಮಾಡುತ್ತಿರುವ ಬಿಜೆಪಿಯ ಐಟಿ ಸೆಲ್ ಮತ್ತು ಅದರ ಬೆಂಬಲಿಗರ ಜಾಯಮಾನದಲ್ಲೇ ಪ್ರಕಾಶ ಬೆಳವಾಡಿಯವರ ಪೋಸ್ಟ್ ಕೂಡ ಇದೆ.

ಈ ಕುರಿತು ಫೇಸ್‌ಬುಕ್ ಮತ್ತು ಇತರ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಶರತ್‌ಚಂದ್ರ ಎನ್ನುವವರು, ’ಹಿಂದೆಯೂ ಎಫ್‌ಬಿಯಲ್ಲಿ ಅವರ ಪೋಸ್ಟ್ ಹೀಗೇ ಇದ್ದವಾದರೂ ನೇರವಾಗಿ ಸಂಘಪರಿವಾರದವರಂತೆ ಬರೆಯುತ್ತಿರಲಿಲ್ಲ. ಈಗ ತನ್ನ ನಿಜ ಮುಖದ ದರ್ಶನ ಮಾಡಿದ್ದಾರೆ ಈ ಬೆಳವಾಡಿ. ಈಗ ತನ್ನ ಪ್ರೊಫೈಲ್ ಅನ್ನೂ ಡಿ-ಆಕ್ಟಿವೇಟ್ ಮಾಡಿಕೊಂಡಿದ್ದಾರೆ’ ಎಂದು ಬರೆದಿದ್ದಾರೆ. ಈ ಪೋಸ್ಟ್‌ಗೆ ಬಂದ ಪ್ರತಿಕ್ರಿಯೆಗಳಲ್ಲಿ ಬೆಳವಾಡಿ ಅವರ ’ಸಂಘಪರಿವಾರ’ದ ಮನಸ್ಥಿತಿಯನ್ನು ಟೀಕಿಸಲಾಗಿದೆ.

ಇದನ್ನೂ ಓದಿ: ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ನಟ ಅಹಿಂಸಾ ಚೇತನ್, `ನಾನು ಆ ಪೋಸ್ಟ್ ಓದಿಲ್ಲ. ಸಾರಾಂಶ ಕೇಳಿದ್ದೇನೆ. ಬೆಳವಾಡಿಯವರ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಲಾರೆ. ಅವರು ವೈಚಾರಿಕವಾಗಿ ಶೂನ್ಯರು, ಸಮಾಜ ನೋಡುವ ದೃಷ್ಟಿಕೋನವೆ ಅವರಲಿಲ್ಲ. ಈ ಕೋವಿಡ್ ಸಂದರ್ಭದಲ್ಲಿ ಇದೆಲ್ಲ ಬೇಕಿತ್ತ? ಲಕ್ಷಾಂತರ ಜನ ಹಾಸಿಗೆ, ಆಕ್ಸಿಜನ್ ಇಲ್ಲದೇ ಸಾಯುತ್ತಿರುವಾಗ ಕೋಮುಗಲಭೆ ಪ್ರಚೋದಿಸುವ ಪೋಸ್ಟ್‌ಗಳನ್ನು ನಿರ್ಲಕ್ಷ್ಯ ಮಾಡುವುದೇ ಒಳ್ಳೆಯದು. ಅವು ಮತ್ತೆ ಮುನ್ನೆಲೆಗೆ ಬರದಂತೆ ಮಾಡಬೇಕಾಗಿದೆ. ಈಗ ನಮ್ಮ ಕಾಳಜಿ ಕೋವಿಡ್ ಬಿಕ್ಕಟ್ಟನ್ನು ಪರಿಹರಿಸುವತ್ತ ಇರಬೇಕು…’ ಎಂದು ಹೇಳಿದರು.

ಕತೆಗಾರ, ನಾಟಕಕಾರ ಹನುಮಂತ ಹಾಲಿಗೇರಿ, ‘ಸಾಹಿತ್ಯ, ರಂಗಭೂಮಿ, ಕಲೆ ಇವು ಮನುಷ್ಯನ ಯೋಚನಾ ಲಹರಿಯನ್ನು ಹದ ಮಾಡಿ, ಮಾನವೀಯತೆ ಅಂಶ ಬೆಳೆಸುತ್ತವೆ. ಆದರೆ ರಂಗಭೂಮಿಯ ಹಿನ್ನೆಲೆಯ ಪ್ರಕಾಶ್ ಬೆಳವಾಡಿಯವರು ವಯಸ್ಸಾದಂತೆಲ್ಲ ಹೆಚ್ಚೆಚ್ಚು ಮಾನವೀಯರಾಗುವ ಬದಲು ಕ್ರೂರ ಮತ್ತು ಕೋಮುವಾದಿ ಸಂದೇಶಗಳನ್ನು ಹರಡುತ್ತಿರುವುದು ವಿಷಾದನೀಯ.

ಸರ್ಕಾರ ಅವರ ‘ಪರ್ವ’ ನಾಟಕ ಪ್ರದರ್ಶನಗಳಿಗೆ ಒಂದು ಕೋಟಿ ರೂ. ಅನುದಾನ ನೀಡಿದೆ. ಭೈರಪ್ಪನವರು ಆರಂಭದಲ್ಲಿ ಬರೆದ ಈ ಕಾದಂಬರಿಯಲ್ಲಿ ಕೋಮುವಾದಿ, ಜಾತಿವಾದಿ ಅಂಶಗಳಿಲ್ಲ. ಆದರೆ ಬೆಳವಾಡಿ ಅವರು ಈ ಕೃತಿ ಆಧರಿತ ನಾಟಕದಲ್ಲಿ ಕೋಮುವಿಷ ಬೆರೆಸುತ್ತಾರೇನೋ ಎಂಬ ಸಂಶಯ ಶುರುವಾಗಿದೆ’ ಎಂದು ನಾನುಗೌರಿ.ಕಾಂಗೆ ಹೇಳಿದರು.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಕಾಶ್ ಬೆಳವಾಡಿಯ ಹೇಳಿಕೆ ಕಂಡನಾರ್ಹ ಹಾಗೂ ಈ ಕಲಾವಿದ “ಮಾರಿಕೊಂಡವರು” ಗುಂಪನ್ನು ಸೇರಿದ್ದು ನೋವಿನ ಸಂಗತಿ.

  2. ಕೂಡಲೇ ಈತನ ಮೇಲೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಇವನ ಮೇಲೆ ದೇಶದ್ರೋಹದ ಪ್ರಕರಣ ಹಾಕಿ ನೇಣುಗಂಬಕ್ಕೆ ಏರಿಸಿ. ಮುಂದಾಗುವ ಮತಿಯ ಘರ್ಷಣೆ ತಡೆಯಲು ಇವನ ಬಂಧನ ಹಾಗೂ ಮರಣದಂಡನೆ ಒಂದೇ ಮಾರ್ಗ.

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...