Homeಕರೋನಾ ತಲ್ಲಣನಮ್ಮನ್ನು ನೋಡಿ ನಗುತ್ತಿದ್ದರೆ, ಮುಂಬೈ ಮಾದರಿಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

ನಮ್ಮನ್ನು ನೋಡಿ ನಗುತ್ತಿದ್ದರೆ, ಮುಂಬೈ ಮಾದರಿಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

ದೇಶದಲ್ಲೇ ಅತ್ಯಂತ ಹೆಚ್ಚು ಕೊರೊನಾ ಪೀಡಿತ ನಗರವಾಗಿದ್ದ ಮುಂಬೈಯಲ್ಲಿ ಈಗ ಪರಿಸ್ಥಿತಿ ಸುಧಾರಣೆಯಾಗುತ್ತಿದೆ.

- Advertisement -
- Advertisement -

ಕೊರೊನಾ ವೈರಸ್ ಸಮಸ್ಯೆಯ ತೀವ್ರತೆಯ ಬಗ್ಗೆ ಪ್ರಾಮಾಣಿಕತೆ ಇದ್ದಲ್ಲಿ ಮಾತ್ರ “ಮುಂಬೈ ಮಾದರಿ” ಇತರ ನಗರಗಳು ಮತ್ತು ರಾಜ್ಯಗಳಲ್ಲಿ ಕೆಲಸ ಮಾಡಬಹುದೆಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಆಯುಕ್ತ ಇಕ್ಬಾಲ್ ಸಿಂಗ್ ಚಾಹಲ್ ಹೇಳಿದ್ದಾರೆ.

“ಎರಡು ತಿಂಗಳ ಹಿಂದೆ ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳು ಮಹಾರಾಷ್ಟ್ರದಲ್ಲಿ ಮಾತ್ರ ಯಾಕೆ ಕೊರೊನಾ ಎಂದು ಕರೆ ಮಾಡಿ ಕೇಳುತ್ತಿದ್ದರು. ಅವರು ನಮ್ಮನ್ನು ನೋಡಿ ನಗುತ್ತಿದ್ದರು. ಹೀಗೆ ಮಾಡಿದರೆ ಕೊರೊನಾ ನಿರ್ವಹಣೆಗೆ ಬಳಸಿದ ಮಾದರಿಯನ್ನು ಅವರೊಂದಿಗೆ ಹೇಗೆ ಹಂಚಿಕೊಳ್ಳುವುದು?… ವಿಪತ್ತುಗಳು ಸಂಭವಿಸಿದಾಗ, ಕಲಿಯಲು ಸಮಯ ಇರುವುದಿಲ್ಲ, ಆ ಮಾದರಿಗಳನ್ನು ನಕಲಿ ಮಾಡಲು ಸಮಯ ಇರುವುದಿಲ್ಲ” ಎಂದು ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

“ಮುಂಬೈಯ ಅನುಭವದಿಂದ ತಿಳಿದುಕೊಳ್ಳಿ” ಎಂದು ಸುಪ್ರೀಂ ಕೋರ್ಟ್ ಹೇಳಿದ ಕೆಲವೇ ಗಂಟೆಗಳ ನಂತರ ಬುಧವಾರ ರಾತ್ರಿ ದೆಹಲಿ ಸರ್ಕಾರ ಮತ್ತು ಕೇಂದ್ರದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ಮುಂಬಯಿಯಲ್ಲಿ ಈಗ ಆಮ್ಲಜನಕದ ಸಮಸ್ಯೆಗಳು ಇಲ್ಲ. ಲಭ್ಯವಿರುವ ಆಮ್ಲಜನಕದ ಅತ್ಯುತ್ತಮ ಬಳಕೆ, ತಡೆರಹಿತ ವಿತರಣೆ ಮತ್ತು ಬಫರ್ ಸ್ಟಾಕ್ ರಚನೆ ಮತ್ತು ಅದರ ಅಸ್ತಿತ್ವದಲ್ಲಿರುವ ಸಂಪನ್ಮೂಲಗಳನ್ನು BMC ಒಟ್ಟುಗೂಡಿಸುವ ಸಾಮರ್ಥ್ಯದ ಬಗ್ಗೆ ಅವರು ಹೇಳಿದ್ದಾರೆ. ಮುಂಬೈಯಲ್ಲಿ ಇದುವರೆಗೂ ಆಮ್ಲಜನಕದ ಕೊರತೆಯಿಂದ ಯಾವುದೆ ಸಾವುಗಳಾಗಿಲ್ಲ ಎಂದು ಅವರು ಹೇಳಿದ್ದಾರೆ.

ಏಪ್ರಿಲ್ 16-17 ರ ಮಧ್ಯದ ರಾತ್ರಿ, ಆರು ಆಸ್ಪತ್ರೆಗಳಿಂದ ಆಮ್ಲಜನಕ ಪೂರೈಕೆ ಕಡಿಮೆ ಇರುವುದರಿಂದ 168 ರೋಗಿಗಳನ್ನು ಸ್ಥಳಾಂತರಿಸಲಾಯಿತು. ಅಂದು 40 ರೋಗಿಗಳು ಗಂಭೀರವಾಗಿದ್ದರು. ಅಂತಿಮವಾಗಿ, ಎಲ್ಲರನ್ನು ಬೆಳಿಗ್ಗೆ 1 ರಿಂದ ಬೆಳಿಗ್ಗೆ 5 ರವರೆಗೆ ಸುರಕ್ಷಿತವಾಗಿ ಸೌಲಭ್ಯವಿರುವೆಡೆ ವರ್ಗಾಯಿಸಿ ಎಲ್ಲರ ಜೀವವನ್ನು ಉಳಿಸಿವಂತಾಗಿತ್ತು.

“ಈ ಘಟನೆಯ ನಂತರ, ಏಪ್ರಿಲ್ 17 ರಂದು, ಬಿಎಂಸಿಯು ರಾಜ್ಯ ಕಾರ್ಯಪಡೆಯೊಂದಿಗೆ ಆಮ್ಲಜನಕದ ಬಳಕೆಗೆ ಪ್ರೋಟೋಕಾಲ್ ಕೇಳಿದೆವು. ಆಮ್ಲಜನಕದ ಸ್ಯಾಚುರೇಷನ್‌‌ ಮಟ್ಟ 94% ಕಡಿವೆ ಇರುವವರಿಗೆ ಬೇಕಾಬಿಟ್ಟಿಯಾಗಿ ಬಳಸಬಾರದು. ಆಮ್ಲಜನಕದ ಬಳಕೆಯ ಲೆಕ್ಕಪರಿಶೋಧನೆ ಇರಬೇಕು, ಈ ಮಾಹಿತಿಯನ್ನು ನಗರದ ಎಲ್ಲಾ 176 ಆಸ್ಪತ್ರೆಗಳಿಗೆ ಪ್ರಸಾರ ಮಾಡಲಾಯಿತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೇ 10 ರಿಂದ ಲಾಕ್‌ಡೌನ್‌‌‌ – ‘ಜನ ಹೊಟ್ಟೆಗೆ ಏನು ತಿಂತಾರೆ?’; ಆಕ್ರೋಶ

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತನಗೆ ಮುಕ್ತ ಅಧಿಕಾರ ನೀಡಿದ್ದಾಗಿ ಬಿಎಂಸಿ ಮುಖ್ಯಸ್ಥ ಇಕ್ಬಾಲ್ ಸಿಂಗ್ ಚಾಹಲ್ ಹೇಳಿದ್ದಾರೆ. “ನಾನು ಅನೇಕ ವಿಧಗಳಲ್ಲಿ ತುಂಬಾ ಅದೃಷ್ಟಶಾಲಿ, ವಾಸ್ತವಿಕವಾಗಿ ನಾನು ಯಾವುದೇ ನಿರ್ಧಾರ ತೆಗೆದುಕೊಳ್ಳಬಹುದು. ಆ ರೀತಿಯ ಮುಕ್ತ ಅಧಿಕಾರ ಸಿಎಂ ನನಗೆ ನೀಡಿದ್ದಾರೆ. ಈ ಅಧಿಕಾರ ದೇಶದ ಅನೇಕ ನಗರಗಳ ನನ್ನ ಸಹೋದ್ಯೋಗಿಗಳಿಗೆ ಇಲ್ಲ” ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಮೇ ತಿಂಗಳಲ್ಲಿ ಮುಂಬೈಯಲ್ಲಿ ಕೊರೊನಾ ಪರಿಸ್ಥಿತಿ ಹದಗೆಡುತ್ತಿದ್ದಾಗ ಇಕ್ಬಾಲ್ ಸಿಂಗ್ ಚಾಹಲ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು. ಒಂದು ಸಮಯದಲ್ಲಿ ದೇಶದಲ್ಲೇ ಅತ್ಯಂತ ಹೆಚ್ಚು ಕೊರೊನಾ ಪೀಡಿತ ನಗರವಾಗಿದ್ದ ಮುಂಬೈಯಲ್ಲಿ ಪರಿಸ್ಥಿತಿ ಸುಧಾರಣೆಯಾಗುತ್ತಿದೆ.

ಮುಂಬೈ ಈಗಾಗಲೇ ಕೊರೊನಾ ಮೂರನೇ ಅಲೆಗೆ ತಯಾರಿ ನಡೆಸುತ್ತಿದೆ. ನಗರದಲ್ಲಿ ಬೃಹತ್‌ ಮಟ್ಟದ ಸೌಲಭ್ಯಗಳು ಮತ್ತು ಆಮ್ಲಜನಕ ಸ್ಥಾವರಗಳೊಂದಿಗೆ ಸುಮಾರು 5,500 ಹಾಸಿಗೆಗಳನ್ನು ಸೇರಿಸಲಾಗುತ್ತಿದೆ, ಇವುಗಳಲ್ಲಿ 70% ಆಮ್ಲಜನ ಇರುವ ಹಾಸಿಗೆಗಳಾಗಿದೆ.

ಇದನ್ನೂ ಓದಿ: ‘ಮೌಲ್ಯಗಳಿಗೆ ಸರಿ ಹೊಂದುತ್ತಿಲ್ಲ’: ಸುಪ್ರೀಂನಲ್ಲಿ ಚುನಾವಣಾ ಆಯೋಗವನ್ನು ಪ್ರತಿನಿಧಿಸುವ ವಕೀಲ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...