Homeಕರೋನಾ ತಲ್ಲಣಕೋವಿಡ್ ನಿರ್ವಹಣೆಗೆ ಕಾರ್ಯಪಡೆ ನೇಮಿಸಿದ ಸುಪ್ರೀಂ: ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ!

ಕೋವಿಡ್ ನಿರ್ವಹಣೆಗೆ ಕಾರ್ಯಪಡೆ ನೇಮಿಸಿದ ಸುಪ್ರೀಂ: ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ!

- Advertisement -
- Advertisement -

ವೈದ್ಯಕೀಯ ಆಮ್ಲಜನಕದ ಲಭ್ಯತೆ ಮತ್ತು ವಿತರಣೆಯನ್ನು ನಿರ್ಣಯಿಸಲು 12 ಸದಸ್ಯರ ರಾಷ್ಟ್ರೀಯ ಕಾರ್ಯಪಡೆಯೊಂದನ್ನು ಸುಪ್ರೀಂ ಕೋರ್ಟ್ ಸ್ಥಾಪಿಸಿದೆ. ವೈಜ್ಞಾನಿಕವಾಗಿ, ತರ್ಕಬದ್ಧವಾಗಿ ಮತ್ತು ನ್ಯಾಯಯುತವಾಗಿ ದೇಶಾದ್ಯಂತ ಕೋವಿಡ್‌ಗೆ ಚಿಕಿತ್ಸೆ ನೀಡಲು ಅಗತ್ಯವಾದ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಕಾರ್ಯಪಡೆ ಸೂಚಿಸುತ್ತದೆ.

ಕಳೆದ ತಿಂಗಳಿನಿಂದ ಸುಪ್ರೀಂಕೋರ್ಟ್, ದೆಹಲಿ ಹೈಕೋರ್ಟ್, ಕರ್ನಾಟಕ ಹೈಕೋರ್ಟ್ ಸೇರಿದಂತೆ ಹಲವು ಕೋರ್ಟ್‌ಗಳು ಕೇಂದ್ರ ಸರ್ಕಾರದ ವೈಫಲ್ಯವನ್ನು ಟೀಕಿಸುತ್ತ ಬಂದಿದ್ದು, ಈಗ ಕಾರ್ಯಪಡೆ ನೇಮಕವು ಕೇಂದ್ರದ ಸತತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

‘ಅದೇನು ಮಾಡುತ್ತೀರೋ ಗೊತ್ತಿಲ್ಲ, ಆಮ್ಲಜನಕ ಒದಗಿಸಿ…. ಭಿಕ್ಷೆಯನ್ನಾದರೂ ಬೇಡಿ, ಸಾಲವನ್ನಾದರೂ ಮಾಡಿ, ಕೊನೆಗೆ ಕದ್ದಾದರೂ ತನ್ನಿ’ ಎಂದು ದೆಹಲಿ ಹೈಕೋರ್ಟ್ ಈ ಹಿಂದೆ ಕಿಡಿಕಾರಿತ್ತು.

ಕರ್ನಾಟಕಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸಿ ಎಂದು ಕೇಂದ್ರಕ್ಕೆ ರಾಜ್ಯ ಹೈಕೋರ್ಟ್ ಆದೇಶಿಸಿತ್ತು. ಆದರೆ ಇದರ ವಿರುದ್ಧ ಸುಪ್ರೀಂಕೋರ್ಟಿಗೆ ಹೋಗಿದ್ದ ಕೇಂದ್ರ ಸರ್ಕಾರದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್ ರಾಜ್ಯ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿತ್ತು.

ಪ್ರತಿದಿನವೂ ದೆಹಲಿ ಹೈಕೋರ್ಟ್ ಮತ್ತು ಸುಪ್ರೀಕೋರ್ಟಿನಲ್ಲಿ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ ಕನಿಷ್ಠ ಒಂದಾರೂ ವಿಚಾರಣೆ ನಡೆಯುತ್ತ ಬಂದಿವೆ. ಪ್ರತಿ ಸಲವೂ ಈ ಕೋರ್ಟುಗಳು ಕೇಂದ್ರದ ಜವಾಬ್ದಾರಿಯನ್ನು ನೆನಪಿಸುತ್ತ, ಕೆಲವೊಮ್ಮೆ ಎಚ್ಚರಿಸುತ್ತ ಬಂದಿದ್ದವು. ಆದರೆ ಕೇಂದ್ರ ಸರ್ಕಾರದ ಸತತ ವೈಫಲ್ಯಗಳು, ತಾರತಮ್ಯ ನೀತಿಗಳನ್ನು ನೋಡಿ ರೋಸಿದ ಸುಪ್ರೀಂಕೋರ್ಟ್ 12 ತಜ್ಞರ ಕಾರ್ಯಪಡೆಯನ್ನು ನೇಮಕ ಮಾಡಿದೆ.

ವಿವಿಧ ರಾಜ್ಯಗಳಿಗೆ ಕೇಂದ್ರದ ಆಮ್ಲಜನಕದ ಹಂಚಿಕೆಯನ್ನು ಪುನರುಜ್ಜೀವನಗೊಳಿಸುವಂತೆ ಕಾರ್ಯಪಡೆ ಸ್ಥಾಪಿಸಲು ಉನ್ನತ ನ್ಯಾಯಾಲಯ ಆದೇಶಿಸಿದೆ. ಆ ಸಮಯದಲ್ಲಿ ಕೇಂದ್ರವು ಒಪ್ಪಿಗೆ ನೀಡಿತು, ಆದರೆ ಲೆಕ್ಕಪರಿಶೋಧನೆ ನಡೆಸಬೇಕೆಂದು ಬಯಸಿತ್ತು, ಆದರೆ ದೆಹಲಿ ಸರ್ಕಾರ ಇದನ್ನು ವಿರೋಧಿಸಿತ್ತು.

ಈ ಆದೇಶ ನೀಡಿದ ಪೀಠದ ನ್ಯಾಯಾಧೀಶರಾದ ಚಂದ್ರಚೂಡ್ ಮತ್ತು ಎಂ.ಆರ್ ಶಾ ಕಾರ್ಯಪಡೆಯ ಪ್ರತಿಯೊಬ್ಬ ಸದಸ್ಯರೊಂದಿಗೆ ಮಾತನಾಡಿದ್ದು, ಒಂದು ವಾರದಲ್ಲಿ ಕೆಲಸ ಪ್ರಾರಂಭವಾಗುವ ನಿರೀಕ್ಷೆಯಿದೆ, ಈ ಕಾರ್ಯಪಡೆ ಕೇಂದ್ರ ಮತ್ತು ನ್ಯಾಯಾಲಯಕ್ಕೆ ವರದಿಗಳನ್ನು ನೀಡಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಇದು ದುರಂತಮಯ ಮಾನವ ಬಿಕ್ಕಟ್ಟನ್ನು ಎದುರಿಸಲು ವಿವಿಧ ಬಗೆಯ ತಜ್ಞತೆ ಉಳ್ಳ ಕಾರ್ಯಪಡೆ ಸದಸ್ಯರು ವೈಜ್ಞಾನಿಕ ಕಾರ್ಯತಂತ್ರಗಳನ್ನು ರೂಪಿಸಲು ಅನುಕೂಲವಾಗಲಿದೆ” ಎಂದು ನ್ಯಾಯಾಲಯವು ಹೇಳಿದೆ.

ಆಂಬ್ಯುಲೆನ್ಸ್‌ಗಳು, ಕೆಳ ಹಂತದ ಕೋವಿಡ್ ಆರೈಕೆ ಸೌಲಭ್ಯಗಳು ಮತ್ತು ಹೋಂ ಐಸೋಲೆಷನ್ ಹೊಂದಿರುವ ರೋಗಿಗಳನ್ನು ಪರಿಗಣಿಸಲು ಕೇಂದ್ರವು ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ತನ್ನ ವಿಚಾರಣೆಯಲ್ಲಿ ಹೇಳಿದೆ.

ಅಂದರೆ, ಸರ್ಕಾರದ ವಿಫಲತೆಯ ಕಾರಣಕ್ಕೆ ಸುಪ್ರೀಂಕೋರ್ಟ್ ರೋಸಿ ಹೋಗಿ ಅನಿವಾರ್ಯವಾಗಿ ಮಧ್ಯಪ್ರವೇಶ ಮಾಡಬೇಕಾಯ್ತು ಅಲ್ಲವೇ? ಸಂಸದೀಯ ಅಥವಾ ಶಾಸಕಾಂಗದ ಕೆಲಸದಲ್ಲಿ ಸುಪ್ರೀಂಕೋರ್ಟ್ ಸಾಧಾರಣವಾಗಿ ಹಸ್ತಕ್ಷೇಪ ಮಾಡುವುದಿಲ್ಲ, ಮಾಡಲೂಬಾರದು ಎಂಬುದು ಸಂವಿಧಾನ ಹೇಳುವ ಪಾಠ. ಆದರೆ, ಪದೇ ಪದೇ ವಿಫಲವಾಗುತ್ತಿರುವ ಸರ್ಕಾರ, ತೀವ್ರವಾಗಿ ಉಲ್ಬಣಗೊಳ್ಳುತ್ತಿರುವ ಸಾಂಕ್ರಾಮಿಕತೆ ಮತ್ತು ವಿವಿಧ ರಾಜ್ಯಗಳಿಂದ ಕೇಳಿ ಬರುತ್ತಿರುವ ಆಕ್ಷೇಪಗಳನ್ನು ಗಮನಿಸಿ ಸುಪ್ರೀಂಕೋರ್ಟ್ ಪೀಠ ಈ ತೀರ್ಮಾನಕ್ಕೆ ಬಂದಿದೆ. ಇದು ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ.
ಕಳೆದ ವರ್ಷದಿಂದ ಕೇಂದ್ರ ಸರ್ಕಾರವೇ ಒಂದು ತಜ್ಞರ ಸಮಿತಿ ನೇಮಿಸಿದೆ. ಅದು ಕಾಲಕಾಲಕ್ಕೆ ಸಲಹೆ ನೀಡುತ್ತ ಬಂದಿದೆ. ಇನ್ನೊಂದು ಕಡೆ ನೀತಿ ಆಯೋಗ ಕೂಡ ಕೇಂದ್ರ ಸರ್ಕಾರಕ್ಕೆ ನಿರಂತರ ವರದಿಗಳನ್ನು ಸಲ್ಲಿಸುತ್ತಲೇ ಬಂದಿದೆ. ಹಿರಿಯ ತಜ್ಞರು, ಪತ್ರಕರ್ತರು ತಮ್ಮ ಬರಹಗಳಲ್ಲಿ ಕೇಂದ್ರವನ್ನು ಎಚ್ಚರಿಸುತ್ತಲೇ ಬಂದಿದ್ದಾರೆ. ಆದರೂ ಈ ಸರ್ಕಾರದ ತೀರ್ಮಾನಗಳು ಸಾಂಕ್ರಾಮಿಕ ನಿರ್ವಹಣೆಯಲ್ಲಿ ವಿಫಲವಾಗಿವೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬೆಂಗಳೂರಿನ ಸಾಮಾಜಿಕ ಕಳಕಳಿಯ ವಕೀಲರಾದ ರಾಜಲಕ್ಷ್ಮಿ ಅಂಕಲಗಿ, “ಸುಪ್ರೀಂಕೋರ್ಟಿನ ಈ ಮಧ್ಯಸ್ಥಿಕೆಯನ್ನು ಶಾಸಕಾಂಗ-ಕಾರ್ಯಾಂಗದಲ್ಲಿ ಹಸ್ತಕ್ಷೇಪ ಎಂದು ನೋಡಲಾಗದು. ಈ ಮಾನವೀಯ ಬಿಕ್ಕಟ್ಟಿನ ಸಮಯದಲ್ಲಿ ಉನ್ನತ ನ್ಯಾಯಾಲಯ ಸರಿಯಾದ ತೀರ್ಮಾನವನ್ನೇ ಮಾಡಿದೆ. ಇದು ಈ ಸರ್ಕಾರದ ವೈಫಲ್ಯತೆಗೆ ಸಾಕ್ಷಿ ಕೂಡ. ಈ ದೇಶದಲ್ಲಿ ಹಿಂದಿನಿಂದಲೂ ನ್ಯಾಯಾಂಗವು ಆಗಾಗ ‘ನ್ಯಾಯಾಂಗೀಯ ಕ್ರಿಯಾಶೀಲತೆ’ (ಜುಡಿಷಿಯಲ್ ಆಕ್ಟಿವಿಸಂ) ಅನ್ನು ತೋರುತ್ತಲೇ ಬಂದಿದೆ. ಕಳೆದ 7-8 ವರ್ಷಗಳಲ್ಲಿ ಈ ಕ್ರಿಯಾಶೀಲತೆಗೆ ಗರ ಬಡಿದಿತ್ತು. ಈಗ ಅದು ಮತ್ತೆ ಪುನಶ್ಚೇತನಗೊಂಡ ಹಾಗೆ ಕಾಣುತ್ತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

‘ರಫೇಲ್ ವಿಷಯ ಸೇರಿದಂತೆ ಹಲವು ಆಡಳಿತಾತ್ಮಕ ವಿವಾದಗಳಲ್ಲಿ ಸುಪ್ರೀಂ ನಿಲುವು ಟೀಕೆಗಳಿಗೆ ಒಳಗಾಗಿತ್ತು. ಇತ್ತೀಚೆಗೆ ಹಲವು ಹೈಕೋರ್ಟ್‌ಗಳು (ಉದಾಹರಣೆಗೆ, ಚುನಾವಣಾ ಆಯೋಗದ ವಿರುದ್ಧ ಕೊಲೆ ಮೊಕದ್ದಮೆ ಹೂಡಬೇಕು ಎಂಬ ಮದ್ರಾಸ್ ಹೈಕೋರ್ಟ್ ಅಭಿಪ್ರಾಯ) ತುಂಬ ಆಕ್ಟೀವ್ ಆದ ಕಾರಣಕ್ಕೆ ಸುಪ್ರೀಂಕೋರ್ಟ್ ಎಚ್ಚೆತ್ತುಕೊಂಡಿರಬಹುದು ಅಥವಾ ಈ ಮಾನವೀಯ ದುರಂತದ ಚಿತ್ರಗಳು ನ್ಯಾಯಾಧೀಶರ ಮನಕ್ಕೆ ತಟ್ಟಿರಬಹುದು’ ಎಂದು ಅವರು ತಿಳಿಸಿದ್ದಾರೆ.

ತಮ್ಮ ಸುತ್ತಲಿನ ಕೆಲವೇ ಐಎಎಸ್‌ಗಳ ಮಾತನ್ನು ಕೇಳಿಕೊಂಡು ಪ್ರಧಾನಿ ನಿರ್ಣಯ ತೆಗೆದುಕೊಳ್ಳುತ್ತ ಬಂದಿದ್ದಾರೆ. ‘ಪ್ರಧಾನಿಯನ್ನು ಹೊಗಳುವ, ಪ್ರಧಾನಿ ಮನದಾಳದ ಅಭಿಪ್ರಾಯಗಳನ್ನೇ ಹೇಳಿ ಖುಷಿ ಪಡಿಸುವ ಅಧಿಕಾರಿಗಳ ದಂಡು ಪ್ರಧಾನಿಯ ಸುತ್ತ ಇದೆ. ಇದರಲ್ಲಿ ಪ್ರಧಾನಿ ಗುಜರಾತಿನಿಂದ ಕರೆಸಿಕೊಂಡ ‘ನಿಷ್ಠ’ ಅಧಿಕಾರಿಗಳೇ ಜಾಸ್ತಿ ಇದ್ದಾರೆ. ಪಿಎಂಒ ಕೂಡ ಇಂತಹ ಅಧಿಕಾರಿಗಳಿಂದಲೇ ತುಂಬಿದೆ’ ಎಂದು ಕಳೆದ ತಿಂಗಳು ರಾಜಕೀಯ ವಿಶ್ಲೇಷಕ ರಾಮಚಂದ್ರ ಗುಹಾ (ನಾನುಗೌರಿ.ಕಾಂ ನಲ್ಲಿ ಇದರ ಅನುವಾದ ಪ್ರಕಟಿಸಿದ್ದೆವು) ಬರೆದಿದ್ದರು.
ಆಮ್ಲಜನಕ, ಔಷಧಿಗಳು ಮತ್ತು ಆಸ್ಪತ್ರೆಯ ಹಾಸಿಗೆಗಳಲ್ಲಿನ ತೀವ್ರ ಕೊರತೆಯನ್ನು ಇನ್ನಷ್ಟು ಹದಗೆಡಿಸಬಹುದಾದ ಮೂರನೇ ಕೋವಿಡ್ ಅಲೆಗೆ ಕೇಂದ್ರವು ಸಿದ್ಧತೆ ನಡೆಸುತ್ತಿದೆಯೇ ಎಂದು ತಿಳಿಯಲು ನ್ಯಾಯಾಲಯವು ಒತ್ತಾಯಿಸಿತ್ತು ಎಂಬುದನ್ನು ಗಮನಿಸಿದರೆ, ಈ ಸರ್ಕಾರದ ಬಗ್ಗೆ ನ್ಯಾಯಾಲಯಕ್ಕೆ ವಿಶ್ವಾಸವೇ ಹೋದಂತಿದೆ.

ವಿದೇಶಿ ಮಾಧ್ಯಮಗಳು ಮತ್ತು ದೇಸಿ ಸ್ವತಂತ್ರ ಮಾಧ್ಯಮಗಳು ಮೋದಿ ಸರ್ಕಾರದ ವೈಫಲ್ಯಗಳ ವಿರುದ್ಧ ಸುದ್ದಿ ಮಾಡುತ್ತಲೇ ಬಂದಿವೆ. ಆದರೆ ಮೋದಿ ಸರ್ಕಾರ ಇನ್ನು ಎಚ್ಚೆತ್ತುಕೊಂಡಿಲ್ಲದಿರುವುದು ದುರಂತವಾಗಿದೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ; ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...