Homeಕರೋನಾ ತಲ್ಲಣ10 ಲಕ್ಷ ಭಾರತೀಯರು ಈಗಾಗಲೇ ಕೋವಿಡ್‌ಗೆ ಬಲಿಯಾಗಿದ್ದಾರೆ, ಶೇ. 80ರಷ್ಟು ಸಾವು ದಾಖಲಾಗುತ್ತಿಲ್ಲ: ಗಣಿತ ತಜ್ಞ...

10 ಲಕ್ಷ ಭಾರತೀಯರು ಈಗಾಗಲೇ ಕೋವಿಡ್‌ಗೆ ಬಲಿಯಾಗಿದ್ದಾರೆ, ಶೇ. 80ರಷ್ಟು ಸಾವು ದಾಖಲಾಗುತ್ತಿಲ್ಲ: ಗಣಿತ ತಜ್ಞ ಮುರಾದ್ ಬನಾಜಿ

- Advertisement -
- Advertisement -

ಲಂಡನ್‌ನ ಮಿಡಲ್‌ಸೆಕ್ಸ್ ವಿಶ್ವವಿದ್ಯಾಲಯದ ಹಿರಿಯ ಗಣಿತ ಉಪನ್ಯಾಸಕರೊಬ್ಬರು, ಕರಣ್ ಥಾಪರ್‌ಗೆ ನೀಡಿದ ಸಂದರ್ಶನದಲ್ಲಿ, ಭಾರತದ ಶೇ.80ರಷ್ಟು ಕೋವಿಡ್ ಸಾವುಗಳು ದಾಖಲಾಗಿಲ್ಲ ಅಥವಾ ಅವನ್ನು ಸರ್ಕಾರಗಳು ಮುಚ್ಚಿ ಹಾಕಿವೆ ಎಂದು ಹೇಳಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಮಾರ್ಚ್ 2020ರಿಂದ ಭಾರತದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಪಥವನ್ನು (ಟ್ರಾಜೆಕ್ಟರಿ) ಸೂಕ್ಷ್ಮವಾಗಿ ಗಮನಿಸುತ್ತಿರುವ ಲಂಡನ್‌ನ ಮಿಡಲ್‌ಸೆಕ್ಸ್ ವಿಶ್ವವಿದ್ಯಾಲಯದ ಗಣಿತಶಾಸ್ತ್ರದ ಹಿರಿಯ ಉಪನ್ಯಾಸಕ, ಭಾರತೀಯ ಮೂಲದ ಮುರಾದ್ ಬನಾಜಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

2021ರ ಮೇ 8 ರ ಹೊತ್ತಿಗೆ, ಸರ್ಕಾರದ ಆರೋಗ್ಯ ಇಲಾಖೆಯ ಅಧಿಕೃತ ಸಾವಿನ ಸಂಖ್ಯೆ 2,38,000 ಕ್ಕಿಂತ ಹೆಚ್ಚಿದೆ. ಮುರಾದ್ ಬನಾಜಿ ಹೇಳುವಂತೆ, ದಾಖಲಾಗದ ಸಾವುಗಳು ಐದು ಪಟ್ಟು ಹೆಚ್ಚಿರುವ ಸಾಧ್ಯತೆ ಇದ್ದೇ ಇದೆ, ಒಟ್ಟು ಕೋವಿಡ್ ಸಾವಿನ ಸಂಖ್ಯೆ (ಅಧಿಕೃತ ಮತ್ತು ದಾಖಲೆಯಿಲ್ಲದ ಸಾವುಗಳುನ್ನು ಸೇರಿಸಿ) ಒಂದು ಮಿಲಿಯನ್ (ಹತ್ತು ಲಕ್ಷ) ದಾಟಿದೆ ಎಂದಿದ್ದಾರೆ.

ದಿ ವೈರ್‌ಗಾಗಿ ಕರಣ್ ಥಾಪರ್‌ಗೆ ನೀಡಿದ 33 ನಿಮಿಷಗಳ ಸಂದರ್ಶನದಲ್ಲಿ, ಬನಾಜಿ ಮುಂಬರುವ ತಿಂಗಳುಗಳಲ್ಲಿ ಸಾವಿನ ಸಂಖ್ಯೆ ಹೇಗೆ ಹೆಚ್ಚಾಗುತ್ತದೆ ಎಂಬುದರ ಕುರಿತು ಭಾರತೀಯ ಮತ್ತು ವಿದೇಶಿ ಸಂಸ್ಥೆಗಳ ಅಂದಾಜುಗಳ ಬಗ್ಗೆ ಮಾತನಾಡಿದ್ದಾರೆ.

ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನ ಅಂದಾಜಿನ ಪ್ರಕಾರ, ಜೂನ್ ಮಧ್ಯದ ವೇಳೆಗೆ 4,04,000 ಅಧಿಕೃತ ದಾಖಲಾದ ಸಾವುಗಳು ಸಂಭವಿಸಬಹುದು ಎನ್ನುವ ಅವರು, ಇದನ್ನು ಉತ್ಪ್ರೇಕ್ಷೆ ಎಂದು ತಿಳಿಯಬೇಡಿ ಎಂದಿದ್ದಾರೆ.

ವಾಷಿಂಗ್ಟನ್‌ನ ಇನ್‌ಸ್ಟಿಟ್ಯೂಟ್ ಫಾರ್ ಹೆಲ್ತ್ ಮೆಟ್ರಿಕ್ಸ್ ಅಂಡ್ ಎವಾಲ್ಯುಯೇಷನ್ (ಐಎಚ್‌ಎಂಇ) ಮಾಡಿದ ಎರಡು ಅಂದಾಜುಗಳ ಕುರಿತು ಬನಾಜಿ ಪ್ರತಿಕ್ರಿಯಿಸಿದ್ದು, ಜುಲೈ ಅಂತ್ಯದ ವೇಳೆಗೆ 10,18,879 (10 ಲಕ್ಷಕ್ಕೂ ಹೆಚ್ಚು) ಕೋವಿಡ್ ಸಾವುಗಳು ಸಂಭವಿಸಬಹುದು ಎಂದು ಮೊದಲಿನ ವರದಿ ಹೇಳುತ್ತದೆ ಮತ್ತು ಇತ್ತೀಚಿನ ಎರಡನೆ ವರದಿ ಪ್ರಕಾರ ಸೆಪ್ಟೆಂಬರ್ ವೇಳೆಗೆ 1.4 ಮಿಲಿಯನ್ ( 14 ಲಕ್ಷ) ಕೋವಿಡ್ ಸಾವು ಸಂಭವಿಸಬಹುದು ಎಂದಿದ್ದಾರೆ.

‘ಐಎಚ್‌ಎಂಇ ಅಧ್ಯಯನದ ಅಂದಾಜಿನ ಪ್ರಕಾರ ಅಧಿಕೃತ ಮತ್ತು ದಾಖಲೆಯಿಲ್ಲದ ಸಾವುಗಳು ಇದರಲ್ಲಿ ಸೇರಿವೆ. ಎರಡನೆಯದಾಗಿ, ದಾಖಲಾದ ಸಾವುಗಳಿಗಿಂತ ದಾಖಲೆಯಿಲ್ಲದ ಸಾವುಗಳು ಮೂರು ಪಟ್ಟು ಹೆಚ್ಚಾಗುತ್ತದೆ ಎಂದು ಅಧ್ಯಯನದ ಅಂದಾಜು ಹೇಳುತ್ತಿದೆ’ ಎಂದು ಬನಾಜಿ ತಿಳಿಸಿದ್ದಾರೆ.

ಸೆಪ್ಟೆಂಬರ್ ವೇಳೆಗೆ, ಭಾರತದ ಸಾವಿನ ಸಂಖ್ಯೆ 1.4 ಮಿಲಿಯನ್ ಎಂದು ನಿರೀಕ್ಷಿಸಿದಾಗ, ಅದು ಯುಎಸ್ ಸಾವಿನ ಸಂಖ್ಯೆ ಆ ಸಮಯದಲ್ಲಿ ಆಗುವುದಕ್ಕಿಂತ ಸುಮಾರು 5 ಲಕ್ಷ ಹೆಚ್ಚಾಗುತ್ತದೆ ಎಂದು ಐಎಚ್‌ಎಂಇ ಹೇಳಿದೆ. ಸೆಪ್ಟೆಂಬರ್ ವೇಳೆಗೆ, ಯುಎಸ್ ಸಾವಿನ ಸಂಖ್ಯೆ 9,49,000 ತಲುಪಲಿದೆ ಎಂದು ಈ ಸಂಸ್ಥೆ ಅಂದಾಜು ಮಾಡಿದೆ.

ದಿ ವೈರ್‌ಗಾಗಿ ಕರಣ್ ಥಾಪರ್ ಮುರಾದ್ ಬನಾಜಿ ಅವರೊಂದಿಗೆ ನಡೆಸಿದ ಸಂದರ್ಶನದ ಪೂರ್ಣ ವಿವರಕ್ಕಾಗಿ ಈ ವಿಡಿಯೋ ನೋಡಿ….

(ಇಲ್ಲಿ ಪ್ರಕಟಿಸಿದ ವಿವರಗಳು ಗಣಿತ ತಜ್ಞ ಬನಾಜಿಯವರ ಅನಿಸಿಕೆಗಳು. ನಾನುಗೌರಿ.ಕಾಂ ಸಂಪಾದಕೀಯದ ಅಭಿಪ್ರಾಯಗಳಲ್ಲ.)


ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿ ಜನಪ್ರಿಯತೆ ದಿಢೀರ್ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...