Homeಕರೋನಾ ತಲ್ಲಣಕೊರೊನಾ ಎರಡನೇ ಅಲೆ ಗ್ರಾಮೀಣ ಭಾರತಕ್ಕೆ: ಪ್ರಕರಣಗಳು ಮತ್ತು ಸಾವುಗಳು ನಾಲ್ಕು ಪಟ್ಟು ಹೆಚ್ಚಳ!

ಕೊರೊನಾ ಎರಡನೇ ಅಲೆ ಗ್ರಾಮೀಣ ಭಾರತಕ್ಕೆ: ಪ್ರಕರಣಗಳು ಮತ್ತು ಸಾವುಗಳು ನಾಲ್ಕು ಪಟ್ಟು ಹೆಚ್ಚಳ!

- Advertisement -
- Advertisement -

ಕೊರೊನಾ ಎರಡನೇ ಅಲೆಯ ಪ್ರಕರಣಗಳು ಗ್ರಾಮೀಣ ಭಾರತದಲ್ಲಿ ಉಲ್ಬಣಗೊಂಡಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮುಗಿದ ಮೊದಲ ಅಲೆಗೆ ಹೋಲಿಸಿದರೆ, ಭಾರತದ ಒಳನಾಡು ಅಥವಾ ಹಿಂದುಳಿದ ಪ್ರದೇಶಗಳಲ್ಲಿ ಸೋಂಕಿನ ಪ್ರಕರಣಗಳು ಮತ್ತು ಅದರಿಂದಾಗಿ ಮೃತಪಟ್ಟವರ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದು ವರದಿಯಾಗಿದೆ.

ಹಿಂದುಳಿದ ಪ್ರದೇಶ ಅನುದಾನ ನಿಧಿ (ಬಿಆರ್‌ಜಿಎಫ್) ವ್ಯಾಪ್ತಿಗೆ 272 ಜಿಲ್ಲೆಗಳು ಒಳಪಡುತ್ತದೆ. ಇದರಲ್ಲಿ 243 ಜಿಲ್ಲೆಗಳ ಮಾಹಿತಿ ಲಭ್ಯವಿದ್ದು, ಈ ಮಾಹಿತಿಯಂತೆ ಮೇ 5 ರ ಹೊತ್ತಿಗೆ ಇಲ್ಲಿನ 39.16 ಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ. ಕೊರೊನಾ ಮೊದಲ ಅಲೆಯ ಉತ್ತುಂಗದ ಸಮಯವಾದ ಸೆಪ್ಟೆಂಬರ್ 16, 2020 ರಲ್ಲಿ ಈ ಜಿಲ್ಲೆಗಳಲ್ಲಿ 9.5 ಲಕ್ಷ ಸೋಂಕುಗಳಷ್ಟೇ ಇದ್ದವು. ಇದಕ್ಕೆ ಹೋಲಿಸಿದರೆ ಪ್ರಸ್ತುತ ಪ್ರಕರಣಗಳು ನಾಲ್ಕು ಪಟ್ಟು ಹೆಚ್ಚಾಗಿದೆ.

ಇದನ್ನೂ ಓದಿ: ನಮ್ಮನ್ನು ನೋಡಿ ನಗುತ್ತಿದ್ದರೆ, ಮುಂಬೈ ಮಾದರಿಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

ಈ ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳು ಕೂಡಾ ಎರಡನೇ ಅಲೆಯಲ್ಲಿ ಹೆಚ್ಚಾಗಿದ್ದು, ಗರಿಷ್ಠ ಮಟ್ಟದಲ್ಲಿದೆ. ಸಕ್ರಿಯ ಸೋಂಕಿತರು ಇದೀಗ ಮೊದಲ ಅಲೆಗಿಂತ 4.2 ಪಟ್ಟು ಹೆಚ್ಚಾಗಿದ್ದಾರೆ. ಈ ಜಿಲ್ಲೆಗಳಲ್ಲಿ ಪ್ರಸ್ತುತ 7.15 ಲಕ್ಷಕ್ಕೂ ಹೆಚ್ಚು ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳು ಹೆಚ್ಚಾಗಿ ಇಲ್ಲದೆ ಇರುವುದರಿಂದ ಇದು ಜನರನ್ನು ತೀವ್ರ ಸಂಕಷ್ಟಕ್ಕೆ ಈಡಾಗಿಸುತ್ತದೆ.

ಇದರ ಪ್ರತಿಫಲವೆ ಈ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಸಾವುಗಳು ವರದಿಯಾಗಿವೆ. ಮೇ 5 ರ ಹೊತ್ತಿಗೆ, ಈ 243 ಜಿಲ್ಲೆಗಳು ಒಟ್ಟು 36,523 ಸಾವುಗಳನ್ನು ವರದಿಯಾಗಿವೆ. ಈ ಸಂಖ್ಯೆಯು ಕಳೆದ ವರ್ಷದಲ್ಲಿ ಮೊದಲ ಅಲೆಯ ಸಮಯದಲ್ಲಿ ಸಾವಿಗೀಡಾದವರ ಸಂಖ್ಯೆಗಿಂತ ಸುಮಾರು ನಾಲ್ಕು ಪಟ್ಟು ಹೆಚ್ಚಾಗಿದೆ. ಸೆಪ್ಟೆಂಬರ್ 16, 2020 ರ ಹೊತ್ತಿಗೆ, ಈ ಜಿಲ್ಲೆಗಳಲ್ಲಿ 9,555 ಜನರು ಮೃತಪಟ್ಟಿದ್ದರು.

ಬಿಆರ್‌ಜಿಎಫ್ ಅಡಿಯಲ್ಲಿರುವ 272 ಜಿಲ್ಲೆಗಳಲ್ಲಿ ಸುಮಾರು 54% ಜಿಲ್ಲೆಗಳು ಕೇವಲ ಐದು ರಾಜ್ಯಗಳಿಗೆ ಸೇರಿದೆ. ಅವುಗಳೆಂದರೆ: ಬಿಹಾರ-38, ಉತ್ತರ ಪ್ರದೇಶ-35, ಮಧ್ಯಪ್ರದೇಶ – 30, ಜಾರ್ಖಂಡ್ – 23 ಮತ್ತು ಒಡಿಶಾದ 20 ಜಿಲ್ಲೆಗಳು. ಈ ರಾಜ್ಯಗಳೆ ದೇಶದ ಪ್ರಮುಖ ನಗರಗಳಿಗೆ ಹೆಚ್ಚಿನ ವಲಸೆ ಕಾರ್ಮಿಕರನ್ನು ಒದಗಿಸುತ್ತವೆ.

ಇದನ್ನೂ ಓದಿ: ಕಂಗನಾ ರಾಣಾವತ್‌ಗೆ ಕೊರೊನಾ ಪಾಸಿಟಿವ್: ವೈರಸ್ ನಾಶಗೊಳಿಸುತ್ತೇನೆ ಎಂದ ನಟಿ!

ಕೊರೊನಾ ವೈರಸ್ ಪ್ರಕರಣಗಳ ನಗರ-ಗ್ರಾಮೀಣ ವಿಭಜನೆಯು ನೇರವಾಗಿ ಲಭ್ಯವಿಲ್ಲದಿದ್ದರೂ, ಬಿಆರ್‌ಜಿಎಫ್ ಜಿಲ್ಲೆಗಳಲ್ಲಿನ ಪ್ರಕರಣಗಳು ಮತ್ತು ಸಾವುಗಳ ವಿಶ್ಲೇಷಣೆಯು ಭಾರತದಲ್ಲಿ ಗ್ರಾಮೀಣ ಹರಡುವಿಕೆಯನ್ನು ಸೂಚಿಸುತ್ತದೆ.

ಒಟ್ಟಿನಲ್ಲಿ ಹೇಳುವುದಾದರೆ, 243 ಜಿಲ್ಲೆಗಳಲ್ಲಿನ ಸೋಂಕುಗಳ ಸಂಖ್ಯೆ ಮೊದಲ ಮತ್ತು ಎರಡನೆಯ ಅಲೆಗಳ ನಡುವೆ ನಾಲ್ಕು ಪಟ್ಟು ಹೆಚ್ಚಾಗಿದೆ. ಆದರೆ ದೇಶದ ಒಟ್ಟು ಸೋಂಕುಗಳ ಶೇಕಡಾವಾರು ಏರಿಕೆಯ ಪ್ರಮಾಣವು ಕೇವಲ 18.6% ರಷ್ಟಿದೆ. ಆದರೆ ಈ ಜಿಲ್ಲೆಗಳಲ್ಲಿ ಸಾವುಗಳು ಗಮನಾರ್ಹವಾಗಿ ಏರಿಕೆಯಾಗಿದೆ.

ಈ 272 ಜಿಲ್ಲೆಗಳಲ್ಲಿ ಹೆಚ್ಚಿನ ಜಿಲ್ಲೆಗಳು ಮೂಲಭೂತ ಆರೋಗ್ಯ ಸೌಲಭ್ಯಗಳನ್ನು ಮಾತ್ರ ಹೊಂದಿವೆ. ರಾಜ್ಯಗಳು ನಿರ್ಮಿಸುತ್ತಿರುವ ಹೊಸ ಮೂಲಸೌಕರ್ಯಗಳು ಹೆಚ್ಚಾಗಿ ದೊಡ್ಡ ಪಟ್ಟಣಗಳು ​​ಮತ್ತು ನಗರಗಳಲ್ಲಿವೆ. ಇದರ ಪರಿಣಾಮವಾಗಿ, ಈ ಜಿಲ್ಲೆಗಳಿಂದ ಹತ್ತಿರದ ದೊಡ್ಡ ಪಟ್ಟಣಕ್ಕೆ ಹೆಚ್ಚಿನ ಸಂಖ್ಯೆಯ ರೋಗಿಗಳು ಬರುತ್ತಿದ್ದಾರೆ, ಇದು ಪಟ್ಟಣಗಳು ​​ಮತ್ತು ನಗರಗಳಲ್ಲಿ ಈಗಾಗಲೇ ಒತ್ತಡಕ್ಕೊಳಗಾದ ಮೂಲಸೌಕರ್ಯಗಳ ಮೇಲೆ ಹೊರೆಯನ್ನು ಹೆಚ್ಚಿಸುತ್ತಿದೆ.

ಇದನ್ನೂ ಓದಿ: ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...