Homeಮುಖಪುಟಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

- Advertisement -
- Advertisement -

ದೇಶದಲ್ಲಿ ಕೊರೊನಾ ಎರಡನೆ ಅಲೆ ತೀವ್ರವಾಗಿ ಹರಡುತ್ತಿದೆ. ಬಿಜೆಪಿ ‘ಐಟಿ ಸೆಲ್‌’ ಅವುಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ. ಈ ನಡುವೆ ಬಂಗಾಳದಲ್ಲಿ ಚುನಾವಣೋತ್ತರ ಗಲಭೆ ನಡೆದಿದ್ದು, ಬಿಜೆಪಿ ಐಟಿ ಸೆಲ್ ಹಳೆಯ ಫೋಟೋಗಳನ್ನು ಬಳಸಿಕೊಂಡು ಬಂಗಾಳ ಗಲಭೆಯ ಚಿತ್ರಗಳು ಎಂದು ಸುಳ್ಳು ಹರಡುತ್ತಾ ಜನರ ದಾರಿ ತಪ್ಪಿಸುತ್ತಿದೆ. ಬಿಜೆಪಿಯು ಬೃಹತ್‌ ಐಟಿ ಸೆಲ್‌ ನೆಟ್ವರ್ಕ್ ಹೊಂದಿದೆ.

ಬಿಜೆಪಿ ಐಟಿ ಸೆಲ್‌ನ ಖಾತೆಯಾದ ‘ವಿನಿತಾ ಹಿಂದೂಸ್ತಾನಿ’ ಎಂಬ ಖಾತೆಯು ಬೆಂಬಲಿಗರನ್ನು ಸೆಳೆಯಲು ‘ಇನ್ನೋಸೆಂಟ್‌ & ಕ್ಯೂಟ್‌ ಪಾಕಿಸ್ತಾನಿ ಗರ್ಲ್ಸ್’ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಅಪ್ಲೋಡ್‌ ಮಾಡಲಾಗಿದ್ದ ಯುವತಿಯ ಫೋಟೋವನ್ನು ಬಳಸಿಕೊಂಡಿದ್ದು ಪತ್ತೆ ಹಚ್ಚಲಾಗಿದೆ. ಇದೀಗ ಈ ಖಾತೆಯನ್ನು ಡಿಲಿಟ್ ಮಾಡಲಾಗಿದೆ.

ಇದನ್ನೂ ಓದಿ: ಬೆಡ್‌ಬ್ಲಾಕ್‌ ದಂಧೆಯಲ್ಲಿ ಬಿಜೆಪಿ ಶಾಸಕ ಭಾಗಿ; ಸಂಬಂಧವಿಲ್ಲದ 17 ಸಿಬ್ಬಂದಿಗಳು `ಮುಸ್ಲಿಂ’ ಎಂಬ ಕಾರಣಕ್ಕೆ ವಜಾ

‘ವಿನಿತಾ ಹಿಂದೂಸ್ತಾನಿ’ ಖಾತೆಯೂ ಟ್ವಿಟರ್‌ನಲ್ಲಿ ಸುಮಾರು 21 ಸಾವಿರಕ್ಕೂ ಅಧಿಕ ಫಾಲೋವರ್‌‌ಗಳನ್ನು ಹೊಂದಿತ್ತು. ಇದರ ಬಯೋದಲ್ಲಿ, ಬಿಹಾರಿ ಮತ್ತು ಭಾರತೀಯ ಆಗಿದ್ದಕ್ಕೆ ಹೆಮ್ಮ, ಟೀಚರ್‌, ಕೇಸರಿ ಪ್ರೀತಿ, ಬಿಜೆಪಿ ಮತ್ತು ಆರೆಸ್ಸೆಸ್ ಫಾಲೋವರ್‌, ಹೆಮ್ಮೆಯ ಹಿಂದೂ ಎಂದು ಬರೆಯಲಾಗಿತ್ತು.

ಈ ಖಾತೆಯು ಬಿಜೆಪಿ ಐಟಿ ಸೆಲ್‌ನ ಖಾತೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವೆಬ್‌ಸೈಟ್‌ಗೆ ಲಿಂಕ್ ಆಗಿತ್ತು. ಟ್ವಿಟರ್‌ನಲ್ಲಿ ಸಾಮಾನ್ಯವಾಗಿ ಈ ರೀತಿಯ ಖಾತೆಗಳು ಬಿಜೆಪಿ ಸಂಬಂಧಿತ ಸುದ್ದಿಗಳನ್ನು ಅಥವಾ ಸುಳ್ಳು ಸುದ್ದಿಗಳನ್ನು ಹರಡುವಲ್ಲಿ ತೊಡಗಿಕೊಂಡಿದೆ. ಇದೀಗ ಈ ಖಾತೆಯನ್ನು ಡಿಲೀಟ್ ಮಾಡಲಾಗಿದ್ದು ಅದೇ ಚಿತ್ರವನ್ನು ಬಳಸಿಕೊಂಡು ‘ವಿನಿತಾ’ ಹೆಸರಲ್ಲಿ ಮತ್ತೆ ಎರಡು ಖಾತೆಗಳು ಟ್ವಿಟರ್‌ನಲ್ಲಿ ಸಕ್ರೀಯವಾಗಿದೆ. ಅದನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಬೆಂಗಳೂರು ‘ಬೆಡ್‌ ಬ್ಲಾಕ್’ ಹಗರಣ; ವಾಸ್ತವ ಏನು? ಹೊಣೆಗಾರರು ಯಾರು?

ಈ ಖಾತೆಗಳಲ್ಲಿನ ಫ್ರೋಫೈಲ್‌ ಚಿತ್ರವನ್ನು ‘ಇನ್ನೋಸೆಂಟ್‌ & ಕ್ಯೂಟ್‌ ಪಾಕಿಸ್ತಾನಿ ಗರ್ಲ್ಸ್’ ಎಂಬ ಹೆಸರಿನ ಫೇಸ್‌ಬುಕ್ ಫೇಜ್‌ನಿಂದ ಪಡೆಯಲಾಗಿದೆ. ಈ ಚಿತ್ರವನ್ನು ಎಪ್ರಿಲ್‌ 12 2014 ರಂದು ಪೇಜ್‌ಗೆ ಅಪ್ಲೋಡ್ ಮಾಡಲಾತ್ತು·

ಈ ಬಗ್ಗೆ ಆಲ್ಟ್‌ನ್ಯೂಸ್ ಸಂಸ್ಥಾಪಕ ಮೊಹಮ್ಮದ್ ಝುಬೇರ್‌, “ಕ್ಯೂಟ್‌ ‘ಹಿಂದೂಸ್ತಾನಿ’ ಹುಡುಗ @ vinita4india ಮುಗ್ಧ ಬಿಜೆಪಿ ಬೆಂಬಲಿಗರನ್ನು ಆಕರ್ಷಿಸಲು ‘ಇನ್ನೋಸೆಂಟ್‌ & ಕ್ಯೂಟ್‌ ಪಾಕಿಸ್ತಾನಿ ಗರ್ಲ್ಸ್’ ಪೇಜ್‌ನಿಂದ ಚಿತ್ರವನ್ನು ಎತ್ತುತ್ತಿದ್ದಾನೆ” ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...