Homeಕರ್ನಾಟಕಅನ್ಯಾಯಕ್ಕೆ ಒಳಗಾದವರು ಇಲ್ಲದಿದ್ದಾಗ ತೆರಳಿ ಕ್ಷಮೆ ಯಾಚಿಸಿದ ತೇಜಸ್ವಿ ಸೂರ್ಯ: ಸಾರ್ವಜನಿಕ ಕ್ಷಮೆ ಯಾಚನೆಗೆ ಒತ್ತಾಯ

ಅನ್ಯಾಯಕ್ಕೆ ಒಳಗಾದವರು ಇಲ್ಲದಿದ್ದಾಗ ತೆರಳಿ ಕ್ಷಮೆ ಯಾಚಿಸಿದ ತೇಜಸ್ವಿ ಸೂರ್ಯ: ಸಾರ್ವಜನಿಕ ಕ್ಷಮೆ ಯಾಚನೆಗೆ ಒತ್ತಾಯ

- Advertisement -
- Advertisement -

‘ನಾನು ನನಗೆ ಕೊಟ್ಟಿದ್ದ ಪಟ್ಟಿಯನ್ನು ಓದಿದ್ದೇನೆ, ತಪ್ಪಾಯ್ತು ಕ್ಷಮಿಸಿ’ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಬಿಬಿಎಂಪಿ ವಾರ್‌ರೂಮಿಗೆ ಮತ್ತೆ ಭೇಟಿ ನೀಡಿದಾಗ ಬೇಡಿಕೊಂಡಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ. ಆದರೆ, ರಾತ್ರೋರಾತ್ರಿ ನಡೆದ ಈ ಕ್ಷಮೆ ಯಾಚನೆ ಸಂದರ್ಭದಲ್ಲಿ, ತೇಜಸ್ವಿ ಮತ್ತು ಅವರ ಪಟಾಲಂ ಅವತ್ತು ಹೆಸರಿಸಿದ 16 ಮುಸ್ಲಿಂ ಉದ್ಯೋಗಿಗಳು ಅಲ್ಲಿ ಇರಲೇ ಇಲ್ಲ. ಈ ಸಂಸದರ ಆರ್ಭಟ, ಹುಂಬತನದ ಪರಿಣಾಮವಾಗಿಯೇ ಅವರು ತಾತ್ಕಾಲಿಕವಾಗಿ ಕೆಲಸ ಕಳೆದುಕೊಂಡಿದ್ದಾರೆ.

ಬಿಜೆಪಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಗುರುವಾರ (ಮೇ 5) ಸಂಜೆ 7 ಗಂಟೆ ಸುಮಾರಿಗೆ ಬೆಂಗಳೂರು ದಕ್ಷಿಣ ಕೋವಿಡ್ ವಾರ್‌ರೂಮಿಗೆ ಭೇಟಿ ನೀಡಿ, ಕ್ಷಮೆ ಯಾಚಿಸಿದ್ದಾರೆ. ಮಂಗಳವಾರದಂದು ವಾರ್‌‌ರೂಂಗೆ ಮೇಲೆ ’ದಾಳಿ’ ನಡೆಸಿದ್ದ ತೇಜಸ್ವಿ ಅಲ್ಲಿ ಕೆಲಸ ಮಾಡುತ್ತಿದ್ದ 16 ಮುಸ್ಲಿಂ ಸಿಬ್ಬಂದಿಗಳ ಹೆಸರನ್ನು ಓದಿದ್ದು, ಅವರು ಕೋವಿಡ್ ಬೆಡ್ ಬ್ಲಾಕ್ ಮಾಡುವ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದರು. ಇದರಿಂದಾಗಿ ಈ ಉದ್ಯೋಗಿಗಳನ್ನು ಬಲಪಂಥೀಯರು ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿದ್ದರು.

ಇದನ್ನೂ ಓದಿ: FAQ’s: ಕೊರೊನಾ ವ್ಯಾಕ್ಸಿನ್: ನಿಮಗೆ ಗೊತ್ತಿರಬೇಕಾದ ಸಂಗತಿಗಳು

ಇದನ್ನು ಅನುಸರಿಸಿ, ಈ ವಾರ್‌ರೂಮಿನಲ್ಲಿ ಕೆಲಸ ಮಾಡುವ 205 ಜನರ ಹೆಸರುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸೋರಿಕೆಯಾದ ನಂತರ ಸಂಸದ ತೇಜಸ್ವಿಯ ಕೋಮುವಾದಿ ಧೋರಣೆ ಬೆತ್ತಲಾಗಿತ್ತು. ಅಲ್ಲಿ ಶೇ. 90 ಕ್ಕಿಂತ ಹೆಚ್ಚು ಹಿಂದೂಗಳೇ ಇದ್ದಾರೆ ಎಂದು ಗೊತ್ತಾಗುತ್ತಿದ್ದಂತೆ ಸಂಸದರ ವಿರುದ್ಧ ಜಾಲತಾಣದಲ್ಲಿ ಅಭಿಯಾನ ಶುರುವಾಗಿ, ತೇಜಸ್ವಿ ರಾಜೀನಾಮೆ ನೀಡಿ ಎಂಬ ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿತ್ತು.

ತೇಜಸ್ವಿಯ ಕ್ಷಮೆಯಾಚನೆ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ, “ಇದೆಂತಹ ಕ್ಷಮೆಯಾಚನೆ? ಯಾರ ವಿರುದ್ಧ ಆರೋಪ ಮಾಡಿದ್ದರೋ ಅವರೇ ಇಲ್ಲದ ಸಂದರ್ಭದಲ್ಲಿ ಕ್ಷಮೆಯಾಚನೆ ಮಾಡಿದ್ದು ಒಂದು ನಾಟಕದಂತೆ ಕಾಣುತ್ತಿದೆ. ಸಂಸದರು ಅವತ್ತು ದಾಳಿ ಮಾಡಿದ್ದು ಕೋಮು ಸಾಮರಸ್ಯ ಹಾಳು ಮಾಡುವ ಪಿತೂರಿ ಹೊಂದಿತ್ತು. ಅವರಿಗೆ ಆ ಘಟನೆ ಬಗ್ಗೆ ನಿಜಕ್ಕೂ ಖೇದವಾಗಿದ್ದರೆ, ಅವರು ಸಾರ್ವಜನಿಕವಾಗಿ ಬಹಿರಂಗ ಕ್ಷಮೆ ಯಾಚಿಸಬೇಕು ಮತ್ತು ಇನ್ನು ಮುಂದೆ ಸಮಾಜದ ಸಾಮರಸ್ಯ ಕದಡುವ ಹೇಳಿಕೆ ನೀಡುವುದಿಲ್ಲ ಎಂದು ವಾಗ್ದಾನ ಮಾಡಬೇಕು. ಹಾಗೆ ಮಾಡದಿದ್ದರೆ, ಈ ಕ್ಷಮೆಯಾಚನೆ ಕೂಡ ಅವರ ಪಿತೂರಿಯ ಒಂಂದು ಭಾಗ ಮತ್ತು ಹೊಸ ನಾಟಕ ಎಂದೇ ಪರಿಗಣಿಸ ಬೇಕಾಗುತ್ತದೆ” ಎಂದು ತಿಳಿಸಿದ್ದಾರೆ.

ಇಂಥದ್ದೇ ಅಭಿಪ್ರಾಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಮುನ್ನೆಲೆಗೆ ಬರುತ್ತಿವೆ. ಸಂಸದರು ಬಹಿರಂಗ ಕ್ಷಮೆ ಕೇಳಬೇಕು ಎಂಬ ಆಗ್ರಹಗಳು ಕೇಳಿ ಬರುತ್ತಿವೆ. ತೇಜಸ್ವಿ ಅವರ ವಾರ್‌ರೂಮ್ ದಾಳಿ ಯಡಿಯೂರಪ್ಪ ಸರ್ಕಾರವಷ್ಟೇ ಅಲ್ಲ ಕೇಂದ್ರ ಸರ್ಕಾರದ ಕೋವಿಡ್ ನಿರ್ವಹಣೆಯ ವೈಫಲ್ಯವನ್ನೇ ಎತ್ತಿ ತೋರಿಸಿತ್ತು.

ಇದನ್ನೂ ಓದಿ: `ನಿಮ್ಮ ಜೋಳಿಗೆ ಎತ್ತಿಕೊಂಡು ಹೊರಟು ಬಿಡಿ!’ – ಪ್ರಧಾನಿ ಮೋದಿಗೆ ಅರುಂಧತಿ ರಾಯ್

‘ಕ್ಷಮಿಸಿ, ಇದು ನನ್ನ ಕಡೆಯಿಂದ ತಪ್ಪಾಗಿದೆ. ನನಗೆ ಒಂದು ಪಟ್ಟಿಯನ್ನು ನೀಡಲಾಯಿತು ಮತ್ತು ನಾನು ಅದನ್ನು ಓದಿದ್ದೇನೆ. ವಾರ್‌ರೂಮ್‌ನಲ್ಲಿ ನಡೆದ ಘಟನೆಯಿಂದ ಬೇಸರವಾಗಿದೆ ಎಂದು ನನಗೆ ತಿಳಿದಿದೆ’ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

“ವಾರ್‌ರೂಂ ದಾಳಿಯ ಸಮಯದಲ್ಲಿ ವಾರ್‌ರೂಮಿನಲ್ಲಿ ಇದ್ದವರು ನನಗೆ ನೀಡಿದ್ದ ಪಟ್ಟಿಯಲ್ಲಿನ ಹೆಸರುಗಳನ್ನು ಸುಮ್ಮನೆ ಓದಿದ್ದೇನೆ. ನನಗೆ ಕೋಮುವಾದಿ ಎನಿಸಿಕೊಳ್ಳುವ ಇರಾದೆ ಇಲ್ಲ. ನಾನು ಓದಿದ ಜನರ ಹೆಸರುಗಳು ಒಂದೇ ಸಮುದಾಯದವರು ಎಂದು ಕೂಡಾ ಗಮನ ಹರಿಸಿರಲಿಲ್ಲ…ಅವರನ್ನು ಹಿಂದೂ ಅಥವಾ ಮುಸ್ಲಿಂ ಎಂದು ನಾನು ನೋಡಲಿಲ್ಲ” ಎಂದು ಅವರು ಹೇಳಿದ್ದಾರೆ.

ಪ್ರಶ್ನೆಗಳು ಇನ್ನೂ ಇವೆ…

ತೇಜಸ್ವಿ ಆ ಪಟ್ಟಿಯನ್ನು ಎಲ್ಲಿಂದ ಪಡೆದರು ಅಥವಾ ಅದನ್ನು ಓದುವ ಮೊದಲು ಅದನ್ನು ಹೇಗೆ ಪರಿಶೀಲಿಸಿದರು ಎಂಬುದನ್ನು ಅವರು ಬಹಿರಂಗಪಡಿಸಿಲ್ಲ. ಅವರು ಮಂಗಳವಾರ ಹೆಸರಿಸಿದ 16 ಉದ್ಯೋಗಿಗಳ ಬಳಿ ಕ್ಷಮೆ ಯಾಚಿಸಿಲ್ಲ.

‘ಇದರಲ್ಲಿ ಹೆಚ್ಚಿನವರು 20 ರ ವಯಸ್ಸಿನ ಯುವಕರು ಮತ್ತು ಕಾಲೇಜು ವಿದ್ಯಾರ್ಥಿಗಳು. ಇವರೆಲ್ಲ ಸಮಾಜಸೇವೆಯ ತುಡಿತ ಮತ್ತು ತಾತ್ಕಾಲಿಕ ಆರ್ಥಿಕ ನೆರವಿನ ಕಾರಣಕ್ಕೆ ವಾರ್‌ರೂಮಿಗೆ ಕೆಲಸಕ್ಕೆ ಸೇರಿದವರು’ ಎಂದು ಅವರನ್ನು ನೇಮಕ ಮಾಡಿದ ಹೊರಗುತ್ತಿಗೆ ಕಂಪನಿ ಕ್ರಿಸ್ಟಲ್ ಇನ್ಫೋಸಿಸ್ಟಮ್ಸ್ ಹೇಳಿದ್ದಾಗಿ ನ್ಯೂಸ್ ಮಿನಿಟ್‌ ವರದಿ ಹೇಳಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಶವ ಸುಡಲೂ ಸೌದೆಯ ಕೊರತೆ: ಬೆಡ್ ಎತ್ತಿಕೊಂಡು ಸಂಸದ ಸೂರ್ಯ ನಾಪತ್ತೆ!

ಪೊಲೀಸರು ಅವರಿಗೆ ಕ್ಲೀನ್ ಚಿಟ್ ನೀಡುವವರೆಗೂ ವಾರ್‌ರೂಮಿಗೆ ಬರಬಾರದೆಂದು ನಿರ್ಬಂಧ ಹೇರಲಾಗಿದೆ.
ತೇಜಸ್ವಿಯ ದಾಳಿ ನಂತರ ವಾರ್‌ರೂಮ್‌ನಲ್ಲಿ ಕೆಲಸ ಮಾಡುವವರ ನಂಬರ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಉದ್ಯೋಗಿಗಳು ದೂರವಾಣಿಯಲ್ಲಿ ಅಪರಿಚಿತರು ನಿರಂತರ ಕಿರುಕುಳವನ್ನು ಎದುರಿಸುತ್ತಿದ್ದಾರೆ.

ಕೆಲವರು ಅವರ ಮನೆಗೂ ಹೋಗಿ ಆಸ್ಪತ್ರೆಯ ಹಾಸಿಗೆಗಳಿಗೆ ಒತ್ತಾಯಿಸುತ್ತಿದ್ದಾರೆ ಮತ್ತು ಆಸ್ಪತ್ರೆಯ ಹಾಸಿಗೆಗಳನ್ನು ನೀಡಲು ನೀವು ಎಷ್ಟು ಹಣವನ್ನು ತೆಗೆದುಕೊಳ್ಳುತ್ತಿದ್ದೀರಿ ಎಂದು ಕೇಳುತ್ತಿದ್ದಾರೆ. ನಿರಂತರ ಫೋನ್ ಕರೆಗಳಿಂದಾಗಿ ಹಲವಾರು ಉದ್ಯೋಗಿಗಳು ತಮ್ಮ ಫೋನ್ ಸಂಖ್ಯೆಯನ್ನು ನಿಷ್ಕ್ರಿಯಯಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನು ಉದ್ದೇಶಿಸಿ ಮಾತನಾಡಿದ್ದ ತೇಜಸ್ವಿ ಸೂರ್ಯ, “ನನ್ನ ಮೊಬೈಲ್ ನಂಬರ್ ಕೂಡ ಸೋರಿಕೆಯಾಗಿದ್ದು, ನಾನು ಕೂಡ ಬೆದರಿಕೆಗಳನ್ನು ಎದುರಿಸುತ್ತಿದ್ದೇನೆ. ಚಿಂತಿಸಬೇಡಿ, ಇದು ಒಂದು ವಾರದಲ್ಲಿ ಮುಗಿಯುತ್ತದೆ. ನಾನು ನಿಮ್ಮೊಂದಿಗಿದ್ದೇನೆ.. ನಿಮ್ಮ ಸಂಖ್ಯೆಯನ್ನು ಸೋರಿಕೆ ಮಾಡಿದವರಿಗೆ ನಾನು ಪಾಠ ಕಲಿಸುತ್ತೇನೆ” ಎಂದು ಹೇಳಿದ್ದು, ವಾರ್‌ರೂಮ್ ಉದ್ಯೋಗಿಗಳಿಗೆ ಹೊಸ ಸಿಮ್ ಕಾರ್ಡ್‌ಗಳನ್ನು ಕೊಡುವ ಭರವಸೆ ನೀಡಿದ್ದಾರೆ. ಆದರೆ ಅವರು ತಮ್ಮ ಕಚೇರಿಯಿಂದಲೇ ಈ ವಿವರಗಳು ಸೋರಿಕೆಯಾಗಿದೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ.

“ನನ್ನ ಮೂಲಕ ಬಹಳಷ್ಟು ಒಳ್ಳೆಯದು ಸಂಭವಿಸಿದೆ ಎಂಬುದನ್ನು ನೀವು ನೆನಪಿಟ್ಟುಕೊಳ್ಳಬೇಕೆಂದು ನಾನು ಬಯಸುತ್ತೇನೆ. ನಾನು ಜಾತಿವಾದಿ ಅಥವಾ ಕೋಮುವಾದಿ ಅಲ್ಲ. ನಾನು ಜನರಿಗೆ ಒಳ್ಳೆಯದನ್ನು ಮಾಡುತ್ತಿದ್ದೇನೆ. ನನಗೆ ಯಾವುದೇ ಕೆಟ್ಟ ಉದ್ದೇಶಗಳಿಲ್ಲ” ಎಂದು ಅವರು ತಿಳಿಸಿದ್ದಾರೆ ಎಂದು ವಾರ್‌ರೂಂ ಮೂಲಗಳು ತಿಳಿಸಿವೆ.

ಇದನ್ನೂ ಓದಿ:  ಬೆಂಗಳೂರು ‘ಬೆಡ್‌ ಬ್ಲಾಕ್’ ಹಗರಣ; ವಾಸ್ತವ ಏನು? ಹೊಣೆಗಾರರು ಯಾರು?

ಇತರ ಮೂರು ಬಿಜೆಪಿ ಮುಖಂಡರೊಂದಿಗೆ ವಾರ್‌ರೂಮಿಗೆ ದಾಳಿ ಮಾಡಿದ್ದ ತೇಜಸ್ವಿ ಅದರ ಲೈವ್‌‌ ಪ್ರಸಾರವನ್ನು ಮಾಡಿದ್ದರು. ಆದರೆ ಕ್ಷಮೆಯಾಚನೆ ಸಂದರ್ಭದಲ್ಲಿ ಯಾವುದೇ ಲೈವ್‌‌ ಪ್ರಸಾರ ಇರಲಿಲ್ಲ ಮತ್ತು ವಾರ್‌ರೂಮಿನಲ್ಲಿದ್ದವರಿಗೆ ವೀಡಿಯೊಗಳನ್ನು ಚಿತ್ರೀಕರಿಸದಂತೆ, ಫೋಟೊ ತೆಗೆಯದಂತೆ ಕೋರಲಾಗಿತ್ತು.

ನ್ಯೂಸ್ ಮಿನಿಟ್ ವೆಬ್‌ಸೈಟ್‌‌ ವಾರ್‌ರೂಮಿಲ್ಲಿ ಕೆಲಸ ಮಾಡುವ ಮೂರು ಜನರೊಂದಿಗೆ ಮಾತನಾಡಿದ್ದು, ಅವರೆಲ್ಲರೂ ತಮ್ಮ 16 ಸಹೋದ್ಯೋಗಿಗಳಿಗೆ ಸಂಭವಿಸಿರುವುದು ದುರದೃಷ್ಟಕರ ಮತ್ತು ಅನಗತ್ಯ ಎಂದು ಹೇಳಿದ್ದಾರೆ.

“ನಾವು ಇಲ್ಲಿ ಮುಸ್ಲಿಮರು ಮತ್ತು ಹಿಂದೂಗಳು ಒಟ್ಟಾಗಿ ಕೆಲಸ ಮಾಡುತ್ತೇವೆ. ತೇಜಸ್ವಿ ಹೆಸರಿಸಿದ ಇವರೆಲ್ಲರೂ ಚಿಕ್ಕ ಹುಡುಗರು. ಅವರನ್ನು ಭಯೋತ್ಪಾದಕರು ಎಂದು ಅವರು ಹೇಗೆ ಕರೆಯುತ್ತಾರೆ? ಬಂದೂಕುಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದು ಕೂಡಾ ಈ ಹುಡುಗರಿಗೆ ತಿಳಿದಿಲ್ಲ ಎಂದು ನಾನು ಭಾವಿಸುತ್ತೇನೆ. ತೇಜಸ್ವಿಯ ಈ ಕ್ಷಮೆಯಾಚನೆಯು ನಾಮಕಾವಾಸ್ತೆಗೆ ನಡೆದಿದೆ. ಅವರು ಹುಡುಗರ ಹೆಸರನ್ನು ಓದುವ ಮೂಲಕ ಅವರಿಗೆ ದೊಡ್ಡ ಅನ್ಯಾಯ ಎಸಗಿದ್ದಾರೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಆಧಾರ: ದಿ ನ್ಯೂಸ್ ಮಿನಿಟ್

ಇದನ್ನೂ ಓದಿ: ಬೆಡ್‌‌ಗೆ ಪರದಾಟ; ತನ್ನ ಪತಿಗಾಗಿ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟಿಸಿದ ಮಹಿಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...