Homeಮುಖಪುಟಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

- Advertisement -
- Advertisement -

ಕೊರೊನಾ ವಿರುದ್ದದ ಹೋರಾಟಕ್ಕೆ ನೆರೆಹೊರೆಯ ಸಣ್ಣ ದೇಶಗಳು ಭಾರತಕ್ಕೆ ಸಹಾಯ ನೀಡುತ್ತಿದೆ, ಆದರೆ ಕೇಂದ್ರದ ಮೋದಿ ಸರ್ಕಾರ ಮಾತ್ರ ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಬಹುಕೋಟಿಯ ಸೆಂಟ್ರಲ್ ವಿಸ್ಟಾ ಯೋಜನೆಯ ಕೆಲಸವನ್ನು ನಿಲ್ಲಿಸಲು ಕೂಡಾ ಸಿದ್ಧವಾಗಿಲ್ಲ ಎಂದು ಶಿವಸೇನೆ ಶನಿವಾರ ಕೇಂದ್ರದ ವಿರುದ್ದ ಕಿಡಿ ಕಾರಿದೆ.

ಹಿಂದಿನ ಪ್ರಧಾನ ಮಂತ್ರಿಗಳಾದ ಪಂಡಿತ್ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಮತ್ತು ಮನಮೋಹನ್ ಸಿಂಗ್ ಸೇರಿದಂತೆ ಕಳೆದ 70 ವರ್ಷಗಳಲ್ಲಿ ನಿರ್ಮಿಸಲಾದ ವ್ಯವಸ್ಥೆಯೆ ಈ ಕಠಿಣ ಸಂದರ್ಭವನ್ನು ಎದುರಿಸಲು ದೇಶಕ್ಕೆ ಸಹಾಯ ಮಾಡಿದೆ ಎಂದು ಶಿವಸೇನೆ ಹೇಳಿದೆ.

ಇದನ್ನೂ ಓದಿ: ನಮ್ಮನ್ನು ನೋಡಿ ನಗುತ್ತಿದ್ದರೆ, ಮುಂಬೈ ಮಾದರಿಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

“ದೇಶದಲ್ಲಿ ಕೊರೊನಾ ವೈರಸ್ ಹರಡುವ ವೇಗದಿಂದಾಗಿ ಭಾರತವು ಜಗತ್ತಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ಯುನಿಸೆಫ್ ಆತಂಕ ವ್ಯಕ್ತಪಡಿಸಿದೆ. ಅದು ಕೊರೊನಾ ವಿರುದ್ಧದ ಹೋರಾಟದಲ್ಲಿ ಗರಿಷ್ಠ ಸಂಖ್ಯೆಯ ದೇಶಗಳು ಭಾರತಕ್ಕೆ ಸಹಾಯ ಮಾಡಬೇಕೆಂದು ಮನವಿ ಮಾಡಿದೆ. ಬಾಂಗ್ಲಾದೇಶ 10,000 ರೆಮ್‌ಡೆಸಿವಿರ್ ಬಾಟಲುಗಳನ್ನು ಕಳುಹಿಸಿದರೆ, ಭೂತಾನ್ ವೈದ್ಯಕೀಯ ಆಮ್ಲಜನಕವನ್ನು ಕಳುಹಿಸಿದೆ. ನೇಪಾಳ, ಮ್ಯಾನ್ಮಾರ್ ಮತ್ತು ಶ್ರೀಲಂಕಾ ಸಹ ‘ಆತ್ಮನಿರ್ಭರ್’ ಭಾರತಕ್ಕೆ ಸಹಾಯವನ್ನು ನೀಡಿವೆ” ಎಂದು ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿನ ಸಂಪಾದಕೀಯದಲ್ಲಿ ಪಕ್ಷವು ತಿಳಿಸಿದೆ.

“ಸ್ಪಷ್ಟವಾಗಿ ಹೇಳುವುದಾದರೆ, ನೆಹರೂ-ಗಾಂಧಿ ನಿರ್ಮಿಸಿದ ವ್ಯವಸ್ಥೆಯಲ್ಲಿ ಭಾರತ ಉಳಿದುಕೊಂಡಿದೆ. ಅನೇಕ ಬಡ ದೇಶಗಳು ಭಾರತಕ್ಕೆ ಸಹಾಯವನ್ನು ನೀಡುತ್ತಿವೆ. ಈ ಹಿಂದೆ ಪಾಕಿಸ್ತಾನ, ರುವಾಂಡಾ ಮತ್ತು ಕಾಂಗೋ ಮುಂತಾದ ದೇಶಗಳು ಇತರರಿಂದ ಸಹಾಯ ಪಡೆಯುತ್ತಿದ್ದವು. ಆದರೆ ಇಂದಿನ ಆಡಳಿತಗಾರರ ತಪ್ಪು ನೀತಿಗಳಿಂದಾಗಿ ಭಾರತವು ಈಗ ಆ ಪರಿಸ್ಥಿತಿಯನ್ನು ಎದುರಿಸುತ್ತಿದೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ರಾಜ್ಯಕ್ಕೆ ಆಮ್ಲಜನಕ ನೀಡುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ- ’ಬೆಡ್’ ವಿಚಾರದಲ್ಲೇ ಇರುವ BJP ಸಂಸದರು!

ಆದರೆ ಈ ಬಡ ದೇಶಗಳು ಭಾರತಕ್ಕೆ ತಮ್ಮದೇ ಆದ ರೀತಿಯಲ್ಲಿ ಸಹಾಯ ಮಾಡುತ್ತಿದ್ದರೆ, ದೆಹಲಿಯಲ್ಲಿನ 20,000 ಕೋಟಿ ಮೌಲ್ಯದ ಸೆಂಟ್ರಲ್ ವಿಸ್ಟಾದ ಯೋಜನೆಯನ್ನು ನಿಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಸಿದ್ಧರಿಲ್ಲ ಎಂದು ಶಿವಸೇನೆ ಹೇಳಿದೆ.

ಒಂದು ಕಡೆ ಭಾರತವು ಬಾಂಗ್ಲಾದೇಶ, ಶ್ರೀಲಂಕಾ ಮತ್ತು ಭೂತಾನ್ ಮುಂತಾದ ದೇಶಗಳ ಸಹಾಯವನ್ನು ಸ್ವೀಕರಿಸುತ್ತಿದೆ, ಮತ್ತೊಂದೆಡೆ ಬಹು ಕೋಟಿಯ ಸೆಂಟ್ರಲ್ ವಿಸ್ಟಾ ಯೋಜನೆಯ ಕೆಲಸವನ್ನು ನಿಲ್ಲಿಸಲು ಪ್ರಧಾನಿ ಮೋದಿ ಸಿದ್ಧರಿಲ್ಲ ಎಂಬ ಬಗ್ಗೆ ಯಾರೂ ವಿಷಾದ ವ್ಯಕ್ತಪಡಿಸುತ್ತಿಲ್ಲ ಎಂದು ಪಕ್ಷವು ಆಶ್ಚರ್ಯ ವ್ಯಕ್ತಪಡಿಸಿದೆ.

ಕೊರೊನಾ ಎರಡನೇ ಅಲೆಯ ವಿರುದ್ದ ಜಗತ್ತು ಹೋರಾಡುತ್ತಿದ್ದರೆ, ಮೂರನೇ ಅಲೆವು ಇದಕ್ಕಿಂತ ಹೆಚ್ಚು ತೀವ್ರವಾಗಿರುತ್ತದೆ ಎಂದು ತಜ್ಞರು ಊಹಿಸಿದ್ದಾರೆ ಎಂದು ಶಿವಸೇನೆ ಹೇಳಿದೆ. ಆದರೆ ಆಡಳಿತಾರೂಢ ಬಿಜೆಪಿ ಇಂದಿಗೂ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿಯನ್ನು ಮೂಲೆಗುಂಪು ಮಾಡಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...