Homeಫ್ಯಾಕ್ಟ್‌ಚೆಕ್ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ಮುಸ್ಲಿಂ ಆರೋಪಿಗಳ ಹೆಸರುಗಳನ್ನು ಮಾತ್ರ ಎತ್ತಿಕೊಂಡು ಪ್ರಕರಣಕ್ಕೆ ಕೋಮುಬಣ್ಣ ಹಚ್ಚಲು ಬಲಪಂಥೀಯರು ಯತ್ನಿಸುತ್ತಿದ್ದಾರೆ.

- Advertisement -
- Advertisement -

ಗುಜರಾತಿನಲ್ಲಿ ರೆಮ್ಡೆಸಿವಿರ್ ಹೆಸರಲ್ಲಿ ನಕಲಿ ಇಂಜೆಕ್ಷನ್ ಮಾರುತ್ತಿದ್ದ ಒಂದು ಜಾಲವನ್ನು ಮೂರು ದಿನದ ಹಿಂದೆ ಭೇದಿಸಲಾಗಿದೆ. ಬಂಧಿತ ಗ್ಯಾಂಗಿನ ಏಳು ಜನರ ಪೈಕಿ ಇಬ್ಬರು ಮುಸ್ಲಿಮರಿದ್ದು, ಬಲಪಂಥೀಯರು ಮತ್ತು ಬಿಜೆಪಿ ಐಟಿ ಸೆಲ್, ಈ ಇಬ್ಬರ ಹೆಸರನ್ನು ಮಾತ್ರ ಉಲ್ಲೇಖಿಸಿ ಇದಕ್ಕೆ ಕೋಮು ಬಣ್ಣ ಕಟ್ಟಲು ಹೊರಟಿದೆ. ಅದೇ ಪ್ರಯೋಗದ ಮುಂದುವರೆದ ಭಾಗವಾಗಿ, ಬೆಂಗಳೂರಲ್ಲಿ ಸಂಸದ ತೇಜಸ್ವಿ ಸೂರ್ಯ ‘ಬೆಡ್ ಬ್ಲಾಕಿಂಗ್’ ವಿಷಯವನ್ನು ಕೋಮು ಬಣ್ಣಕ್ಕೆ ತಿರುಗಿಸುವ ಹುನ್ನಾರ ನಡೆಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ರೆಮ್ಡೆಸಿವಿರ್ ಕೋವಿಡ್ ರೋಗಿಗಳ ಆರೈಕೆಯಲ್ಲಿ ಕೆಲಸ ಮಾಡದು ಎಂದು ಹೇಳಿದ ಬಳಿಕವೂ, ಭಾರತದಲ್ಲಿ ಕೋವಿಡ್ ರೋಗಿಗಳಿಗೆ ಇದನ್ನು ನೀಡಲಾಗುತ್ತಿದೆ. ರೆಮ್‌ಡೆಸಿವಿರ್‌ನ ಪರಿಣಾಮಕಾರಿತ್ವವನ್ನು ವೈದ್ಯರು ಮತ್ತು ವಿಜ್ಞಾನಿಗಳು ಪ್ರಶ್ನಿಸಿದರೂ, ಹತಾಶ ರೋಗಿಗಳು ಔಷಧವನ್ನು ಬ್ಲ್ಯಾಕ್ ಮಾರುಕಟ್ಟೆಯಲ್ಲಿ 40 ಸಾವಿರ ರೂ.ಗಳಿಗೆ ಖರೀದಿಸುತ್ತಿದ್ದಾರೆ.

ಮೇ 1 ರಂದು ಗುಜರಾತ್ ಪೊಲೀಸರು ನಕಲಿ ರೆಮ್ಡೆಸಿವಿರ್ ದಂಧೆಯನ್ನು ಭೇದಿಸಿ ಮೊರ್ಬಿ, ಅಹಮದಾಬಾದ್ ಮತ್ತು ಸೂರತ್‌ನ ಏಳು ಜನರನ್ನು ಬಂಧಿಸಿದ್ದಾರೆ. 60 ಸಾವಿರ ಖಾಲಿ ಬಾಟಲುಗಳು, 30 ಸಾವಿರ ನಕಲಿ ಸ್ಟಿಕ್ಕರ್‌ಗಳು ಮತ್ತು 90 ಲಕ್ಷ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

ಬಂಧಿಸಲ್ಪಟ್ಟವರ ಹೆಸರುಗಳು ರಮೀಜ್ ಕದ್ರಿ ಮತ್ತು ಮೊಹಮ್ಮದ್ ಆಸಿಫ್ ಎಂದು ಬಲಪಂಥೀಯರ ಮತ್ತು ಬಿಜೆಪಿ ಐಟಿ ಸೆಲ್ ಸದಸ್ಯರ ವೈರಲ್ ಸಂದೇಶಗಳು ಸೂಚಿಸುತ್ತಿವೆ.

@Rashtra_Sevika_ ಟ್ವಿಟರ್‌ ಹ್ಯಾಂಡಲ್‌ನ ಟ್ವೀಟ್‌ಗೆ 4,480 ಕ್ಕೂ ಹೆಚ್ಚು ರಿಟ್ವೀಟ್‌ಗಳು ಬಂದಿವೆ. ಈ ಟ್ವೀಟ್‌‌ನಲ್ಲಿ, ‘ಉಪ್ಪು, ಗ್ಲೂಕೋಸ್ ಮತ್ತು ನೀರಿನಿಂದ ನಕಲಿ ರೆಮ್ಡೆಸಿವಿರ್ ತಯಾರಿಸಿದ್ದಕ್ಕಾಗಿ ಆರು ಜನರನ್ನು ಗುಜರಾತಿನಲ್ಲಿ ಬಂಧಿಸಲಾಗಿದೆ. ಅವರು 60 ಸಾವಿರ ನಕಲಿ ರೆಮ್ಡೆಸಿವಿರ್ ಮಾಡಲು ಹೊರಟಿದ್ದರು. ಅಹಮದಾಬಾದ್‌ನ ಜುಹಾಪುರದ ರಮೀಜ್ ಕದ್ರಿ ಮತ್ತು ಮೊಹಮ್ಮದ್ ಆಸಿಫ್ 1117 ನಕಲಿ ರೆಮ್‌ಡೆಸಿವಿರ್ ಬಾಟಲುಗಳು, 50 ಲಕ್ಷ ರೂ. ನಗದು, 55 ಸಾವಿರ ನಕಲಿ ಬಾಟಲುಗಳು ಮತ್ತು 55 ಸಾವಿರ ನಕಲಿ ರೆಮ್‌ಡೆಸಿವಿರ್‌ನೊಂದಿಗೆ ಸಿಕ್ಕಿಬಿದ್ದಿದ್ದಾರೆ ಎಂದು ಈ ಸಂದೇಶಗಳು ಹೇಳುತ್ತಿವೆ.

ಅದೇ ಹ್ಯಾಂಡಲ್‌ನ ಹ್ಯಾಂಡಲ್‌ನ ಮತ್ತೊಂದು ಟ್ವೀಟ್‌ನಲ್ಲಿ, ಸಿಕ್ಕಿಬಿದ್ದ ಇತರ ಐದು ಜನರನ್ನು ಹೆಸರಿಸಿದೆ. ಅದರಲ್ಲಿ ಮುಸ್ಲಿಂ ಹೆಸರುಗಳಿಲ್ಲ, ಈ ಟ್ವೀಟ್ ಕಡಿಮೆ ಜನರಿಂದ ರಿಟ್ವೀಟ್‌ ಆಗಿದೆ.

ಇದನ್ನೂ ಓದಿ: ಇಂದೋರ್‌ನಲ್ಲಿನ ಈ ಕೊರೊನಾ ಆರೈಕೆ ಕೇಂದ್ರ RSS ನಿರ್ಮಿಸಿದ್ದಲ್ಲ!

ಫ್ಯಾಕ್ಟ್‌ಚೆಕ್‌

ಇವೆಲ್ಲದರ ಹಿಂದಿನ ಉದ್ದೇಶ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಯ ವೈಫಲ್ಯಗಳನ್ನು ಮರೆ ಮಾಚಲು ಘಟನೆಗೆ ಕೋಮುವಾದಿ ರೂಪ ಕೊಡುವುದಾಗಿದೆ. ತಪ್ಪು ದಾರಿಗೆಳೆಯುವ ಪೋಸ್ಟ್‌ಗಳು ಮುಸ್ಲಿಂ ಆರೋಪಿಗಳ ಹೆಸರನ್ನು ಮಾತ್ರ ಎತ್ತಿ ತೋರಿಸುತ್ತಿವೆ.

ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಫೋಟೊಗಳು ಗುಜರಾತ್‌ನಲ್ಲಿ ನಕಲಿ ಮಾಡಿದ ರೆಮ್‌ಡೆಸಿವಿರ್ ದಂಧೆಗೆ ಸಂಬಂಧಿಸಿವೆ. ಏಳು ಜನರನ್ನು ಬಂಧಿಸಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ಹೇಳಿದೆ. ಮೊರ್ಬಿ ನಿವಾಸಿಗಳಾದ ರಾಹುಲ್ ಕೋಟೇಯ ಮತ್ತು ರವಿರಾಜ್ ಹಿರಾನಿ, ಮೊಹಮ್ಮದ್ ಆಶಿಮ್ ಅಲಿಯಾಸ್ ಆಶಿಫ್ ಮತ್ತು ರಮೀಜ್ ಕದ್ರಿ, ಸೂರತ್ ನಿವಾಸಿ ಕೌಶಲ್ ವೋರಾ ಮತ್ತು ಅವರ ಸಹಚರ ಮುಂಬೈ ನಿವಾಸಿ ಪುನೀತ್ ತಲಾಲ್ ಷಾ.

ಕೌಶಲ್ ವೋರಾ ಈ ದಂಧೆಯ ಮಾಸ್ಟರ್ ಮೈಂಡ್ ಎಂದು ವರದಿಯಾಗಿದೆ. ಇದಲ್ಲದೆ, ಪೊಲೀಸರು ಆಶಿಫ್ ಮತ್ತು ರಮೀಜ್‌ರಿಂದ 1,170 ಚುಚ್ಚುಮದ್ದು ಮತ್ತು 17.37 ಲಕ್ಷ ರೂ. ನಗದು ಮತ್ತು 14 ನಕಲಿ ಚುಚ್ಚುಮದ್ದುಗಳನ್ನು, ರಾಹುಲ್ ಮತ್ತು ರವಿರಾಜ್ರಿಂದ 2.15 ಲಕ್ಷ ರೂ. ಹಾಗೂ 7.68 ಲಕ್ಷ ರೂ. ಮುಖಬೆಲೆಯ 190 ನಕಲಿ ರೆಮ್‌ಡೆಸಿವಿರ್ ಚುಚ್ಚುಮದ್ದನ್ನು, ಕೌಶಲ್, ಪುನೀತ್‌ರಿಂದ 24.70 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಈ ಗ್ಯಾಂಗ್ ಗ್ಲೂಕೋಸ್ ಮತ್ತು ಟೇಬಲ್ ಉಪ್ಪನ್ನು ರೆಮ್ಡೆಸಿವಿರ್‌ ಚುಚ್ಚುಮದ್ದು ಎಂದು ಪ್ಯಾಕೇಜಿಂಗ್ ಮಾಡುತ್ತಿತ್ತು.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಡೆಕ್ಕನ್ ಹೆರಾಲ್ಡ್ ಮತ್ತು ದಿ ಇಂಡಿಯನ್ ಎಕ್ಸ್‌ಪ್ರೆಸ್ ಆರು ಆರೋಪಿಗಳನ್ನು ಹೆಸರಿಸಿದ್ದು, ಅಹಮದಾಬಾದ್ ಮಿರರ್ ಇನ್ನೊಬ್ಬ ಏಳನೆ ಆರೋಪಿಯನ್ನು ಸಿರಾಜ್ ಖಾನ್ ಎಂದು ಹೆಸರಿಸಿದೆ. ಈತ ಕೌಶಲ್ ವೋರಾನ ಸಹಾಯಕ ಎಂದು ಅವರು ಹೇಳಿದೆ.

ಝೀ ನ್ಯೂಸ್ ಗುಜರಾತಿ ಪ್ರಕಾರ, ಆರೋಪಿಗಳಾದ ಕೌಶಲ್ ಮಹೇಂದ್ರ ವೊರಾ (ಸೂರತ್), ರಾಹುಲ್ ಅಶ್ವಿನ್ ಭಾಯ್ ಕೊಚೆತಾ (ಮೊರ್ಬಿ), ರವಿರಾಜ್ ಅಕಾ ರಾಜ್ ಮನೋಜ್ಭಾಯ್ ಹಿರಾನಿ (ಮೊರ್ಬಿ), ಮೊಹಮ್ಮದ್ ಆಶಿಮ್ ಅಕಾ ಮೊಹಮ್ಮದ್ ಆಸಿಫ್ ಮೊಹಮ್ಮದ್ ಅಬ್ಬಾಸ್ ಪಟಾನಿ (ಅಹ್ಮದಾಬಾದ್) ಮತ್ತು ಪುನೀತ್ ಗುನ್ವಂತ್ಲಾಲ್ ಷಾ (ಮುಂಬೈ). ಭರೂಚ್ ಮತ್ತು ಸೂರತ್‌ನ ಇತರ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ವರದಿ ತಿಳಿಸಿದೆ.

ಈ ಪ್ರಕರಣದ ಬಗ್ಗೆ ದೇಶ್ ಗುಜರಾತ್ ತನ್ನ ಆರಂಭಿಕ ವರದಿಯಲ್ಲಿ ಮುಸ್ಲಿಂ ಆರೋಪಿಗಳನ್ನು ಮಾತ್ರ ಹೆಸರಿಸಿತ್ತು. ನಂತರ ತನ್ನ ವರದಿಯನ್ನು ನವೀಕರಿಸಿ, ಕುಶಾಲ್ ಮತ್ತು ಪುನೀತ್ ಹೆಸರುಗಳನ್ನು ಸೇರಿಸಿತು.

ಇದನ್ನೂ ಓದಿ: ಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಔಷಧದ ಬೇಡಿಕೆ ಗಗನಕ್ಕೇರಿದಾಗಿನಿಂದ ಗುಜರಾತ್ ಪೊಲೀಸರು ರಾಜ್ಯದಲ್ಲಿ ಅನೇಕ ನಕಲಿ ರೆಮ್ಡೆಸಿವಿರ್ ದಂಧೆಗಳನ್ನು ಪತ್ತೆ ಮಾಡಿದ್ದಾರೆ. ಬ್ಲ್ಯಾಕ್ ಮಾರುಕಟ್ಟೆ ಮತ್ತು ನಕಲಿ ರೆಮ್‌ಡೆಸಿವಿರ್ ಚುಚ್ಚುಮದ್ದನ್ನು ಮಾರಾಟ ಮಾಡಿದ 63 ಆರೋಪಿಗಳ ವಿರುದ್ಧ ಒಟ್ಟು 24 ಪ್ರಕರಣಗಳು ದಾಖಲಾಗಿವೆ ಎಂದು ಟೈಮ್ಸ್ ಆಫ್ ಇಂಡಿಯಾ ಪತ್ರಕರ್ತ ಸರ್ಫರಾಜ್ ಶೇಖ್ ಟ್ವೀಟ್ ಮಾಡಿದ್ದಾರೆ.

ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಗುಜರಾತಿನಲ್ಲಿ ನಕಲಿ ರೆಮ್ಡೆಸಿವಿರ್ ದಂಧೆಯಲ್ಲಿ ಇಬ್ಬರು ಮುಸ್ಲಿಂ ಆರೋಪಿಗಳ ಹೆಸರುಗಳನ್ನು ಮಾತ್ರ ಎತ್ತಿಕೊಂಡು ಇದಕ್ಕೆ ಕೋಮುವಾದದ ರೂಪ ಕೊಡಲು ಯತ್ನಿಸುತ್ತಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಈ ಪ್ರಕರಣದಲ್ಲಿ ಸುಮಾರು ಏಳು ಜನರನ್ನು ಬಂಧಿಸಲಾಗಿದೆ. ಅದರಲ್ಲಿ ಇಬ್ಬರು ಮುಸ್ಲಿಮರು ಮತ್ತು ಐವರು ಹಿಂದೂಗಳಿದ್ದಾರೆ ಎಂದು ಅಲ್ಟ್ ನ್ಯೂಸ್ ಫ್ಯಾಕ್ಟ್‌ಚೆಕ್ ನಿರೂಪಿಸಿದೆ.

ಈಗ ಬೆಂಗಳೂರಿನಲ್ಲಿ ತೇಜಸ್ವಿ ಸೂರ್ಯ ಕೂಡ ಇದೇ ಜಾಡಿನಲ್ಲಿ ‘ಬೆಡ್ ಬ್ಲಾಕಿಂಗ್’ ವಿಷಯವನ್ನು ಪ್ರಸ್ತುತ ಪಡಿಸಿದ್ದಾರೆ.

ಕೃಪೆ: ಅಲ್ಟ್‌ನ್ಯೂಸ್

ಇದನ್ನೂ ಓದಿ: ಆಕ್ಸಿಜನ್, ಆರೋಗ್ಯ ಸೌಲಭ್ಯಗಳ ಕೊರತೆ: ಸಿಎಂ ಯೋಗಿ ವಿರುದ್ಧ ತಿರುಗಿ ಬಿದ್ದ ಬಿಜೆಪಿ ನಾಯಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...