Homeಮುಖಪುಟಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

- Advertisement -
- Advertisement -

ದೇಶದಲ್ಲಿ ಕೊರೊನಾ ಎರಡನೆ ಅಲೆ ತೀವ್ರವಾಗಿ ಹರಡುತ್ತಿದೆ. ಬಿಜೆಪಿ ‘ಐಟಿ ಸೆಲ್‌’ ಅವುಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ. ಈ ನಡುವೆ ಬಂಗಾಳದಲ್ಲಿ ಚುನಾವಣೋತ್ತರ ಗಲಭೆ ನಡೆದಿದ್ದು, ಬಿಜೆಪಿ ಐಟಿ ಸೆಲ್ ಹಳೆಯ ಫೋಟೋಗಳನ್ನು ಬಳಸಿಕೊಂಡು ಬಂಗಾಳ ಗಲಭೆಯ ಚಿತ್ರಗಳು ಎಂದು ಸುಳ್ಳು ಹರಡುತ್ತಾ ಜನರ ದಾರಿ ತಪ್ಪಿಸುತ್ತಿದೆ. ಬಿಜೆಪಿಯು ಬೃಹತ್‌ ಐಟಿ ಸೆಲ್‌ ನೆಟ್ವರ್ಕ್ ಹೊಂದಿದೆ.

ಬಿಜೆಪಿ ಐಟಿ ಸೆಲ್‌ನ ಖಾತೆಯಾದ ‘ವಿನಿತಾ ಹಿಂದೂಸ್ತಾನಿ’ ಎಂಬ ಖಾತೆಯು ಬೆಂಬಲಿಗರನ್ನು ಸೆಳೆಯಲು ‘ಇನ್ನೋಸೆಂಟ್‌ & ಕ್ಯೂಟ್‌ ಪಾಕಿಸ್ತಾನಿ ಗರ್ಲ್ಸ್’ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಅಪ್ಲೋಡ್‌ ಮಾಡಲಾಗಿದ್ದ ಯುವತಿಯ ಫೋಟೋವನ್ನು ಬಳಸಿಕೊಂಡಿದ್ದು ಪತ್ತೆ ಹಚ್ಚಲಾಗಿದೆ. ಇದೀಗ ಈ ಖಾತೆಯನ್ನು ಡಿಲಿಟ್ ಮಾಡಲಾಗಿದೆ.

ಇದನ್ನೂ ಓದಿ: ಬೆಡ್‌ಬ್ಲಾಕ್‌ ದಂಧೆಯಲ್ಲಿ ಬಿಜೆಪಿ ಶಾಸಕ ಭಾಗಿ; ಸಂಬಂಧವಿಲ್ಲದ 17 ಸಿಬ್ಬಂದಿಗಳು `ಮುಸ್ಲಿಂ’ ಎಂಬ ಕಾರಣಕ್ಕೆ ವಜಾ

‘ವಿನಿತಾ ಹಿಂದೂಸ್ತಾನಿ’ ಖಾತೆಯೂ ಟ್ವಿಟರ್‌ನಲ್ಲಿ ಸುಮಾರು 21 ಸಾವಿರಕ್ಕೂ ಅಧಿಕ ಫಾಲೋವರ್‌‌ಗಳನ್ನು ಹೊಂದಿತ್ತು. ಇದರ ಬಯೋದಲ್ಲಿ, ಬಿಹಾರಿ ಮತ್ತು ಭಾರತೀಯ ಆಗಿದ್ದಕ್ಕೆ ಹೆಮ್ಮ, ಟೀಚರ್‌, ಕೇಸರಿ ಪ್ರೀತಿ, ಬಿಜೆಪಿ ಮತ್ತು ಆರೆಸ್ಸೆಸ್ ಫಾಲೋವರ್‌, ಹೆಮ್ಮೆಯ ಹಿಂದೂ ಎಂದು ಬರೆಯಲಾಗಿತ್ತು.

ಈ ಖಾತೆಯು ಬಿಜೆಪಿ ಐಟಿ ಸೆಲ್‌ನ ಖಾತೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವೆಬ್‌ಸೈಟ್‌ಗೆ ಲಿಂಕ್ ಆಗಿತ್ತು. ಟ್ವಿಟರ್‌ನಲ್ಲಿ ಸಾಮಾನ್ಯವಾಗಿ ಈ ರೀತಿಯ ಖಾತೆಗಳು ಬಿಜೆಪಿ ಸಂಬಂಧಿತ ಸುದ್ದಿಗಳನ್ನು ಅಥವಾ ಸುಳ್ಳು ಸುದ್ದಿಗಳನ್ನು ಹರಡುವಲ್ಲಿ ತೊಡಗಿಕೊಂಡಿದೆ. ಇದೀಗ ಈ ಖಾತೆಯನ್ನು ಡಿಲೀಟ್ ಮಾಡಲಾಗಿದ್ದು ಅದೇ ಚಿತ್ರವನ್ನು ಬಳಸಿಕೊಂಡು ‘ವಿನಿತಾ’ ಹೆಸರಲ್ಲಿ ಮತ್ತೆ ಎರಡು ಖಾತೆಗಳು ಟ್ವಿಟರ್‌ನಲ್ಲಿ ಸಕ್ರೀಯವಾಗಿದೆ. ಅದನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಬೆಂಗಳೂರು ‘ಬೆಡ್‌ ಬ್ಲಾಕ್’ ಹಗರಣ; ವಾಸ್ತವ ಏನು? ಹೊಣೆಗಾರರು ಯಾರು?

ಈ ಖಾತೆಗಳಲ್ಲಿನ ಫ್ರೋಫೈಲ್‌ ಚಿತ್ರವನ್ನು ‘ಇನ್ನೋಸೆಂಟ್‌ & ಕ್ಯೂಟ್‌ ಪಾಕಿಸ್ತಾನಿ ಗರ್ಲ್ಸ್’ ಎಂಬ ಹೆಸರಿನ ಫೇಸ್‌ಬುಕ್ ಫೇಜ್‌ನಿಂದ ಪಡೆಯಲಾಗಿದೆ. ಈ ಚಿತ್ರವನ್ನು ಎಪ್ರಿಲ್‌ 12 2014 ರಂದು ಪೇಜ್‌ಗೆ ಅಪ್ಲೋಡ್ ಮಾಡಲಾತ್ತು·

ಈ ಬಗ್ಗೆ ಆಲ್ಟ್‌ನ್ಯೂಸ್ ಸಂಸ್ಥಾಪಕ ಮೊಹಮ್ಮದ್ ಝುಬೇರ್‌, “ಕ್ಯೂಟ್‌ ‘ಹಿಂದೂಸ್ತಾನಿ’ ಹುಡುಗ @ vinita4india ಮುಗ್ಧ ಬಿಜೆಪಿ ಬೆಂಬಲಿಗರನ್ನು ಆಕರ್ಷಿಸಲು ‘ಇನ್ನೋಸೆಂಟ್‌ & ಕ್ಯೂಟ್‌ ಪಾಕಿಸ್ತಾನಿ ಗರ್ಲ್ಸ್’ ಪೇಜ್‌ನಿಂದ ಚಿತ್ರವನ್ನು ಎತ್ತುತ್ತಿದ್ದಾನೆ” ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...

ಕುವೈತ್ ವಿದ್ಯುತ್ ಸ್ಥಾವರ, ಉಪ್ಪು ನಿವಾರಣಾ ಘಟಕದ ಮೇಲೆ ಇರಾನ್ ದಾಳಿ: ಭಾರತ ಮೂಲದ ಕಾರ್ಮಿಕ ಸಾವು

ದುಬೈ: ಕುವೈತ್‌ನಲ್ಲಿ ವಿದ್ಯುತ್ ಮತ್ತು ನೀರು ನಿವಾರಣಾ ಘಟಕದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸುದ್ದಿ ಸಂಸ್ಥೆ ಕುನಾ ಸೋಮವಾರ ವರದಿ ಮಾಡಿದೆ. ದಾಳಿಯ ಸಮಯದಲ್ಲಿ...

1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಆರೋಪ; ದೆಹಲಿ ಪೊಲೀಸರಿಂದ ಮೈಸೂರಿನ ವ್ಯಕ್ತಿ ಬಂಧನ

ದೇಶಾದ್ಯಂತ ಹಲವು ಶಾಲೆಗಳು, ಹೈಕೋರ್ಟ್‌ ಮತ್ತು ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆಗಳನ್ನು ಕಳುಹಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಮೈಸೂರಿನ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ದೆಹಲಿ...

ಬಾಂಗ್ಲಾದೇಶದಿಂದ ಭಾರತದಲ್ಲಿ ಭಯೋತ್ಪಾದಕ ದಾಳಿ ನಿರ್ವಹಿಸುತ್ತಿದ್ದ ಲಷ್ಕರ್ ಕಮಾಂಡರ್ ಶಬ್ಬೀರ್ ಅಹ್ಮದ್ ಲೋನ್ ಬಂಧನ

ನವದೆಹಲಿ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಪ್ರಮುಖ ಪ್ರಗತಿಯಲ್ಲಿ, ಬಾಂಗ್ಲಾದೇಶದಲ್ಲಿ ನೆಲೆಸಿದ್ದು, ಭಾರತದಲ್ಲಿ ದಾಳಿಗಳನ್ನು ಯೋಜಿಸುತ್ತಿದ್ದ ಆರೋಪ ಹೊತ್ತಿರುವ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಾರ್ಯಕರ್ತನನ್ನು ದೆಹಲಿ ಗಡಿಯ ಬಳಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ದೃಢಪಡಿಸಿದ್ದಾರೆ. ಆರೋಪಿ...

‘ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದರು, ಪ್ರಾಣಿಯಂತೆ ಥಳಿಸಿದರು’ : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ ಮಾಡಿದ ಪತ್ರಕರ್ತ

ಗುಜರಾತ್‌ನ ರಾಜ್‌ಕೋಟ್‌ನ ಸ್ಥಳೀಯ ಪತ್ರಕರ್ತ ಸುದೇಶ್ ವಡೇಚಾ ಎಂಬವರು, ಪೊಲೀಸ್ ಕಸ್ಟಡಿಯಲ್ಲಿ ತನಗೆ ತೀವ್ರ ಚಿತ್ರ ಹಿಂಸೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 'ಖಬರ್ ರಾಜ್‌ಕೋಟ್ ಕಿ ನ್ಯೂಸ್' ಎಂಬ ಆನ್‌ಲೈನ್...