Homeಕರೋನಾ ತಲ್ಲಣಕೊರೊನಾ ಎರಡನೇ ಅಲೆ ಗ್ರಾಮೀಣ ಭಾರತಕ್ಕೆ: ಪ್ರಕರಣಗಳು ಮತ್ತು ಸಾವುಗಳು ನಾಲ್ಕು ಪಟ್ಟು ಹೆಚ್ಚಳ!

ಕೊರೊನಾ ಎರಡನೇ ಅಲೆ ಗ್ರಾಮೀಣ ಭಾರತಕ್ಕೆ: ಪ್ರಕರಣಗಳು ಮತ್ತು ಸಾವುಗಳು ನಾಲ್ಕು ಪಟ್ಟು ಹೆಚ್ಚಳ!

- Advertisement -
- Advertisement -

ಕೊರೊನಾ ಎರಡನೇ ಅಲೆಯ ಪ್ರಕರಣಗಳು ಗ್ರಾಮೀಣ ಭಾರತದಲ್ಲಿ ಉಲ್ಬಣಗೊಂಡಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮುಗಿದ ಮೊದಲ ಅಲೆಗೆ ಹೋಲಿಸಿದರೆ, ಭಾರತದ ಒಳನಾಡು ಅಥವಾ ಹಿಂದುಳಿದ ಪ್ರದೇಶಗಳಲ್ಲಿ ಸೋಂಕಿನ ಪ್ರಕರಣಗಳು ಮತ್ತು ಅದರಿಂದಾಗಿ ಮೃತಪಟ್ಟವರ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದು ವರದಿಯಾಗಿದೆ.

ಹಿಂದುಳಿದ ಪ್ರದೇಶ ಅನುದಾನ ನಿಧಿ (ಬಿಆರ್‌ಜಿಎಫ್) ವ್ಯಾಪ್ತಿಗೆ 272 ಜಿಲ್ಲೆಗಳು ಒಳಪಡುತ್ತದೆ. ಇದರಲ್ಲಿ 243 ಜಿಲ್ಲೆಗಳ ಮಾಹಿತಿ ಲಭ್ಯವಿದ್ದು, ಈ ಮಾಹಿತಿಯಂತೆ ಮೇ 5 ರ ಹೊತ್ತಿಗೆ ಇಲ್ಲಿನ 39.16 ಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ. ಕೊರೊನಾ ಮೊದಲ ಅಲೆಯ ಉತ್ತುಂಗದ ಸಮಯವಾದ ಸೆಪ್ಟೆಂಬರ್ 16, 2020 ರಲ್ಲಿ ಈ ಜಿಲ್ಲೆಗಳಲ್ಲಿ 9.5 ಲಕ್ಷ ಸೋಂಕುಗಳಷ್ಟೇ ಇದ್ದವು. ಇದಕ್ಕೆ ಹೋಲಿಸಿದರೆ ಪ್ರಸ್ತುತ ಪ್ರಕರಣಗಳು ನಾಲ್ಕು ಪಟ್ಟು ಹೆಚ್ಚಾಗಿದೆ.

ಇದನ್ನೂ ಓದಿ: ನಮ್ಮನ್ನು ನೋಡಿ ನಗುತ್ತಿದ್ದರೆ, ಮುಂಬೈ ಮಾದರಿಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

ಈ ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳು ಕೂಡಾ ಎರಡನೇ ಅಲೆಯಲ್ಲಿ ಹೆಚ್ಚಾಗಿದ್ದು, ಗರಿಷ್ಠ ಮಟ್ಟದಲ್ಲಿದೆ. ಸಕ್ರಿಯ ಸೋಂಕಿತರು ಇದೀಗ ಮೊದಲ ಅಲೆಗಿಂತ 4.2 ಪಟ್ಟು ಹೆಚ್ಚಾಗಿದ್ದಾರೆ. ಈ ಜಿಲ್ಲೆಗಳಲ್ಲಿ ಪ್ರಸ್ತುತ 7.15 ಲಕ್ಷಕ್ಕೂ ಹೆಚ್ಚು ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳು ಹೆಚ್ಚಾಗಿ ಇಲ್ಲದೆ ಇರುವುದರಿಂದ ಇದು ಜನರನ್ನು ತೀವ್ರ ಸಂಕಷ್ಟಕ್ಕೆ ಈಡಾಗಿಸುತ್ತದೆ.

ಇದರ ಪ್ರತಿಫಲವೆ ಈ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಸಾವುಗಳು ವರದಿಯಾಗಿವೆ. ಮೇ 5 ರ ಹೊತ್ತಿಗೆ, ಈ 243 ಜಿಲ್ಲೆಗಳು ಒಟ್ಟು 36,523 ಸಾವುಗಳನ್ನು ವರದಿಯಾಗಿವೆ. ಈ ಸಂಖ್ಯೆಯು ಕಳೆದ ವರ್ಷದಲ್ಲಿ ಮೊದಲ ಅಲೆಯ ಸಮಯದಲ್ಲಿ ಸಾವಿಗೀಡಾದವರ ಸಂಖ್ಯೆಗಿಂತ ಸುಮಾರು ನಾಲ್ಕು ಪಟ್ಟು ಹೆಚ್ಚಾಗಿದೆ. ಸೆಪ್ಟೆಂಬರ್ 16, 2020 ರ ಹೊತ್ತಿಗೆ, ಈ ಜಿಲ್ಲೆಗಳಲ್ಲಿ 9,555 ಜನರು ಮೃತಪಟ್ಟಿದ್ದರು.

ಬಿಆರ್‌ಜಿಎಫ್ ಅಡಿಯಲ್ಲಿರುವ 272 ಜಿಲ್ಲೆಗಳಲ್ಲಿ ಸುಮಾರು 54% ಜಿಲ್ಲೆಗಳು ಕೇವಲ ಐದು ರಾಜ್ಯಗಳಿಗೆ ಸೇರಿದೆ. ಅವುಗಳೆಂದರೆ: ಬಿಹಾರ-38, ಉತ್ತರ ಪ್ರದೇಶ-35, ಮಧ್ಯಪ್ರದೇಶ – 30, ಜಾರ್ಖಂಡ್ – 23 ಮತ್ತು ಒಡಿಶಾದ 20 ಜಿಲ್ಲೆಗಳು. ಈ ರಾಜ್ಯಗಳೆ ದೇಶದ ಪ್ರಮುಖ ನಗರಗಳಿಗೆ ಹೆಚ್ಚಿನ ವಲಸೆ ಕಾರ್ಮಿಕರನ್ನು ಒದಗಿಸುತ್ತವೆ.

ಇದನ್ನೂ ಓದಿ: ಕಂಗನಾ ರಾಣಾವತ್‌ಗೆ ಕೊರೊನಾ ಪಾಸಿಟಿವ್: ವೈರಸ್ ನಾಶಗೊಳಿಸುತ್ತೇನೆ ಎಂದ ನಟಿ!

ಕೊರೊನಾ ವೈರಸ್ ಪ್ರಕರಣಗಳ ನಗರ-ಗ್ರಾಮೀಣ ವಿಭಜನೆಯು ನೇರವಾಗಿ ಲಭ್ಯವಿಲ್ಲದಿದ್ದರೂ, ಬಿಆರ್‌ಜಿಎಫ್ ಜಿಲ್ಲೆಗಳಲ್ಲಿನ ಪ್ರಕರಣಗಳು ಮತ್ತು ಸಾವುಗಳ ವಿಶ್ಲೇಷಣೆಯು ಭಾರತದಲ್ಲಿ ಗ್ರಾಮೀಣ ಹರಡುವಿಕೆಯನ್ನು ಸೂಚಿಸುತ್ತದೆ.

ಒಟ್ಟಿನಲ್ಲಿ ಹೇಳುವುದಾದರೆ, 243 ಜಿಲ್ಲೆಗಳಲ್ಲಿನ ಸೋಂಕುಗಳ ಸಂಖ್ಯೆ ಮೊದಲ ಮತ್ತು ಎರಡನೆಯ ಅಲೆಗಳ ನಡುವೆ ನಾಲ್ಕು ಪಟ್ಟು ಹೆಚ್ಚಾಗಿದೆ. ಆದರೆ ದೇಶದ ಒಟ್ಟು ಸೋಂಕುಗಳ ಶೇಕಡಾವಾರು ಏರಿಕೆಯ ಪ್ರಮಾಣವು ಕೇವಲ 18.6% ರಷ್ಟಿದೆ. ಆದರೆ ಈ ಜಿಲ್ಲೆಗಳಲ್ಲಿ ಸಾವುಗಳು ಗಮನಾರ್ಹವಾಗಿ ಏರಿಕೆಯಾಗಿದೆ.

ಈ 272 ಜಿಲ್ಲೆಗಳಲ್ಲಿ ಹೆಚ್ಚಿನ ಜಿಲ್ಲೆಗಳು ಮೂಲಭೂತ ಆರೋಗ್ಯ ಸೌಲಭ್ಯಗಳನ್ನು ಮಾತ್ರ ಹೊಂದಿವೆ. ರಾಜ್ಯಗಳು ನಿರ್ಮಿಸುತ್ತಿರುವ ಹೊಸ ಮೂಲಸೌಕರ್ಯಗಳು ಹೆಚ್ಚಾಗಿ ದೊಡ್ಡ ಪಟ್ಟಣಗಳು ​​ಮತ್ತು ನಗರಗಳಲ್ಲಿವೆ. ಇದರ ಪರಿಣಾಮವಾಗಿ, ಈ ಜಿಲ್ಲೆಗಳಿಂದ ಹತ್ತಿರದ ದೊಡ್ಡ ಪಟ್ಟಣಕ್ಕೆ ಹೆಚ್ಚಿನ ಸಂಖ್ಯೆಯ ರೋಗಿಗಳು ಬರುತ್ತಿದ್ದಾರೆ, ಇದು ಪಟ್ಟಣಗಳು ​​ಮತ್ತು ನಗರಗಳಲ್ಲಿ ಈಗಾಗಲೇ ಒತ್ತಡಕ್ಕೊಳಗಾದ ಮೂಲಸೌಕರ್ಯಗಳ ಮೇಲೆ ಹೊರೆಯನ್ನು ಹೆಚ್ಚಿಸುತ್ತಿದೆ.

ಇದನ್ನೂ ಓದಿ: ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...