HomeUncategorizedಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

ಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

- Advertisement -
- Advertisement -

ಸೂರ್ಯನಿಂದ ಕೇವಲ 5.79ಕೋಟಿ ಕಿಲೋ ಮೀಟರ್ ದೂರದಲ್ಲಿ ಇರುವ ಗ್ರಹವೇ ಬುಧ ಗ್ರಹ. ಬುಧ ಗ್ರಹ ಸೌರಮಂಡಲದ ಇತರ ಗ್ರಹಗಳಿಗೆ ಹೋಲಿಸಿದರೆ ಅತ್ಯಂತ ಚಿಕ್ಕ ಗ್ರಹ (ಪ್ಲೂಟೋ ಬುಧಕ್ಕಿಂತಲೂ ಚಿಕ್ಕ ‘ಗ್ರಹ’ ಆದರೆ ಪ್ಲೂಟೋವನ್ನು ಆಗಸ್ಟ್ 2008ರಿಂದ ಗ್ರಹಗಳ ಪಟ್ಟಿಯಿಂದ ಕೈಬಿಟ್ಟು ಕುಬ್ಜ ಗ್ರಹದ ಪಟ್ಟಿಗೆ ಸೇರಿಸಲಾಗಿದೆ). ಬುಧ ಸೂರ್ಯನಿಗೆ ಬಹಳ ಹತ್ತಿರವಿರುವ ಗ್ರಹವಾದುದರಿಂದ, ಈ ಗ್ರಹವು 88 ಭೂದಿನಗಳಲ್ಲಿ ಸೂರ್ಯನ ಸುತ್ತ ಒಂದು ಸುತ್ತು ಸುತ್ತುತ್ತದೆ. ಅಲ್ಲದೆ, ತನ್ನ ಅಕ್ಷದ ಸುತ್ತ ಸುತ್ತಲು 58 ಭೂ ದಿನಗಳನ್ನು ತೆಗೆದುಕೊಳ್ಳುತ್ತೆ. ಹಾಗಾಗಿ, ಬುಧ ಗ್ರಹದಲ್ಲಿ ಸುಮಾರು ಒಂದೂವರೆ ದಿನವಾದರೆ (ತನ್ನ ಅಕ್ಷದ ಸುತ್ತ ಸುತ್ತುವ ಸಮಯದ ಒಂದೂವರೆ ಪಟ್ಟು) ಒಂದು ವರ್ಷವಾದಂತೆ! ಇದು ಸೌರ ಮಂಡಲದ ಇನ್ನಿತರ ಎಲ್ಲಾ ಗ್ರಹಗಳಿಗಿಂತ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತುವ ಗ್ರಹ.

ಬುಧ ಗ್ರಹದಲ್ಲಿ ಸೂರ್ಯನ ಶಾಖ ವಿಪರೀತವಾಗಿ ಹೆಚ್ಚಿರುತ್ತದೆ. ಸೂರ್ಯನ ಬೆಳಕು ಬೀಳುವ ಪ್ರದೇಶಗಳಲ್ಲಿ 420 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು, ರಾತ್ರಿಯ ಸಮಯದಲ್ಲಿ ಅಲ್ಲಿನ ಪ್ರದೇಶಗಳಲ್ಲಿ -180 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೊಂದಿರುತ್ತದೆ. ಇಂತಹ ತೀವ್ರವಾದ ತಾಪಮಾನ ವ್ಯತ್ಯಾಸದಿಂದ ಕೂಡಿರುವ ಬುಧ ಗ್ರಹದಲ್ಲಿ ಪ್ರಸ್ತುತದ ವಿಜ್ಞಾನಕ್ಕೆ ತಿಳಿದಿರುವ ಯಾವ ಜೀವರಾಶಿಯು ಜೀವಿಸಲು ಸಾಧ್ಯವಿಲ್ಲ ಎಂಬ ತಿಳುವಳಿಕೆ ಇದೆ. ಇಂತಹ ವಿಪರೀತ ಸ್ಥಿತಿಯಿರುವ ಪ್ರದೇಶದಲ್ಲಿ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿ ಈ ಗ್ರಹವನ್ನು ಅಧ್ಯಯನ ಮಾಡುವುದು ಕಷ್ಟಕರ. ಇದಕ್ಕೆ ಇನ್ನೊಂದು ಕಾರಣವೂ ಇದೆ. ಯಾವುದೇ ಬಾಹ್ಯಾಕಾಶ ನೌಕೆಯನ್ನು ಬುಧ ಗ್ರಹದ ಅಧ್ಯಯನಕ್ಕೆ ಭೂಮಿಯಿಂದ ಕಳುಹಿಸಿದರೆ, ಆ ನೌಕೆಯು ಸೂರ್ಯನ ದಿಕ್ಕಿಗೆ ಪ್ರಯಾಣ ಮಾಡಬೇಕಾಗಿರುವುದರಿಂದ, ನೌಕೆಯನ್ನು ಬುಧ ಗ್ರಹಕ್ಕಿಂತಲೂ ದೊಡ್ಡದಾಗಿರುವ ಸೂರ್ಯನು ತನ್ನತ್ತ ಸೆಳೆಯುವ ಸಾಧ್ಯತೆಗಳೇ ಹೆಚ್ಚಾಗಿರುತ್ತವೆ. ಆದುದರಿಂದ, ಬುಧ ಗ್ರಹದ ಅಧ್ಯಯನ ಸ್ವಲ್ಪ ಕಷ್ಠವೇ.

ಹೀಗಿದ್ದರೂ, ತಂತ್ರಜ್ಞಾನದ ಸಹಾಯದಿಂದ, 1970-75ರಲ್ಲಿ ಬುಧ ಗ್ರಹಕ್ಕೆ ಪ್ರಥಮ ಬಾಹ್ಯಾಕಾಶ ನೌಕೆಯಾದ ಮೆರಿನಿಯರ್ 10 (Meriner 10) ಎಂಬ ನೌಕೆಯನ್ನು ಕಳುಹಿಸಲಾಯಿತು. ಮಾನವನಿಗೆ ಮೊದಲ ಬಾರಿಗೆ ಬುಧ ಗ್ರಹದ ಭೂಪ್ರದೇಶ ತೋರಿಸಲು ಈ ನೌಕೆಯೇ ಸಹಾಯ ಮಾಡಿದ್ದು. ಜೊತೆಗೆ ಬುಧ ಗ್ರಹದಲ್ಲಿ ತೆಳುವಾದ ವಾತವರಣವಿರುವುದನ್ನು ಇದು ಖಾತರಿಪಡಿಸಿತು. ಬುಧ ಗ್ರಹದ ಭೂಪ್ರದೇಶವು ಚಂದ್ರನ ಮೇಲೆ ಕಾಣುವ ಕುಳಿಗಳ ಹಾಗೆಯೇ ಇರುವುದನ್ನು ಮೆರಿನಿಯರ್ 10 ತೆಗೆದ ಚಿತ್ರಗಳು ನಮಗೆ ತೋರಿಸಿದವು. ಅಲ್ಲದೆ 20074 ರಲ್ಲಿ ಉಡಾವಣೆ ಮಾಡಿದ ಮೆಸೆಂಜರ್ ನೌಕೆಯು 2011ರಲ್ಲಿ ಬುಧ ಗ್ರಹದ ಕಕ್ಷೆಗೆ ತೆರಳಿ ಬುಧ ಗ್ರಹದ ಶೇ.100 ರಷ್ಟು ಭೂಪ್ರದೇಶದ ನಕ್ಷೆಯನ್ನು ತಯಾರಿಸಿತು. ಅಲ್ಲದೆ, ಯುರೋಪ್ ಬಾಹ್ಯಾಕಾಶ ಸಂಸ್ಥೆ ಮತ್ತು ಜಪಾನ್ ಬಾಹ್ಯಾಕಾಶ ಸಂಸ್ಥೆಯ ಜಂಟಿ ಯೋಜನೆಯಲ್ಲಿ, 2018ರಲ್ಲಿ ಉಡಾವಣೆಯಾಗಿರುವ ಬೆಪಿ-ಕೊಲಾಂಬೋ ನೌಕೆಯು 2015ರಲ್ಲಿ ಬುಧ ಗ್ರಹದ ಕಕ್ಷೆಗೆ ತೆರಳಲಿದ್ದು, ಬುಧ ಗ್ರಹದಲ್ಲಿ ಇನ್ನಷ್ಟು ಅಧ್ಯಯನ ನಡೆಸಿ ಮತ್ತಷ್ಟು ವಿಸ್ಮಯಕಾರಿ ವಿಷಯಗಳ ಮೇಲೆ ಬೆಳಕು ಚೆಲ್ಲುವ ಸಾಧ್ಯತೆ ಇದೆ.

ಭೂಮಿಯ ಆಕಾಶದಲ್ಲಿ ಬರಿಗಣ್ಣಿಗೆ ಕಾಣಬಹುದಾದ ಐದು ಗ್ರಹಗಳಲ್ಲಿ ಬುಧ ಗ್ರಹವು ಒಂದು. ಆದರೆ, ಈ ಗ್ರಹವು ಸೂರ್ಯನಿಗೆ ಹತ್ತಿರವಿರುವುದರಿಂದ, ಭೂಮಿಯ ಆಕಾಶದಲ್ಲಿ, ಸೂರ್ಯನ ಬೆಳಕಿನಲ್ಲಿ ಇದನ್ನು ಗುರುತಿಸುವುದು ಕಷ್ಟವಾಗಿರುತ್ತದೆ ಅಲ್ಲದೆ, ಸೂರ್ಯನ ಜೊತೆಯೇ ಈ ಗ್ರಹವು ಮುಳುಗುತ್ತಿರುತ್ತದೆ. ಆದರೆ, ಈ ತಿಂಗಳ 12ರಂದು ಸೂರ್ಯನಿಂದ ಅತೀ ಹೆಚ್ಚು ದೂರದಲ್ಲಿ ಕಾಣುವ ಬುಧ ಗ್ರಹವನ್ನು, ಪಶ್ಚಿಮ ದಿಕ್ಕಿನಲ್ಲಿ ಶುಕ್ರ ಗ್ರಹದ ಸಹಾಯದಿಂದ ಗುರುತಿಸಬಹುದು. ಅಂದೇ ಬುಧ ಗ್ರಹ ಬಹಳ ಪ್ರಕಾಶ ಮಾನವಾಗಿ ಹೊಳೆಯುತ್ತಿರುತ್ತದೆ. ಆ ದಿನದ ಸಂಜೆ ಮೋಡಗಳಿಲ್ಲದೆ ಹೋದರೆ, ಬುಧ, ಶುಕ್ರ, ಮಂಗಳ ಗ್ರಹಗಳನ್ನು ಮತ್ತು ಚಂದ್ರನನ್ನು ಸೂರ್ಯ ಮುಳುಗಿದ ನಂತರ ಪಶ್ಚಿಮದಿಕ್ಕಿನಲ್ಲಿ ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...