Homeಮುಖಪುಟ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

#spinelessmodi ಮತ್ತು #DiaperSuryaExposed ಹ್ಯಾಶ್‌‌ಟ್ಯಾಗ್‌ಗಳ ಜೊತೆಗೆ #TejasviSuryaExposed, #ArrestBJPMLASatish , #BBMP_MustApologise ಮುಂತಾದ ಹ್ಯಾಶ್‌ಟ್ಯಾಗ್‌ಗಳೂ ಟ್ರೆಂಡ್ ಆಗಿದೆ.

- Advertisement -
- Advertisement -

ದೇಶದಲ್ಲಿರುವ ಎಲ್ಲಾ ರಾಜಕೀಯ ಪಕ್ಷಗಳಿಗಿಂತ ಅತೀ ದೊಡ್ಡ ಐಟಿಸೆಲ್ ನೆಟ್‌ವರ್ಕ್ ಬಿಜೆಪಿಗಿದೆ. ಇದಾಗಿಯೂ ಕಳೆದೊಂದು ದಿನದಿಂದ ನೆಟ್ಟಿಗರು ಬಿಜೆಪಿ ವಿರುದ್ದ ಮುಗಿಬಿದ್ದಿದ್ದಾರೆ. #spinelessmodi , #TejasviSuryaExposed , #DiaperSuryaExposed , #ArrestBJPMLASatish , #BBMP_MustApologise ಎಂಬ ಹ್ಯಾಶ್ ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ಕೊರೊನಾ ಹೆಚ್ಚುತ್ತಿರುವ ಮಧ್ಯೆ ಸರಿಯಾದ ಆರೋಗ್ಯ ಸೌಲಭ್ಯ ಸಿಗದೆ ಜನರು ಬೀದಿ ಬೀದಿಗಳಲ್ಲಿ ನರಳಾಡುತ್ತಿರುವುದು ವರದಿಯಾಗಿದೆ. ಆಡಳಿತ ಪಕ್ಷವಾದ ಬಿಜೆಪಿಯು ಸೋಂಕನ್ನು ಸರಿಯಾಗಿ ನಿರ್ವಹಣೆ ಮಾಡದೆ ಇದ್ದಿದ್ದು ಸಾಮಾನ್ಯ ಜನರ ನಡುವೆ ಅಸಹನೆ ಹಚ್ಚುತ್ತಿದೆ. ಇದರಿಂದಾಗಿ ಜನರು ತಮ್ಮ ಸಮಸ್ಯೆಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಳ್ಳುತ್ತಿದ್ದಾರೆ.

ಜನರು ತಮ್ಮ ಸಮಸ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ಬರೆಯುತ್ತಿರುವುದರಿಂದ ಮುಜುಗರಕ್ಕೀಡಾಗಿದ್ದ ಯುಪಿ ಸರ್ಕಾರವು, ಸಮಸ್ಯೆ ಬರೆದ ಯುವಕನ ಮೇಲೆ ಎಫ್‌ಐಆರ್‌ ದಾಖಲು ಮಾಡಿ ಎಚ್ಚರಿಕೆ ಕೂಡಾ ರವಾನಿಸಿತ್ತು. ಆದರೆ ಸುಪ್ರೀಂಕೋರ್ಟ್ ಅದರ ವಿರುದ್ದ ಎಲ್ಲಾ ರಾಜ್ಯಗಳಿಗೆ ಎಚ್ಚರಿಕೆ ನೀಡಿದ್ದು, ಸಮಸ್ಯೆ ಬರೆಯುವವರಿಗೆ ತೊಂದರೆ ಮಾಡದಂತೆ ಹೇಳಿತ್ತು.

ಇದನ್ನೂ ಓದಿ: ‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

ಕೊರೊನಾ ಎರಡನೆ ಅಲೆ ಬರಲಿದೆ ಎಂದು ಹಲವಾರು ತಜ್ಞರು ಈ ಮೊದಲೆ ಸರ್ಕಾರವನ್ನು ಎಚ್ಚರಿಸಿದ್ದರು. ಆದರೆ ಕೇಂದ್ರ ಸರ್ಕಾರ ಮಾತ್ರ ಇದರ ಬಗ್ಗೆ ತಲೆ ಕೆಡಿಸಿಕೊಳ್ಳದೆ ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಮುಳುಗಿತ್ತು. ಇದೀಗ ದೇಶದಾದ್ಯಂತ ಜನರು ತೀವ್ರ ಸಂಕಷ್ಟದಲ್ಲಿದ್ದು ಪ್ರಧಾನಿ ಮೋದಿಯ ನಿಷ್ಕ್ರೀಯತೆಯನ್ನು ಪ್ರಶ್ನಿಸಿದ್ದು, ‘ಬೆನ್ನೆಲುಬಿಲ್ಲದ ಮೋದಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಂಗಾರಮ್ ರಾಜು ಅವರು, “ಮೋದಿಗೆ ಯಾಕೆ ‘ಬೆನ್ನೆಲುಬಿಲ್ಲ’ ಎಂದರೆ, ಕೊರೊನಾವನ್ನು ಅವರು ಸರಿಯಾಗಿ ನಿರ್ವಹಣೆ ಮಾಡದೆ ಸಾವಿರಾರು ಜನರು ಆಮ್ಲಜನಕ, ಔಷಧಿ ಮತ್ತು ಇತರ ಆರೋಗ್ಯ ಸೌಲಭ್ಯದ ಕೊರತೆಯಿಂದಾಗಿ ಸಾಯುತ್ತಿದ್ದಾರೆ. ಆದರೆ ಅವರು ತಮ್ಮ ಹೊಸ ಮನೆ, ಸೆಂಟ್ರಲ್ ವಿಸ್ಟಾಕ್ಕಾಗಿ ಸಾವಿರಾರು ಕೋಟಿಗಳನ್ನು ಖರ್ಚು ಮಾಡುತ್ತಿದ್ದಾರೆ. ಶೇಮ್‌’ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ಸಯಿದ್ ಜಿಬ್ರಾನ್ ಅವರು, “ನಾನು ಮೋದಿಗೆ ಬೆಂಬಲಿಸುತ್ತೇನೆ, ಯಾಕೆಂದರೆ ಅವರು ಅವರದೇ ಜನರನ್ನು ಕೊಲ್ಲುತ್ತಿದ್ದಾರೆ. ಒಂದು ಕ್ಷಣ ಯುಪಿಯಲ್ಲಿ ಮೃತಪಟ್ಟ ಜನರನ್ನು ನೋಡಿ. ಹಾಗೆ ಹೋಗುತ್ತಿರಿ ಮೋದಿ” ಎಂದು ಕಾರ್ಟೂನ್ ಒಂದರ ಚಿತ್ರವನ್ನು ಟ್ವೀಟ್ ಮಾಡಿ ಆಕ್ರೋಶ್ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಬೆಂಗಳೂರು ‘ಬೆಡ್‌ಬ್ಲಾಕ್‌’ ಪ್ರಕರಣದಲ್ಲಿ ಅನಾವಶ್ಯಕವಾಗಿ ಮುಸ್ಲಿಮರ ಹೆಸರನ್ನು ಮುನ್ನಲೆಗೆ ತಂದು ಕೋಮುವಾದಿಕರಣ ಮಾಡುವ ಪ್ರಯತ್ನಪಟ್ಟ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಅವರ ರಾಜೀನಾಮೆ ಕೇಳಿ #TejasviSuryaExposed, #DiaperSuryaExposed, ಕೂಡಾ ಟ್ರೆಂಡ್ ಆಗುತ್ತಿದೆ.

ಅವರು ಸ್ವತಃ ಬೆಡ್‌ಬ್ಲಾಕ್‌ ದಂಧೆಯ ಪ್ರಮುಖ ಆರೋಪಿಯೆಂದು ‘ವಿಜಯ ಕರ್ನಾಟಕ’ ವರದಿಯಲ್ಲಿ ಹೇಳಲಾಗಿರುವ ಆರೋಪಿ ಶಾಸಕ ಸತೀಶ್ ರೆಡ್ಡಿ ಅವರೊಂದಿಗೆ ಬೆಂಗಳೂರಿನ ವಾರ್‌ರೂಂ ಒಂದಕ್ಕೆ ದಾಳಿ ಮಾಡಿದ್ದರು. ಅಲ್ಲಿ ಅವರು ಹಗರಣದ ದಾರಿ ತಪ್ಪಿಸಲು ಬೇಕಾಗಿ ಹಗರಣಕ್ಕೆ ಕೋಮು ಬಣ್ಣ ಹಚ್ಚಿದ್ದರು. ಇದರಿಂದಾಗಿ ಬಿಬಿಎಂಪಿ 17 ಜನ ಸಿಬ್ಬಂದಿಯನ್ನು ‘ಮುಸ್ಲಿಂ’ ಎಂಬ ಕಾರಣಕ್ಕೆ ಕೆಲಸದಿಂದ ವಜಾ ಮಾಡಿದೆ.

ಇದನ್ನೂ ಓದಿ: ಬೆಡ್‌ಬ್ಲಾಕ್‌ ದಂಧೆಯಲ್ಲಿ ಬಿಜೆಪಿ ಶಾಸಕ ಭಾಗಿ; ಸಂಬಂಧವಿಲ್ಲದ 17 ಸಿಬ್ಬಂದಿಗಳು `ಮುಸ್ಲಿಂ’ ಎಂಬ ಕಾರಣಕ್ಕೆ ವಜಾ!

ಇದರ ವಿರುದ್ದ ಕೂಡಾ ಜನರು ಆಕ್ರೋಶ ವ್ಯಕ್ತಪಡಿಸಿದ್ದು ಬಿಬಿಎಂಪಿ ಈ ಪ್ರಕರಣದಲ್ಲಿ ಕ್ಷಮೆ ಕೇಳಬೇಕು ಎಂದು #BBMP_MustApologise ಆಗ್ರಹಿಸಿದ್ದಾರೆ. ಜೊತೆಗೆ ಬೆಡ್‌ಬ್ಲಾಕ್‌ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಶಾಸಕ ಸತೀಶ್ ರೆಡ್ಡಿಯನ್ನು ಬಂಧಿಸಬೇಕು #ArrestBJPMLASatish ಎಂದು ಕೂಡಾ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ಡಾ. ರಿಹಾನ ಅವರು, “ತೇಜಸ್ವಿ ಸೂರ್ಯ ನಿಮ್ಮ ಆಪ್ತ ಸತೀಶ್ ರೆಡ್ಡಿ ಈ ಇಡೀ ಬೆಡ್‌ಸ್ಕ್ಯಾಮ್‌ನ ಹಿಂದೆ ಇದ್ದಾರೆ. ಅಮಾಯಕರನ್ನು ದೂಷಿಸಿರುವ ನೀವು, ಆದ ಪ್ರಮಾದಕ್ಕೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಬಿಬಿಎಂಪಿ ಕೂಡಾ ಬಿಜೆಪಿ ಗೂಂಡಾಗಳ ಅಣತಿಯಂತೆ ವರ್ತಿಸುವುದನ್ನು ನಿಲ್ಲಿಸಬೇಕು” ಎಂದು ಆಕ್ರಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಎರಡನೆ ಅಲೆಯ ಸುನಾಮಿ; ಸಕಾರಾತ್ಮಕವಾಗಿ ಮುನ್ನಡೆಯಬೇಕು, ‘ಸರಕಾರಾತ್ಮಕ’ ಆಗಿಯಲ್ಲ

ಇಮ್ರಾನ್‌ ಖಾನ್ ಅವರು, “ತೇಜಸ್ವಿ ಸೂರ್ಯ ಅವರು ಕೋಮುವಾದಿ ಭಯೋತ್ಪಾದಕ. ಬಿಬಿಎಂಪಿ ಕಮಿಷನರ್‌ ಅವರನ್ನು ಬೆಂಬಲಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದ್ದಾರೆ.

ಯಶ್ವಂತ್ ನೇತಾಜಿ ಅವರು, “ತೇಜಸ್ವಿ ಸೂರ್ಯ ಬಿಜೆಪಿಯ ಕೋಮುವಾದಿ ಏಜೆಂಟ್” ಎಂದು ಕೊರೊನಾಗಿಂತ ಅಪಾಯಕಾರಿ ಎಂದು ಬರೆದಿರುವ ತೇಜಸ್ವಿ ಸೂರ್ಯ ಚಿತ್ರವನ್ನು ಹಾಕಿದ್ದಾರೆ. ಜೊತೆಗೆ ಶಾಸಕ ಸತೀಶ್ ರೆಡ್ಡಿ ಅವರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...