Homeಕರೋನಾ ತಲ್ಲಣಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಈ ಸರ್ಕಾರಕ್ಕೆ ಆಮ್ಲಜನಕದ ತುರ್ತು ಅಗತ್ಯದ ಬಗ್ಗೆ ಅರಿವು ಇಲ್ಲವೋ ಅಥವಾ ಅದು ಮೋದಿ ಹೆಸರಿಗೆ ಧಕ್ಕೆ ಬರಬಾರದೆಂದು ಕೇಂದ್ರವನ್ನು ಒತ್ತಾಯಿಸುತ್ತಿಲ್ಲವೋ? ಆಮ್ಲಜನಕದ ವ್ಯವಸ್ಥೆ ಮಾಡಬೇಕಿದ್ದ ಇಲ್ಲಿನ ಕೈಗಾರಿಕಾ ಸಚಿವರು ಎಲ್ಲಿ ಮಾಯವಾದರೋ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

- Advertisement -
- Advertisement -

ರಾಜ್ಯಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕವನ್ನು ಕೇಂದ್ರ ಪೂರೈಸಬೇಕು ಎಂದು ಹೈಕೋರ್ಟ್ ಹೇಳುತ್ತದೆ. ಕೇಂದ್ರ ಸರ್ಕಾರ `ನಮ್ ಕಡೆಯಿಂದ ಆಗಲ್ಲ’ ಎಂದು ಸುಪ್ರೀಂಕೋರ್ಟ್ ಮೊರೆ ಹೋಗುತ್ತದೆ. ಸುಪ್ರೀಂಕೋರ್ಟ್ ಕೇಂದ್ರದ ಅರ್ಜಿಯನ್ನು ತಿರಸ್ಕರಿಸಿ ರಾಜ್ಯ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿಯುತ್ತದೆ. ಇದೆಲ್ಲ ನಡೆಯುವಾಗ ನಮ್ಮ ಸಂಸದರ್‍ಯಾರೂ ಆಮ್ಲಜನಕದ ಬಗ್ಗೆ ಮಾತು ಎತ್ತಲಿಲ್ಲ. ಕೇಂದ್ರ ಸರ್ಕಾರ ನಮ್ಮ ರಾಜ್ಯದ ವಿರುದ್ಧವೇ ಅರ್ಜಿ ಸಲ್ಲಿಸಿದಾಗ ಕೂಡಾ ಈ ಸಂಸದರು ಮೌನ ಮುರಿಯಲಿಲ್ಲ.

ಇನ್ನು ಇಲ್ಲಿಯ ಸಚಿವರ ಬಗ್ಗೆ….ಅಗತ್ಯ ಆಮ್ಲಜನಕ ಪಡೆಯಲು ಈಗಿರುವ ಮಾರ್ಗ ಕೈಗಾರಿಕಾ ಮೂಲಗಳಿಂದ ಪಡೆದುಕೊಳ್ಳುವುದು. ಆದರೆ ಈ ಕುರಿತಂತೆ ಕೈಗಾರಿಕಾ ಸಚಿವ ಹುಬ್ಬಳಿಯ ಜಗದೀಶ್ ಶೆಟ್ಟರ್ ಒಮ್ಮೆಯೂ ಧ್ವನಿ ಎತ್ತಿಲ್ಲ. ಈ ಸರ್ಕಾರಕ್ಕೆ ಆಮ್ಲಜನಕದ ತುರ್ತು ಅಗತ್ಯದ ಬಗ್ಗೆ ಅರಿವು ಇಲ್ಲವೋ ಅಥವಾ ಅದು ಮೋದಿ ಹೆಸರಿಗೆ ಧಕ್ಕೆ ಬರಬಾರದೆಂದು ಕೇಂದ್ರವನ್ನು ಒತ್ತಾಯಿಸುತ್ತಿಲ್ಲವೋ? ಆಮ್ಲಜನಕದ ವ್ಯವಸ್ಥೆ ಮಾಡಬೇಕಿದ್ದ ಇಲ್ಲಿನ ಕೈಗಾರಿಕಾ ಸಚಿವರು ಎಲ್ಲಿ ಮಾಯವಾದರೋ ಎಂಬ ಪ್ರಶ್ನೆ ಈಗ ಜನರನ್ನು ಕಾಡುತ್ತಿದೆ.

ಇದನ್ನೂ ಓದಿ: ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

ಹುಬ್ಬಳ್ಳಿಯಲ್ಲಿ ಜಾಗತಿಕ ಬಂಡವಾಳ ಸಮಾವೇಶ ಎಂಬ ‘ನಾಟಕ’ ಆಡಿದ ನಂತರ ಅವರೆಂದೂ ಕೈಗಾರಿಕೆಗಳ ಕುರಿತು ಒಂದು ನಿರ್ದಿಷ್ಟ ನಿಲುವು ತೋರಿಲ್ಲ. ಈಗ ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಉದ್ಯಮಿಗಳನ್ನು ಒಂದು ಕಡೆ ಕಲೆ ಹಾಕಿ ಸಬೆ ನಡೆಸಿ, ‘ಆಮ್ಲಜನಕ ಒದಗಿಸಿವುದು ನಿಮ್ಮ ಕರ್ತವ್ಯ, ಅದಕ್ಕೆ ಸರ್ಕಾರ ಹಣ ಕೊಡುತ್ತದೆ’ ಎಂದು ಒಮ್ಮೆಯೂ ಅವರು ಹೇಳಿಲಿಲ್ಲ. ಆದರೆ, ಅವರ ಬೀಗರಾದ ಮಂಗಳಾ ಅಂಗಡಿಯವರು ಬೆಳಗಾವಿ ಕೇತ್ರದಲ್ಲಿ ಗೆಲ್ಲುವಂತೆ ಮಾಡಲು ಎಲ್ಲ ಶಕ್ತಿ ಬಳಸಿದರು ಎನ್ನಲಾಗಿದೆ.

ಇಲ್ಲಿರುವ ವಿಡಿಯೋ ನೋಡಿ. ಇದು ಕೆಪಿಸಿಸಿ ಸದಸ್ಯ , ಹುಬ್ಬಳ್ಳಿ-ಧಾರವಾಡ ಯುವ ಕಾಂಗ್ರೆಸ್ ನಾಯಕ ಶಾಕೀರ್ ಸನದಿಯವರ ವಿಡಿಯೋ.

ಇದನ್ನೂ ಓದಿ: FAQ’s: ಕೊರೊನಾ ವ್ಯಾಕ್ಸಿನ್: ನಿಮಗೆ ಗೊತ್ತಿರಬೇಕಾದ ಸಂಗತಿಗಳು

ಶೆಟ್ಟರ್ ತಮ್ಮ ಬೀಗತಿ ಮಂಗಳಾ ಅಂಗಡಿಯವರ ಗೆಲುವಿನ ನಂತರ ಹುಬ್ಬಳ್ಳಿಯಲ್ಲಿ ಒಂದು ಪ್ರೆಸ್‌ಮೀಟ್ ಮಾಡಿ, ಕೊರೊನಾ ನಿರ್ವಹಣೆಯ ಬಗ್ಗೆ ಮಾತನಾಡಿ, ಒಂದು ಸಹಾಯವಾಣಿ ಸಂಖ್ಯೆ ನೀಡುತ್ತಾರೆ. ಮರುದಿನ ಅದು ಎಲ್ಲ ಪತ್ರಿಕೆಗಳ ಹುಬ್ಬಳ್ಳಿ ಆವೃತ್ತಿಯಲ್ಲಿ ಪ್ರಕಟವಾಗಿತು.

ಶಾಕೀರ್ ಸನದಿಯವರ ಒಬ್ಬ ಮಿತ್ರ ( ಅವರು ಪೈಲ್ವಾನ್) ಚಿಕಿತ್ಸೆಗಾಗಿ ಪರದಾಡಿದಾಗ, ಶಾಕೀರ್ ಶೆಟ್ಟರ್ ಕೊಟ್ಟ ನಂಬರ್‌ಗೆ ಫೋನು ಮಾಡುತ್ತಾರೆ. ಆ ಅಧಿಕಾರಿ ಡಿಎಚ್‌ಒ ನಂಬರ್ ಕೊಡುತ್ತಾರೆ. ಅವರು ಇನ್ನೊಂದು ನಂಬರ್ ಕೊಡುತ್ತಾರೆ. ಈ ರೀಲೇ ಆಟ ರಾಜ್ಯದ ಎಲ್ಲ ಕಡೆಯೂ ನಡೆಯುತ್ತಿದೆ. ‘ವೈದ್ಯಕೀಯ ಶಿಕ್ಷಣ ಇಲಾಖೆ ನಮ್ಮದು, ನಮಗೆ ಆರೋಗ್ಯ ಇಲಾಖೆ ಸಂಬಂಧ ಪಡುವುದಿಲ್ಲ’ ಎಂದು ಕೆಲವರು ಹೇಳುತ್ತಾರೆ. ಸಮನ್ವಯವೇ ಇಲ್ಲದ ಈ ಕಾಲದಲ್ಲಿ ಶಾಕೀರ್ ಅವರ ಸ್ನೇಹಿತ ಪೈಲ್ವಾನ್ ನಿಧನ ಹೊಂದಿದ್ದಾರೆ.

ಶಾಕೀರ್‌ ಸನದಿ

‘ಇತ್ತೀಚೆಗೆ ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಸಮೀಪದ ಸ್ಲಂ ಒಂದರ ಮಹಿಳೆ ಪಾಸಿಟವ್ ಆಗಿ ಆಸ್ಪತ್ರೆ ಸೇರಿದ್ದರು. 14 ದಿನದ ನಂತರ ಅವರಿಗೆ ನೆಗೆಟಿವ್ ಎಂದು ವರದಿ ನೀಡಿ ಮನೆಗೆ ಕಳಿಸಿದರು. ಮರುದಿನವೇ ಅವರು ತೀರಿ ಹೋದರು. ಅದರ ಮರುದಿನ ಪಕ್ಕದ ಮನೆಯ ಒಬ್ಬರು ಕೊರೊನಾದಿಂದ ಅಸು ನೀಗಿದರು…ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರನ್ನು ಭೇಟಿಯಾಗಿ ಕೇಳಿದರೆ, ಅವರು ವೈದ್ಯರ ಪರ ನಿಂತರೆ ಹೊರತು ರೋಗಿಗಳ ಪರವಲ್ಲ’ ಎಂದು ಶಾಕೀರ್ ನಾನುಗೌರಿ. ಕಾಂ ಗೆ ತಿಳಿಸಿದರು.

ಇದನ್ನೂ ಓದಿ: ‘ನಮ್ಮ ಮಾತನ್ನೂ ಕೇಳಿ’- ಪ್ರಧಾನಿ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಾರ್ಖಂಡ್ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...