HomeUncategorizedಪುದುಚೇರಿಯಲ್ಲಿ ಹೊಸ ಇತಿಹಾಸ ಬರೆದ ಬಿಜೆಪಿ ಮೈತ್ರಿ

ಪುದುಚೇರಿಯಲ್ಲಿ ಹೊಸ ಇತಿಹಾಸ ಬರೆದ ಬಿಜೆಪಿ ಮೈತ್ರಿ

- Advertisement -
- Advertisement -

ಪಂಚರಾಜ್ಯ ಚುನಾವಣೆಗಳ ಪೈಕಿ ಪುದುಚೇರಿ ಚುನಾವಣೆ ಸಹ ತನ್ನದೇ ಆದ ಕಾರಣಕ್ಕಾಗಿ ಸಾಕಷ್ಟು ಮಹತ್ವ ಪಡೆದುಕೊಂಡಿತ್ತು. ಪಂಚರಾಜ್ಯಗಳ ಪೈಕಿ ಕೋಲ್ಕತ್ತಾ, ಕೇರಳ, ಅಸ್ಸಾಂ ಹಾಗೂ ತಮಿಳುನಾಡಿಗೆ ೫ ವರ್ಷದ ನಂತರ ಎಂದಿನಂತೆ ವಿಧಾನಸಭೆ ಚುನಾವಣೆ ಎದುರಾಗಿದ್ದರೆ, ಪುದುಚೇರಿಗೆ ಮಾತ್ರ ಆಪರೇಷನ್ ಕಮಲದ ಕಾರಣಕ್ಕೆ ಚುನಾವಣೆ ಎದುರಾಗಿತ್ತು. ಹೀಗಾಗಿ ಪುದುಚೇರಿಯಲ್ಲಿ ಚುನಾವಣೆ ನಂತರ ಮತ್ತೆ ಯಾವ ಸರ್ಕಾರ ಅದಿಕಾರಕ್ಕೆ ಬರಲಿದೆ ಎಂಬ ಬಗ್ಗೆ ರಾಜಕೀಯ ವಠಾರಗಳಲ್ಲಿ ಸಾಮಾನ್ಯ ಕುತೂಹಲವೊಂದು ಮನೆ ಮಾಡಿತ್ತು.

ಅನೇಕ ರಾಜ್ಯಗಳಲ್ಲಿ ಅನೇಕ ಬಾರಿ ಬಿಜೆಪಿ ಚುನಾವಣೆ ಎದುರಿಸಿ ಅಧಿಕಾರ ಹಿಡಿದದ್ದಕ್ಕಿಂತ ಆಪರೇಷನ್ ಕಮಲದ ಸಹಾಯದಿಂದ ಹಿಂಬಾಗಿಲ ಮೂಲಕ ಅಧಿಕಾರವನ್ನು ಹಿಡಿದದ್ದೆ ಹೆಚ್ಚು. ಬಿಜೆಪಿ ಪಕ್ಷದ ಈ ಸಾಂಪ್ರದಾಯಿಕ ಸೂತ್ರಕ್ಕೆ ಈಗ ಪುದುಚೇರಿಯೂ ಬಲಿಯಾಗಿದೆ. ಏಕೆಂದರೆ ಬಿಜೆಪಿ ಪಾಲಿಗೆ ದಕ್ಷಿಣ ಭಾರತದಲ್ಲಿ ಕರ್ನಾಟಕದ ಹೊರತು ಬೇರೆ ಎಲ್ಲೂ ಭದ್ರ ನೆಲೆ ಇಲ್ಲ. ಹೀಗಾಗಿ ಮತ್ತೊಂದು ಆವಾಸ ಸ್ಥಾನಕ್ಕೆ ಕಾಯ್ದಿದ್ದ ಬಿಜೆಪಿ ಕಣ್ಣಿಗೆ ಬಿದ್ದದ್ದು ತಮಿಳುನಾಡು ಮತ್ತು ಪುದುಚೇರಿ.

224 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮತ್ತು ಪೆರಿಯಾರ್ ಚಿಂತನೆಗಳಿಗೆ ಗಟ್ಟಿಯಾಗಿಯೇ ಅಂಟಿಕೊಂಡಿರುವ ದ್ರಾವಿಡ ನಾಡಿನಲ್ಲಿ ಬಿಜೆಪಿಯ ಕೇಸರಿ ರಾಜಕಾರಣದ ಆಟ ನಡೆಯದು ಎಂಬ ವಿಚಾರ ಕಮಲ ಪಾಳಯಕ್ಕೆ ತಿಳಿಯದ ವಿಚಾರ ಏನಲ್ಲ. ಇದೇ ಕಾರಣಕ್ಕೆ ೩೦ ಕ್ಷೇತ್ರಗಳಿರುವ ಪಕ್ಕದ ಪುದುಚೇರಿಯನ್ನು ಹಿಡಿದರೆ, ಹಂತ ಹಂತವಾಗಿ ಹಿಂದುತ್ವದ ಹೆಸರಿನಲ್ಲಿ ತಮಿಳುನಾಡಿನಲ್ಲೂ ಅಧಿಕಾರ ಸಾಧ್ಯ ಎಂಬುದು ಬಿಜೆಪಿಯ ಲೆಕ್ಕಾಚಾರ. ಇದೇ ಕಾರಣಕ್ಕೆ ಕಳೆದ ಜನವರಿಯಲ್ಲಿ ಬಿಜೆಪಿ ನಾಯಕರು ವಿ. ನಾರಾಯಣ ಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಬೀಳಿಸಿ ಇದೀಗ ತಮ್ಮ ಜಂಡಾ ಹಾರಿಸಲು ಮುಂದಾಗಿದೆ ಬಿಜೆಪಿ.

ಹಿಂಬಾಗಿಲಲ್ಲಿ ಪುದುಚೇರಿ ಹಿಡಿದ ಬಿಜೆಪಿ
ಪುದುಚೇರಿ ಕೇಂದ್ರಾಡಳಿತ ಪ್ರದೇಶವಾದರೂ ಸಹ ತಮಿಳುನಾಡಿನಿಂದ ಕೂಗಳತೆ ದೂರದಲ್ಲಿರುವ ಈ ಪ್ರದೇಶಕ್ಕೆ ಸಾಂಸ್ಕೃತಿಕ ರೀತಿನೀತಿಗಳಲ್ಲಿ ಹೆಚ್ಚೇನು ವ್ಯತ್ಯಾಸ ಇಲ್ಲ. ಸಾಂಸ್ಕೃತಿಕವಾಗಿ ಮತ್ತು ಸಾಮಾಜಿಕವಾಗಿ ಈ ಎರಡೂ ನಾಡುಗಳಿಗೆ ಸಾಕಷ್ಟು ಹೋಲಿಕೆಗಳಿವೆ. ಈ ಎರಡೂ ಭೂ ಪ್ರದೇಶವನ್ನು ತಮಿಳು ಭಾಷೆ ಬೆಸೆಯುವುದಲ್ಲದೆ, ಪೆರಿಯಾರ್ ಸಿದ್ದಾಂತಗಳ ಪ್ರಭಾವವೂ ಈ ಭಾಗದಲ್ಲಿ ಸಾಕಷ್ಟಿದೆ. ಹೀಗಾಗಿ ತಮಿಳುನಾಡಿನಂತೆಯೇ ಇಲ್ಲಿಯೂ ಬಿಜೆಪಿ ನೆಲೆಯೂರುವುದು ಅಷ್ಟು ಸುಲಭದ ವಿಚಾರವಾಗಿರಲಿಲ್ಲ. ಇದಕ್ಕೆ ಈ ಹಿಂದಿನ ಚುನಾವಣೆಗಳು ಸಾಕಷ್ಟು ಸಾಕ್ಷಿ ಒದಗಿಸುತ್ತವೆ.

ವಿ. ನಾರಾಯಣ ಸ್ವಾಮಿ ಅವರ ಕಾಂಗ್ರೆಸ್ ಸರ್ಕಾರಕ್ಕೆ ಇಕ್ಕಟ್ಟಾದ ಪರಿಸ್ಥಿತಿ ನಿರ್ಮಾಣ ಮಾಡುವ ಸಲುವಾಗಿಯೇ ತಮಿಳುನಾಡಿನ ಬಿಜೆಪಿ ನಾಯಕಿ ತಮಿಳಿಸೈ ಸೌಂದರ್ ರಾಜನ್ ಅವರನ್ನು ಪುದುಚೇರಿಯ ಹೊಸ ಗೌರ್ನರ್ ಆಗಿ ನೇಮಕ ಮಾಡಲಾಗಿತ್ತು. ತಮಿಳಿಸೈ ಸೌಂದರ್ ರಾಜನ್ ಒಂದೆಡೆ ತಮ್ಮ ಅಧಿಕಾರವನ್ನು ಬಳಸಿಕೊಂಡು ವಿ. ನಾರಾಯಣ ಸ್ವಾಮಿ ಸರ್ಕಾರವನ್ನು ಇನ್ನಿಲ್ಲದಂತೆ ಕಾಡಿದರೆ, ಮತ್ತೊಂದೆಡೆ ಬಿಜೆಪಿ ಸದ್ದಿಲ್ಲದೆ ತಮ್ಮ ಎಂದಿನ ಸಾಂಪ್ರದಾಯಿಕ ಆಪರೇಷನ್ ಕಮಲವನ್ನು ಜಾರಿಗೆ ತಂದಿತ್ತು. (ಇದಕ್ಕೂ ಮೊದಲು ರಾಜ್ಯಪಾಲರಾಗಿದ್ದ ಕಿರಣ ಬೇಡಿ ಮತ್ತು ನಾರಾಯಣಸ್ವಾಮಿಯವರ ಸರ್ಕಾರಕ್ಕೂ ಹಲವು ಜಟಾಪಟಿಗಳಾಗಿದ್ದವು). 6ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರನ್ನು ಕೊಂಡುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು. ಪರಿಣಾಮ ಸರ್ಕಾರ ಬಹುಮತ ಕಳೆದುಕೊಂಡಿತ್ತು. ಇದೀಗ ಬಿಜೆಪಿ ಮೊದಲ ಬಾರಿಗೆ ಪುದುಚೇರಿಯಲ್ಲಿ ಅಧಿಕಾರದ ರುಚಿ ಅನುಭವಿಸಲು ಮುಂದಾಗಿದೆ. ಆದರೆ, ಇದಕ್ಕೂ ಸಹ ಕಾಂಗ್ರೆಸ್ ಪಕ್ಷದ ಎಡವಟ್ಟಿನ ನಿರ್ಣಯಗಳೇ ಕಾರಣ ಎಂದರೆ ತಪ್ಪಾಗಲಾರದು.

ಬಿಜೆಪಿ ವರದಾನವಾದ ಕಾಂಗ್ರೆಸ್ ಎಡವಟ್ಟು
30 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪುದುಚೇರಿಯಲ್ಲಿ ಸರ್ಕಾರ ರಚಿಸಲು ಬೇಕಾಗಿರುವ ಮ್ಯಾಜಿಕ್ ನಂಬರ್ 16. ಈ ಪೈಕಿ ಬಿಜೆಪಿ 6 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರೆ ಬಿಜೆಪಿ ಮೈತ್ರಿ ಪಕ್ಷವಾದ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ 10ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಬಿಜೆಪಿ ಮೈತ್ರಿ ಮೊದಲ ಬಾರಿಗೆ ಪುದುಚೇರಿಯಲ್ಲಿ ಅಧಿಕಾರದ ಗದ್ದುಗೆ ಏರಿದೆ. ಆದರೆ, ಸ್ಥಳೀಯ ಪಕ್ಷವಾದ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಅಧಿಕಾರಕ್ಕೆ ಏರುತ್ತಿರುವುದು ಇದೇ ಮೊದಲೇನಲ್ಲ. ಎನ್. ರಂಗಸ್ವಾಮಿ ಕಾಂಗ್ರೆಸ್‌ನಿಂದ ಹೊರಬಂದು 2011ರಲ್ಲೇ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಪಕ್ಷ ಕಟ್ಟಿ, ಮೊದಲ ಚುನಾವಣೆಯಲ್ಲೇ ಬಹುಮತಗಳಿಸಿ ಅಧಿಕಾರಕ್ಕೆ ಬಂದಿದ್ದರು. ಇದೀಗ ಐದನೇ ಬಾರಿ ಸಿಎಂ ಪಟ್ಟಕ್ಕೆ ಏರಿದ್ದಾರೆ. ಅವರು ಎನ್‌ಡಿಎ ಮೈತ್ರಿಯ ಭಾಗವಾಗಿರುವ ಕಾರಣವಷ್ಟೆ ಇಲ್ಲಿ ಬಿಜೆಪಿಗೆ ಅಧಿಕಾರ ಸಿಕ್ಕಿದಂತಾಗಿದೆ. ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಹೆಸರಿನಲ್ಲಿ ಬಿಜೆಪಿಗೆ ಮತ ಲಭಿಸಿದೆ ಎಂದರೂ ತಪ್ಪಾಗಲಾರದು.

ಅಸಲಿಗೆ ಎನ್. ರಂಗಸ್ವಾಮಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ. ಹಲವು ದಶಕಗಳಿಂದ ಅಧಿಕಾರ ಡಿಎಂಕೆ ಮತ್ತು ಎಡಿಎಂಕೆ ಕೈಲಿದ್ದ ಪುದುಚೇರಿಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಎನ್. ರಂಗಸ್ವಾಮಿ ಪ್ರಮುಖ ಕಾರಣಕರ್ತರಾಗಿದ್ದರು. 2001ರಿಂದ 2008ರವರೆಗೆ ಎರಡು ಅವಧಿಗೆ ಸಿಎಂ ಆಗಿದ್ದ ಅವರು ಹಲವು ಜನಪ್ರಿಯ ಯೋಜನೆಗಳ ಮೂಲಕ ಮನೆಮಾತಾಗಿದ್ದರು. ಒಂದು ಹಂತದಲ್ಲಿ ಪುದುಚೇರಿಯ ಕಾಮರಾಜ್, ಜನರ ಸಿಎಂ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದರು. ಪುದುಚೇರಿ ಮಟ್ಟಿಗೆ ಅವರನ್ನು ಅಜಾತಶತ್ರು ಎಂದೇ ಕರೆಯಲಾಗಿತ್ತು.

ಆದರೆ, 2008ರಲ್ಲಿ ಪಕ್ಷದ ಆಂತರಿಕ ರಾಜಕಾರಣದ ನೆಪ ಹೇಳಿ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲಾಗಿತ್ತು. ಇದರಿಂದ ಕುಪಿತಗೊಂಡ ರಂಗಸ್ವಾಮಿಯವರು ಆಲ್ ಇಂಡಿಯಾ ಎನ್. ಆರ್ ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿ ಮೊದಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ಅಧಿಕಾರ ಹಿಡಿದಿದ್ದು ಇಂದು ಇತಿಹಾಸ. ಈ ಘಟನೆಯ ನಂತರ ಕಾಂಗ್ರೆಸ್‌ನಿಂದ ಶಾಶ್ವತವಾಗಿ ದೂರವಾದ ಎನ್. ರಂಗಸ್ವಾಮಿ ಎನ್‌ಡಿಎ ಜೊತೆ ಮೈತ್ರಿ ಸಾಧಿಸಿದ್ದರು. ಇಂದು ಅವರ ಮೂಲಕವೇ ಕೋಮುವಾದಿ ಬಿಜೆಪಿ ದ್ರಾವಿಡ ನಾಡಿನ ಪಕ್ಕದಲ್ಲೇ ಜಂಡಾ ಹಾರಿಸುವಂತಾದದ್ದು ಮಾತ್ರ ವಿಪರ್ಯಾಸ.


ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...