Homeಕರ್ನಾಟಕ‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

ನಾನೂ ಸಹ ನಿಮ್ಮಲ್ಲಿ ಒಬ್ಬನಾಗಿರುವುದಕ್ಕೆ ಮತ್ತು ಯಾರೋ ಹೊರಗಿನ ವ್ಯಕ್ತಿ ಅಲ್ಲ ಎನ್ನುವುದಕ್ಕೆ ಇಷ್ಟು ಸಾಕ್ಷಿ ಸಾಲದೆ?

- Advertisement -
- Advertisement -

ಆತ್ಮೀಯ ಸ್ನೇಹಿತರೆ,

ಕೊವಿಡ್ ಪೀಡಿತರಿಗೆ ಬೆಡ್ ಹಂಚುವ BBMP ವಾರ್ ರೂಮಿನಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ನನ್ನ ಹೆಸರನ್ನು ಸೇರಿಸಿಕೊಂಡ ಒಂದು ಸಂದೇಶ ಓಡಾಡುತ್ತಿರುವುದು ನನಗೆ ಅಪಾರವಾದ ನೋವು ತಂದಿದೆ.

ವಾರ್ ರೂಮಿನಲ್ಲಿ ನನ್ನ ಯಾವುದೇ ಪಾತ್ರವಿಲ್ಲ ಮಾತ್ರವಲ್ಲ ಅಲ್ಲಿ ಯಾವುದೇ ವೈದ್ಯರೂ ನನಗೆ ಗೊತ್ತಿಲ್ಲ. ಹೀಗಿದ್ದರೂ ನನ್ನನ್ನೂ ಆರೋಪಿಯನ್ನಾಗಿಸಿರುವುದು ನನಗೆ ಆಘಾತ ತಂದಿದೆ.‌ ವಾರ್ ರೂಮನ್ನು ನಡೆಸುತ್ತಿರುವುದು ವಿಶೇಷ ಆರೋಗ್ಯ ಆಯುಕ್ತರು. ನನ್ನ ಕಾರ್ಯವೇನಿದ್ದರೂ BBMP ಕೊವಿಡ್ ಕೇರ್ ಸೆಂಟರ್‌ಗಳ ಉಸ್ತುವಾರಿ ಮತ್ತು ಘನ ತ್ಯಾಜ್ಯ ಇಲಾಖೆಯ ನಿರ್ವಹಣೆ.‌

ವಾರ್ ರೂಮ್ಗೆ ಬೇಕಾದ ವೈದ್ಯರು ಅಥವಾ ಸಿಬ್ಬಂದಿಯ ನೇಮಕ ಮಾಡಿಕೊಳ್ಳುವುದು ಆರೋಗ್ಯ ಇಲಾಖೆಯ ಮತ್ತು ಆಯಾ ಬಿಬಿಎಂಪಿ ವಲಯಗಳ ಕೆಲಸವಾಗಿದೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಈ ವಿಷಯಕ್ಕೆ ಕೋಮು ಬಣ್ಣ ಹಚ್ಚಿರುವುದು ಮತ್ತು ಅದರಲ್ಲಿ ಆ ಇಲಾಖೆಗೆ ಯಾವ ರೀತಿಯಲ್ಲಿಯೂ ಸಂಬಂಧವೇ ಇರದ ನನ್ನ ಹೆಸರು ಸೇರಿಸಿರುವುದು ನನಗೆ ನಿಜಕ್ಕೂ ನೋವು ತಂದಿದೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ, ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ಎಲ್ಲಾ ಕೊವಿಡ್ ಕೇರ್ ಕೇಂದ್ರಗಳಿಗೆ ಆಕ್ಸಿಜನ್, ಆಕ್ಸಿಜನ್ ಕಾನ್ಸಂಟ್ರೇಟರುಗಳನ್ನು ವ್ಯವಸ್ಥೆ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಲು ನಾನು ಹಗಲು ರಾತ್ರಿ ಎನ್ನದೇ ಕೆಲಸ ಮಾಡುತ್ತಿದ್ದೇನೆ.

ಹಜ್ ಭವನವನ್ನು 140 ಬೆಡ್ ವ್ಯವಸ್ಥೆಯುಳ್ಳ ಆಕ್ಸಿಜನ್ ಸೌಲಭ್ಯವುಳ್ಳ ಕೊವಿಡ್ ಕೇರ್ ಕೇಂದ್ರವಾಗಿ ನಾನು ಪರಿವರ್ತಿಸಿದ್ದೇನೆ.‌ ಅಷ್ಟಲ್ಲದೇ ಹಜ್ ಕಮಿಟಿ ನಿಧಿಯಿಂದಲೇ 50 ICU ಗಳನ್ನು ಇಲ್ಲಿ ಹಾಕಿಸಿದ್ದೇನೆ.
ನಾನು ಹೇಳ ಬಯಸುವುದೇನೆಂದರೆ ಈ ಹಜ್ ಭವನದಲ್ಲಿ ಸೇರಿಸಿಕೊಂಡು ಆರೈಕೆ ಮಾಡುತ್ತಿರುವ ಕೊವಿಡ್ ರೋಗಿಗಳಲ್ಲಿ 90% ರೋಗಿಗಳು ಇತರೆ ಧರ್ಮದ ನನ್ನ ಸಹೋದರರಾಗಿದ್ದಾರೆ, ಕೇವಲ 10% ರೋಗಿಗಳು ಮಾತ್ರ ಮುಸ್ಲಿಮರಾಗಿದ್ದಾರೆ.

ನಾನು ನಂಬಿಕೊಂಡು ಬಂದ ಮತ್ತು ಈಗಲೂ ನಂಬಿರುವ ತತ್ವ ಏನೆಂದರೆ ಅಲ್ಲಾಹ್ ಇರಲಿ, ಈಶ್ವರನಿರಲಿ, ಜೀಸಸ್ ಇರಲಿ ದೇವರೆಂಬುವನು ಎಲ್ಲರಿಗೂ ಒಬ್ಬನೇ. ನಾಮ ಹಲವು. ಮತ್ತು ನಾವೆಲ್ಲರೂ ಅವನ ಮಕ್ಕಳು.

ಇದನ್ನೂ ಓದಿ: ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ಕಳೆದ ವರ್ಷ ನಾನು ಬಡವರಿಗೆ ಮತ್ತು ಅಗತ್ಯವಿರುವ ಜನರಿಗೆ ಆಹಾರದ ಕಿಟ್‌ಗಳನ್ನು ಒದಗಿಸಲು ಕೆಲಸ ಮಾಡಿದ್ದೆ. ಆಗ ಅವರೆಲ್ಲಾ ಯಾವ ಧರ್ಮದವರು ಯಾವ ಪ್ರದೇಶದವರು ಎಂದು ನಾನು ನೋಡಲಿಲ್ಲ. ಸಾವಿರಾರು ವಲಸೆ ಕಾರ್ಮಿಕರೊಂದಿಗೆ ನಿಂತು ಅವರಿಗೆ ಅಗತ್ಯ ಆಹಾರ ನೀಡಿ ಧೈರ್ಯ ಹೇಳುವ ಕೆಲಸ ಮಾಡಿದೆ.‌ ಅವರಿಗೆ ತಂತಮ್ಮ ಊರುಗಳಿಗೆ ತಲುಪುವಂತೆ ರೈಲು ಪ್ರಯಾಣ ಮಾಡಲು ಸಹಕರಿಸಿದೆ.‌

ಇದೆಲ್ಲಾ ಮಾಡುವಾಗಲೂ ನಾನು ಅವರು ಯಾವ ಧರ್ಮದವರು ಎಂದಾಗಲೀ ಯಾವ ಊರೆಂದಾಲೀ ನೋಡಲಿಲ್ಲ. ನನ್ನ ದೃಷ್ಟಿಯಲ್ಲಿ ಅವರೆಲ್ಲರೂ ಬಹಳ ಕಷ್ಟದಲ್ಲಿರುವ ನನ್ನ ಸಹೋದರ ಸಹೋದರಿಯರಾಗಿದ್ದರು. ಅವರು ಆದಷ್ಟು ಬೇಗ ತಮ್ಮ ಊರುಗಳಿಗೆ ಮರಳಿ ತಮ್ಮ ಪ್ರೀತಿಪಾತ್ರರನ್ನು ಸೇರಿಕೊಳ್ಳಲಿ ಎನ್ನುವುದಷ್ಟೇ ನನ್ನ ಕಾಳಜಿಯಾಗಿತ್ತು. ಇದರ ಪರಿಣಾಮವಾಗಿ ನನ್ನ ಇಡೀ ಕುಟುಂಬದವರಿಗೆ ನನ್ನಿಂದಾಗಿ ಕೊವಿಡ್ ಸೋಂಕು ತಗುಲಿತ್ತು.

ನಾನೂ ಸಹ ನಿಮ್ಮಲ್ಲಿ ಒಬ್ಬನಾಗಿರುವುದಕ್ಕೆ ಮತ್ತು ಯಾರೋ ಹೊರಗಿನ ವ್ಯಕ್ತಿ ಅಲ್ಲ ಎನ್ನುವುದಕ್ಕೆ ಇಷ್ಟು ಸಾಕ್ಷಿ ಸಾಲದೆ? ಯಾವತ್ತಿಗೂ ನನ್ನ ಬದ್ಧತೆ ನನ್ನ ದೇಶ, ನನ್ನ ಸರ್ಕಾರ ಮತ್ತು ಈ ದೇಶದ ಸಂವಿಧಾನಕ್ಕೆ.
ಕೆಲವು ಜನರ ಅಜ್ಞಾನ ಮತ್ತು ಮೂರ್ಖತನ ನಿಜಕ್ಕೂ ನನಗೆ ನೋವುಂಟುಮಾಡಿದೆ.‌ ಇದರ ಕುರಿತು ಕಾನೂನು ಪ್ರಕಾರ ತನಿಖೆ ನಡೆದು, ಇಂತಹ ಕಷ್ಟದ ಸಮಯದಲ್ಲಿ ಸಹ ವಿಷವನ್ನು ಹರಡುತ್ತಿರುವವರ ಮೇಲೆ ಕ್ರಮ ಜರುಗಿಸಲಿ ಎಂದು ಆಶಿಸುತ್ತೇನೆ.

ಇದನ್ನೂ ಓದಿ: ‘ಎಲ್ಲಾ ಬಿಟ್ಟ ಬಿಜೆಪಿ’- ಕೊರೊನಾ ವಿರುದ್ಧ ಹೋರಾಡಲಿಲ್ಲ, ವೈರಸ್ ಜೊತೆಗೇ ಒಳ ಒಪ್ಪಂದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. Iddaddu idda Haage Heli ddeera
    Sarfaraz ravre Satya Yendigu Satya
    Satyakke Jayawagali.
    Bjp Communal Mind
    Kelsa Maadakke Nalayakku
    Kelsa Maadu vavrannu kandre Tika uri

  2. ಬಿಜೆಪಿ ಯವರು ಹುಚ್ಚರಾಗಿದ್ದರೆ ಇವರ ಮಾತಿನಲ್ಲಿ ಹಿಡಿತ ಇಲ್ಲ ನೀವು ತಲೆ ಕೆಡಿಸಿ ಕೊಳ್ಳಬೇಡಿ ಸರ್ ಅಲ್ಲ ಮೇಲೆ ನಂಬಿಕೆ ಇರಲಿ

  3. ಸರ್ಫರಾಜ್ ಕಾನ್ ರವರೆ, ನಿಮ್ಮ ವಿಚಾರದಲ್ಲಿ ಕೋಮುವಾದಿಗಳು ಅವರ ಜಾಯಮಾನಕ್ಕೆ ತಕ್ಕಂತೆ ವರ್ತಿಸಿದ್ದಾರೆ, ನೊಂದುಕೊಳ್ಳಬೇಡಿ. ಮಾನವೀಯತೆಗೆ ಬೆಲೆ ಕೊಡುವ ನಿಮ್ಮ ಕೆಲಸವನ್ನು ಮುಂದುವರೆಸಿ.

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...