Homeಕರೋನಾ ತಲ್ಲಣ10 ಲಕ್ಷ ಭಾರತೀಯರು ಈಗಾಗಲೇ ಕೋವಿಡ್‌ಗೆ ಬಲಿಯಾಗಿದ್ದಾರೆ, ಶೇ. 80ರಷ್ಟು ಸಾವು ದಾಖಲಾಗುತ್ತಿಲ್ಲ: ಗಣಿತ ತಜ್ಞ...

10 ಲಕ್ಷ ಭಾರತೀಯರು ಈಗಾಗಲೇ ಕೋವಿಡ್‌ಗೆ ಬಲಿಯಾಗಿದ್ದಾರೆ, ಶೇ. 80ರಷ್ಟು ಸಾವು ದಾಖಲಾಗುತ್ತಿಲ್ಲ: ಗಣಿತ ತಜ್ಞ ಮುರಾದ್ ಬನಾಜಿ

- Advertisement -
- Advertisement -

ಲಂಡನ್‌ನ ಮಿಡಲ್‌ಸೆಕ್ಸ್ ವಿಶ್ವವಿದ್ಯಾಲಯದ ಹಿರಿಯ ಗಣಿತ ಉಪನ್ಯಾಸಕರೊಬ್ಬರು, ಕರಣ್ ಥಾಪರ್‌ಗೆ ನೀಡಿದ ಸಂದರ್ಶನದಲ್ಲಿ, ಭಾರತದ ಶೇ.80ರಷ್ಟು ಕೋವಿಡ್ ಸಾವುಗಳು ದಾಖಲಾಗಿಲ್ಲ ಅಥವಾ ಅವನ್ನು ಸರ್ಕಾರಗಳು ಮುಚ್ಚಿ ಹಾಕಿವೆ ಎಂದು ಹೇಳಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಮಾರ್ಚ್ 2020ರಿಂದ ಭಾರತದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಪಥವನ್ನು (ಟ್ರಾಜೆಕ್ಟರಿ) ಸೂಕ್ಷ್ಮವಾಗಿ ಗಮನಿಸುತ್ತಿರುವ ಲಂಡನ್‌ನ ಮಿಡಲ್‌ಸೆಕ್ಸ್ ವಿಶ್ವವಿದ್ಯಾಲಯದ ಗಣಿತಶಾಸ್ತ್ರದ ಹಿರಿಯ ಉಪನ್ಯಾಸಕ, ಭಾರತೀಯ ಮೂಲದ ಮುರಾದ್ ಬನಾಜಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

2021ರ ಮೇ 8 ರ ಹೊತ್ತಿಗೆ, ಸರ್ಕಾರದ ಆರೋಗ್ಯ ಇಲಾಖೆಯ ಅಧಿಕೃತ ಸಾವಿನ ಸಂಖ್ಯೆ 2,38,000 ಕ್ಕಿಂತ ಹೆಚ್ಚಿದೆ. ಮುರಾದ್ ಬನಾಜಿ ಹೇಳುವಂತೆ, ದಾಖಲಾಗದ ಸಾವುಗಳು ಐದು ಪಟ್ಟು ಹೆಚ್ಚಿರುವ ಸಾಧ್ಯತೆ ಇದ್ದೇ ಇದೆ, ಒಟ್ಟು ಕೋವಿಡ್ ಸಾವಿನ ಸಂಖ್ಯೆ (ಅಧಿಕೃತ ಮತ್ತು ದಾಖಲೆಯಿಲ್ಲದ ಸಾವುಗಳುನ್ನು ಸೇರಿಸಿ) ಒಂದು ಮಿಲಿಯನ್ (ಹತ್ತು ಲಕ್ಷ) ದಾಟಿದೆ ಎಂದಿದ್ದಾರೆ.

ದಿ ವೈರ್‌ಗಾಗಿ ಕರಣ್ ಥಾಪರ್‌ಗೆ ನೀಡಿದ 33 ನಿಮಿಷಗಳ ಸಂದರ್ಶನದಲ್ಲಿ, ಬನಾಜಿ ಮುಂಬರುವ ತಿಂಗಳುಗಳಲ್ಲಿ ಸಾವಿನ ಸಂಖ್ಯೆ ಹೇಗೆ ಹೆಚ್ಚಾಗುತ್ತದೆ ಎಂಬುದರ ಕುರಿತು ಭಾರತೀಯ ಮತ್ತು ವಿದೇಶಿ ಸಂಸ್ಥೆಗಳ ಅಂದಾಜುಗಳ ಬಗ್ಗೆ ಮಾತನಾಡಿದ್ದಾರೆ.

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನ ಅಂದಾಜಿನ ಪ್ರಕಾರ, ಜೂನ್ ಮಧ್ಯದ ವೇಳೆಗೆ 4,04,000 ಅಧಿಕೃತ ದಾಖಲಾದ ಸಾವುಗಳು ಸಂಭವಿಸಬಹುದು ಎನ್ನುವ ಅವರು, ಇದನ್ನು ಉತ್ಪ್ರೇಕ್ಷೆ ಎಂದು ತಿಳಿಯಬೇಡಿ ಎಂದಿದ್ದಾರೆ.

ವಾಷಿಂಗ್ಟನ್‌ನ ಇನ್‌ಸ್ಟಿಟ್ಯೂಟ್ ಫಾರ್ ಹೆಲ್ತ್ ಮೆಟ್ರಿಕ್ಸ್ ಅಂಡ್ ಎವಾಲ್ಯುಯೇಷನ್ (ಐಎಚ್‌ಎಂಇ) ಮಾಡಿದ ಎರಡು ಅಂದಾಜುಗಳ ಕುರಿತು ಬನಾಜಿ ಪ್ರತಿಕ್ರಿಯಿಸಿದ್ದು, ಜುಲೈ ಅಂತ್ಯದ ವೇಳೆಗೆ 10,18,879 (10 ಲಕ್ಷಕ್ಕೂ ಹೆಚ್ಚು) ಕೋವಿಡ್ ಸಾವುಗಳು ಸಂಭವಿಸಬಹುದು ಎಂದು ಮೊದಲಿನ ವರದಿ ಹೇಳುತ್ತದೆ ಮತ್ತು ಇತ್ತೀಚಿನ ಎರಡನೆ ವರದಿ ಪ್ರಕಾರ ಸೆಪ್ಟೆಂಬರ್ ವೇಳೆಗೆ 1.4 ಮಿಲಿಯನ್ ( 14 ಲಕ್ಷ) ಕೋವಿಡ್ ಸಾವು ಸಂಭವಿಸಬಹುದು ಎಂದಿದ್ದಾರೆ.

‘ಐಎಚ್‌ಎಂಇ ಅಧ್ಯಯನದ ಅಂದಾಜಿನ ಪ್ರಕಾರ ಅಧಿಕೃತ ಮತ್ತು ದಾಖಲೆಯಿಲ್ಲದ ಸಾವುಗಳು ಇದರಲ್ಲಿ ಸೇರಿವೆ. ಎರಡನೆಯದಾಗಿ, ದಾಖಲಾದ ಸಾವುಗಳಿಗಿಂತ ದಾಖಲೆಯಿಲ್ಲದ ಸಾವುಗಳು ಮೂರು ಪಟ್ಟು ಹೆಚ್ಚಾಗುತ್ತದೆ ಎಂದು ಅಧ್ಯಯನದ ಅಂದಾಜು ಹೇಳುತ್ತಿದೆ’ ಎಂದು ಬನಾಜಿ ತಿಳಿಸಿದ್ದಾರೆ.

ಸೆಪ್ಟೆಂಬರ್ ವೇಳೆಗೆ, ಭಾರತದ ಸಾವಿನ ಸಂಖ್ಯೆ 1.4 ಮಿಲಿಯನ್ ಎಂದು ನಿರೀಕ್ಷಿಸಿದಾಗ, ಅದು ಯುಎಸ್ ಸಾವಿನ ಸಂಖ್ಯೆ ಆ ಸಮಯದಲ್ಲಿ ಆಗುವುದಕ್ಕಿಂತ ಸುಮಾರು 5 ಲಕ್ಷ ಹೆಚ್ಚಾಗುತ್ತದೆ ಎಂದು ಐಎಚ್‌ಎಂಇ ಹೇಳಿದೆ. ಸೆಪ್ಟೆಂಬರ್ ವೇಳೆಗೆ, ಯುಎಸ್ ಸಾವಿನ ಸಂಖ್ಯೆ 9,49,000 ತಲುಪಲಿದೆ ಎಂದು ಈ ಸಂಸ್ಥೆ ಅಂದಾಜು ಮಾಡಿದೆ.

ದಿ ವೈರ್‌ಗಾಗಿ ಕರಣ್ ಥಾಪರ್ ಮುರಾದ್ ಬನಾಜಿ ಅವರೊಂದಿಗೆ ನಡೆಸಿದ ಸಂದರ್ಶನದ ಪೂರ್ಣ ವಿವರಕ್ಕಾಗಿ ಈ ವಿಡಿಯೋ ನೋಡಿ….

(ಇಲ್ಲಿ ಪ್ರಕಟಿಸಿದ ವಿವರಗಳು ಗಣಿತ ತಜ್ಞ ಬನಾಜಿಯವರ ಅನಿಸಿಕೆಗಳು. ನಾನುಗೌರಿ.ಕಾಂ ಸಂಪಾದಕೀಯದ ಅಭಿಪ್ರಾಯಗಳಲ್ಲ.)


ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿ ಜನಪ್ರಿಯತೆ ದಿಢೀರ್ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...