Homeಕರ್ನಾಟಕ‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

ನಾನೂ ಸಹ ನಿಮ್ಮಲ್ಲಿ ಒಬ್ಬನಾಗಿರುವುದಕ್ಕೆ ಮತ್ತು ಯಾರೋ ಹೊರಗಿನ ವ್ಯಕ್ತಿ ಅಲ್ಲ ಎನ್ನುವುದಕ್ಕೆ ಇಷ್ಟು ಸಾಕ್ಷಿ ಸಾಲದೆ?

- Advertisement -
- Advertisement -

ಆತ್ಮೀಯ ಸ್ನೇಹಿತರೆ,

ಕೊವಿಡ್ ಪೀಡಿತರಿಗೆ ಬೆಡ್ ಹಂಚುವ BBMP ವಾರ್ ರೂಮಿನಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ನನ್ನ ಹೆಸರನ್ನು ಸೇರಿಸಿಕೊಂಡ ಒಂದು ಸಂದೇಶ ಓಡಾಡುತ್ತಿರುವುದು ನನಗೆ ಅಪಾರವಾದ ನೋವು ತಂದಿದೆ.

ವಾರ್ ರೂಮಿನಲ್ಲಿ ನನ್ನ ಯಾವುದೇ ಪಾತ್ರವಿಲ್ಲ ಮಾತ್ರವಲ್ಲ ಅಲ್ಲಿ ಯಾವುದೇ ವೈದ್ಯರೂ ನನಗೆ ಗೊತ್ತಿಲ್ಲ. ಹೀಗಿದ್ದರೂ ನನ್ನನ್ನೂ ಆರೋಪಿಯನ್ನಾಗಿಸಿರುವುದು ನನಗೆ ಆಘಾತ ತಂದಿದೆ.‌ ವಾರ್ ರೂಮನ್ನು ನಡೆಸುತ್ತಿರುವುದು ವಿಶೇಷ ಆರೋಗ್ಯ ಆಯುಕ್ತರು. ನನ್ನ ಕಾರ್ಯವೇನಿದ್ದರೂ BBMP ಕೊವಿಡ್ ಕೇರ್ ಸೆಂಟರ್‌ಗಳ ಉಸ್ತುವಾರಿ ಮತ್ತು ಘನ ತ್ಯಾಜ್ಯ ಇಲಾಖೆಯ ನಿರ್ವಹಣೆ.‌

ವಾರ್ ರೂಮ್ಗೆ ಬೇಕಾದ ವೈದ್ಯರು ಅಥವಾ ಸಿಬ್ಬಂದಿಯ ನೇಮಕ ಮಾಡಿಕೊಳ್ಳುವುದು ಆರೋಗ್ಯ ಇಲಾಖೆಯ ಮತ್ತು ಆಯಾ ಬಿಬಿಎಂಪಿ ವಲಯಗಳ ಕೆಲಸವಾಗಿದೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಈ ವಿಷಯಕ್ಕೆ ಕೋಮು ಬಣ್ಣ ಹಚ್ಚಿರುವುದು ಮತ್ತು ಅದರಲ್ಲಿ ಆ ಇಲಾಖೆಗೆ ಯಾವ ರೀತಿಯಲ್ಲಿಯೂ ಸಂಬಂಧವೇ ಇರದ ನನ್ನ ಹೆಸರು ಸೇರಿಸಿರುವುದು ನನಗೆ ನಿಜಕ್ಕೂ ನೋವು ತಂದಿದೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ, ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ಎಲ್ಲಾ ಕೊವಿಡ್ ಕೇರ್ ಕೇಂದ್ರಗಳಿಗೆ ಆಕ್ಸಿಜನ್, ಆಕ್ಸಿಜನ್ ಕಾನ್ಸಂಟ್ರೇಟರುಗಳನ್ನು ವ್ಯವಸ್ಥೆ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಲು ನಾನು ಹಗಲು ರಾತ್ರಿ ಎನ್ನದೇ ಕೆಲಸ ಮಾಡುತ್ತಿದ್ದೇನೆ.

ಹಜ್ ಭವನವನ್ನು 140 ಬೆಡ್ ವ್ಯವಸ್ಥೆಯುಳ್ಳ ಆಕ್ಸಿಜನ್ ಸೌಲಭ್ಯವುಳ್ಳ ಕೊವಿಡ್ ಕೇರ್ ಕೇಂದ್ರವಾಗಿ ನಾನು ಪರಿವರ್ತಿಸಿದ್ದೇನೆ.‌ ಅಷ್ಟಲ್ಲದೇ ಹಜ್ ಕಮಿಟಿ ನಿಧಿಯಿಂದಲೇ 50 ICU ಗಳನ್ನು ಇಲ್ಲಿ ಹಾಕಿಸಿದ್ದೇನೆ.
ನಾನು ಹೇಳ ಬಯಸುವುದೇನೆಂದರೆ ಈ ಹಜ್ ಭವನದಲ್ಲಿ ಸೇರಿಸಿಕೊಂಡು ಆರೈಕೆ ಮಾಡುತ್ತಿರುವ ಕೊವಿಡ್ ರೋಗಿಗಳಲ್ಲಿ 90% ರೋಗಿಗಳು ಇತರೆ ಧರ್ಮದ ನನ್ನ ಸಹೋದರರಾಗಿದ್ದಾರೆ, ಕೇವಲ 10% ರೋಗಿಗಳು ಮಾತ್ರ ಮುಸ್ಲಿಮರಾಗಿದ್ದಾರೆ.

ನಾನು ನಂಬಿಕೊಂಡು ಬಂದ ಮತ್ತು ಈಗಲೂ ನಂಬಿರುವ ತತ್ವ ಏನೆಂದರೆ ಅಲ್ಲಾಹ್ ಇರಲಿ, ಈಶ್ವರನಿರಲಿ, ಜೀಸಸ್ ಇರಲಿ ದೇವರೆಂಬುವನು ಎಲ್ಲರಿಗೂ ಒಬ್ಬನೇ. ನಾಮ ಹಲವು. ಮತ್ತು ನಾವೆಲ್ಲರೂ ಅವನ ಮಕ್ಕಳು.

ಇದನ್ನೂ ಓದಿ: ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ಕಳೆದ ವರ್ಷ ನಾನು ಬಡವರಿಗೆ ಮತ್ತು ಅಗತ್ಯವಿರುವ ಜನರಿಗೆ ಆಹಾರದ ಕಿಟ್‌ಗಳನ್ನು ಒದಗಿಸಲು ಕೆಲಸ ಮಾಡಿದ್ದೆ. ಆಗ ಅವರೆಲ್ಲಾ ಯಾವ ಧರ್ಮದವರು ಯಾವ ಪ್ರದೇಶದವರು ಎಂದು ನಾನು ನೋಡಲಿಲ್ಲ. ಸಾವಿರಾರು ವಲಸೆ ಕಾರ್ಮಿಕರೊಂದಿಗೆ ನಿಂತು ಅವರಿಗೆ ಅಗತ್ಯ ಆಹಾರ ನೀಡಿ ಧೈರ್ಯ ಹೇಳುವ ಕೆಲಸ ಮಾಡಿದೆ.‌ ಅವರಿಗೆ ತಂತಮ್ಮ ಊರುಗಳಿಗೆ ತಲುಪುವಂತೆ ರೈಲು ಪ್ರಯಾಣ ಮಾಡಲು ಸಹಕರಿಸಿದೆ.‌

ಇದೆಲ್ಲಾ ಮಾಡುವಾಗಲೂ ನಾನು ಅವರು ಯಾವ ಧರ್ಮದವರು ಎಂದಾಗಲೀ ಯಾವ ಊರೆಂದಾಲೀ ನೋಡಲಿಲ್ಲ. ನನ್ನ ದೃಷ್ಟಿಯಲ್ಲಿ ಅವರೆಲ್ಲರೂ ಬಹಳ ಕಷ್ಟದಲ್ಲಿರುವ ನನ್ನ ಸಹೋದರ ಸಹೋದರಿಯರಾಗಿದ್ದರು. ಅವರು ಆದಷ್ಟು ಬೇಗ ತಮ್ಮ ಊರುಗಳಿಗೆ ಮರಳಿ ತಮ್ಮ ಪ್ರೀತಿಪಾತ್ರರನ್ನು ಸೇರಿಕೊಳ್ಳಲಿ ಎನ್ನುವುದಷ್ಟೇ ನನ್ನ ಕಾಳಜಿಯಾಗಿತ್ತು. ಇದರ ಪರಿಣಾಮವಾಗಿ ನನ್ನ ಇಡೀ ಕುಟುಂಬದವರಿಗೆ ನನ್ನಿಂದಾಗಿ ಕೊವಿಡ್ ಸೋಂಕು ತಗುಲಿತ್ತು.

ನಾನೂ ಸಹ ನಿಮ್ಮಲ್ಲಿ ಒಬ್ಬನಾಗಿರುವುದಕ್ಕೆ ಮತ್ತು ಯಾರೋ ಹೊರಗಿನ ವ್ಯಕ್ತಿ ಅಲ್ಲ ಎನ್ನುವುದಕ್ಕೆ ಇಷ್ಟು ಸಾಕ್ಷಿ ಸಾಲದೆ? ಯಾವತ್ತಿಗೂ ನನ್ನ ಬದ್ಧತೆ ನನ್ನ ದೇಶ, ನನ್ನ ಸರ್ಕಾರ ಮತ್ತು ಈ ದೇಶದ ಸಂವಿಧಾನಕ್ಕೆ.
ಕೆಲವು ಜನರ ಅಜ್ಞಾನ ಮತ್ತು ಮೂರ್ಖತನ ನಿಜಕ್ಕೂ ನನಗೆ ನೋವುಂಟುಮಾಡಿದೆ.‌ ಇದರ ಕುರಿತು ಕಾನೂನು ಪ್ರಕಾರ ತನಿಖೆ ನಡೆದು, ಇಂತಹ ಕಷ್ಟದ ಸಮಯದಲ್ಲಿ ಸಹ ವಿಷವನ್ನು ಹರಡುತ್ತಿರುವವರ ಮೇಲೆ ಕ್ರಮ ಜರುಗಿಸಲಿ ಎಂದು ಆಶಿಸುತ್ತೇನೆ.

ಇದನ್ನೂ ಓದಿ: ‘ಎಲ್ಲಾ ಬಿಟ್ಟ ಬಿಜೆಪಿ’- ಕೊರೊನಾ ವಿರುದ್ಧ ಹೋರಾಡಲಿಲ್ಲ, ವೈರಸ್ ಜೊತೆಗೇ ಒಳ ಒಪ್ಪಂದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. Iddaddu idda Haage Heli ddeera
    Sarfaraz ravre Satya Yendigu Satya
    Satyakke Jayawagali.
    Bjp Communal Mind
    Kelsa Maadakke Nalayakku
    Kelsa Maadu vavrannu kandre Tika uri

  2. ಬಿಜೆಪಿ ಯವರು ಹುಚ್ಚರಾಗಿದ್ದರೆ ಇವರ ಮಾತಿನಲ್ಲಿ ಹಿಡಿತ ಇಲ್ಲ ನೀವು ತಲೆ ಕೆಡಿಸಿ ಕೊಳ್ಳಬೇಡಿ ಸರ್ ಅಲ್ಲ ಮೇಲೆ ನಂಬಿಕೆ ಇರಲಿ

  3. ಸರ್ಫರಾಜ್ ಕಾನ್ ರವರೆ, ನಿಮ್ಮ ವಿಚಾರದಲ್ಲಿ ಕೋಮುವಾದಿಗಳು ಅವರ ಜಾಯಮಾನಕ್ಕೆ ತಕ್ಕಂತೆ ವರ್ತಿಸಿದ್ದಾರೆ, ನೊಂದುಕೊಳ್ಳಬೇಡಿ. ಮಾನವೀಯತೆಗೆ ಬೆಲೆ ಕೊಡುವ ನಿಮ್ಮ ಕೆಲಸವನ್ನು ಮುಂದುವರೆಸಿ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...