Homeಮುಖಪುಟಆಕ್ಸಿಜನ್ ಟ್ಯಾಂಕ್, ಕೋವಿಡ್ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಿ: ಪ್ರಧಾನಿಗೆ ಮಮತಾ ಬ್ಯಾನರ್ಜಿ ಆಗ್ರಹ

ಆಕ್ಸಿಜನ್ ಟ್ಯಾಂಕ್, ಕೋವಿಡ್ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಿ: ಪ್ರಧಾನಿಗೆ ಮಮತಾ ಬ್ಯಾನರ್ಜಿ ಆಗ್ರಹ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಆಮ್ಲಜನಕ ಪೂರೈಕೆ ಸಂಭಾವ್ಯ ಬಿಕ್ಕಟ್ಟನ್ನು ಕಾಣುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಆಮ್ಲಜನಕ ಪೂರೈಕೆ ಮತ್ತು ಕೋವಿಡ್ ಚಿಕಿತ್ಸೆಯಲ್ಲಿ ಬಳಕೆಯಾಗುವ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಬೇಕಾದ ಔಷಧಿ ಮತ್ತು ಸಲಕರಣೆಗಳ ಆಮದಿನ ಮೇಲೆ ತೆರಿಗೆ ವಿನಾಯಿತಿ ನೀಡುವಂತೆ ಕೋರಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಭಾನುವಾರ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಆರೋಗ್ಯ ಮೂಲಸೌಕರ್ಯಗಳನ್ನು ಬಲಪಡಿಸಲು, ಬಂಗಾಳ ಮತ್ತು ಭಾರತದಾದ್ಯಂತ ಕೊರೊನಾ ವೈರಸ್-ಪಾಸಿಟಿವ್ ರೋಗಿಗಳ ಚಿಕಿತ್ಸೆಗಾಗಿ ಔಷಧಿಗಳು ಮತ್ತು ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸಲು ಅವರು ಪ್ರಧಾನಿಯನ್ನು ಒತ್ತಾಯಿಸಿದ್ದಾರೆ ಎಂದು ಎನ್‌ಡಿಟಿವಿ ಮತ್ತು ಇತರ ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.

ಆಮ್ಲಜನಕ ಸಾಂದ್ರಕಗಳು ಮತ್ತು ಸಿಲಿಂಡರ್‌ಗಳಿಂದ ಕ್ರಯೋಜೆನಿಕ್ ಶೇಖರಣಾ ಟ್ಯಾಂಕ್‌ಗಳು ಮತ್ತು ಕೋವಿಡ್ ಔಷಧಿಗಳವರೆಗೆ, ಸಂಸ್ಥೆಗಳು, ವ್ಯಕ್ತಿಗಳು ಮತ್ತು ಪರೋಪಕಾರಿ ಏಜೆನ್ಸಿಗಳು ನೆರವು ನೀಡಿವೆ ಮತ್ತು ಈಗಲೂ ನೀಡಲು ಮುಂದೆ ಬರುತ್ತಿವೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. “ಖಾಸಗಿ ನೆರವು ಪ್ರೋತ್ಸಾಹಿಸಲು” ಅಂತಹ ವಸ್ತುಗಳನ್ನು ಜಿಎಸ್‌ಟಿ ಮತ್ತು ಕಸ್ಟಮ್ಸ್ ಸುಂಕದಿಂದ ವಿನಾಯಿತಿ ನೀಡುವಂತೆ ಅವರು ಕೇಂದ್ರವನ್ನು ಒತ್ತಾಯಿಸಿದ್ದಾರೆ.

“ಈ ವಸ್ತುಗಳಿಗೆ ಡ್ಯೂಟಿ ಟ್ಯಾಕ್ಸ್/ ಎಸ್‌ಜಿಎಸ್‌ಟಿ / ಸಿಜಿಎಸ್‌ಟಿ / ಐಜಿಎಸ್‌ಟಿಯಿಂದ ವಿನಾಯಿತಿ ನೀಡಬೇಕು ಎಂದು ಅನೇಕ ದಾನಿಗಳು ಮತ್ತು ಏಜೆನ್ಸಿಗಳು ರಾಜ್ಯ ಸರ್ಕಾರವನ್ನು ಸಂಪರ್ಕಿಸಿವೆ. ಈ ವಸ್ತುಗಳು ಕೇಂದ್ರದ ವ್ಯಾಪ್ತಿಗೆ ಬರುತ್ತವಾದ್ದರಿಂದ ತೆರಿಗೆ, ಸುಂಕ ರದ್ದು ಮಾಡಲು ನಾನು ವಿನಂತಿಸುತ್ತೇನೆ ಎಂದು ಮಮತಾ ಹೇಳಿದ್ದಾರೆ.

ಸಾಕಷ್ಟು ನೆರವಿನ ಸಂಸ್ಥೆಗಳು, ಜನಪರ ಸಂಘಟನೆಗಳು, ಎನ್‌ಜಿಒಗಳು ಸರಬರಾಜು ನಿರ್ಬಂಧಗಳನ್ನು ತೆಗೆದುಹಾಕಲು ಸಹಾಯ ಮಾಡುವಂತೆ, ಜಿಎಸ್‌ಟಿ/ ಕಸ್ಟಮ್ಸ್ ಸುಂಕ ಮತ್ತು ಇತರ ತೆರಿಗೆಗಳಿಂದ ವಿನಾಯಿತಿ ನೀಡುವಂತೆ ಕೇಳಿವೆ. ಕೇಂದ್ರ ಸರ್ಕಾರ ಈ ಬಿಕ್ಕಟ್ಟಿನ ಸಮಯದಲ್ಲಿ ಅದನ್ನು ಮಾಡಿದರೆ ಎಲ್ಲ ರಾಜ್ಯಗಳಿಗೂ ಅನುಕೂಲ ಆಗಲಿದೆ’ ಎಂದು ಮಮತಾ ಪತ್ರದಲ್ಲಿ ವಿವರಿಸಿದ್ದಾರೆ.

‘ಈ ರೀತಿಯ ದೇಣಿಗೆಗಳು ವೈದ್ಯಕೀಯ ಸಂಪನ್ಮೂಲಗಳ ಬೇಡಿಕೆ ಮತ್ತು ಪೂರೈಕೆಯಲ್ಲಿನ ದೊಡ್ಡ ಅಂತರವನ್ನು ಪೂರೈಸುವಲ್ಲಿ ರಾಜ್ಯ ಸರ್ಕಾರಗಳ ಪ್ರಯತ್ನಗಳಿಗೆ ಹೆಚ್ಚು ಪೂರಕವಾಗುತ್ತವೆ” ಎಂದು ಬ್ಯಾನರ್ಜಿ ಒತ್ತಿ ಹೇಳಿದ್ದಾರೆ.

ಇದು ಪಶ್ಚಿಮ ಬಂಗಾಳದ ಕೋವಿಡ್ ಬಿಕ್ಕಟ್ಟಿನ ಕುರಿತು ಮಮತಾ ಬ್ಯಾನರ್ಜಿ ಪಿಎಂ ಮೋದಿಗೆ ಬರೆದ ಮೂರನೇ ಪತ್ರವಾಗಿದೆ. ಬುಧವಾರ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ನಂತರ ಅವರು ಆಮ್ಲಜನಕ ಪೂರೈಕೆ ಬಿಕ್ಕಟ್ಟನ್ನು ಎತ್ತಿ ಶುಕ್ರವಾರ ಪತ್ರ ಬರೆದಿದ್ದರು.
ಆಮ್ಲಜನಕ ಬೇಡಿಕೆ ಈಗಾಗಲೇ ದಿನಕ್ಕೆ 470 ಮೆಟ್ರಿಕ್ ಟನ್‌ಗಳಿಗೆ ಏರಿದೆ ಮತ್ತು ಏಳರಿಂದ ಎಂಟು ದಿನಗಳಲ್ಲಿ ಇದು 550 ಮೆ.ಟನ್.ಗೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಹೇಳಿದ್ದರು.

ವಿದೇಶದಿಂದ ಬರುವ ಕೋವಿಡ್ ಸಂಬಂಧಿತ ಪರಿಹಾರ ಸಾಮಗ್ರಿಗಳ ಮೇಲಿನ ಐಜಿಎಸ್ಟಿ ಮನ್ನಾ ಮಾಡಲಾಗುವುದು ಎಂದು ಸೋಮವಾರ ಕೇಂದ್ರ ತಿಳಿಸಿದೆ.

ಮಮತಾ ಬ್ಯಾನರ್ಜಿ ರಾಜ್ಯವನ್ನು ಭಾಗಶಃ ಲಾಕ್ ಡೌನ್ ಮಾಡಲು ಆದೇಶಿಸಿದ್ದಾರೆ. ಇದರಲ್ಲಿ ಚಳುವಳಿ, ಹೋರಾಟ , ಪ್ರತಿಭಟನೆಗಳ ಮೇಲೆ ವ್ಯಾಪಕವಾದ ನಿರ್ಬಂಧಗಳಿವೆ ಮತ್ತು ರಾಜ್ಯಕ್ಕೆ ಭೇಟಿ ನೀಡುವ ಹೊರಗಿನವರು 72 ಗಂಟೆಗಳಿಗಿಂತ ಹಳೆಯದಾದ ಕೋವಿಡ್- ಋಣಾತ್ಮಕ ವರದಿಯನ್ನು ತೋರಿಸಬೇಕು ಎಂಬ ಆದೇಶ ಹೊರಡಿಸಲಾಗಿದೆ.


ಇದನ್ನೂ ಓದಿ: 10 ಲಕ್ಷ ಭಾರತೀಯರು ಈಗಾಗಲೇ ಕೋವಿಡ್‌ಗೆ ಬಲಿಯಾಗಿದ್ದಾರೆ, ಶೇ. 80ರಷ್ಟು ಸಾವು ದಾಖಲಾಗುತ್ತಿಲ್ಲ: ಗಣಿತ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...