Homeಮುಖಪುಟತಮಿಳುನಾಡು ಮುಖ್ಯಮಂತ್ರಿಯಾಗಿ ಎಂ.ಕೆ. ಸ್ಟಾಲಿನ್ ಪ್ರಮಾಣ ವಚನ

ತಮಿಳುನಾಡು ಮುಖ್ಯಮಂತ್ರಿಯಾಗಿ ಎಂ.ಕೆ. ಸ್ಟಾಲಿನ್ ಪ್ರಮಾಣ ವಚನ

- Advertisement -
- Advertisement -

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಚೆನ್ನೈನ ರಾಜ ಭವನದಲ್ಲಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರು ತಮಿಳು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಇದರ ಜೊತೆಗೆ ಹಿರಿಯ ನಾಯಕರು ಹಾಗೂ ಒಂದು ಡಜನ್‌ಗೂ ಹೆಚ್ಚು ಮೊದಲ ಬಾರಿಗೆ ಸಚಿವರಾಗುತ್ತಿರುವ 34 ಸದಸ್ಯರ ಕ್ಯಾಬಿನೆಟ್‌ನ ಪಟ್ಟಿಯನ್ನು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅನುಮೋದಿಸಿದ್ದಾರೆ ಎಂದು ರಾಜ ಭವನ ಪ್ರಕಟಣೆ ತಿಳಿಸಿದೆ.

ಗೃಹ ಇಲಾಖೆ ಸೇರಿದಂತೆ ಕೆಲವು ಇಲಾಖೆಗಳನ್ನು ಸ್ಟಾಲಿನ ತಮ್ಮಲ್ಲೇ ಉಳಿಸಿಕೊಂಡಿದ್ದಾರೆ. ಪಕ್ಷದ ಹಿರಿಯ ನಾಯಕ, ಪ್ರಧಾನ ಕಾರ್ಯದರ್ಶಿ, ದುರೈಮುರುಗನ್ ಅವರು ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

ಸಚಿವ ಸಂಪುಟವು ಇಬ್ಬರು ಮಹಿಳಾ ಸದಸ್ಯರನ್ನು ಹೊಂದಿದೆ. ಮೊದಲ ಸಚಿವ ಸಂಪುಟ ಪಟ್ಟಿಯಲ್ಲಿ ಸ್ಟಾಲಿನ್ ಅವರ ಮಗ ಉದಯನಿಧಿ ಅವರ ಹೆಸರು ಕಾಣಿಸಿಕೊಂಡಿಲ್ಲ.

ಸಂಪುಟದಲ್ಲಿ ಮೊದಲ ಬಾರಿಗೆ ಮಂತ್ರಿಯಾಗುತ್ತಿರುವ ಮಾಜಿ ಚೆನ್ನೈ ಮೇಯರ್ ಮಾ ಸುಬ್ರಮಣಿಯನ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾಗಿ ನಿಯೋಜನೆಗೊಂಡಿದ್ದಾರೆ. ಪಕ್ಷದ ಪ್ರಭಾವಿ ವ್ಯಕ್ತಿ ಪಿ.ಕೆ.ಸೇಕರ್‌‌ಬಾಬು ಅವರಿಗೆ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯನ್ನು ನೀಡಲಾಗಿದೆ.

ಮಾಜಿ ಬ್ಯಾಂಕರ್ ಪಳನಿವೇಲ್ ತ್ಯಾಗರಾಜನ್ ಅವರಿಗೆ ಹಣಕಾಸು ಇಲಾಖೆಯನ್ನು ಮತ್ತು ಶಾಲಾ ಶಿಕ್ಷಣ ಇಲಾಖೆಯನ್ನು ಅನ್ಬಿಲ್ ಮಹೇಶ್ ಪೊಯ್ಯಮೊಳಿಗೆ ಹಂಚಿಕೆ ಮಾಡಲಾಗಿದೆ. 2018 ರಲ್ಲಿ ಎಐಎಡಿಎಂಕೆ ಡಿಎಂಕೆ ಸೇರಿಕೊಂಡ ವಿ. ಸೆಂಥಿಲ್ ಬಾಲಾಜಿಗೆ ವಿದ್ಯುತ್ ಇಲಾಖೆ ಸಚಿವಾಲಯವನ್ನು ನೀಡಲಾಗಿದೆ.

ಕೆ.ಎನ್. ನೆಹರೂ ಅವರನ್ನು ಪುರಸಭೆ ಆಡಳಿತ ಸಚಿವರನ್ನಾಗಿ ಆಯ್ಕೆ ಮಾಡಲಾಗಿದ್ದರೆ, ಐ ಪೆರಿಯಸಾಮಿಯನ್ನು ಸಹಕಾರ ಸಚಿವರನ್ನಾಗಿ ನೇಮಿಸಲಾಗಿದೆ. ಕೆ.ಪೊನ್ಮುಡಿ ಅವರು 2006-11ರ ಅಧಿಕಾರಾವಧಿಯಲ್ಲಿದ್ದಾಗ ಇದ್ದ ಉನ್ನತ ಶಿಕ್ಷಣ ಇಲಾಖೆಯನ್ನು ಮರಳಿ ಪಡೆದಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಭರ್ಜರಿ ಮುನ್ನಡೆ ಸಾಧಿಸಿದ ಡಿಎಂಕೆ – ದಶಕದ ನಂತರ ಉದಯಿಸಿದ ಸೂರ್ಯ!

ಪಕ್ಷದ ಪ್ರಭಾವಿ ನಾಯಕ ಇ.ವಿ.ವೇಲು ಅವರನ್ನು ಲೋಕೋಪಯೋಗಿ ಸಚಿವರನ್ನಾಗಿ ಆಯ್ಕೆ ಮಾಡಲಾಗಿದ್ದರೆ, ಎಂ.ಆರ್.ಕೆ ಪನ್ನೀರ್‌ಸೆಲ್ವಂ ಅವರು ಕೃಷಿ ಮತ್ತು ಕಲ್ಯಾಣ ಸಚಿವರಾಗಲಿದ್ದಾರೆ. ಕೆಕೆಎಸ್‌ಎಸ್‌ಆರ್ ರಾಮಚಂದ್ರನ್ ಅವರು ಕಂದಾಯ ಸಚಿವರಾಗಿ, ತಂಗಮ್ ತೆನ್ನರಸು ಕೈಗಾರಿಕಾ ಸಚಿವರಾಗಿ ಮತ್ತು ಎಸ್. ರಘುಪತಿ ಅವರು ಕಾನೂನು ಸಚಿವಾಗಿ ಆಯ್ಕೆಯಾಗಿದ್ದಾರೆ.

ಕೆ.ಆರ್. ಪೆರಿಯಕಾರಪ್ಪನ್, ಟಿ.ಎಂ. ಅನ್ಬರಸನ್, ಎಂ.ಪಿ. ಸಮಿನಾಥನ್, ಈ ಎಲ್ಲಾ ಮಾಜಿ ಮಂತ್ರಿಗಳನ್ನು ಸಹ ಸಚಿವರನ್ನಾಗಿ ಹೆಸರಿಸಲಾಗಿದ್ದು, ಕ್ರಮವಾಗಿ ಗ್ರಾಮೀಣಾಭಿವೃದ್ಧಿ, ಗ್ರಾಮೀಣ ಕೈಗಾರಿಕೆಗಳು ಮತ್ತು ಮಾಹಿತಿ ಮತ್ತು ಪ್ರಚಾರ ಇಲಾಖೆಗಳನ್ನು ನೀಡಲಾಗಿದೆ. ಏತನ್ಮಧ್ಯೆ, ಪಿ. ಗೀತಾ ಜೀವನ್ ಅವರನ್ನು ಸಮಾಜ ಕಲ್ಯಾಣ ಮತ್ತು ಮಹಿಳಾ ಸಬಲೀಕರಣ ಸಚಿವರಾಗಿ ಆಯ್ಕೆ ಮಾಡಲಾಗಿದೆ.

ಇನ್ನುಳಿದಂತೆ ಎಸ್. ಸೆಲ್ವರಾಜ್ (ಆದಿ ದ್ರಾವಿಡಾರ್ ಕಲ್ಯಾಣ), ಆರ್ ಸಕ್ಕರಪಾಣಿ (ಆಹಾರ), ಆರ್ ಗಾಂಧಿ (ಕೈಮಗ್ಗ ಮತ್ತು ಜವಳಿ), ಪಿ ಮೂರ್ತಿ (ವಾಣಿಜ್ಯ ತೆರಿಗೆ), ಎಸ್.ಎಸ್.ಶಿವಶಂಕರ್ (ಹಿಂದುಳಿದ ವರ್ಗಗಳ ಕಲ್ಯಾಣ), ಶಿವ ವಿ ಮಯನಾಥನ್ (ಪರಿಸರ), ಜಿಂಗಿ ಕೆ.ಎಸ್.ಮಸ್ತಾನ್ (ಅಲ್ಪಸಂಖ್ಯಾತರ ಕಲ್ಯಾಣ) ಮತ್ತು ಎಸ್.ಎಂ.ನಾಸರ್ (ಡೈರಿ) ಇಲಾಖೆಯ ಸಚಿವರಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಬಂಗಾಳಕ್ಕೆ ‘ದೀದಿ’, ತಮಿಳುನಾಡಿಗೆ ‘ಸ್ಟಾಲಿನ್’, ಕೇರಳಕ್ಕೆ ‘ವಿಜಯನ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...