Homeಕರೋನಾ ತಲ್ಲಣ‘ಜನ ದಂಗೆ ಏಳುವ ಮುನ್ನ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ’: ಗ್ರಾಮೀಣ ಭಾಗದ ವೈದ್ಯರ ಆಕ್ರೋಶ

‘ಜನ ದಂಗೆ ಏಳುವ ಮುನ್ನ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ’: ಗ್ರಾಮೀಣ ಭಾಗದ ವೈದ್ಯರ ಆಕ್ರೋಶ

ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದೆ. ನಮ್ಮ ಆರೋಗ್ಯ ವ್ಯವಸ್ಥೆ ಇದನ್ನೆಲ್ಲ ತಡೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ನೋವಾಗುತ್ತಿದೆ, ನಮ್ಮ ಜನರಿಗೆ ನಾವು ಹೆಲ್ಪ್ ಮಾಡೋಕೂ ಒದ್ದಾಡ್ತಾ ಇದ್ದಿವಿ...

- Advertisement -
- Advertisement -

ಕೋವಿಡ್ ಎರಡನೇ ಅಲೆ ಭಾರತವನ್ನು ತತ್ತರಿಸುವಂತೆ ಮಾಡಿದೆ. ಮೊದಲ ಅಲೆ ನಗರ ಪ್ರದೇಶದಲ್ಲಿ ತನ್ನ ಕರಾಳ ಬಾಹುಗಳನ್ನು ಚಾಚಿದ್ದರೆ, ಎರಡನೇ ಅಲೆ ಗ್ರಾಮಮಟ್ಟಕ್ಕೂ ಹರಡಿ ಅಪಾರ ಸಾವು ನೋವುಗಳಿಗೆ ಕಾರಣವಾಗಿದೆ. ನಗರಗಳಲ್ಲಿಯೇ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ, ಆಕ್ಸಿಜನ್ ಮತ್ತು ಔಷಧಗಳಿಗಾಗಿ ಹಾಹಾಕಾರವೆದ್ದಿರುವಾಗ ಗ್ರಾಮೀಣ ಪರಿಸ್ಥಿತಿಯಂತೂ ಇನ್ನು ಕೆಟ್ಟದಾಗಿದೆ. ಇಂತಹ ಸಂದರ್ಭದಲ್ಲಿ ‘ಕೋವಿಡ್ ನಿಯಂತ್ರಣದ ವಿಷಯದಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಹೀಗೇ ಮುಂದುವರೆದರೆ ಬರಲಿರುವ ದಿನಗಳಲ್ಲಿ ಜನ ದಂಗೆ ಏಳುವ ಸಾಧ್ಯತೆ ಇದೆ’ ಎಂಬ ಅಭಿಪ್ರಾಯ ವೈದ್ಯ ವಲಯದಿಂದಲೇ ಕೇಳಿಬರುತ್ತಿದೆ.

ಗ್ರಾಮೀಣ ತಾಲೂಕಾ ಭಾಗದಲ್ಲಿ ಖಾಸಗಿ ಆಸ್ಪತ್ರೆ ನಡೆಸುವ ಡಾ. ಬಿ.ಎನ್ ಪಾಟೀಲ್ ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿ “‘ಕೇವಲ ಬೆಂಗಳೂರು ಕೇಂದ್ರಿತ ನಿರ್ವಹಣೆ ಮಾಡಿದರೆ ಆಗುವುದಿಲ್ಲ. ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಲಿ. ನನ್ನನ್ನೂ ಸೇರಿ ಎಲ್ಲ ವೈದ್ಯರೂ 3 ತಿಂಗಳು ಕಾಲ ಯಾವುದೇ ಫಲಾಫೇಕ್ಷೆ ಇಲ್ಲದೇ ಕೆಲಸ ಮಾಡಬೇಕು. ಹಾಗಂತ ಹೊಸ ವೈದ್ಯರನ್ನು ಶೋಷಣೆ ಮಾಡಬಾರದು. ಅವರಿಗೆ ಸೂಕ್ತ ಸಂಬಳ ನೀಡಬೇಕು. ಸರ್ಕಾರಗಳು ಈಗಿಂದಲೇ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ತರಹದ ಜಾಹೀರಾತುಗಳನ್ನು ನಿಲ್ಲಿಸಬೇಕು. ನರ್ಸ್‌ಗಳು, ತಾಂತ್ರಿಕ ಸಿಬ್ಬಂದಿ ಮುಂತಾದವರ ಕುಟುಂಬಗಳು ನಡೆಯಲು ಅಗತ್ಯವಾದ ಸಂಬಳ ನೀಡಬೇಕು. ಬ್ಲಾಕ್ ಮಾರ್ಕೆಟಿನಲ್ಲಿ ಆಮ್ಲಜನಕ, ಇತರ ಔಷಧಿಗಳು ಖುಲ್ಲಂಖುಲ್ಲಾ ಮಾರಾಟ ಆಗುತ್ತಿವೆ. ಅದನ್ನು ಕೂಡಲೇ ತಡೆಯಲು ಕಠಿಣ ಕ್ರಮ ಘೋಷಿಸಬೇಕು’ ಎನ್ನುತ್ತಾರೆ.

ಹಿಂದುಳಿದ ತಾಲೂಕಾದ ಸಿಂಧನೂರಿನ ಅನ್ನದಾನೀಶ್ವರ ಆಸ್ಪತ್ರೆಯ ವೈದ್ಯ, ರಾಜ್ಯ ಸರ್ಜನ್ ವೈದ್ಯರ ಸಂಘದ ನಿಯೋಜಿತ ಅಧ್ಯಕ್ಷರು ಆಗಿರುವ ಡಾ.ಬಿ.ಎನ್ ಪಾಟೀಲ್ “ಕೋವಿಡ್ ಸಾವುಗಳು ಹೆಚ್ಚುತ್ತಿವೆಯಲ್ಲ, ಅದರಲ್ಲಿ ಬಹುಪಾಲು ಸಾವುಗಳು ಸರ್ಕಾರದ ಅವ್ಯವಸ್ಥೆಯಿಂದಾದ ಸಾವುಗಳು. ಮುಖ್ಯವಾಗಿ ಆಮ್ಲಜನಕ ಕೊರತೆಯೇ ಈಗಿನ ಬಹುಪಾಲು ಸಾವಿಗಳಿಗೆ ಕಾರಣ. ನಮ್ಮ ಖಾಸಗಿ ಆಸ್ಪತ್ರೆಗಳನ್ನು ಬಿಟ್ಟು ಕೊಡಲೂ ನಾವು ರೆಡಿ ಆಗಬೇಕು. ಮೆಡಿಕಲ್ ಎಮರ್ಜೆನ್ಸಿ ಸದ್ಯದ ತುರ್ತು ಅಗತ್ಯ. ನಾವೆಲ್ಲ (ವೈದ್ಯರು) ಎಂ.ಎಸ್, ಎಂ.ಡಿ, ಸ್ಪೆಷಾಲಿಸ್ಟ್ ಈ ಎಲ್ಲ ಅಹಂಗಳಿಂದ ಹೊರಗೆ ಬಂದು ಅಸಹಾಯಕ ರೋಗಿಗಳ ಪರ ಕೆಲಸ ಮಾಡಬೇಕು. ಇಲ್ಲದಿದ್ದರೆ, ಇಲ್ಲಿ ಸಾವಿನ ಸಂಖ್ಯೆ ಹೆಚ್ಚಿದಂತೆ, ಲಾಕ್‌ಡೌನ್ ಕಾರಣಕ್ಕೆ ಆರ್ಥಿಕ ವ್ಯವಸ್ಥೆ ಕುಸಿದಂತೆ ವರ್ಗ ಸಂಘರ್ಷ ಸಂಭವಿಸಲಿದೆ. ಮುಂದೆ ಕೋವಿಡ್ ಸಾವು ನೋಡಿದ ಕುಟಂಬಗಳ ಜನರು ಆಸ್ಪತ್ರೆಗಳ ಮೇಲೆ ಕಲ್ಲು ತೂರಬಹುದು, ವೈದ್ಯರ ಮೇಲೆ ಹಲ್ಲೆ ಮಾಡಬಹುದು. ಆಹಾರ ಧಾನ್ಯ ಪಡೆಯಲು ದಂಗೆ ಏಳಬಹುದು… ಅಸಹಾಯಕ ಸ್ಥಿತಿಯಲ್ಲಿ ಜನ ಇನ್ನೇನು ಮಾಡುತ್ತಾರೆ? ಇದು ತೀರಾ ಬಿಕ್ಕಟ್ಟಿನ ಸಮಯ” ಎಂದು ಆತಂಕ ವ್ಯಕ್ತಪಡಿಸಿದರು.

ಡಾ. ಬಿ.ಎನ್ ಪಾಟೀಲ್ ಮತ್ತು ಅವರ ಪತ್ನಿ ಡಾ. ಪದ್ಮಾ ಪಾಟೀಲ್

“ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದೆ. ನಮ್ಮ ಆರೋಗ್ಯ ವ್ಯವಸ್ಥೆ ಇದನ್ನೆಲ್ಲ ತಡೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ನೋವಾಗುತ್ತಿದೆ, ನಮ್ಮ ಜನರಿಗೆ ನಾವು ಹೆಲ್ಪ್ ಮಾಡೋಕೂ ಒದ್ದಾಡ್ತಾ ಇದ್ದಿವಲ್ಲ” ಎಂದು ಹೆಸರು ಹೇಳಲಿಚ್ಚಿಸದ ಧಾರವಾಡ ಜಿಲ್ಲೆಯ ಸರ್ಕಾರಿ ವೈದ್ಯರೊಬ್ಬರು ಹೇಳಿದ ಮಾತಿದು.

ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಯಾವುದು ಕೋವಿಡ್ ಸಾವು ಎಂದು ನಿರ್ಧರಿಸುವ ಮಾನದಂಡದ ವ್ಯಾಖ್ಯಾನವೇ ಇಲ್ಲ. ಹೀಗಾಗಿ ದಾಖಲೆಗಳಲ್ಲಿ ಕೋವಿಡ್ ಸಾವಿನ ಸಂಖ್ಯೆ ಕಡಿಮೆ ಕಾಣುತ್ತಿದೆ. ಮೆಡಿಕಲ್ ಎಮರ್ಜೆಸಿ ಲಾಗೂ ಮಾಡಿ ಎಲ್ಲ ವೈದ್ಯಕೀಯ ವ್ಯವಸ್ಥೆಗಳನ್ನು ಸರ್ಕಾರ ವಶಕ್ಕೆ ತೆಗೆದುಕೊಳ್ಳಬೇಕು’ ಎಂದರು.

ಗ್ರಾಮೀಣ ಹಿನ್ನೆಲೆಯ, 10ನೆ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ, ಈಗ ಗ್ರಾಮೀಣ ವಲಯದಲ್ಲೇ ಕೆಲಸ ಮಾಡುತ್ತಿರುವ ಈ ಇಬ್ಬರು ಯುವ ವೈದ್ಯರ ಆಕ್ರೋಶ, ಕಾಳಜಿ ಸರ್ಕಾರಕ್ಕೆ ಅರ್ಥವಾಗುತ್ತದೆಯೇ?

ಮೊನ್ನೆ ಡಾ. ಪಾಟೀಲ್ ಮತ್ತು ಅವರ ಪತ್ನಿ ಡಾ. ಪದ್ಮಾ ತಮ್ಮ ಅನ್ನದಾನೀಶ್ವರ ಆಸ್ಪತ್ರೆ ಮತ್ತು ಬಸವೇಶ್ವರ ಬ್ಯಾಂಕ್ (ಇದು ಸಿಂಧನೂರಿನ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರ ನೇತೃತ್ವದ ಬ್ಯಾಂಕ್) ಸಹಯೋಗದಲ್ಲಿ ಸರ್ಕಾರಿ ಆಸ್ಪತ್ರೆಗೆ 100 ಜಂಬೋ ಸಿಲಿಂಡರ್ ವಿತರಿಸಿ, ಮಾಧ್ಯಮಗಳ ಎದುರು ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಡಾ. ಪದ್ಮಾ ಪಾಟೀಲ್ ಅವರನ್ನು ಮಾತಾಡಿಸಿದಾಗ, ‘ನಾನು ಹಳ್ಳಿ ಹಿನ್ನೆಲೆಯಿಂದಲೇ ಬಂದವಳು. ರಾಜಕೀಯ ಹಿನ್ನಲೆಯ ಕುಟುಂಬ ನಮ್ಮದು. ಈಗಿನ ಸಂದರ್ಭ ಹೇಗಿದೆ ಎಂದರೆ ಎಲ್ಲರೂ ಸಮರೋಪಾದಿಯಲ್ಲಿ ಕೆಲಸ ಮಾಡಲೇಬೇಕು. ನಮ್ಮ ಜೀವಗಳನ್ನು ರಕ್ಷಿಸಿಕೊಳ್ಳುತ್ತಲೇ ಅಸಹಾಯಕ ಜನಸಾಮಾನ್ಯರ ಜೀವಗಳನ್ನೂ ರಕ್ಷಿಸಬೇಕು. ರೊಕ್ಕ ಗಳಿಸಿದೋ ಆಮೇಲೆ ಇದ್ದೇ ಇರುತ್ತೆ. ಸರ್ಕಾರ ನಮ್ಮೆಲ್ಲ ವೈದ್ಯ ಸಿಬ್ಬಂದಿಯನ್ನು ದುಡಿಸಿಕೊಳ್ಳಲಿ’ ಎಂದರು.

ಕೇಂದ್ರ ಸರ್ಕಾರ, ಮೋದಿ ಸೇರಿದಂತೆ ನಮ್ಮ ಯಡಿಯೂರಪ್ಪ, ಸುಧಾಕರ್ ಈ ವಿಷಯ ಗಮನಿಸಲಿ. ಮೆಡಿಕಲ್ ಎಮರ್ಜೆನ್ಸಿ ಘೋಷಿಸಿ, ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ಸಾಧಿಸಿ ಎಂಬುದು ವೈದ್ಯರ ಅಭಿಪ್ರಾಯ ಕೂಡ ಆಗಿದೆ ಎಂಬುದನ್ನು ಅರಿತುಕೊಳ್ಳಲಿ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿ ಜನಪ್ರಿಯತೆ ದಿಢೀರ್ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...