HomeUncategorizedಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

ಬೆಳ್ಳಿಚುಕ್ಕಿ: ಸೌರ ಮಂಡಲದಲ್ಲಿ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತವ ಗ್ರಹ!

- Advertisement -
- Advertisement -

ಸೂರ್ಯನಿಂದ ಕೇವಲ 5.79ಕೋಟಿ ಕಿಲೋ ಮೀಟರ್ ದೂರದಲ್ಲಿ ಇರುವ ಗ್ರಹವೇ ಬುಧ ಗ್ರಹ. ಬುಧ ಗ್ರಹ ಸೌರಮಂಡಲದ ಇತರ ಗ್ರಹಗಳಿಗೆ ಹೋಲಿಸಿದರೆ ಅತ್ಯಂತ ಚಿಕ್ಕ ಗ್ರಹ (ಪ್ಲೂಟೋ ಬುಧಕ್ಕಿಂತಲೂ ಚಿಕ್ಕ ‘ಗ್ರಹ’ ಆದರೆ ಪ್ಲೂಟೋವನ್ನು ಆಗಸ್ಟ್ 2008ರಿಂದ ಗ್ರಹಗಳ ಪಟ್ಟಿಯಿಂದ ಕೈಬಿಟ್ಟು ಕುಬ್ಜ ಗ್ರಹದ ಪಟ್ಟಿಗೆ ಸೇರಿಸಲಾಗಿದೆ). ಬುಧ ಸೂರ್ಯನಿಗೆ ಬಹಳ ಹತ್ತಿರವಿರುವ ಗ್ರಹವಾದುದರಿಂದ, ಈ ಗ್ರಹವು 88 ಭೂದಿನಗಳಲ್ಲಿ ಸೂರ್ಯನ ಸುತ್ತ ಒಂದು ಸುತ್ತು ಸುತ್ತುತ್ತದೆ. ಅಲ್ಲದೆ, ತನ್ನ ಅಕ್ಷದ ಸುತ್ತ ಸುತ್ತಲು 58 ಭೂ ದಿನಗಳನ್ನು ತೆಗೆದುಕೊಳ್ಳುತ್ತೆ. ಹಾಗಾಗಿ, ಬುಧ ಗ್ರಹದಲ್ಲಿ ಸುಮಾರು ಒಂದೂವರೆ ದಿನವಾದರೆ (ತನ್ನ ಅಕ್ಷದ ಸುತ್ತ ಸುತ್ತುವ ಸಮಯದ ಒಂದೂವರೆ ಪಟ್ಟು) ಒಂದು ವರ್ಷವಾದಂತೆ! ಇದು ಸೌರ ಮಂಡಲದ ಇನ್ನಿತರ ಎಲ್ಲಾ ಗ್ರಹಗಳಿಗಿಂತ ಅತ್ಯಂತ ವೇಗವಾಗಿ ಸೂರ್ಯನ ಸುತ್ತ ಸುತ್ತುವ ಗ್ರಹ.

ಬುಧ ಗ್ರಹದಲ್ಲಿ ಸೂರ್ಯನ ಶಾಖ ವಿಪರೀತವಾಗಿ ಹೆಚ್ಚಿರುತ್ತದೆ. ಸೂರ್ಯನ ಬೆಳಕು ಬೀಳುವ ಪ್ರದೇಶಗಳಲ್ಲಿ 420 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು, ರಾತ್ರಿಯ ಸಮಯದಲ್ಲಿ ಅಲ್ಲಿನ ಪ್ರದೇಶಗಳಲ್ಲಿ -180 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೊಂದಿರುತ್ತದೆ. ಇಂತಹ ತೀವ್ರವಾದ ತಾಪಮಾನ ವ್ಯತ್ಯಾಸದಿಂದ ಕೂಡಿರುವ ಬುಧ ಗ್ರಹದಲ್ಲಿ ಪ್ರಸ್ತುತದ ವಿಜ್ಞಾನಕ್ಕೆ ತಿಳಿದಿರುವ ಯಾವ ಜೀವರಾಶಿಯು ಜೀವಿಸಲು ಸಾಧ್ಯವಿಲ್ಲ ಎಂಬ ತಿಳುವಳಿಕೆ ಇದೆ. ಇಂತಹ ವಿಪರೀತ ಸ್ಥಿತಿಯಿರುವ ಪ್ರದೇಶದಲ್ಲಿ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿ ಈ ಗ್ರಹವನ್ನು ಅಧ್ಯಯನ ಮಾಡುವುದು ಕಷ್ಟಕರ. ಇದಕ್ಕೆ ಇನ್ನೊಂದು ಕಾರಣವೂ ಇದೆ. ಯಾವುದೇ ಬಾಹ್ಯಾಕಾಶ ನೌಕೆಯನ್ನು ಬುಧ ಗ್ರಹದ ಅಧ್ಯಯನಕ್ಕೆ ಭೂಮಿಯಿಂದ ಕಳುಹಿಸಿದರೆ, ಆ ನೌಕೆಯು ಸೂರ್ಯನ ದಿಕ್ಕಿಗೆ ಪ್ರಯಾಣ ಮಾಡಬೇಕಾಗಿರುವುದರಿಂದ, ನೌಕೆಯನ್ನು ಬುಧ ಗ್ರಹಕ್ಕಿಂತಲೂ ದೊಡ್ಡದಾಗಿರುವ ಸೂರ್ಯನು ತನ್ನತ್ತ ಸೆಳೆಯುವ ಸಾಧ್ಯತೆಗಳೇ ಹೆಚ್ಚಾಗಿರುತ್ತವೆ. ಆದುದರಿಂದ, ಬುಧ ಗ್ರಹದ ಅಧ್ಯಯನ ಸ್ವಲ್ಪ ಕಷ್ಠವೇ.

ಹೀಗಿದ್ದರೂ, ತಂತ್ರಜ್ಞಾನದ ಸಹಾಯದಿಂದ, 1970-75ರಲ್ಲಿ ಬುಧ ಗ್ರಹಕ್ಕೆ ಪ್ರಥಮ ಬಾಹ್ಯಾಕಾಶ ನೌಕೆಯಾದ ಮೆರಿನಿಯರ್ 10 (Meriner 10) ಎಂಬ ನೌಕೆಯನ್ನು ಕಳುಹಿಸಲಾಯಿತು. ಮಾನವನಿಗೆ ಮೊದಲ ಬಾರಿಗೆ ಬುಧ ಗ್ರಹದ ಭೂಪ್ರದೇಶ ತೋರಿಸಲು ಈ ನೌಕೆಯೇ ಸಹಾಯ ಮಾಡಿದ್ದು. ಜೊತೆಗೆ ಬುಧ ಗ್ರಹದಲ್ಲಿ ತೆಳುವಾದ ವಾತವರಣವಿರುವುದನ್ನು ಇದು ಖಾತರಿಪಡಿಸಿತು. ಬುಧ ಗ್ರಹದ ಭೂಪ್ರದೇಶವು ಚಂದ್ರನ ಮೇಲೆ ಕಾಣುವ ಕುಳಿಗಳ ಹಾಗೆಯೇ ಇರುವುದನ್ನು ಮೆರಿನಿಯರ್ 10 ತೆಗೆದ ಚಿತ್ರಗಳು ನಮಗೆ ತೋರಿಸಿದವು. ಅಲ್ಲದೆ 20074 ರಲ್ಲಿ ಉಡಾವಣೆ ಮಾಡಿದ ಮೆಸೆಂಜರ್ ನೌಕೆಯು 2011ರಲ್ಲಿ ಬುಧ ಗ್ರಹದ ಕಕ್ಷೆಗೆ ತೆರಳಿ ಬುಧ ಗ್ರಹದ ಶೇ.100 ರಷ್ಟು ಭೂಪ್ರದೇಶದ ನಕ್ಷೆಯನ್ನು ತಯಾರಿಸಿತು. ಅಲ್ಲದೆ, ಯುರೋಪ್ ಬಾಹ್ಯಾಕಾಶ ಸಂಸ್ಥೆ ಮತ್ತು ಜಪಾನ್ ಬಾಹ್ಯಾಕಾಶ ಸಂಸ್ಥೆಯ ಜಂಟಿ ಯೋಜನೆಯಲ್ಲಿ, 2018ರಲ್ಲಿ ಉಡಾವಣೆಯಾಗಿರುವ ಬೆಪಿ-ಕೊಲಾಂಬೋ ನೌಕೆಯು 2015ರಲ್ಲಿ ಬುಧ ಗ್ರಹದ ಕಕ್ಷೆಗೆ ತೆರಳಲಿದ್ದು, ಬುಧ ಗ್ರಹದಲ್ಲಿ ಇನ್ನಷ್ಟು ಅಧ್ಯಯನ ನಡೆಸಿ ಮತ್ತಷ್ಟು ವಿಸ್ಮಯಕಾರಿ ವಿಷಯಗಳ ಮೇಲೆ ಬೆಳಕು ಚೆಲ್ಲುವ ಸಾಧ್ಯತೆ ಇದೆ.

ಭೂಮಿಯ ಆಕಾಶದಲ್ಲಿ ಬರಿಗಣ್ಣಿಗೆ ಕಾಣಬಹುದಾದ ಐದು ಗ್ರಹಗಳಲ್ಲಿ ಬುಧ ಗ್ರಹವು ಒಂದು. ಆದರೆ, ಈ ಗ್ರಹವು ಸೂರ್ಯನಿಗೆ ಹತ್ತಿರವಿರುವುದರಿಂದ, ಭೂಮಿಯ ಆಕಾಶದಲ್ಲಿ, ಸೂರ್ಯನ ಬೆಳಕಿನಲ್ಲಿ ಇದನ್ನು ಗುರುತಿಸುವುದು ಕಷ್ಟವಾಗಿರುತ್ತದೆ ಅಲ್ಲದೆ, ಸೂರ್ಯನ ಜೊತೆಯೇ ಈ ಗ್ರಹವು ಮುಳುಗುತ್ತಿರುತ್ತದೆ. ಆದರೆ, ಈ ತಿಂಗಳ 12ರಂದು ಸೂರ್ಯನಿಂದ ಅತೀ ಹೆಚ್ಚು ದೂರದಲ್ಲಿ ಕಾಣುವ ಬುಧ ಗ್ರಹವನ್ನು, ಪಶ್ಚಿಮ ದಿಕ್ಕಿನಲ್ಲಿ ಶುಕ್ರ ಗ್ರಹದ ಸಹಾಯದಿಂದ ಗುರುತಿಸಬಹುದು. ಅಂದೇ ಬುಧ ಗ್ರಹ ಬಹಳ ಪ್ರಕಾಶ ಮಾನವಾಗಿ ಹೊಳೆಯುತ್ತಿರುತ್ತದೆ. ಆ ದಿನದ ಸಂಜೆ ಮೋಡಗಳಿಲ್ಲದೆ ಹೋದರೆ, ಬುಧ, ಶುಕ್ರ, ಮಂಗಳ ಗ್ರಹಗಳನ್ನು ಮತ್ತು ಚಂದ್ರನನ್ನು ಸೂರ್ಯ ಮುಳುಗಿದ ನಂತರ ಪಶ್ಚಿಮದಿಕ್ಕಿನಲ್ಲಿ ಕಾಣಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...