Homeಕರ್ನಾಟಕ’ಬಂಗಾಳದಲ್ಲಿ ಮುಸ್ಲಿಮರ ಮೇಲೆ ಭೀಕರ ದಾಳಿ ನಡೆಯಲಿದೆ’- ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕಾಶ್‌‌ ಬೆಳವಾಡಿ

’ಬಂಗಾಳದಲ್ಲಿ ಮುಸ್ಲಿಮರ ಮೇಲೆ ಭೀಕರ ದಾಳಿ ನಡೆಯಲಿದೆ’- ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕಾಶ್‌‌ ಬೆಳವಾಡಿ

- Advertisement -
- Advertisement -

ಯಾವ ಆಯಾಮದಲ್ಲಿ ನೋಡಿದರೂ, ರಂಗಕರ್ಮಿ ಪ್ರಕಾಶ್ ಬೆಳವಾಡಿ ಮಾಡಿರುವ ಫೇಸ್‌ಬುಕ್ ಪೋಸ್ಟ್ ಉದ್ರೇಕಕಾರಿ ಭಾಷೆ ಹೊಂದಿದೆ, ಅದರಲ್ಲಿ ಮುಸ್ಲಿಮರು ಅನ್ಯರು ಎಂಬ ವಾಸನೆ ಇದೆ. 2002 ರ ಗುಜರಾತ್ ಹತ್ಯಾಕಾಂಡದ ಸಮರ್ಥನೆಯಿದೆ. ಗೋಧ್ರಾ ಘಟನೆ ನಂತರ ನಾನು ಊಹಿಸಿದಂತೆ ಅಲ್ಲಿ ದೊಡ್ಡ ಪ್ರತೀಕಾರ ನಡೆಯಿತು ಎಂಬ ’ಹೆಮ್ಮೆಯೂ’ ಇದೆ.

ಅವರ ಪೋಸ್ಟಿನಲ್ಲಿ ಅಲ್ಪಸಂಖ್ಯಾತರ ಮೇಲೆ ’ಸಂಘಪರಿವಾರ’ ನಡೆಸುವ ದಾಳಿಗೆ ಪರೋಕ್ಷ ಬೆಂಬಲವಿದೆ. ಮೊದಲಿನಿಂದಲೂ ಬಿಜೆಪಿ ಆರಾಧಕರೇ ಆಗಿರುವ ಅವರು, ಈ ಮಟ್ಟಿಗೆ ಭಜರಂಗದಳದ ಪುಂಡರ ಭಾಷೆ ಬಳಸುತ್ತಾರೆ, ದ್ವೇಷ ಕಕ್ಕುತ್ತಾರೆ ಎಂಬುದನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಈಗ ಅವರು ಗುಜರಾತ್ ಹತ್ಯಾಕಾಂಡ ಬಂಗಾಳದಲ್ಲಿ ನಡೆದೇ ನಡೆಯುತ್ತದೆ ಎಂದು ಭವಿಷ್ಯ ನುಡಿಯುತ್ತಿದ್ದಾರೆ. ಇಂಗ್ಲಿಷ್‌ನಲ್ಲಿ ಈ ಪೋಸ್ಟ್ ಇರುವ ಕಾರಣಕ್ಕೆ ಬಲಪಂಥೀಯರು ಹಾಗೂ ಬಿಜೆಪಿ ಬೆಂಬಲಿಗರು ಇದನ್ನು ಎಲ್ಲ ರಾಜ್ಯಗಳಿಗೂ ಹರಡತೊಡಗಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

ಅವರ ಪೋಸ್ಟ್ ಮೊದಲು ಓದಿ ಬಿಡಿ:

“27 ಫೆಬ್ರುವರಿ 2002 ರ ಬೆಳಿಗ್ಗೆ, ಗೋದ್ರಾ ಬಳಿ ರೈಲಿನಲ್ಲಿ 59 ಮಂದಿ ಕರಸೇವಕರನ್ನ ಸುಟ್ಟು ಕೊಂದಾಗ, ನನ್ನ ಒಬ್ಬ ಉದಾರವಾದಿ ನಿಲುವಿನ ಲಿಬರಲ್ ಗೆಳೆಯ – ಈಗ ಅವನ ಜೊತೆ ಗೆಳೆತನ ಇಲ್ಲ- ಅಹ್ಮದಾಬಾದಿನಿಂದ ಫೋನ್ ಮಾಡಿ, `ಇದು ಸಂಘಿಗಳಿಗೆ ಸರಿಯಾದ ಪಾಠ ಕಲಿಸುತ್ತದೆ’ ಅಂತ ಏನೋ ಹೇಳಿದ್ದ. ನಾನು ಹೇಳಿದ್ದೆ, ಇದಕ್ಕೆ ನೀಡಲಿರುವ ಪ್ರತೀಕಾರ ತ್ವರಿತವಾಗಿರುತ್ತದೆ ಮತ್ತು ಭೀಕರವಾಗಿರುತ್ತದೆ ಎಂದು. ಅದು ಹಾಗೇ ಆಯ್ತು.

ಹೌದು, ಗುಜರಾತಿನಲ್ಲಿ ಮುಸ್ಲಿಂ ಜನಸಂಖ್ಯೆ ಕೇವಲ 8% ಇರುವ ಕಾರಣ ಆ ಗಲಭೆ ಏಕಪಕ್ಷೀಯವಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಬೇರೆ ಸನ್ನಿವೇಶವಿದೆ. ಮುಸ್ಲಿಮರು 30% ಇದ್ದಾರೆ. ಹೀಗಾಗಿ, ಪ್ರತೀಕಾರ ಅಷ್ಟೊಂದು ತ್ವರಿತವಾಗಿರುವುದಿಲ್ಲ. ಆದರೆ ತಪ್ಪು ತಿಳಿದುಕೊಳ್ಳಬೇಡಿ, ಅದು ಆಗಿಯೇ ಆಗುತ್ತದೆ. ಸಮಯ ಆದ ಹಾಗೆ ಹಿಂದು-ಮುಸ್ಲಿಂ ಗಲಭೆ ಏಳಲಿದೆ. ಅದು ಆದಾಗ, ಅದು ಬಹಳ ದುರಂತಮಯವಾಗಲಿದೆ, ಕ್ರೂರವಾಗಿರಲಿದೆ ಮತ್ತು ಸಂಘಟಿತವಾಗಿ ನಡೆಯಲಿದೆ.

ಈಗ ಬಹಳ ಶಾಂತ ರೀತಿಯಿಂದ ವರ್ತಿಸುವ ರಾಜ್ಯ ಸರ್ಕಾರ ಮತ್ತು ಲಿಬರಲ್‌ಗಳು, ’ಸಂಘಿಗಳಿಗೆ ಹಾಗೆ ಆಗಬೇಕು’ ಎಂತ ತಿಳಿದುಕೊಂಡಿದ್ದಾರೆ… ನಂತರ ಇವರೆಲ್ಲ ಲೆಕ್ಕಾಚಾರ ಮಾಡುವ ಪರಿಸ್ಥಿತಿ ನಿರ್ಮಾಣವಾಗುತದೆ. ಈಗಾಗಲೇ ಇದನ್ನ ತಡೆಯಲು ಬಹಳ ತಡವಾಗಿದೆ” ಎಂದು ಪ್ರಕಾಶ್‌ ಬೆಳವಾಡಿ ಹೇಳಿದ್ದಾರೆ.

ಇದನ್ನೂ ಓದಿ: ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಸರ್ಕಾರದ ಒಂದು ಕೋಟಿ ರೂ. ಅನುದಾನದಲ್ಲಿ ಭೈರಪ್ಪನವರ ’ಪರ್ವ’ ಕೃತಿಯನ್ನು ನಾಟಕವಾಗಿ ರೂಪಾಂತರಿಸುವ ಕೆಲಸದಲ್ಲಿರುವ ಪ್ರಕಾಶ್ ಅವರಿಗೆ, ಬಂಗಾಳ ಚುನಾವಣೆಯಲ್ಲಿ ಬಿಜೆಪಿಗಾದ ಹೀನಾಯ ಸೋಲು ತೀವ್ರವಾಗಿ ತಾಕಿದಂತಿದೆ.

ಚುನಾವಣಾ ಫಲಿತಾಂಶದ ನಂತರ ನೆಡೆಯುವ ಗಲಾಟೆಗಳನ್ನು ದೊಡ್ಡದು ಮಾಡಿ, ಹಳೆಯ ವಿಡಿಯೋಗಳನ್ನು ಹಾಕಿ, ’ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿ’ ಎಂದು ಅಭಿಯಾನ ಮಾಡುತ್ತಿರುವ ಬಿಜೆಪಿಯ ಐಟಿ ಸೆಲ್ ಮತ್ತು ಅದರ ಬೆಂಬಲಿಗರ ಜಾಯಮಾನದಲ್ಲೇ ಪ್ರಕಾಶ ಬೆಳವಾಡಿಯವರ ಪೋಸ್ಟ್ ಕೂಡ ಇದೆ.

ಈ ಕುರಿತು ಫೇಸ್‌ಬುಕ್ ಮತ್ತು ಇತರ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಶರತ್‌ಚಂದ್ರ ಎನ್ನುವವರು, ’ಹಿಂದೆಯೂ ಎಫ್‌ಬಿಯಲ್ಲಿ ಅವರ ಪೋಸ್ಟ್ ಹೀಗೇ ಇದ್ದವಾದರೂ ನೇರವಾಗಿ ಸಂಘಪರಿವಾರದವರಂತೆ ಬರೆಯುತ್ತಿರಲಿಲ್ಲ. ಈಗ ತನ್ನ ನಿಜ ಮುಖದ ದರ್ಶನ ಮಾಡಿದ್ದಾರೆ ಈ ಬೆಳವಾಡಿ. ಈಗ ತನ್ನ ಪ್ರೊಫೈಲ್ ಅನ್ನೂ ಡಿ-ಆಕ್ಟಿವೇಟ್ ಮಾಡಿಕೊಂಡಿದ್ದಾರೆ’ ಎಂದು ಬರೆದಿದ್ದಾರೆ. ಈ ಪೋಸ್ಟ್‌ಗೆ ಬಂದ ಪ್ರತಿಕ್ರಿಯೆಗಳಲ್ಲಿ ಬೆಳವಾಡಿ ಅವರ ’ಸಂಘಪರಿವಾರ’ದ ಮನಸ್ಥಿತಿಯನ್ನು ಟೀಕಿಸಲಾಗಿದೆ.

ಇದನ್ನೂ ಓದಿ: ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ನಟ ಅಹಿಂಸಾ ಚೇತನ್, `ನಾನು ಆ ಪೋಸ್ಟ್ ಓದಿಲ್ಲ. ಸಾರಾಂಶ ಕೇಳಿದ್ದೇನೆ. ಬೆಳವಾಡಿಯವರ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಲಾರೆ. ಅವರು ವೈಚಾರಿಕವಾಗಿ ಶೂನ್ಯರು, ಸಮಾಜ ನೋಡುವ ದೃಷ್ಟಿಕೋನವೆ ಅವರಲಿಲ್ಲ. ಈ ಕೋವಿಡ್ ಸಂದರ್ಭದಲ್ಲಿ ಇದೆಲ್ಲ ಬೇಕಿತ್ತ? ಲಕ್ಷಾಂತರ ಜನ ಹಾಸಿಗೆ, ಆಕ್ಸಿಜನ್ ಇಲ್ಲದೇ ಸಾಯುತ್ತಿರುವಾಗ ಕೋಮುಗಲಭೆ ಪ್ರಚೋದಿಸುವ ಪೋಸ್ಟ್‌ಗಳನ್ನು ನಿರ್ಲಕ್ಷ್ಯ ಮಾಡುವುದೇ ಒಳ್ಳೆಯದು. ಅವು ಮತ್ತೆ ಮುನ್ನೆಲೆಗೆ ಬರದಂತೆ ಮಾಡಬೇಕಾಗಿದೆ. ಈಗ ನಮ್ಮ ಕಾಳಜಿ ಕೋವಿಡ್ ಬಿಕ್ಕಟ್ಟನ್ನು ಪರಿಹರಿಸುವತ್ತ ಇರಬೇಕು…’ ಎಂದು ಹೇಳಿದರು.

ಕತೆಗಾರ, ನಾಟಕಕಾರ ಹನುಮಂತ ಹಾಲಿಗೇರಿ, ‘ಸಾಹಿತ್ಯ, ರಂಗಭೂಮಿ, ಕಲೆ ಇವು ಮನುಷ್ಯನ ಯೋಚನಾ ಲಹರಿಯನ್ನು ಹದ ಮಾಡಿ, ಮಾನವೀಯತೆ ಅಂಶ ಬೆಳೆಸುತ್ತವೆ. ಆದರೆ ರಂಗಭೂಮಿಯ ಹಿನ್ನೆಲೆಯ ಪ್ರಕಾಶ್ ಬೆಳವಾಡಿಯವರು ವಯಸ್ಸಾದಂತೆಲ್ಲ ಹೆಚ್ಚೆಚ್ಚು ಮಾನವೀಯರಾಗುವ ಬದಲು ಕ್ರೂರ ಮತ್ತು ಕೋಮುವಾದಿ ಸಂದೇಶಗಳನ್ನು ಹರಡುತ್ತಿರುವುದು ವಿಷಾದನೀಯ.

ಸರ್ಕಾರ ಅವರ ‘ಪರ್ವ’ ನಾಟಕ ಪ್ರದರ್ಶನಗಳಿಗೆ ಒಂದು ಕೋಟಿ ರೂ. ಅನುದಾನ ನೀಡಿದೆ. ಭೈರಪ್ಪನವರು ಆರಂಭದಲ್ಲಿ ಬರೆದ ಈ ಕಾದಂಬರಿಯಲ್ಲಿ ಕೋಮುವಾದಿ, ಜಾತಿವಾದಿ ಅಂಶಗಳಿಲ್ಲ. ಆದರೆ ಬೆಳವಾಡಿ ಅವರು ಈ ಕೃತಿ ಆಧರಿತ ನಾಟಕದಲ್ಲಿ ಕೋಮುವಿಷ ಬೆರೆಸುತ್ತಾರೇನೋ ಎಂಬ ಸಂಶಯ ಶುರುವಾಗಿದೆ’ ಎಂದು ನಾನುಗೌರಿ.ಕಾಂಗೆ ಹೇಳಿದರು.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಕಾಶ್ ಬೆಳವಾಡಿಯ ಹೇಳಿಕೆ ಕಂಡನಾರ್ಹ ಹಾಗೂ ಈ ಕಲಾವಿದ “ಮಾರಿಕೊಂಡವರು” ಗುಂಪನ್ನು ಸೇರಿದ್ದು ನೋವಿನ ಸಂಗತಿ.

  2. ಕೂಡಲೇ ಈತನ ಮೇಲೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಇವನ ಮೇಲೆ ದೇಶದ್ರೋಹದ ಪ್ರಕರಣ ಹಾಕಿ ನೇಣುಗಂಬಕ್ಕೆ ಏರಿಸಿ. ಮುಂದಾಗುವ ಮತಿಯ ಘರ್ಷಣೆ ತಡೆಯಲು ಇವನ ಬಂಧನ ಹಾಗೂ ಮರಣದಂಡನೆ ಒಂದೇ ಮಾರ್ಗ.

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...