Homeಕರೋನಾ ತಲ್ಲಣಕೋವಿಡ್ ನಿರ್ವಹಣೆಗೆ ಕಾರ್ಯಪಡೆ ನೇಮಿಸಿದ ಸುಪ್ರೀಂ: ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ!

ಕೋವಿಡ್ ನಿರ್ವಹಣೆಗೆ ಕಾರ್ಯಪಡೆ ನೇಮಿಸಿದ ಸುಪ್ರೀಂ: ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ!

- Advertisement -
- Advertisement -

ವೈದ್ಯಕೀಯ ಆಮ್ಲಜನಕದ ಲಭ್ಯತೆ ಮತ್ತು ವಿತರಣೆಯನ್ನು ನಿರ್ಣಯಿಸಲು 12 ಸದಸ್ಯರ ರಾಷ್ಟ್ರೀಯ ಕಾರ್ಯಪಡೆಯೊಂದನ್ನು ಸುಪ್ರೀಂ ಕೋರ್ಟ್ ಸ್ಥಾಪಿಸಿದೆ. ವೈಜ್ಞಾನಿಕವಾಗಿ, ತರ್ಕಬದ್ಧವಾಗಿ ಮತ್ತು ನ್ಯಾಯಯುತವಾಗಿ ದೇಶಾದ್ಯಂತ ಕೋವಿಡ್‌ಗೆ ಚಿಕಿತ್ಸೆ ನೀಡಲು ಅಗತ್ಯವಾದ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಕಾರ್ಯಪಡೆ ಸೂಚಿಸುತ್ತದೆ.

ಕಳೆದ ತಿಂಗಳಿನಿಂದ ಸುಪ್ರೀಂಕೋರ್ಟ್, ದೆಹಲಿ ಹೈಕೋರ್ಟ್, ಕರ್ನಾಟಕ ಹೈಕೋರ್ಟ್ ಸೇರಿದಂತೆ ಹಲವು ಕೋರ್ಟ್‌ಗಳು ಕೇಂದ್ರ ಸರ್ಕಾರದ ವೈಫಲ್ಯವನ್ನು ಟೀಕಿಸುತ್ತ ಬಂದಿದ್ದು, ಈಗ ಕಾರ್ಯಪಡೆ ನೇಮಕವು ಕೇಂದ್ರದ ಸತತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

‘ಅದೇನು ಮಾಡುತ್ತೀರೋ ಗೊತ್ತಿಲ್ಲ, ಆಮ್ಲಜನಕ ಒದಗಿಸಿ…. ಭಿಕ್ಷೆಯನ್ನಾದರೂ ಬೇಡಿ, ಸಾಲವನ್ನಾದರೂ ಮಾಡಿ, ಕೊನೆಗೆ ಕದ್ದಾದರೂ ತನ್ನಿ’ ಎಂದು ದೆಹಲಿ ಹೈಕೋರ್ಟ್ ಈ ಹಿಂದೆ ಕಿಡಿಕಾರಿತ್ತು.

ಕರ್ನಾಟಕಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸಿ ಎಂದು ಕೇಂದ್ರಕ್ಕೆ ರಾಜ್ಯ ಹೈಕೋರ್ಟ್ ಆದೇಶಿಸಿತ್ತು. ಆದರೆ ಇದರ ವಿರುದ್ಧ ಸುಪ್ರೀಂಕೋರ್ಟಿಗೆ ಹೋಗಿದ್ದ ಕೇಂದ್ರ ಸರ್ಕಾರದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್ ರಾಜ್ಯ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿತ್ತು.

ಪ್ರತಿದಿನವೂ ದೆಹಲಿ ಹೈಕೋರ್ಟ್ ಮತ್ತು ಸುಪ್ರೀಕೋರ್ಟಿನಲ್ಲಿ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ ಕನಿಷ್ಠ ಒಂದಾರೂ ವಿಚಾರಣೆ ನಡೆಯುತ್ತ ಬಂದಿವೆ. ಪ್ರತಿ ಸಲವೂ ಈ ಕೋರ್ಟುಗಳು ಕೇಂದ್ರದ ಜವಾಬ್ದಾರಿಯನ್ನು ನೆನಪಿಸುತ್ತ, ಕೆಲವೊಮ್ಮೆ ಎಚ್ಚರಿಸುತ್ತ ಬಂದಿದ್ದವು. ಆದರೆ ಕೇಂದ್ರ ಸರ್ಕಾರದ ಸತತ ವೈಫಲ್ಯಗಳು, ತಾರತಮ್ಯ ನೀತಿಗಳನ್ನು ನೋಡಿ ರೋಸಿದ ಸುಪ್ರೀಂಕೋರ್ಟ್ 12 ತಜ್ಞರ ಕಾರ್ಯಪಡೆಯನ್ನು ನೇಮಕ ಮಾಡಿದೆ.

ವಿವಿಧ ರಾಜ್ಯಗಳಿಗೆ ಕೇಂದ್ರದ ಆಮ್ಲಜನಕದ ಹಂಚಿಕೆಯನ್ನು ಪುನರುಜ್ಜೀವನಗೊಳಿಸುವಂತೆ ಕಾರ್ಯಪಡೆ ಸ್ಥಾಪಿಸಲು ಉನ್ನತ ನ್ಯಾಯಾಲಯ ಆದೇಶಿಸಿದೆ. ಆ ಸಮಯದಲ್ಲಿ ಕೇಂದ್ರವು ಒಪ್ಪಿಗೆ ನೀಡಿತು, ಆದರೆ ಲೆಕ್ಕಪರಿಶೋಧನೆ ನಡೆಸಬೇಕೆಂದು ಬಯಸಿತ್ತು, ಆದರೆ ದೆಹಲಿ ಸರ್ಕಾರ ಇದನ್ನು ವಿರೋಧಿಸಿತ್ತು.

ಈ ಆದೇಶ ನೀಡಿದ ಪೀಠದ ನ್ಯಾಯಾಧೀಶರಾದ ಚಂದ್ರಚೂಡ್ ಮತ್ತು ಎಂ.ಆರ್ ಶಾ ಕಾರ್ಯಪಡೆಯ ಪ್ರತಿಯೊಬ್ಬ ಸದಸ್ಯರೊಂದಿಗೆ ಮಾತನಾಡಿದ್ದು, ಒಂದು ವಾರದಲ್ಲಿ ಕೆಲಸ ಪ್ರಾರಂಭವಾಗುವ ನಿರೀಕ್ಷೆಯಿದೆ, ಈ ಕಾರ್ಯಪಡೆ ಕೇಂದ್ರ ಮತ್ತು ನ್ಯಾಯಾಲಯಕ್ಕೆ ವರದಿಗಳನ್ನು ನೀಡಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಇದು ದುರಂತಮಯ ಮಾನವ ಬಿಕ್ಕಟ್ಟನ್ನು ಎದುರಿಸಲು ವಿವಿಧ ಬಗೆಯ ತಜ್ಞತೆ ಉಳ್ಳ ಕಾರ್ಯಪಡೆ ಸದಸ್ಯರು ವೈಜ್ಞಾನಿಕ ಕಾರ್ಯತಂತ್ರಗಳನ್ನು ರೂಪಿಸಲು ಅನುಕೂಲವಾಗಲಿದೆ” ಎಂದು ನ್ಯಾಯಾಲಯವು ಹೇಳಿದೆ.

ಆಂಬ್ಯುಲೆನ್ಸ್‌ಗಳು, ಕೆಳ ಹಂತದ ಕೋವಿಡ್ ಆರೈಕೆ ಸೌಲಭ್ಯಗಳು ಮತ್ತು ಹೋಂ ಐಸೋಲೆಷನ್ ಹೊಂದಿರುವ ರೋಗಿಗಳನ್ನು ಪರಿಗಣಿಸಲು ಕೇಂದ್ರವು ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ತನ್ನ ವಿಚಾರಣೆಯಲ್ಲಿ ಹೇಳಿದೆ.

ಅಂದರೆ, ಸರ್ಕಾರದ ವಿಫಲತೆಯ ಕಾರಣಕ್ಕೆ ಸುಪ್ರೀಂಕೋರ್ಟ್ ರೋಸಿ ಹೋಗಿ ಅನಿವಾರ್ಯವಾಗಿ ಮಧ್ಯಪ್ರವೇಶ ಮಾಡಬೇಕಾಯ್ತು ಅಲ್ಲವೇ? ಸಂಸದೀಯ ಅಥವಾ ಶಾಸಕಾಂಗದ ಕೆಲಸದಲ್ಲಿ ಸುಪ್ರೀಂಕೋರ್ಟ್ ಸಾಧಾರಣವಾಗಿ ಹಸ್ತಕ್ಷೇಪ ಮಾಡುವುದಿಲ್ಲ, ಮಾಡಲೂಬಾರದು ಎಂಬುದು ಸಂವಿಧಾನ ಹೇಳುವ ಪಾಠ. ಆದರೆ, ಪದೇ ಪದೇ ವಿಫಲವಾಗುತ್ತಿರುವ ಸರ್ಕಾರ, ತೀವ್ರವಾಗಿ ಉಲ್ಬಣಗೊಳ್ಳುತ್ತಿರುವ ಸಾಂಕ್ರಾಮಿಕತೆ ಮತ್ತು ವಿವಿಧ ರಾಜ್ಯಗಳಿಂದ ಕೇಳಿ ಬರುತ್ತಿರುವ ಆಕ್ಷೇಪಗಳನ್ನು ಗಮನಿಸಿ ಸುಪ್ರೀಂಕೋರ್ಟ್ ಪೀಠ ಈ ತೀರ್ಮಾನಕ್ಕೆ ಬಂದಿದೆ. ಇದು ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ.
ಕಳೆದ ವರ್ಷದಿಂದ ಕೇಂದ್ರ ಸರ್ಕಾರವೇ ಒಂದು ತಜ್ಞರ ಸಮಿತಿ ನೇಮಿಸಿದೆ. ಅದು ಕಾಲಕಾಲಕ್ಕೆ ಸಲಹೆ ನೀಡುತ್ತ ಬಂದಿದೆ. ಇನ್ನೊಂದು ಕಡೆ ನೀತಿ ಆಯೋಗ ಕೂಡ ಕೇಂದ್ರ ಸರ್ಕಾರಕ್ಕೆ ನಿರಂತರ ವರದಿಗಳನ್ನು ಸಲ್ಲಿಸುತ್ತಲೇ ಬಂದಿದೆ. ಹಿರಿಯ ತಜ್ಞರು, ಪತ್ರಕರ್ತರು ತಮ್ಮ ಬರಹಗಳಲ್ಲಿ ಕೇಂದ್ರವನ್ನು ಎಚ್ಚರಿಸುತ್ತಲೇ ಬಂದಿದ್ದಾರೆ. ಆದರೂ ಈ ಸರ್ಕಾರದ ತೀರ್ಮಾನಗಳು ಸಾಂಕ್ರಾಮಿಕ ನಿರ್ವಹಣೆಯಲ್ಲಿ ವಿಫಲವಾಗಿವೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬೆಂಗಳೂರಿನ ಸಾಮಾಜಿಕ ಕಳಕಳಿಯ ವಕೀಲರಾದ ರಾಜಲಕ್ಷ್ಮಿ ಅಂಕಲಗಿ, “ಸುಪ್ರೀಂಕೋರ್ಟಿನ ಈ ಮಧ್ಯಸ್ಥಿಕೆಯನ್ನು ಶಾಸಕಾಂಗ-ಕಾರ್ಯಾಂಗದಲ್ಲಿ ಹಸ್ತಕ್ಷೇಪ ಎಂದು ನೋಡಲಾಗದು. ಈ ಮಾನವೀಯ ಬಿಕ್ಕಟ್ಟಿನ ಸಮಯದಲ್ಲಿ ಉನ್ನತ ನ್ಯಾಯಾಲಯ ಸರಿಯಾದ ತೀರ್ಮಾನವನ್ನೇ ಮಾಡಿದೆ. ಇದು ಈ ಸರ್ಕಾರದ ವೈಫಲ್ಯತೆಗೆ ಸಾಕ್ಷಿ ಕೂಡ. ಈ ದೇಶದಲ್ಲಿ ಹಿಂದಿನಿಂದಲೂ ನ್ಯಾಯಾಂಗವು ಆಗಾಗ ‘ನ್ಯಾಯಾಂಗೀಯ ಕ್ರಿಯಾಶೀಲತೆ’ (ಜುಡಿಷಿಯಲ್ ಆಕ್ಟಿವಿಸಂ) ಅನ್ನು ತೋರುತ್ತಲೇ ಬಂದಿದೆ. ಕಳೆದ 7-8 ವರ್ಷಗಳಲ್ಲಿ ಈ ಕ್ರಿಯಾಶೀಲತೆಗೆ ಗರ ಬಡಿದಿತ್ತು. ಈಗ ಅದು ಮತ್ತೆ ಪುನಶ್ಚೇತನಗೊಂಡ ಹಾಗೆ ಕಾಣುತ್ತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

‘ರಫೇಲ್ ವಿಷಯ ಸೇರಿದಂತೆ ಹಲವು ಆಡಳಿತಾತ್ಮಕ ವಿವಾದಗಳಲ್ಲಿ ಸುಪ್ರೀಂ ನಿಲುವು ಟೀಕೆಗಳಿಗೆ ಒಳಗಾಗಿತ್ತು. ಇತ್ತೀಚೆಗೆ ಹಲವು ಹೈಕೋರ್ಟ್‌ಗಳು (ಉದಾಹರಣೆಗೆ, ಚುನಾವಣಾ ಆಯೋಗದ ವಿರುದ್ಧ ಕೊಲೆ ಮೊಕದ್ದಮೆ ಹೂಡಬೇಕು ಎಂಬ ಮದ್ರಾಸ್ ಹೈಕೋರ್ಟ್ ಅಭಿಪ್ರಾಯ) ತುಂಬ ಆಕ್ಟೀವ್ ಆದ ಕಾರಣಕ್ಕೆ ಸುಪ್ರೀಂಕೋರ್ಟ್ ಎಚ್ಚೆತ್ತುಕೊಂಡಿರಬಹುದು ಅಥವಾ ಈ ಮಾನವೀಯ ದುರಂತದ ಚಿತ್ರಗಳು ನ್ಯಾಯಾಧೀಶರ ಮನಕ್ಕೆ ತಟ್ಟಿರಬಹುದು’ ಎಂದು ಅವರು ತಿಳಿಸಿದ್ದಾರೆ.

ತಮ್ಮ ಸುತ್ತಲಿನ ಕೆಲವೇ ಐಎಎಸ್‌ಗಳ ಮಾತನ್ನು ಕೇಳಿಕೊಂಡು ಪ್ರಧಾನಿ ನಿರ್ಣಯ ತೆಗೆದುಕೊಳ್ಳುತ್ತ ಬಂದಿದ್ದಾರೆ. ‘ಪ್ರಧಾನಿಯನ್ನು ಹೊಗಳುವ, ಪ್ರಧಾನಿ ಮನದಾಳದ ಅಭಿಪ್ರಾಯಗಳನ್ನೇ ಹೇಳಿ ಖುಷಿ ಪಡಿಸುವ ಅಧಿಕಾರಿಗಳ ದಂಡು ಪ್ರಧಾನಿಯ ಸುತ್ತ ಇದೆ. ಇದರಲ್ಲಿ ಪ್ರಧಾನಿ ಗುಜರಾತಿನಿಂದ ಕರೆಸಿಕೊಂಡ ‘ನಿಷ್ಠ’ ಅಧಿಕಾರಿಗಳೇ ಜಾಸ್ತಿ ಇದ್ದಾರೆ. ಪಿಎಂಒ ಕೂಡ ಇಂತಹ ಅಧಿಕಾರಿಗಳಿಂದಲೇ ತುಂಬಿದೆ’ ಎಂದು ಕಳೆದ ತಿಂಗಳು ರಾಜಕೀಯ ವಿಶ್ಲೇಷಕ ರಾಮಚಂದ್ರ ಗುಹಾ (ನಾನುಗೌರಿ.ಕಾಂ ನಲ್ಲಿ ಇದರ ಅನುವಾದ ಪ್ರಕಟಿಸಿದ್ದೆವು) ಬರೆದಿದ್ದರು.
ಆಮ್ಲಜನಕ, ಔಷಧಿಗಳು ಮತ್ತು ಆಸ್ಪತ್ರೆಯ ಹಾಸಿಗೆಗಳಲ್ಲಿನ ತೀವ್ರ ಕೊರತೆಯನ್ನು ಇನ್ನಷ್ಟು ಹದಗೆಡಿಸಬಹುದಾದ ಮೂರನೇ ಕೋವಿಡ್ ಅಲೆಗೆ ಕೇಂದ್ರವು ಸಿದ್ಧತೆ ನಡೆಸುತ್ತಿದೆಯೇ ಎಂದು ತಿಳಿಯಲು ನ್ಯಾಯಾಲಯವು ಒತ್ತಾಯಿಸಿತ್ತು ಎಂಬುದನ್ನು ಗಮನಿಸಿದರೆ, ಈ ಸರ್ಕಾರದ ಬಗ್ಗೆ ನ್ಯಾಯಾಲಯಕ್ಕೆ ವಿಶ್ವಾಸವೇ ಹೋದಂತಿದೆ.

ವಿದೇಶಿ ಮಾಧ್ಯಮಗಳು ಮತ್ತು ದೇಸಿ ಸ್ವತಂತ್ರ ಮಾಧ್ಯಮಗಳು ಮೋದಿ ಸರ್ಕಾರದ ವೈಫಲ್ಯಗಳ ವಿರುದ್ಧ ಸುದ್ದಿ ಮಾಡುತ್ತಲೇ ಬಂದಿವೆ. ಆದರೆ ಮೋದಿ ಸರ್ಕಾರ ಇನ್ನು ಎಚ್ಚೆತ್ತುಕೊಂಡಿಲ್ಲದಿರುವುದು ದುರಂತವಾಗಿದೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ; ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...