Homeಕರ್ನಾಟಕ’ಬಂಗಾಳದಲ್ಲಿ ಮುಸ್ಲಿಮರ ಮೇಲೆ ಭೀಕರ ದಾಳಿ ನಡೆಯಲಿದೆ’- ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕಾಶ್‌‌ ಬೆಳವಾಡಿ

’ಬಂಗಾಳದಲ್ಲಿ ಮುಸ್ಲಿಮರ ಮೇಲೆ ಭೀಕರ ದಾಳಿ ನಡೆಯಲಿದೆ’- ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕಾಶ್‌‌ ಬೆಳವಾಡಿ

- Advertisement -
- Advertisement -

ಯಾವ ಆಯಾಮದಲ್ಲಿ ನೋಡಿದರೂ, ರಂಗಕರ್ಮಿ ಪ್ರಕಾಶ್ ಬೆಳವಾಡಿ ಮಾಡಿರುವ ಫೇಸ್‌ಬುಕ್ ಪೋಸ್ಟ್ ಉದ್ರೇಕಕಾರಿ ಭಾಷೆ ಹೊಂದಿದೆ, ಅದರಲ್ಲಿ ಮುಸ್ಲಿಮರು ಅನ್ಯರು ಎಂಬ ವಾಸನೆ ಇದೆ. 2002 ರ ಗುಜರಾತ್ ಹತ್ಯಾಕಾಂಡದ ಸಮರ್ಥನೆಯಿದೆ. ಗೋಧ್ರಾ ಘಟನೆ ನಂತರ ನಾನು ಊಹಿಸಿದಂತೆ ಅಲ್ಲಿ ದೊಡ್ಡ ಪ್ರತೀಕಾರ ನಡೆಯಿತು ಎಂಬ ’ಹೆಮ್ಮೆಯೂ’ ಇದೆ.

ಅವರ ಪೋಸ್ಟಿನಲ್ಲಿ ಅಲ್ಪಸಂಖ್ಯಾತರ ಮೇಲೆ ’ಸಂಘಪರಿವಾರ’ ನಡೆಸುವ ದಾಳಿಗೆ ಪರೋಕ್ಷ ಬೆಂಬಲವಿದೆ. ಮೊದಲಿನಿಂದಲೂ ಬಿಜೆಪಿ ಆರಾಧಕರೇ ಆಗಿರುವ ಅವರು, ಈ ಮಟ್ಟಿಗೆ ಭಜರಂಗದಳದ ಪುಂಡರ ಭಾಷೆ ಬಳಸುತ್ತಾರೆ, ದ್ವೇಷ ಕಕ್ಕುತ್ತಾರೆ ಎಂಬುದನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಈಗ ಅವರು ಗುಜರಾತ್ ಹತ್ಯಾಕಾಂಡ ಬಂಗಾಳದಲ್ಲಿ ನಡೆದೇ ನಡೆಯುತ್ತದೆ ಎಂದು ಭವಿಷ್ಯ ನುಡಿಯುತ್ತಿದ್ದಾರೆ. ಇಂಗ್ಲಿಷ್‌ನಲ್ಲಿ ಈ ಪೋಸ್ಟ್ ಇರುವ ಕಾರಣಕ್ಕೆ ಬಲಪಂಥೀಯರು ಹಾಗೂ ಬಿಜೆಪಿ ಬೆಂಬಲಿಗರು ಇದನ್ನು ಎಲ್ಲ ರಾಜ್ಯಗಳಿಗೂ ಹರಡತೊಡಗಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಆಕ್ಸಿಜನ್ ಕೊರತೆಯಿಂದ ಆಗಿದ್ದರೆ ಸರ್ಕಾರವೆ ಹೊಣೆ – ಸಿಟಿ ರವಿ

ಅವರ ಪೋಸ್ಟ್ ಮೊದಲು ಓದಿ ಬಿಡಿ:

“27 ಫೆಬ್ರುವರಿ 2002 ರ ಬೆಳಿಗ್ಗೆ, ಗೋದ್ರಾ ಬಳಿ ರೈಲಿನಲ್ಲಿ 59 ಮಂದಿ ಕರಸೇವಕರನ್ನ ಸುಟ್ಟು ಕೊಂದಾಗ, ನನ್ನ ಒಬ್ಬ ಉದಾರವಾದಿ ನಿಲುವಿನ ಲಿಬರಲ್ ಗೆಳೆಯ – ಈಗ ಅವನ ಜೊತೆ ಗೆಳೆತನ ಇಲ್ಲ- ಅಹ್ಮದಾಬಾದಿನಿಂದ ಫೋನ್ ಮಾಡಿ, `ಇದು ಸಂಘಿಗಳಿಗೆ ಸರಿಯಾದ ಪಾಠ ಕಲಿಸುತ್ತದೆ’ ಅಂತ ಏನೋ ಹೇಳಿದ್ದ. ನಾನು ಹೇಳಿದ್ದೆ, ಇದಕ್ಕೆ ನೀಡಲಿರುವ ಪ್ರತೀಕಾರ ತ್ವರಿತವಾಗಿರುತ್ತದೆ ಮತ್ತು ಭೀಕರವಾಗಿರುತ್ತದೆ ಎಂದು. ಅದು ಹಾಗೇ ಆಯ್ತು.

ಹೌದು, ಗುಜರಾತಿನಲ್ಲಿ ಮುಸ್ಲಿಂ ಜನಸಂಖ್ಯೆ ಕೇವಲ 8% ಇರುವ ಕಾರಣ ಆ ಗಲಭೆ ಏಕಪಕ್ಷೀಯವಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಬೇರೆ ಸನ್ನಿವೇಶವಿದೆ. ಮುಸ್ಲಿಮರು 30% ಇದ್ದಾರೆ. ಹೀಗಾಗಿ, ಪ್ರತೀಕಾರ ಅಷ್ಟೊಂದು ತ್ವರಿತವಾಗಿರುವುದಿಲ್ಲ. ಆದರೆ ತಪ್ಪು ತಿಳಿದುಕೊಳ್ಳಬೇಡಿ, ಅದು ಆಗಿಯೇ ಆಗುತ್ತದೆ. ಸಮಯ ಆದ ಹಾಗೆ ಹಿಂದು-ಮುಸ್ಲಿಂ ಗಲಭೆ ಏಳಲಿದೆ. ಅದು ಆದಾಗ, ಅದು ಬಹಳ ದುರಂತಮಯವಾಗಲಿದೆ, ಕ್ರೂರವಾಗಿರಲಿದೆ ಮತ್ತು ಸಂಘಟಿತವಾಗಿ ನಡೆಯಲಿದೆ.

ಈಗ ಬಹಳ ಶಾಂತ ರೀತಿಯಿಂದ ವರ್ತಿಸುವ ರಾಜ್ಯ ಸರ್ಕಾರ ಮತ್ತು ಲಿಬರಲ್‌ಗಳು, ’ಸಂಘಿಗಳಿಗೆ ಹಾಗೆ ಆಗಬೇಕು’ ಎಂತ ತಿಳಿದುಕೊಂಡಿದ್ದಾರೆ… ನಂತರ ಇವರೆಲ್ಲ ಲೆಕ್ಕಾಚಾರ ಮಾಡುವ ಪರಿಸ್ಥಿತಿ ನಿರ್ಮಾಣವಾಗುತದೆ. ಈಗಾಗಲೇ ಇದನ್ನ ತಡೆಯಲು ಬಹಳ ತಡವಾಗಿದೆ” ಎಂದು ಪ್ರಕಾಶ್‌ ಬೆಳವಾಡಿ ಹೇಳಿದ್ದಾರೆ.

ಇದನ್ನೂ ಓದಿ: ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಸರ್ಕಾರದ ಒಂದು ಕೋಟಿ ರೂ. ಅನುದಾನದಲ್ಲಿ ಭೈರಪ್ಪನವರ ’ಪರ್ವ’ ಕೃತಿಯನ್ನು ನಾಟಕವಾಗಿ ರೂಪಾಂತರಿಸುವ ಕೆಲಸದಲ್ಲಿರುವ ಪ್ರಕಾಶ್ ಅವರಿಗೆ, ಬಂಗಾಳ ಚುನಾವಣೆಯಲ್ಲಿ ಬಿಜೆಪಿಗಾದ ಹೀನಾಯ ಸೋಲು ತೀವ್ರವಾಗಿ ತಾಕಿದಂತಿದೆ.

ಚುನಾವಣಾ ಫಲಿತಾಂಶದ ನಂತರ ನೆಡೆಯುವ ಗಲಾಟೆಗಳನ್ನು ದೊಡ್ಡದು ಮಾಡಿ, ಹಳೆಯ ವಿಡಿಯೋಗಳನ್ನು ಹಾಕಿ, ’ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿ’ ಎಂದು ಅಭಿಯಾನ ಮಾಡುತ್ತಿರುವ ಬಿಜೆಪಿಯ ಐಟಿ ಸೆಲ್ ಮತ್ತು ಅದರ ಬೆಂಬಲಿಗರ ಜಾಯಮಾನದಲ್ಲೇ ಪ್ರಕಾಶ ಬೆಳವಾಡಿಯವರ ಪೋಸ್ಟ್ ಕೂಡ ಇದೆ.

ಈ ಕುರಿತು ಫೇಸ್‌ಬುಕ್ ಮತ್ತು ಇತರ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಶರತ್‌ಚಂದ್ರ ಎನ್ನುವವರು, ’ಹಿಂದೆಯೂ ಎಫ್‌ಬಿಯಲ್ಲಿ ಅವರ ಪೋಸ್ಟ್ ಹೀಗೇ ಇದ್ದವಾದರೂ ನೇರವಾಗಿ ಸಂಘಪರಿವಾರದವರಂತೆ ಬರೆಯುತ್ತಿರಲಿಲ್ಲ. ಈಗ ತನ್ನ ನಿಜ ಮುಖದ ದರ್ಶನ ಮಾಡಿದ್ದಾರೆ ಈ ಬೆಳವಾಡಿ. ಈಗ ತನ್ನ ಪ್ರೊಫೈಲ್ ಅನ್ನೂ ಡಿ-ಆಕ್ಟಿವೇಟ್ ಮಾಡಿಕೊಂಡಿದ್ದಾರೆ’ ಎಂದು ಬರೆದಿದ್ದಾರೆ. ಈ ಪೋಸ್ಟ್‌ಗೆ ಬಂದ ಪ್ರತಿಕ್ರಿಯೆಗಳಲ್ಲಿ ಬೆಳವಾಡಿ ಅವರ ’ಸಂಘಪರಿವಾರ’ದ ಮನಸ್ಥಿತಿಯನ್ನು ಟೀಕಿಸಲಾಗಿದೆ.

ಇದನ್ನೂ ಓದಿ: ಸಂಸ್ಕಾರಕ್ಕೆ ಬರುವವರಿಗೆ ಉಚಿತ ಟಿ,ಕಾಫಿ ನೀಡುತ್ತೇವೆಂದು ನಗುಮುಖದ ಫ್ಲೆಕ್ಸ್‌; ಕನಿಷ್ಠ ಸಂವೇದನೆ ಮರೆತ BJP

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ನಟ ಅಹಿಂಸಾ ಚೇತನ್, `ನಾನು ಆ ಪೋಸ್ಟ್ ಓದಿಲ್ಲ. ಸಾರಾಂಶ ಕೇಳಿದ್ದೇನೆ. ಬೆಳವಾಡಿಯವರ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಲಾರೆ. ಅವರು ವೈಚಾರಿಕವಾಗಿ ಶೂನ್ಯರು, ಸಮಾಜ ನೋಡುವ ದೃಷ್ಟಿಕೋನವೆ ಅವರಲಿಲ್ಲ. ಈ ಕೋವಿಡ್ ಸಂದರ್ಭದಲ್ಲಿ ಇದೆಲ್ಲ ಬೇಕಿತ್ತ? ಲಕ್ಷಾಂತರ ಜನ ಹಾಸಿಗೆ, ಆಕ್ಸಿಜನ್ ಇಲ್ಲದೇ ಸಾಯುತ್ತಿರುವಾಗ ಕೋಮುಗಲಭೆ ಪ್ರಚೋದಿಸುವ ಪೋಸ್ಟ್‌ಗಳನ್ನು ನಿರ್ಲಕ್ಷ್ಯ ಮಾಡುವುದೇ ಒಳ್ಳೆಯದು. ಅವು ಮತ್ತೆ ಮುನ್ನೆಲೆಗೆ ಬರದಂತೆ ಮಾಡಬೇಕಾಗಿದೆ. ಈಗ ನಮ್ಮ ಕಾಳಜಿ ಕೋವಿಡ್ ಬಿಕ್ಕಟ್ಟನ್ನು ಪರಿಹರಿಸುವತ್ತ ಇರಬೇಕು…’ ಎಂದು ಹೇಳಿದರು.

ಕತೆಗಾರ, ನಾಟಕಕಾರ ಹನುಮಂತ ಹಾಲಿಗೇರಿ, ‘ಸಾಹಿತ್ಯ, ರಂಗಭೂಮಿ, ಕಲೆ ಇವು ಮನುಷ್ಯನ ಯೋಚನಾ ಲಹರಿಯನ್ನು ಹದ ಮಾಡಿ, ಮಾನವೀಯತೆ ಅಂಶ ಬೆಳೆಸುತ್ತವೆ. ಆದರೆ ರಂಗಭೂಮಿಯ ಹಿನ್ನೆಲೆಯ ಪ್ರಕಾಶ್ ಬೆಳವಾಡಿಯವರು ವಯಸ್ಸಾದಂತೆಲ್ಲ ಹೆಚ್ಚೆಚ್ಚು ಮಾನವೀಯರಾಗುವ ಬದಲು ಕ್ರೂರ ಮತ್ತು ಕೋಮುವಾದಿ ಸಂದೇಶಗಳನ್ನು ಹರಡುತ್ತಿರುವುದು ವಿಷಾದನೀಯ.

ಸರ್ಕಾರ ಅವರ ‘ಪರ್ವ’ ನಾಟಕ ಪ್ರದರ್ಶನಗಳಿಗೆ ಒಂದು ಕೋಟಿ ರೂ. ಅನುದಾನ ನೀಡಿದೆ. ಭೈರಪ್ಪನವರು ಆರಂಭದಲ್ಲಿ ಬರೆದ ಈ ಕಾದಂಬರಿಯಲ್ಲಿ ಕೋಮುವಾದಿ, ಜಾತಿವಾದಿ ಅಂಶಗಳಿಲ್ಲ. ಆದರೆ ಬೆಳವಾಡಿ ಅವರು ಈ ಕೃತಿ ಆಧರಿತ ನಾಟಕದಲ್ಲಿ ಕೋಮುವಿಷ ಬೆರೆಸುತ್ತಾರೇನೋ ಎಂಬ ಸಂಶಯ ಶುರುವಾಗಿದೆ’ ಎಂದು ನಾನುಗೌರಿ.ಕಾಂಗೆ ಹೇಳಿದರು.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಕಾಶ್ ಬೆಳವಾಡಿಯ ಹೇಳಿಕೆ ಕಂಡನಾರ್ಹ ಹಾಗೂ ಈ ಕಲಾವಿದ “ಮಾರಿಕೊಂಡವರು” ಗುಂಪನ್ನು ಸೇರಿದ್ದು ನೋವಿನ ಸಂಗತಿ.

  2. ಕೂಡಲೇ ಈತನ ಮೇಲೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಇವನ ಮೇಲೆ ದೇಶದ್ರೋಹದ ಪ್ರಕರಣ ಹಾಕಿ ನೇಣುಗಂಬಕ್ಕೆ ಏರಿಸಿ. ಮುಂದಾಗುವ ಮತಿಯ ಘರ್ಷಣೆ ತಡೆಯಲು ಇವನ ಬಂಧನ ಹಾಗೂ ಮರಣದಂಡನೆ ಒಂದೇ ಮಾರ್ಗ.

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...