Homeಕರೋನಾ ತಲ್ಲಣಕೊರೊನಾ ಎರಡನೇ ಅಲೆ ಗ್ರಾಮೀಣ ಭಾರತಕ್ಕೆ: ಪ್ರಕರಣಗಳು ಮತ್ತು ಸಾವುಗಳು ನಾಲ್ಕು ಪಟ್ಟು ಹೆಚ್ಚಳ!

ಕೊರೊನಾ ಎರಡನೇ ಅಲೆ ಗ್ರಾಮೀಣ ಭಾರತಕ್ಕೆ: ಪ್ರಕರಣಗಳು ಮತ್ತು ಸಾವುಗಳು ನಾಲ್ಕು ಪಟ್ಟು ಹೆಚ್ಚಳ!

- Advertisement -
- Advertisement -

ಕೊರೊನಾ ಎರಡನೇ ಅಲೆಯ ಪ್ರಕರಣಗಳು ಗ್ರಾಮೀಣ ಭಾರತದಲ್ಲಿ ಉಲ್ಬಣಗೊಂಡಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮುಗಿದ ಮೊದಲ ಅಲೆಗೆ ಹೋಲಿಸಿದರೆ, ಭಾರತದ ಒಳನಾಡು ಅಥವಾ ಹಿಂದುಳಿದ ಪ್ರದೇಶಗಳಲ್ಲಿ ಸೋಂಕಿನ ಪ್ರಕರಣಗಳು ಮತ್ತು ಅದರಿಂದಾಗಿ ಮೃತಪಟ್ಟವರ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದು ವರದಿಯಾಗಿದೆ.

ಹಿಂದುಳಿದ ಪ್ರದೇಶ ಅನುದಾನ ನಿಧಿ (ಬಿಆರ್‌ಜಿಎಫ್) ವ್ಯಾಪ್ತಿಗೆ 272 ಜಿಲ್ಲೆಗಳು ಒಳಪಡುತ್ತದೆ. ಇದರಲ್ಲಿ 243 ಜಿಲ್ಲೆಗಳ ಮಾಹಿತಿ ಲಭ್ಯವಿದ್ದು, ಈ ಮಾಹಿತಿಯಂತೆ ಮೇ 5 ರ ಹೊತ್ತಿಗೆ ಇಲ್ಲಿನ 39.16 ಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ. ಕೊರೊನಾ ಮೊದಲ ಅಲೆಯ ಉತ್ತುಂಗದ ಸಮಯವಾದ ಸೆಪ್ಟೆಂಬರ್ 16, 2020 ರಲ್ಲಿ ಈ ಜಿಲ್ಲೆಗಳಲ್ಲಿ 9.5 ಲಕ್ಷ ಸೋಂಕುಗಳಷ್ಟೇ ಇದ್ದವು. ಇದಕ್ಕೆ ಹೋಲಿಸಿದರೆ ಪ್ರಸ್ತುತ ಪ್ರಕರಣಗಳು ನಾಲ್ಕು ಪಟ್ಟು ಹೆಚ್ಚಾಗಿದೆ.

ಇದನ್ನೂ ಓದಿ: ನಮ್ಮನ್ನು ನೋಡಿ ನಗುತ್ತಿದ್ದರೆ, ಮುಂಬೈ ಮಾದರಿಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

ಈ ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳು ಕೂಡಾ ಎರಡನೇ ಅಲೆಯಲ್ಲಿ ಹೆಚ್ಚಾಗಿದ್ದು, ಗರಿಷ್ಠ ಮಟ್ಟದಲ್ಲಿದೆ. ಸಕ್ರಿಯ ಸೋಂಕಿತರು ಇದೀಗ ಮೊದಲ ಅಲೆಗಿಂತ 4.2 ಪಟ್ಟು ಹೆಚ್ಚಾಗಿದ್ದಾರೆ. ಈ ಜಿಲ್ಲೆಗಳಲ್ಲಿ ಪ್ರಸ್ತುತ 7.15 ಲಕ್ಷಕ್ಕೂ ಹೆಚ್ಚು ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳು ಹೆಚ್ಚಾಗಿ ಇಲ್ಲದೆ ಇರುವುದರಿಂದ ಇದು ಜನರನ್ನು ತೀವ್ರ ಸಂಕಷ್ಟಕ್ಕೆ ಈಡಾಗಿಸುತ್ತದೆ.

ಇದರ ಪ್ರತಿಫಲವೆ ಈ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಸಾವುಗಳು ವರದಿಯಾಗಿವೆ. ಮೇ 5 ರ ಹೊತ್ತಿಗೆ, ಈ 243 ಜಿಲ್ಲೆಗಳು ಒಟ್ಟು 36,523 ಸಾವುಗಳನ್ನು ವರದಿಯಾಗಿವೆ. ಈ ಸಂಖ್ಯೆಯು ಕಳೆದ ವರ್ಷದಲ್ಲಿ ಮೊದಲ ಅಲೆಯ ಸಮಯದಲ್ಲಿ ಸಾವಿಗೀಡಾದವರ ಸಂಖ್ಯೆಗಿಂತ ಸುಮಾರು ನಾಲ್ಕು ಪಟ್ಟು ಹೆಚ್ಚಾಗಿದೆ. ಸೆಪ್ಟೆಂಬರ್ 16, 2020 ರ ಹೊತ್ತಿಗೆ, ಈ ಜಿಲ್ಲೆಗಳಲ್ಲಿ 9,555 ಜನರು ಮೃತಪಟ್ಟಿದ್ದರು.

ಬಿಆರ್‌ಜಿಎಫ್ ಅಡಿಯಲ್ಲಿರುವ 272 ಜಿಲ್ಲೆಗಳಲ್ಲಿ ಸುಮಾರು 54% ಜಿಲ್ಲೆಗಳು ಕೇವಲ ಐದು ರಾಜ್ಯಗಳಿಗೆ ಸೇರಿದೆ. ಅವುಗಳೆಂದರೆ: ಬಿಹಾರ-38, ಉತ್ತರ ಪ್ರದೇಶ-35, ಮಧ್ಯಪ್ರದೇಶ – 30, ಜಾರ್ಖಂಡ್ – 23 ಮತ್ತು ಒಡಿಶಾದ 20 ಜಿಲ್ಲೆಗಳು. ಈ ರಾಜ್ಯಗಳೆ ದೇಶದ ಪ್ರಮುಖ ನಗರಗಳಿಗೆ ಹೆಚ್ಚಿನ ವಲಸೆ ಕಾರ್ಮಿಕರನ್ನು ಒದಗಿಸುತ್ತವೆ.

ಇದನ್ನೂ ಓದಿ: ಕಂಗನಾ ರಾಣಾವತ್‌ಗೆ ಕೊರೊನಾ ಪಾಸಿಟಿವ್: ವೈರಸ್ ನಾಶಗೊಳಿಸುತ್ತೇನೆ ಎಂದ ನಟಿ!

ಕೊರೊನಾ ವೈರಸ್ ಪ್ರಕರಣಗಳ ನಗರ-ಗ್ರಾಮೀಣ ವಿಭಜನೆಯು ನೇರವಾಗಿ ಲಭ್ಯವಿಲ್ಲದಿದ್ದರೂ, ಬಿಆರ್‌ಜಿಎಫ್ ಜಿಲ್ಲೆಗಳಲ್ಲಿನ ಪ್ರಕರಣಗಳು ಮತ್ತು ಸಾವುಗಳ ವಿಶ್ಲೇಷಣೆಯು ಭಾರತದಲ್ಲಿ ಗ್ರಾಮೀಣ ಹರಡುವಿಕೆಯನ್ನು ಸೂಚಿಸುತ್ತದೆ.

ಒಟ್ಟಿನಲ್ಲಿ ಹೇಳುವುದಾದರೆ, 243 ಜಿಲ್ಲೆಗಳಲ್ಲಿನ ಸೋಂಕುಗಳ ಸಂಖ್ಯೆ ಮೊದಲ ಮತ್ತು ಎರಡನೆಯ ಅಲೆಗಳ ನಡುವೆ ನಾಲ್ಕು ಪಟ್ಟು ಹೆಚ್ಚಾಗಿದೆ. ಆದರೆ ದೇಶದ ಒಟ್ಟು ಸೋಂಕುಗಳ ಶೇಕಡಾವಾರು ಏರಿಕೆಯ ಪ್ರಮಾಣವು ಕೇವಲ 18.6% ರಷ್ಟಿದೆ. ಆದರೆ ಈ ಜಿಲ್ಲೆಗಳಲ್ಲಿ ಸಾವುಗಳು ಗಮನಾರ್ಹವಾಗಿ ಏರಿಕೆಯಾಗಿದೆ.

ಈ 272 ಜಿಲ್ಲೆಗಳಲ್ಲಿ ಹೆಚ್ಚಿನ ಜಿಲ್ಲೆಗಳು ಮೂಲಭೂತ ಆರೋಗ್ಯ ಸೌಲಭ್ಯಗಳನ್ನು ಮಾತ್ರ ಹೊಂದಿವೆ. ರಾಜ್ಯಗಳು ನಿರ್ಮಿಸುತ್ತಿರುವ ಹೊಸ ಮೂಲಸೌಕರ್ಯಗಳು ಹೆಚ್ಚಾಗಿ ದೊಡ್ಡ ಪಟ್ಟಣಗಳು ​​ಮತ್ತು ನಗರಗಳಲ್ಲಿವೆ. ಇದರ ಪರಿಣಾಮವಾಗಿ, ಈ ಜಿಲ್ಲೆಗಳಿಂದ ಹತ್ತಿರದ ದೊಡ್ಡ ಪಟ್ಟಣಕ್ಕೆ ಹೆಚ್ಚಿನ ಸಂಖ್ಯೆಯ ರೋಗಿಗಳು ಬರುತ್ತಿದ್ದಾರೆ, ಇದು ಪಟ್ಟಣಗಳು ​​ಮತ್ತು ನಗರಗಳಲ್ಲಿ ಈಗಾಗಲೇ ಒತ್ತಡಕ್ಕೊಳಗಾದ ಮೂಲಸೌಕರ್ಯಗಳ ಮೇಲೆ ಹೊರೆಯನ್ನು ಹೆಚ್ಚಿಸುತ್ತಿದೆ.

ಇದನ್ನೂ ಓದಿ: ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...