Homeಮುಖಪುಟಗುಜರಾತ್​: ಗೋಶಾಲೆಯಲ್ಲೇ ಕೋವಿಡ್ ಕೇರ್ ಸೆಂಟರ್ - ಹಾಲು ಗಂಜಲದ ಔಷಧಿ!

ಗುಜರಾತ್​: ಗೋಶಾಲೆಯಲ್ಲೇ ಕೋವಿಡ್ ಕೇರ್ ಸೆಂಟರ್ – ಹಾಲು ಗಂಜಲದ ಔಷಧಿ!

- Advertisement -
- Advertisement -

ಕೊರೊನಾ ಎರಡನೇ ಅಲೆಗೆ ಇಡೀ ದೇಶವೇ ತತ್ತಿರಿಸಿಹೋಗಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳು, ಆಕ್ಸಿಜನ್, ಔಷಧಗಳಿಗೆ ಹಾಹಾಕಾರವೆದ್ದಿದೆ. ಇಂತಹ ಸಂದರ್ಭದಲ್ಲಿ ಗುಜರಾತ್​ನ ಹಳ್ಳಿಯೊಂದರಲ್ಲಿ ಗೋಶಾಲೆಯಲ್ಲೇ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದ್ದು ಹಾಲು ಗಂಜಲದ ಔಷಧಿ ನೀಡಲಾಗುತ್ತಿದೆ ಎಂದು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

ಗುಜರಾತ್​ನ ಬನಸ್ಕಾಂತ ಜಿಲ್ಲೆಯ ದೀಸಾ ತಾಲೂಕಿನ ತೆಟೋಡಾ ಗ್ರಾಮದ ಗೋಶಾಲೆಯಲ್ಲಿ ‘ವೇದಲಕ್ಷಣ ಪಂಚಗವ್ಯ ಆಯುರ್ವೇದ ಕೋವಿಡ್ ಐಷೋಲೇಶನ್ ಕೇಂದ್ರ’ ತೆರೆಯಲಾಗಿದ್ದು ಇದರಲ್ಲಿ ರೋಗಿಗಳಿಗೆ ಹಸುವಿನ ಶುದ್ಧ ಹಾಲು ಮತ್ತು ಗಂಜಲಗಳಿಂದ ತಯಾರಿಸಲಾದ ಔಷಧಗಳ ಆಯುರ್ವೇದ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

“ರೋಗಲಕ್ಷಣಗಳ ತೀವ್ರತೆ ಕಡಿಮೆ ಇರುವ ಕೋವಿಡ್-19 ರೋಗಿಗಳಿಗೆ ಹಸುವಿನ ಹಾಲು, ತುಪ್ಪ ಮತ್ತು ಗಂಜಲದಿಂದ ತಯಾರಿಸಲಾದ ಎಂಟು ಆಯುರ್ವೇದ ಔಷಧಗಳನ್ನ ಇಲ್ಲಿ ನೀಡುತ್ತಿದ್ದೇವೆ. ದೇಸೀ ತಳಿಯ ಹಸುವಿನ ಗಂಜಲದಿಂದ ಮಾಡಿದ ಗೋ ತೀರ್ಥ ಇತ್ಯಾದಿ ಔಷಧಗಳನ್ನ ಕೆಮ್ಮು ನಿವಾರಣೆಗೆ ಬಳಸಲಾಗುತ್ತದೆ. ರೋಗ ನಿರೋಧಕ ಶಕ್ತಿಗಾಗಿ ಹಸು ಹಾಲಿನಿಂದ ಮಾಡಿದ ಚ್ಯವನಪ್ರಾಶವನ್ನ ರೋಗಿಗಳಿಗೆ ನೀಡಲಾಗುತ್ತದೆ” ಎಂದು ಗೋಧಾಮ್ ಮಹಾತೀರ್ಥ ಪಾಠಮೇದ ಎಂಬ ಗೋಶಾಲಾ ಘಟಕದ ಮೋಹನ್ ಜಾಧವ್ ಹೇಳಿದ್ದಾರೆ.

ಗುಜರಾತ್ ಸರ್ಕಾರ ಸ್ಥಳೀಯ ಗ್ರಾಮಗಳ ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್​ಗಳನ್ನ ಸ್ಥಾಪಿಸಲು ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ತೆಟೋಡಾ ಗ್ರಾಮದಲ್ಲಿ ಈ ಐಸೋಲೇಶನ್ ಸೆಂಟರ್ ಸ್ಥಾಪಿಸಲಾಗಿದೆ. ಇಲ್ಲಿ ಚಿಕಿತ್ಸೆ ಸಂಪೂರ್ಣ ಉಚಿತವಿದ್ದು, ಇಬ್ಬರು ಆಯುರ್ವೇದ ವೈದ್ಯರು ಮತ್ತು ಇಬ್ಬರು ಆಲೋಪಥಿ ವೈದ್ಯರು ಇಲ್ಲಿ ಇರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ಬನಸ್ಕಂತ ಜಿಲ್ಲಾಧಿಕಾರಿ ಆನಂದ್ ಪಟೇಲ್ ಮಾತನಾಡಿ “ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲು ಯಾವುದೇ ಅನುಮತಿ ಅಗತ್ಯವಿಲ್ಲದಿದ್ದರೂ, ಅವರು ನಮಗೆ ಮಾಹಿತಿ ನೀಡಿದ್ದರು ಮತ್ತು ನಾವು ಅವರಿಗೆ ಅನುಮತಿ ನೀಡಿದ್ದೇವೆ. ತೆಟೋಡಾ ಗ್ರಾಮದಲ್ಲಿರುವ ಈ ಕೇಂದ್ರವು ಗೋಶಾಲೆಯಲ್ಲಿದೆ” ಎಂದಿದ್ದಾರೆ.


ಇದನ್ನೂ ಓದಿ: 10 ಲಕ್ಷ ಭಾರತೀಯರು ಈಗಾಗಲೇ ಕೋವಿಡ್‌ಗೆ ಬಲಿಯಾಗಿದ್ದಾರೆ, ಶೇ. 80ರಷ್ಟು ಸಾವು ದಾಖಲಾಗುತ್ತಿಲ್ಲ: ಗಣಿತ ತಜ್ಞ ಮುರಾದ್ ಬನಾಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...