Homeಕರೋನಾ ತಲ್ಲಣಕೋವಿಡ್ 2ನೇ ಅಲೆ ಕುರಿತು ನವೆಂಬರ್‌ನಲ್ಲೇ ತಜ್ಞರ ಸಮಿತಿ ಎಚ್ಚರಿಸಿದ್ದರೂ ಸಚಿವ ಸುಧಾಕರ್ ಏನು ಮಾಡುತ್ತಿದ್ದರು?

ಕೋವಿಡ್ 2ನೇ ಅಲೆ ಕುರಿತು ನವೆಂಬರ್‌ನಲ್ಲೇ ತಜ್ಞರ ಸಮಿತಿ ಎಚ್ಚರಿಸಿದ್ದರೂ ಸಚಿವ ಸುಧಾಕರ್ ಏನು ಮಾಡುತ್ತಿದ್ದರು?

- Advertisement -
- Advertisement -

ಏಪ್ರಿಲ್ 11 ರಂದು ವೈದ್ಯರೂ ಆಗಿರುವ ಡಾ. ಕೆ ಸುಧಾಕರ್ ಅವರು ತಾಂತ್ರಿಕ ಸಲಹಾ ಸಮಿತಿ ಮತ್ತು ವೈದ್ಯಕೀಯ ಸಲಹಾ ಸಮಿತಿಯ ಸದಸ್ಯರೊಂದಿಗೆ ಚರ್ಚೆ ನಡೆಸಿದ ನಂತರ ಮಾಧ್ಯಮಗಳಿಗೆ ಹೀಗೆ ಹೇಳುತ್ತಾರೆ, ‘ಮೇ ಮೊದಲ ವಾರದಲ್ಲಿ ಕೊರೊನಾ ಪ್ರಕರಣಗಳು ಉಲ್ಬಣ ಆಗಲಿದೆ. ಆಗ ರಾಜ್ಯದ ಆರೋಗ್ಯ ಮೂಲಸೌಕರ್ಯದ ಮೇಲೆ ಇದು ದೊಡ್ಡ ಹೊರೆಯಾಗಲಿದೆ. ಅದಕ್ಕೆ ತಕ್ಕಂತೆ ನಾವು ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ…’

ಸಚಿವರು ತಜ್ಞರು ಹೇಳಿದ್ದನ್ನು ಸರಿಯಾಗಿಯೇ ಹೇಳಿದ್ದರು. ಆದರೆ, ಆರೋಗ್ಯ ಮೂಲಸೌಕರ್ಯ ಕುಸಿಯಲಿದೆ ಎಂಬುದು ಗೊತ್ತಿದ್ದರೂ, ಅವರು ಯಾವುದೇ ಸಿದ್ಧತೆ ಮಾಡಿಕೊಳ್ಳಲೇ ಇಲ್ಲ. ಚಾಮರಾಜನಗರದ ಒಂದು ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ ಆಮ್ಲಜನಕ ಕೊರತೆಯಿಂದ 24 ಸಾವು ಸಂಭವಿಸಿದಾಗ ಸಚಿವರು ಹೇಳುತ್ತಾರೆ, ‘ಆಮ್ಲಜನಕ ಕೊರತೆಯಿಂದ ಮೂರೇ ಸಾವು ಸಂಭವಿಸಿವೆ’ ಎಂದು!

ಇದು ಅವರ ನಿರ್ಲಕ್ಷ್ಯಕ್ಕೆ ಸಾಕ್ಷಿ. ಏಪ್ರಿಲ್ 11ಕ್ಕೆ ಅಪಾಯದ ಬಗ್ಗೆ ಹೇಳುವ ಅವರು, ಈ 28 ದಿನಗಳಲ್ಲಿ ಯಾವ ವ್ಯವಸ್ಥೆ ಮಾಡಿದರು? ಏನೂ ಇಲ್ಲ!

ನವೆಂಬರ್ ಅಂತ್ಯದಲ್ಲೆ 2ನೇ ಅಲೆಯ ಎಚ್ಚರಿಕೆ

ಕೊರೊನಾ ಎರಡನೇ ಅಲೆ ರಾಜ್ಯಕ್ಕೆ ಅಪ್ಪಳಿಸಲಿದೆ ಎಂದು ನವೆಂಬರ್ ಅಂತ್ಯದಲ್ಲೆ ತಜ್ಞರ ಸಮಿತಿ ಹೇಳಿತ್ತು. ಸರ್ಕಾರಕ್ಕೆ ಉಪ ಚುನಾವಣೆ ಮುಖ್ಯವಾಗಿತ್ತು. ಆದರೆ, ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಖಾತೆ ಎರಡನ್ನೂ ಹೊಂದಿರುವ, ಸ್ವತಃ ವೈದ್ಯರೂ ಆದ ಡಾ. ಸುಧಾಕರ್ ಈ ಕಡೆ ಗಮನ ಹರಿಸಬಹುದಿತ್ತು. ಇಲ್ಲ, ಅವರು ಸೋಮಾರಿತನ ತೋರಿದರು ಅಥವಾ ಈ ಗೊತ್ತುಗುರಿಯಿಲ್ಲದ ಸರ್ಕಾರದಲ್ಲಿ ಅವರು ಅನಾಥರಾದರು!

ಈ ಅವಧಿಯಲ್ಲೇ ಅವರು ಸದನದಲ್ಲಿ ಸಿಡಿ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿ ಪರ ವಿಶೇಷ ಮಮತೆ ತೋರಿಸುತ್ತ, ‘ಯಾವ್ಯಾವ ವಿಪಕ್ಷ ನಾಯಕರಿಗೆ ಎಷ್ಟೆಷ್ಟು ಪತ್ನಿಯರಿದ್ದಾರೆ ಎಂಬುದೆಲ್ಲ ಗೊತ್ತು’ ಎಂದು ಅಸಹ್ಯವಾಗಿ ಮಾತನಾಡಿದರು. ಆಗ ಬೆಂಗಳೂರಿನಲ್ಲಿ ಕೋವಿಡ್ ಎರಡನೇ ಅಲೆ ಉಲ್ಬಣಗೊಳ್ಳುತ್ತಿತ್ತು.

ಕೆಲವೊಮ್ಮೆ ಮಾಧ್ಯಮಗಳ ಮುಂದೆ ಸತ್ಯವನ್ನು ಹೇಳುವ ಸುಧಾಕರ್ ಅವರು ನಿನ್ನೆ ಸುಪ್ರಿಂಕೋರ್ಟ್ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದಿದ್ದನ್ನು ಮುಕ್ತವಾಗಿ ಸ್ವಾಗತಿಸಿದ್ದಾರೆ.
ಅಂದರೆ, ರಾಜ್ಯಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸಬೇಕು ಎಂದು ಹೈಕೋರ್ಟ್ ಹೇಳಿದ್ದರ ವಿರುದ್ಧ ಸುಪ್ರೀಂಕೋರ್ಟಿಗೆ ಅರ್ಜಿ ಹಾಕಿದ್ದ ಕೇಂದ್ರ ಸರ್ಕಾರವನ್ನು ಅವರು ಪರೋಕ್ಷವಾಗಿ ಟೀಕಿಸಿದ್ದಾರೆ!

ಅಯೋಗ್ಯ ಸಚಿವ, ನಾನ್‌ಸೆನ್ಸ್ ಸರ್ಕಾರ

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ಆಮ್ ಆದ್ಮಿ ಪಕ್ಷದ ಮುಖ್ಯ ಕಾರ್ಯದರ್ಶಿ ದರ್ಶನ್ ಜೈನ್, ‘ಅವರು ಆರೋಗ್ಯ ಸಚಿವರೇ ಅಲ್ಲಾರಿ, ಅಯೋಗ್ಯ ಸಚಿವರು. ಈ ಸರ್ಕಾರಕ್ಕೆ ಒಂದು ದೃಷ್ಟಿಕೋನವಿಲ್ಲ, ಜನರ ಬಗ್ಗೆ ಕಾಳಜಿಯಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಇದು ನಮ್ಮ ಪಕ್ಷದ ರಾಜಕೀಯ ಹೇಳಿಕೆ ಅಂದುಕೊಳ್ಳಬೇಡಿ, ಇದು ಈ ರಾಜ್ಯದ ಆಮ್ ಆದ್ಮಿ ಕೇಳುತ್ತಿರುವ ಪ್ರಶ್ನೆ. ನವೆಂಬರ್ 30ಕ್ಕೆ ತಜ್ಞರ ಸಮಿತಿ, ಎರಡನೇ ಅಲೆಯ ಬಗ್ಗೆ ಎಚ್ಚರಿಸಿದ ನಂತರವೂ ಆರೋಗ್ಯ ಸಚಿವರು ಬೆಡ್‌ಗಳ ವ್ಯವಸ್ಥೆ ಮಾಡಿಕೊಳ್ಳಲಿಲ್ಲ, ಬೆಂಗಳೂರಿನ ಹೊರವಲಯದಲ್ಲಿ ಸಿದ್ಧವಾಗಿದ್ದ 10,100 ಸಾವಿರ ಬೆಡ್‌ಗಳ ತಾತ್ಕಾಲಿಕ ಆಸ್ಪತ್ರೆಯೇ ಮಾಯವಾಗಿತು. ನಂತರದಲ್ಲಿ ಆಮ್ಲಜನಕದ ವ್ಯವಸ್ಥೆ ಮಾಡಿಕೊಳ್ಳಲಿಲ್ಲ. ಇಲ್ಲಿ ವಿವಿಧ ಇಲಾಖೆಗಳೊಂದಿಗೆ ಸಮನ್ವಯತೆಯೇ ಇಲ್ಲ… ಕೋವಿಡ್ ವಿಷಯವನ್ನು ಕೋಮುರೂಪಕ್ಕೆ ತಿರುಗಿಸಲು ಒಬ್ಬ ಚಿಲ್ಲರೆ ಸಂಸದ ಯತ್ನಿಸಿದಾಗ ಆರೋಗ್ಯ ಸಚಿವರು ಮತ್ತು ಮುಖ್ಯಮಂತ್ರಿ ಅದನ್ನು ಖಂಡಿಸಬೇಕಿತ್ತು’ ಎಂದು ದರ್ಶನ್ ಹೇಳಿದರು.

ದರ್ಶನ್ ಜೈನ್

‘ಸುಪ್ರೀಂಕೋರ್ಟಿನಲ್ಲಿ ರಾಜ್ಯದ ವಿರುದ್ಧವೇ ಒಂದು ಅರ್ಜಿ ಸಲ್ಲಿಕೆಯಾಗುತ್ತದೆ. ಆ ಸಂದರ್ಭದಲ್ಲಿ ಇಲ್ಲಿನ ಒಬ್ಬ ಸಂಸದನೂ, ಆರೋಗ್ಯ ಸಚಿವರೂ ಮತ್ತು ಸಿಎಂ ಕೂಡ ಮಾತೇ ಎತ್ತುವುದಿಲ್ಲ. ಇದೊಂದು ನಾನ್‌ಸೆನ್ಸ್ ಸರ್ಕಾರ. ಗುಲಾಮಗಿರಿಯಲ್ಲಿ ಬದುಕುತ್ತಿರುವ ಈ ಸರ್ಕಾರ ಕನ್ನಡಿಗರನ್ನು ಅಪಾಯಕ್ಕೆ ದೂಡಿದೆ’ ಎಂದು ದರ್ಶನ್ ಜೈನ್ ಕಿಡಿಕಾರಿದರು.

ಹಿರಿಯ ಪತ್ರಕರ್ತರೊಬ್ಬರು ಮಾತನಾಡಿ, ‘ಸುಧಾಕರ್‌ರವರ ಮೇಲೆ ಕೊರೊನಾ ಭ್ರಷ್ಟಾಚಾರದ ಬಹುದೊಡ್ಡ ಆರೋಪವಿದೆ. ಆದರೆ ಈ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ಅವರು ಬೇಜವಾಬ್ದಾರಿ ತೋರಿದ್ದಾರೆ. ರಾಜ್ಯದ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ, ಅಲ್ಲಿನ ಡಿಸಿಗಳ ಜೊತೆ ಅವರೆಂದೂ ಚರ್ಚೆ ಮಾಡಲಿಲ್ಲ. ಈಗೇನೋ ತುಮಕೂರು-ಚಿತ್ರದುರ್ಗದ ಕಡೆ ಹೊರಟಿದ್ದಾಂರಂತೆ’ ಎಂದು ನಾನುಗೌರಿ.ಕಾಂ ಗೆ ತಿಳಿಸಿದರು.

‘ನವೆಂಬರ್ 30ಕ್ಕೇ ಎರಡನೇ ಅಲೆಯ ಬಗ್ಗೆ ರಾಜ್ಯ ಸರ್ಕಾರವೇ ನೇಮಿಸಿದ ತಜ್ಞರ ಸಮಿತಿ ವರದಿ ನೀಡಿದ ಮೇಲೂ ಈ ಆರೋಗ್ಯ ಸಚಿವರು ಮತ್ತು ಒಟ್ಟೂ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಇನ್ನು ಈ ಸರ್ಕಾರ ಸಂಪೂರ್ಣ ಲಾಕ್‌ಡೌನ್ ಮಾಡುವುದೇ ಆಗಿದ್ದರೆ, ಇದನ್ನು 15 ದಿನದ ಹಿಂದೆ ಕರ್ಫ್ಯೂ ಘೋಷಣೆ ಮಾಡಿದಾಗಲೇ ಮಾಡಬೇಕಿತ್ತು. ಅದಕ್ಕೂ ಮೊದಲು ದುಡಿಯುವ ವರ್ಗಗಳಿಗೆ ಅಗತ್ಯ ನೆರವು ನೀಡಬೇಕಿತ್ತು’ ಎಂದು ಅವರು ಹೇಳುತ್ತಾರೆ.

ಸಚಿವ ಸುಧಾಕರ್ ಉತ್ತರ

ಬೆಡ್‌ಗಳ ಸಂಖ್ಯೆ ಹೆಚ್ಚಿಸಲು, ಆಮ್ಲಜಕನ ಕೊರತೆ ನೀಗಿಸಲು ತೆಗೆದುಕೊಂಡಿರುವ ಕ್ರಮಗಳೇನು? ಕೋವಿಡ್ ಮೂರನೇ ಅಲೆಗೆ ಸಿದ್ದತೆ ಹೇಗಿದೆ ಎಂಬ ಪ್ರಶ್ನೆಗಳ ಕುರಿತು ಆರೋಗ್ಯ ಸಚಿವರ ಅಭಿಪ್ರಾಯ ಪಡೆಯಲು ನಾನುಗೌರಿ.ಕಾಂ ಯತ್ನಿಸಿತು. ನಮ್ಮ ಪ್ರಶ್ನೆಗಳಿಗೆ ಸಚಿವರು ಈ ಕೆಳಗಿನಂತೆ ಉತ್ತರಿಸಿದ್ದಾರೆ.

ಸರ್, ನವೆಂಬರ್ ಅಂತ್ಯದಲ್ಲಿಯೇ ತಜ್ಞರ ಸಮಿತಿ 2ನೇ ಅಲೆ ಬಗ್ಗೆ ಎಚ್ಚರಿಕೆ ನೀಡಿತ್ತು… ಆರೋಗ್ಯ ಇಲಾಖೆ ಯಾವ ಪೂರ್ವ ಸಿದ್ಧತೆ ಮಾಡಿಕೊಂಡಿತು ಎಂಬ ಪ್ರಶ್ನೆಗೆ “ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸುವ ಕ್ರಮಗಳನ್ನು ಕೋವಿಡ್ ಮೊದಲನೇ ಅಲೆ ಇದ್ದಾಗಿನಿಂದಲೇ ಕೈಗೊಳ್ಳಲಾಗಿದೆ. ಎರಡನೇ ಅಲೆ ಬರುವ ಮುನ್ಸೂಚನೆ ಕೂಡ ಇದ್ದಿದ್ದರಿಂದ ಅದಕ್ಕೆ ತಕ್ಕಂತೆ ಕ್ರಮಗಳನ್ನೂ ವಹಿಸಲಾಗಿದೆ. ರಾಜ್ಯದಲ್ಲಿ ಆರೋಗ್ಯ ಇಲಾಖೆಯಡಿಯ ಆಸ್ಪತ್ರೆಗಳಲ್ಲಿ ಒಟ್ಟು 31,444, ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ 14,617, ಖಾಸಗಿ ಆಸ್ಪತ್ರೆಗಳಲ್ಲಿ 38,600, ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ 35,766 ಹಾಸಿಗೆಗಳಿವೆ.
ಸರ್ಕಾರಿ ವ್ಯವಸ್ಥೆಯಡಿ, ವೆಂಟಿಲೇಟರ್ ಸಹಿತ ಐಸಿಯು ಹಾಸಿಗೆ 2,108 ಇದೆ. ಖಾಸಗಿ ವ್ಯವಸ್ಥೆಯಡಿ, ವೆಂಟಿಲೇಟರ್ ಸಹಿತ ಐಸಿಯು 1,662 ಇದೆ” ಎಂದಿದ್ದಾರೆ.

ಆಮ್ಲಜನಕದ ಕೊರತೆ ಇನ್ನೂ ಏಕೆ ಕಾಡುತ್ತಿದೆ ಎಂಬ ಪ್ರಶ್ನೆಗೆ “ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಸಲು ಕೂಡ ವ್ಯವಸ್ಥೆ ಮಾಡಲಾಗಿದೆ. ತಲಾ 20 ಮೆಟ್ರಿಕ್ ಟನ್‌ನ 4 ಟ್ಯಾಂಕರ್ ಗಳನ್ನು ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡಿದೆ. ಇದರಿಂದ ಆಕ್ಸಿಜನ್ ಸಾಗಣೆಗೆ ನೆರವಾಗಿದೆ” ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯಕ್ಕೆ ಆಕ್ಸಿಜನ್ ಕೊಡಲು ಹೈಕೋರ್ಟ್ ಹೇಳಿದರೆ ಅಲ್ಲಿ ಕೇಂದ್ರ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ವಿರುದ್ಧವೇ ಅರ್ಜಿ ಸಲ್ಲಿಸಿತ್ತು…. ಈ ಬಗ್ಗೆ ನಿಮ್ಮ ಅಭಿಪ್ರಾಯವೇನು? ಎಂದು ಕೇಳಿದಾಗ “ಆಕ್ಸಿಜನ್ ಹಂಚಿಕೆ ಕುರಿತು ಸುಪ್ರೀಂ ಕೋರ್ಟ್‌ನ ನಿರ್ದೇಶನವನ್ನು ಸ್ವಾಗತಿಸುತ್ತೇನೆ. ಕೇಂದ್ರ ಸರ್ಕಾರ ದೇಶದ ಎಲ್ಲ ರಾಜ್ಯಗಳ ಬೇಡಿಕೆಗೆ ಸ್ಪಂದಿಸಬೇಕಾದ ಒತ್ತಡ ಇರುತ್ತದೆ. ಅಗತ್ಯತೆ ನೋಡಿಕೊಂಡು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಆಕ್ಸಿಜನ್ ಅನ್ನು ಸಮರ್ಪಕವಾಗಿ ಪೂರೈಕೆ ಮಾಡುತ್ತಿದೆ. ರಾಜ್ಯದ ಬೇಡಿಕೆಗೂ ಕೇಂದ್ರ ಸರ್ಕಾರ ಶೀಘ್ರವೇ ಸ್ಪಂದಿಸುವ ವಿಶ್ವಾಸವಿದೆ. ಈ ಹಿಂದೆಯೇ ಕೇಂದ್ರ ಸರ್ಕಾರ ಆಕ್ಸಿಜನ್ ಹಂಚಿಕೆಯನ್ನು 802 ಟನ್ ನಿಂದ 865 ಟನ್ ಗೆ ಹೆಚ್ಚಿಸಿದೆ” ಎಂದರು.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...