HomeUncategorizedಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

ಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

- Advertisement -
- Advertisement -

ಸೂರ್ಯನಿಂದ ಕೇವಲ 5.79ಕೋಟಿ ಕಿಲೋ ಮೀಟರ್ ದೂರದಲ್ಲಿ ಇರುವ ಗ್ರಹವೇ ಬುಧ ಗ್ರಹ. ಬುಧ ಗ್ರಹ ಸೌರಮಂಡಲದ ಇತರ ಗ್ರಹಗಳಿಗೆ ಹೋಲಿಸಿದರೆ ಅತ್ಯಂತ ಚಿಕ್ಕ ಗ್ರಹ (ಪ್ಲೂಟೋ ಬುಧಕ್ಕಿಂತಲೂ ಚಿಕ್ಕ ‘ಗ್ರಹ’ ಆದರೆ ಪ್ಲೂಟೋವನ್ನು ಆಗಸ್ಟ್ 2008ರಿಂದ ಗ್ರಹಗಳ ಪಟ್ಟಿಯಿಂದ ಕೈಬಿಟ್ಟು ಕುಬ್ಜ ಗ್ರಹದ ಪಟ್ಟಿಗೆ ಸೇರಿಸಲಾಗಿದೆ). ಬುಧ ಸೂರ್ಯನಿಗೆ ಬಹಳ ಹತ್ತಿರವಿರುವ ಗ್ರಹವಾದುದರಿಂದ, ಈ ಗ್ರಹವು 88 ಭೂದಿನಗಳಲ್ಲಿ ಸೂರ್ಯನ ಸುತ್ತ ಒಂದು ಸುತ್ತು ಸುತ್ತುತ್ತದೆ. ಅಲ್ಲದೆ, ತನ್ನ ಅಕ್ಷದ ಸುತ್ತ ಸುತ್ತಲು 58 ಭೂ ದಿನಗಳನ್ನು ತೆಗೆದುಕೊಳ್ಳುತ್ತೆ. ಹಾಗಾಗಿ, ಬುಧ ಗ್ರಹದಲ್ಲಿ ಸುಮಾರು ಒಂದೂವರೆ ದಿನವಾದರೆ (ತನ್ನ ಅಕ್ಷದ ಸುತ್ತ ಸುತ್ತುವ ಸಮಯದ ಒಂದೂವರೆ ಪಟ್ಟು) ಒಂದು ವರ್ಷವಾದಂತೆ! ಇದು ಸೌರ ಮಂಡಲದ ಇನ್ನಿತರ ಎಲ್ಲಾ ಗ್ರಹಗಳಿಗಿಂತ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತುವ ಗ್ರಹ.

ಬುಧ ಗ್ರಹದಲ್ಲಿ ಸೂರ್ಯನ ಶಾಖ ವಿಪರೀತವಾಗಿ ಹೆಚ್ಚಿರುತ್ತದೆ. ಸೂರ್ಯನ ಬೆಳಕು ಬೀಳುವ ಪ್ರದೇಶಗಳಲ್ಲಿ 420 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು, ರಾತ್ರಿಯ ಸಮಯದಲ್ಲಿ ಅಲ್ಲಿನ ಪ್ರದೇಶಗಳಲ್ಲಿ -180 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೊಂದಿರುತ್ತದೆ. ಇಂತಹ ತೀವ್ರವಾದ ತಾಪಮಾನ ವ್ಯತ್ಯಾಸದಿಂದ ಕೂಡಿರುವ ಬುಧ ಗ್ರಹದಲ್ಲಿ ಪ್ರಸ್ತುತದ ವಿಜ್ಞಾನಕ್ಕೆ ತಿಳಿದಿರುವ ಯಾವ ಜೀವರಾಶಿಯು ಜೀವಿಸಲು ಸಾಧ್ಯವಿಲ್ಲ ಎಂಬ ತಿಳುವಳಿಕೆ ಇದೆ. ಇಂತಹ ವಿಪರೀತ ಸ್ಥಿತಿಯಿರುವ ಪ್ರದೇಶದಲ್ಲಿ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿ ಈ ಗ್ರಹವನ್ನು ಅಧ್ಯಯನ ಮಾಡುವುದು ಕಷ್ಟಕರ. ಇದಕ್ಕೆ ಇನ್ನೊಂದು ಕಾರಣವೂ ಇದೆ. ಯಾವುದೇ ಬಾಹ್ಯಾಕಾಶ ನೌಕೆಯನ್ನು ಬುಧ ಗ್ರಹದ ಅಧ್ಯಯನಕ್ಕೆ ಭೂಮಿಯಿಂದ ಕಳುಹಿಸಿದರೆ, ಆ ನೌಕೆಯು ಸೂರ್ಯನ ದಿಕ್ಕಿಗೆ ಪ್ರಯಾಣ ಮಾಡಬೇಕಾಗಿರುವುದರಿಂದ, ನೌಕೆಯನ್ನು ಬುಧ ಗ್ರಹಕ್ಕಿಂತಲೂ ದೊಡ್ಡದಾಗಿರುವ ಸೂರ್ಯನು ತನ್ನತ್ತ ಸೆಳೆಯುವ ಸಾಧ್ಯತೆಗಳೇ ಹೆಚ್ಚಾಗಿರುತ್ತವೆ. ಆದುದರಿಂದ, ಬುಧ ಗ್ರಹದ ಅಧ್ಯಯನ ಸ್ವಲ್ಪ ಕಷ್ಠವೇ.

ಹೀಗಿದ್ದರೂ, ತಂತ್ರಜ್ಞಾನದ ಸಹಾಯದಿಂದ, 1970-75ರಲ್ಲಿ ಬುಧ ಗ್ರಹಕ್ಕೆ ಪ್ರಥಮ ಬಾಹ್ಯಾಕಾಶ ನೌಕೆಯಾದ ಮೆರಿನಿಯರ್ 10 (Meriner 10) ಎಂಬ ನೌಕೆಯನ್ನು ಕಳುಹಿಸಲಾಯಿತು. ಮಾನವನಿಗೆ ಮೊದಲ ಬಾರಿಗೆ ಬುಧ ಗ್ರಹದ ಭೂಪ್ರದೇಶ ತೋರಿಸಲು ಈ ನೌಕೆಯೇ ಸಹಾಯ ಮಾಡಿದ್ದು. ಜೊತೆಗೆ ಬುಧ ಗ್ರಹದಲ್ಲಿ ತೆಳುವಾದ ವಾತವರಣವಿರುವುದನ್ನು ಇದು ಖಾತರಿಪಡಿಸಿತು. ಬುಧ ಗ್ರಹದ ಭೂಪ್ರದೇಶವು ಚಂದ್ರನ ಮೇಲೆ ಕಾಣುವ ಕುಳಿಗಳ ಹಾಗೆಯೇ ಇರುವುದನ್ನು ಮೆರಿನಿಯರ್ 10 ತೆಗೆದ ಚಿತ್ರಗಳು ನಮಗೆ ತೋರಿಸಿದವು. ಅಲ್ಲದೆ 20074 ರಲ್ಲಿ ಉಡಾವಣೆ ಮಾಡಿದ ಮೆಸೆಂಜರ್ ನೌಕೆಯು 2011ರಲ್ಲಿ ಬುಧ ಗ್ರಹದ ಕಕ್ಷೆಗೆ ತೆರಳಿ ಬುಧ ಗ್ರಹದ ಶೇ.100 ರಷ್ಟು ಭೂಪ್ರದೇಶದ ನಕ್ಷೆಯನ್ನು ತಯಾರಿಸಿತು. ಅಲ್ಲದೆ, ಯುರೋಪ್ ಬಾಹ್ಯಾಕಾಶ ಸಂಸ್ಥೆ ಮತ್ತು ಜಪಾನ್ ಬಾಹ್ಯಾಕಾಶ ಸಂಸ್ಥೆಯ ಜಂಟಿ ಯೋಜನೆಯಲ್ಲಿ, 2018ರಲ್ಲಿ ಉಡಾವಣೆಯಾಗಿರುವ ಬೆಪಿ-ಕೊಲಾಂಬೋ ನೌಕೆಯು 2015ರಲ್ಲಿ ಬುಧ ಗ್ರಹದ ಕಕ್ಷೆಗೆ ತೆರಳಲಿದ್ದು, ಬುಧ ಗ್ರಹದಲ್ಲಿ ಇನ್ನಷ್ಟು ಅಧ್ಯಯನ ನಡೆಸಿ ಮತ್ತಷ್ಟು ವಿಸ್ಮಯಕಾರಿ ವಿಷಯಗಳ ಮೇಲೆ ಬೆಳಕು ಚೆಲ್ಲುವ ಸಾಧ್ಯತೆ ಇದೆ.

ಭೂಮಿಯ ಆಕಾಶದಲ್ಲಿ ಬರಿಗಣ್ಣಿಗೆ ಕಾಣಬಹುದಾದ ಐದು ಗ್ರಹಗಳಲ್ಲಿ ಬುಧ ಗ್ರಹವು ಒಂದು. ಆದರೆ, ಈ ಗ್ರಹವು ಸೂರ್ಯನಿಗೆ ಹತ್ತಿರವಿರುವುದರಿಂದ, ಭೂಮಿಯ ಆಕಾಶದಲ್ಲಿ, ಸೂರ್ಯನ ಬೆಳಕಿನಲ್ಲಿ ಇದನ್ನು ಗುರುತಿಸುವುದು ಕಷ್ಟವಾಗಿರುತ್ತದೆ ಅಲ್ಲದೆ, ಸೂರ್ಯನ ಜೊತೆಯೇ ಈ ಗ್ರಹವು ಮುಳುಗುತ್ತಿರುತ್ತದೆ. ಆದರೆ, ಈ ತಿಂಗಳ 12ರಂದು ಸೂರ್ಯನಿಂದ ಅತೀ ಹೆಚ್ಚು ದೂರದಲ್ಲಿ ಕಾಣುವ ಬುಧ ಗ್ರಹವನ್ನು, ಪಶ್ಚಿಮ ದಿಕ್ಕಿನಲ್ಲಿ ಶುಕ್ರ ಗ್ರಹದ ಸಹಾಯದಿಂದ ಗುರುತಿಸಬಹುದು. ಅಂದೇ ಬುಧ ಗ್ರಹ ಬಹಳ ಪ್ರಕಾಶ ಮಾನವಾಗಿ ಹೊಳೆಯುತ್ತಿರುತ್ತದೆ. ಆ ದಿನದ ಸಂಜೆ ಮೋಡಗಳಿಲ್ಲದೆ ಹೋದರೆ, ಬುಧ, ಶುಕ್ರ, ಮಂಗಳ ಗ್ರಹಗಳನ್ನು ಮತ್ತು ಚಂದ್ರನನ್ನು ಸೂರ್ಯ ಮುಳುಗಿದ ನಂತರ ಪಶ್ಚಿಮದಿಕ್ಕಿನಲ್ಲಿ ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...