HomeUncategorizedಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

ಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

- Advertisement -
- Advertisement -

ಸೂರ್ಯನಿಂದ ಕೇವಲ 5.79ಕೋಟಿ ಕಿಲೋ ಮೀಟರ್ ದೂರದಲ್ಲಿ ಇರುವ ಗ್ರಹವೇ ಬುಧ ಗ್ರಹ. ಬುಧ ಗ್ರಹ ಸೌರಮಂಡಲದ ಇತರ ಗ್ರಹಗಳಿಗೆ ಹೋಲಿಸಿದರೆ ಅತ್ಯಂತ ಚಿಕ್ಕ ಗ್ರಹ (ಪ್ಲೂಟೋ ಬುಧಕ್ಕಿಂತಲೂ ಚಿಕ್ಕ ‘ಗ್ರಹ’ ಆದರೆ ಪ್ಲೂಟೋವನ್ನು ಆಗಸ್ಟ್ 2008ರಿಂದ ಗ್ರಹಗಳ ಪಟ್ಟಿಯಿಂದ ಕೈಬಿಟ್ಟು ಕುಬ್ಜ ಗ್ರಹದ ಪಟ್ಟಿಗೆ ಸೇರಿಸಲಾಗಿದೆ). ಬುಧ ಸೂರ್ಯನಿಗೆ ಬಹಳ ಹತ್ತಿರವಿರುವ ಗ್ರಹವಾದುದರಿಂದ, ಈ ಗ್ರಹವು 88 ಭೂದಿನಗಳಲ್ಲಿ ಸೂರ್ಯನ ಸುತ್ತ ಒಂದು ಸುತ್ತು ಸುತ್ತುತ್ತದೆ. ಅಲ್ಲದೆ, ತನ್ನ ಅಕ್ಷದ ಸುತ್ತ ಸುತ್ತಲು 58 ಭೂ ದಿನಗಳನ್ನು ತೆಗೆದುಕೊಳ್ಳುತ್ತೆ. ಹಾಗಾಗಿ, ಬುಧ ಗ್ರಹದಲ್ಲಿ ಸುಮಾರು ಒಂದೂವರೆ ದಿನವಾದರೆ (ತನ್ನ ಅಕ್ಷದ ಸುತ್ತ ಸುತ್ತುವ ಸಮಯದ ಒಂದೂವರೆ ಪಟ್ಟು) ಒಂದು ವರ್ಷವಾದಂತೆ! ಇದು ಸೌರ ಮಂಡಲದ ಇನ್ನಿತರ ಎಲ್ಲಾ ಗ್ರಹಗಳಿಗಿಂತ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತುವ ಗ್ರಹ.

ಬುಧ ಗ್ರಹದಲ್ಲಿ ಸೂರ್ಯನ ಶಾಖ ವಿಪರೀತವಾಗಿ ಹೆಚ್ಚಿರುತ್ತದೆ. ಸೂರ್ಯನ ಬೆಳಕು ಬೀಳುವ ಪ್ರದೇಶಗಳಲ್ಲಿ 420 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು, ರಾತ್ರಿಯ ಸಮಯದಲ್ಲಿ ಅಲ್ಲಿನ ಪ್ರದೇಶಗಳಲ್ಲಿ -180 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೊಂದಿರುತ್ತದೆ. ಇಂತಹ ತೀವ್ರವಾದ ತಾಪಮಾನ ವ್ಯತ್ಯಾಸದಿಂದ ಕೂಡಿರುವ ಬುಧ ಗ್ರಹದಲ್ಲಿ ಪ್ರಸ್ತುತದ ವಿಜ್ಞಾನಕ್ಕೆ ತಿಳಿದಿರುವ ಯಾವ ಜೀವರಾಶಿಯು ಜೀವಿಸಲು ಸಾಧ್ಯವಿಲ್ಲ ಎಂಬ ತಿಳುವಳಿಕೆ ಇದೆ. ಇಂತಹ ವಿಪರೀತ ಸ್ಥಿತಿಯಿರುವ ಪ್ರದೇಶದಲ್ಲಿ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿ ಈ ಗ್ರಹವನ್ನು ಅಧ್ಯಯನ ಮಾಡುವುದು ಕಷ್ಟಕರ. ಇದಕ್ಕೆ ಇನ್ನೊಂದು ಕಾರಣವೂ ಇದೆ. ಯಾವುದೇ ಬಾಹ್ಯಾಕಾಶ ನೌಕೆಯನ್ನು ಬುಧ ಗ್ರಹದ ಅಧ್ಯಯನಕ್ಕೆ ಭೂಮಿಯಿಂದ ಕಳುಹಿಸಿದರೆ, ಆ ನೌಕೆಯು ಸೂರ್ಯನ ದಿಕ್ಕಿಗೆ ಪ್ರಯಾಣ ಮಾಡಬೇಕಾಗಿರುವುದರಿಂದ, ನೌಕೆಯನ್ನು ಬುಧ ಗ್ರಹಕ್ಕಿಂತಲೂ ದೊಡ್ಡದಾಗಿರುವ ಸೂರ್ಯನು ತನ್ನತ್ತ ಸೆಳೆಯುವ ಸಾಧ್ಯತೆಗಳೇ ಹೆಚ್ಚಾಗಿರುತ್ತವೆ. ಆದುದರಿಂದ, ಬುಧ ಗ್ರಹದ ಅಧ್ಯಯನ ಸ್ವಲ್ಪ ಕಷ್ಠವೇ.

ಹೀಗಿದ್ದರೂ, ತಂತ್ರಜ್ಞಾನದ ಸಹಾಯದಿಂದ, 1970-75ರಲ್ಲಿ ಬುಧ ಗ್ರಹಕ್ಕೆ ಪ್ರಥಮ ಬಾಹ್ಯಾಕಾಶ ನೌಕೆಯಾದ ಮೆರಿನಿಯರ್ 10 (Meriner 10) ಎಂಬ ನೌಕೆಯನ್ನು ಕಳುಹಿಸಲಾಯಿತು. ಮಾನವನಿಗೆ ಮೊದಲ ಬಾರಿಗೆ ಬುಧ ಗ್ರಹದ ಭೂಪ್ರದೇಶ ತೋರಿಸಲು ಈ ನೌಕೆಯೇ ಸಹಾಯ ಮಾಡಿದ್ದು. ಜೊತೆಗೆ ಬುಧ ಗ್ರಹದಲ್ಲಿ ತೆಳುವಾದ ವಾತವರಣವಿರುವುದನ್ನು ಇದು ಖಾತರಿಪಡಿಸಿತು. ಬುಧ ಗ್ರಹದ ಭೂಪ್ರದೇಶವು ಚಂದ್ರನ ಮೇಲೆ ಕಾಣುವ ಕುಳಿಗಳ ಹಾಗೆಯೇ ಇರುವುದನ್ನು ಮೆರಿನಿಯರ್ 10 ತೆಗೆದ ಚಿತ್ರಗಳು ನಮಗೆ ತೋರಿಸಿದವು. ಅಲ್ಲದೆ 20074 ರಲ್ಲಿ ಉಡಾವಣೆ ಮಾಡಿದ ಮೆಸೆಂಜರ್ ನೌಕೆಯು 2011ರಲ್ಲಿ ಬುಧ ಗ್ರಹದ ಕಕ್ಷೆಗೆ ತೆರಳಿ ಬುಧ ಗ್ರಹದ ಶೇ.100 ರಷ್ಟು ಭೂಪ್ರದೇಶದ ನಕ್ಷೆಯನ್ನು ತಯಾರಿಸಿತು. ಅಲ್ಲದೆ, ಯುರೋಪ್ ಬಾಹ್ಯಾಕಾಶ ಸಂಸ್ಥೆ ಮತ್ತು ಜಪಾನ್ ಬಾಹ್ಯಾಕಾಶ ಸಂಸ್ಥೆಯ ಜಂಟಿ ಯೋಜನೆಯಲ್ಲಿ, 2018ರಲ್ಲಿ ಉಡಾವಣೆಯಾಗಿರುವ ಬೆಪಿ-ಕೊಲಾಂಬೋ ನೌಕೆಯು 2015ರಲ್ಲಿ ಬುಧ ಗ್ರಹದ ಕಕ್ಷೆಗೆ ತೆರಳಲಿದ್ದು, ಬುಧ ಗ್ರಹದಲ್ಲಿ ಇನ್ನಷ್ಟು ಅಧ್ಯಯನ ನಡೆಸಿ ಮತ್ತಷ್ಟು ವಿಸ್ಮಯಕಾರಿ ವಿಷಯಗಳ ಮೇಲೆ ಬೆಳಕು ಚೆಲ್ಲುವ ಸಾಧ್ಯತೆ ಇದೆ.

ಭೂಮಿಯ ಆಕಾಶದಲ್ಲಿ ಬರಿಗಣ್ಣಿಗೆ ಕಾಣಬಹುದಾದ ಐದು ಗ್ರಹಗಳಲ್ಲಿ ಬುಧ ಗ್ರಹವು ಒಂದು. ಆದರೆ, ಈ ಗ್ರಹವು ಸೂರ್ಯನಿಗೆ ಹತ್ತಿರವಿರುವುದರಿಂದ, ಭೂಮಿಯ ಆಕಾಶದಲ್ಲಿ, ಸೂರ್ಯನ ಬೆಳಕಿನಲ್ಲಿ ಇದನ್ನು ಗುರುತಿಸುವುದು ಕಷ್ಟವಾಗಿರುತ್ತದೆ ಅಲ್ಲದೆ, ಸೂರ್ಯನ ಜೊತೆಯೇ ಈ ಗ್ರಹವು ಮುಳುಗುತ್ತಿರುತ್ತದೆ. ಆದರೆ, ಈ ತಿಂಗಳ 12ರಂದು ಸೂರ್ಯನಿಂದ ಅತೀ ಹೆಚ್ಚು ದೂರದಲ್ಲಿ ಕಾಣುವ ಬುಧ ಗ್ರಹವನ್ನು, ಪಶ್ಚಿಮ ದಿಕ್ಕಿನಲ್ಲಿ ಶುಕ್ರ ಗ್ರಹದ ಸಹಾಯದಿಂದ ಗುರುತಿಸಬಹುದು. ಅಂದೇ ಬುಧ ಗ್ರಹ ಬಹಳ ಪ್ರಕಾಶ ಮಾನವಾಗಿ ಹೊಳೆಯುತ್ತಿರುತ್ತದೆ. ಆ ದಿನದ ಸಂಜೆ ಮೋಡಗಳಿಲ್ಲದೆ ಹೋದರೆ, ಬುಧ, ಶುಕ್ರ, ಮಂಗಳ ಗ್ರಹಗಳನ್ನು ಮತ್ತು ಚಂದ್ರನನ್ನು ಸೂರ್ಯ ಮುಳುಗಿದ ನಂತರ ಪಶ್ಚಿಮದಿಕ್ಕಿನಲ್ಲಿ ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...