Homeಕರೋನಾ ತಲ್ಲಣಕೋವಿಡ್ ನಿರ್ವಹಣೆಗೆ ಕಾರ್ಯಪಡೆ ನೇಮಿಸಿದ ಸುಪ್ರೀಂ: ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ!

ಕೋವಿಡ್ ನಿರ್ವಹಣೆಗೆ ಕಾರ್ಯಪಡೆ ನೇಮಿಸಿದ ಸುಪ್ರೀಂ: ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ!

- Advertisement -
- Advertisement -

ವೈದ್ಯಕೀಯ ಆಮ್ಲಜನಕದ ಲಭ್ಯತೆ ಮತ್ತು ವಿತರಣೆಯನ್ನು ನಿರ್ಣಯಿಸಲು 12 ಸದಸ್ಯರ ರಾಷ್ಟ್ರೀಯ ಕಾರ್ಯಪಡೆಯೊಂದನ್ನು ಸುಪ್ರೀಂ ಕೋರ್ಟ್ ಸ್ಥಾಪಿಸಿದೆ. ವೈಜ್ಞಾನಿಕವಾಗಿ, ತರ್ಕಬದ್ಧವಾಗಿ ಮತ್ತು ನ್ಯಾಯಯುತವಾಗಿ ದೇಶಾದ್ಯಂತ ಕೋವಿಡ್‌ಗೆ ಚಿಕಿತ್ಸೆ ನೀಡಲು ಅಗತ್ಯವಾದ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಕಾರ್ಯಪಡೆ ಸೂಚಿಸುತ್ತದೆ.

ಕಳೆದ ತಿಂಗಳಿನಿಂದ ಸುಪ್ರೀಂಕೋರ್ಟ್, ದೆಹಲಿ ಹೈಕೋರ್ಟ್, ಕರ್ನಾಟಕ ಹೈಕೋರ್ಟ್ ಸೇರಿದಂತೆ ಹಲವು ಕೋರ್ಟ್‌ಗಳು ಕೇಂದ್ರ ಸರ್ಕಾರದ ವೈಫಲ್ಯವನ್ನು ಟೀಕಿಸುತ್ತ ಬಂದಿದ್ದು, ಈಗ ಕಾರ್ಯಪಡೆ ನೇಮಕವು ಕೇಂದ್ರದ ಸತತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

‘ಅದೇನು ಮಾಡುತ್ತೀರೋ ಗೊತ್ತಿಲ್ಲ, ಆಮ್ಲಜನಕ ಒದಗಿಸಿ…. ಭಿಕ್ಷೆಯನ್ನಾದರೂ ಬೇಡಿ, ಸಾಲವನ್ನಾದರೂ ಮಾಡಿ, ಕೊನೆಗೆ ಕದ್ದಾದರೂ ತನ್ನಿ’ ಎಂದು ದೆಹಲಿ ಹೈಕೋರ್ಟ್ ಈ ಹಿಂದೆ ಕಿಡಿಕಾರಿತ್ತು.

ಕರ್ನಾಟಕಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸಿ ಎಂದು ಕೇಂದ್ರಕ್ಕೆ ರಾಜ್ಯ ಹೈಕೋರ್ಟ್ ಆದೇಶಿಸಿತ್ತು. ಆದರೆ ಇದರ ವಿರುದ್ಧ ಸುಪ್ರೀಂಕೋರ್ಟಿಗೆ ಹೋಗಿದ್ದ ಕೇಂದ್ರ ಸರ್ಕಾರದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್ ರಾಜ್ಯ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿತ್ತು.

ಪ್ರತಿದಿನವೂ ದೆಹಲಿ ಹೈಕೋರ್ಟ್ ಮತ್ತು ಸುಪ್ರೀಕೋರ್ಟಿನಲ್ಲಿ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ ಕನಿಷ್ಠ ಒಂದಾರೂ ವಿಚಾರಣೆ ನಡೆಯುತ್ತ ಬಂದಿವೆ. ಪ್ರತಿ ಸಲವೂ ಈ ಕೋರ್ಟುಗಳು ಕೇಂದ್ರದ ಜವಾಬ್ದಾರಿಯನ್ನು ನೆನಪಿಸುತ್ತ, ಕೆಲವೊಮ್ಮೆ ಎಚ್ಚರಿಸುತ್ತ ಬಂದಿದ್ದವು. ಆದರೆ ಕೇಂದ್ರ ಸರ್ಕಾರದ ಸತತ ವೈಫಲ್ಯಗಳು, ತಾರತಮ್ಯ ನೀತಿಗಳನ್ನು ನೋಡಿ ರೋಸಿದ ಸುಪ್ರೀಂಕೋರ್ಟ್ 12 ತಜ್ಞರ ಕಾರ್ಯಪಡೆಯನ್ನು ನೇಮಕ ಮಾಡಿದೆ.

ವಿವಿಧ ರಾಜ್ಯಗಳಿಗೆ ಕೇಂದ್ರದ ಆಮ್ಲಜನಕದ ಹಂಚಿಕೆಯನ್ನು ಪುನರುಜ್ಜೀವನಗೊಳಿಸುವಂತೆ ಕಾರ್ಯಪಡೆ ಸ್ಥಾಪಿಸಲು ಉನ್ನತ ನ್ಯಾಯಾಲಯ ಆದೇಶಿಸಿದೆ. ಆ ಸಮಯದಲ್ಲಿ ಕೇಂದ್ರವು ಒಪ್ಪಿಗೆ ನೀಡಿತು, ಆದರೆ ಲೆಕ್ಕಪರಿಶೋಧನೆ ನಡೆಸಬೇಕೆಂದು ಬಯಸಿತ್ತು, ಆದರೆ ದೆಹಲಿ ಸರ್ಕಾರ ಇದನ್ನು ವಿರೋಧಿಸಿತ್ತು.

ಈ ಆದೇಶ ನೀಡಿದ ಪೀಠದ ನ್ಯಾಯಾಧೀಶರಾದ ಚಂದ್ರಚೂಡ್ ಮತ್ತು ಎಂ.ಆರ್ ಶಾ ಕಾರ್ಯಪಡೆಯ ಪ್ರತಿಯೊಬ್ಬ ಸದಸ್ಯರೊಂದಿಗೆ ಮಾತನಾಡಿದ್ದು, ಒಂದು ವಾರದಲ್ಲಿ ಕೆಲಸ ಪ್ರಾರಂಭವಾಗುವ ನಿರೀಕ್ಷೆಯಿದೆ, ಈ ಕಾರ್ಯಪಡೆ ಕೇಂದ್ರ ಮತ್ತು ನ್ಯಾಯಾಲಯಕ್ಕೆ ವರದಿಗಳನ್ನು ನೀಡಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಇದು ದುರಂತಮಯ ಮಾನವ ಬಿಕ್ಕಟ್ಟನ್ನು ಎದುರಿಸಲು ವಿವಿಧ ಬಗೆಯ ತಜ್ಞತೆ ಉಳ್ಳ ಕಾರ್ಯಪಡೆ ಸದಸ್ಯರು ವೈಜ್ಞಾನಿಕ ಕಾರ್ಯತಂತ್ರಗಳನ್ನು ರೂಪಿಸಲು ಅನುಕೂಲವಾಗಲಿದೆ” ಎಂದು ನ್ಯಾಯಾಲಯವು ಹೇಳಿದೆ.

ಆಂಬ್ಯುಲೆನ್ಸ್‌ಗಳು, ಕೆಳ ಹಂತದ ಕೋವಿಡ್ ಆರೈಕೆ ಸೌಲಭ್ಯಗಳು ಮತ್ತು ಹೋಂ ಐಸೋಲೆಷನ್ ಹೊಂದಿರುವ ರೋಗಿಗಳನ್ನು ಪರಿಗಣಿಸಲು ಕೇಂದ್ರವು ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ತನ್ನ ವಿಚಾರಣೆಯಲ್ಲಿ ಹೇಳಿದೆ.

ಅಂದರೆ, ಸರ್ಕಾರದ ವಿಫಲತೆಯ ಕಾರಣಕ್ಕೆ ಸುಪ್ರೀಂಕೋರ್ಟ್ ರೋಸಿ ಹೋಗಿ ಅನಿವಾರ್ಯವಾಗಿ ಮಧ್ಯಪ್ರವೇಶ ಮಾಡಬೇಕಾಯ್ತು ಅಲ್ಲವೇ? ಸಂಸದೀಯ ಅಥವಾ ಶಾಸಕಾಂಗದ ಕೆಲಸದಲ್ಲಿ ಸುಪ್ರೀಂಕೋರ್ಟ್ ಸಾಧಾರಣವಾಗಿ ಹಸ್ತಕ್ಷೇಪ ಮಾಡುವುದಿಲ್ಲ, ಮಾಡಲೂಬಾರದು ಎಂಬುದು ಸಂವಿಧಾನ ಹೇಳುವ ಪಾಠ. ಆದರೆ, ಪದೇ ಪದೇ ವಿಫಲವಾಗುತ್ತಿರುವ ಸರ್ಕಾರ, ತೀವ್ರವಾಗಿ ಉಲ್ಬಣಗೊಳ್ಳುತ್ತಿರುವ ಸಾಂಕ್ರಾಮಿಕತೆ ಮತ್ತು ವಿವಿಧ ರಾಜ್ಯಗಳಿಂದ ಕೇಳಿ ಬರುತ್ತಿರುವ ಆಕ್ಷೇಪಗಳನ್ನು ಗಮನಿಸಿ ಸುಪ್ರೀಂಕೋರ್ಟ್ ಪೀಠ ಈ ತೀರ್ಮಾನಕ್ಕೆ ಬಂದಿದೆ. ಇದು ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ.
ಕಳೆದ ವರ್ಷದಿಂದ ಕೇಂದ್ರ ಸರ್ಕಾರವೇ ಒಂದು ತಜ್ಞರ ಸಮಿತಿ ನೇಮಿಸಿದೆ. ಅದು ಕಾಲಕಾಲಕ್ಕೆ ಸಲಹೆ ನೀಡುತ್ತ ಬಂದಿದೆ. ಇನ್ನೊಂದು ಕಡೆ ನೀತಿ ಆಯೋಗ ಕೂಡ ಕೇಂದ್ರ ಸರ್ಕಾರಕ್ಕೆ ನಿರಂತರ ವರದಿಗಳನ್ನು ಸಲ್ಲಿಸುತ್ತಲೇ ಬಂದಿದೆ. ಹಿರಿಯ ತಜ್ಞರು, ಪತ್ರಕರ್ತರು ತಮ್ಮ ಬರಹಗಳಲ್ಲಿ ಕೇಂದ್ರವನ್ನು ಎಚ್ಚರಿಸುತ್ತಲೇ ಬಂದಿದ್ದಾರೆ. ಆದರೂ ಈ ಸರ್ಕಾರದ ತೀರ್ಮಾನಗಳು ಸಾಂಕ್ರಾಮಿಕ ನಿರ್ವಹಣೆಯಲ್ಲಿ ವಿಫಲವಾಗಿವೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬೆಂಗಳೂರಿನ ಸಾಮಾಜಿಕ ಕಳಕಳಿಯ ವಕೀಲರಾದ ರಾಜಲಕ್ಷ್ಮಿ ಅಂಕಲಗಿ, “ಸುಪ್ರೀಂಕೋರ್ಟಿನ ಈ ಮಧ್ಯಸ್ಥಿಕೆಯನ್ನು ಶಾಸಕಾಂಗ-ಕಾರ್ಯಾಂಗದಲ್ಲಿ ಹಸ್ತಕ್ಷೇಪ ಎಂದು ನೋಡಲಾಗದು. ಈ ಮಾನವೀಯ ಬಿಕ್ಕಟ್ಟಿನ ಸಮಯದಲ್ಲಿ ಉನ್ನತ ನ್ಯಾಯಾಲಯ ಸರಿಯಾದ ತೀರ್ಮಾನವನ್ನೇ ಮಾಡಿದೆ. ಇದು ಈ ಸರ್ಕಾರದ ವೈಫಲ್ಯತೆಗೆ ಸಾಕ್ಷಿ ಕೂಡ. ಈ ದೇಶದಲ್ಲಿ ಹಿಂದಿನಿಂದಲೂ ನ್ಯಾಯಾಂಗವು ಆಗಾಗ ‘ನ್ಯಾಯಾಂಗೀಯ ಕ್ರಿಯಾಶೀಲತೆ’ (ಜುಡಿಷಿಯಲ್ ಆಕ್ಟಿವಿಸಂ) ಅನ್ನು ತೋರುತ್ತಲೇ ಬಂದಿದೆ. ಕಳೆದ 7-8 ವರ್ಷಗಳಲ್ಲಿ ಈ ಕ್ರಿಯಾಶೀಲತೆಗೆ ಗರ ಬಡಿದಿತ್ತು. ಈಗ ಅದು ಮತ್ತೆ ಪುನಶ್ಚೇತನಗೊಂಡ ಹಾಗೆ ಕಾಣುತ್ತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

‘ರಫೇಲ್ ವಿಷಯ ಸೇರಿದಂತೆ ಹಲವು ಆಡಳಿತಾತ್ಮಕ ವಿವಾದಗಳಲ್ಲಿ ಸುಪ್ರೀಂ ನಿಲುವು ಟೀಕೆಗಳಿಗೆ ಒಳಗಾಗಿತ್ತು. ಇತ್ತೀಚೆಗೆ ಹಲವು ಹೈಕೋರ್ಟ್‌ಗಳು (ಉದಾಹರಣೆಗೆ, ಚುನಾವಣಾ ಆಯೋಗದ ವಿರುದ್ಧ ಕೊಲೆ ಮೊಕದ್ದಮೆ ಹೂಡಬೇಕು ಎಂಬ ಮದ್ರಾಸ್ ಹೈಕೋರ್ಟ್ ಅಭಿಪ್ರಾಯ) ತುಂಬ ಆಕ್ಟೀವ್ ಆದ ಕಾರಣಕ್ಕೆ ಸುಪ್ರೀಂಕೋರ್ಟ್ ಎಚ್ಚೆತ್ತುಕೊಂಡಿರಬಹುದು ಅಥವಾ ಈ ಮಾನವೀಯ ದುರಂತದ ಚಿತ್ರಗಳು ನ್ಯಾಯಾಧೀಶರ ಮನಕ್ಕೆ ತಟ್ಟಿರಬಹುದು’ ಎಂದು ಅವರು ತಿಳಿಸಿದ್ದಾರೆ.

ತಮ್ಮ ಸುತ್ತಲಿನ ಕೆಲವೇ ಐಎಎಸ್‌ಗಳ ಮಾತನ್ನು ಕೇಳಿಕೊಂಡು ಪ್ರಧಾನಿ ನಿರ್ಣಯ ತೆಗೆದುಕೊಳ್ಳುತ್ತ ಬಂದಿದ್ದಾರೆ. ‘ಪ್ರಧಾನಿಯನ್ನು ಹೊಗಳುವ, ಪ್ರಧಾನಿ ಮನದಾಳದ ಅಭಿಪ್ರಾಯಗಳನ್ನೇ ಹೇಳಿ ಖುಷಿ ಪಡಿಸುವ ಅಧಿಕಾರಿಗಳ ದಂಡು ಪ್ರಧಾನಿಯ ಸುತ್ತ ಇದೆ. ಇದರಲ್ಲಿ ಪ್ರಧಾನಿ ಗುಜರಾತಿನಿಂದ ಕರೆಸಿಕೊಂಡ ‘ನಿಷ್ಠ’ ಅಧಿಕಾರಿಗಳೇ ಜಾಸ್ತಿ ಇದ್ದಾರೆ. ಪಿಎಂಒ ಕೂಡ ಇಂತಹ ಅಧಿಕಾರಿಗಳಿಂದಲೇ ತುಂಬಿದೆ’ ಎಂದು ಕಳೆದ ತಿಂಗಳು ರಾಜಕೀಯ ವಿಶ್ಲೇಷಕ ರಾಮಚಂದ್ರ ಗುಹಾ (ನಾನುಗೌರಿ.ಕಾಂ ನಲ್ಲಿ ಇದರ ಅನುವಾದ ಪ್ರಕಟಿಸಿದ್ದೆವು) ಬರೆದಿದ್ದರು.
ಆಮ್ಲಜನಕ, ಔಷಧಿಗಳು ಮತ್ತು ಆಸ್ಪತ್ರೆಯ ಹಾಸಿಗೆಗಳಲ್ಲಿನ ತೀವ್ರ ಕೊರತೆಯನ್ನು ಇನ್ನಷ್ಟು ಹದಗೆಡಿಸಬಹುದಾದ ಮೂರನೇ ಕೋವಿಡ್ ಅಲೆಗೆ ಕೇಂದ್ರವು ಸಿದ್ಧತೆ ನಡೆಸುತ್ತಿದೆಯೇ ಎಂದು ತಿಳಿಯಲು ನ್ಯಾಯಾಲಯವು ಒತ್ತಾಯಿಸಿತ್ತು ಎಂಬುದನ್ನು ಗಮನಿಸಿದರೆ, ಈ ಸರ್ಕಾರದ ಬಗ್ಗೆ ನ್ಯಾಯಾಲಯಕ್ಕೆ ವಿಶ್ವಾಸವೇ ಹೋದಂತಿದೆ.

ವಿದೇಶಿ ಮಾಧ್ಯಮಗಳು ಮತ್ತು ದೇಸಿ ಸ್ವತಂತ್ರ ಮಾಧ್ಯಮಗಳು ಮೋದಿ ಸರ್ಕಾರದ ವೈಫಲ್ಯಗಳ ವಿರುದ್ಧ ಸುದ್ದಿ ಮಾಡುತ್ತಲೇ ಬಂದಿವೆ. ಆದರೆ ಮೋದಿ ಸರ್ಕಾರ ಇನ್ನು ಎಚ್ಚೆತ್ತುಕೊಂಡಿಲ್ಲದಿರುವುದು ದುರಂತವಾಗಿದೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ; ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...