Homeಕರೋನಾ ತಲ್ಲಣ‘ಜನ ದಂಗೆ ಏಳುವ ಮುನ್ನ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ’: ಗ್ರಾಮೀಣ ಭಾಗದ ವೈದ್ಯರ ಆಕ್ರೋಶ

‘ಜನ ದಂಗೆ ಏಳುವ ಮುನ್ನ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ’: ಗ್ರಾಮೀಣ ಭಾಗದ ವೈದ್ಯರ ಆಕ್ರೋಶ

ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದೆ. ನಮ್ಮ ಆರೋಗ್ಯ ವ್ಯವಸ್ಥೆ ಇದನ್ನೆಲ್ಲ ತಡೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ನೋವಾಗುತ್ತಿದೆ, ನಮ್ಮ ಜನರಿಗೆ ನಾವು ಹೆಲ್ಪ್ ಮಾಡೋಕೂ ಒದ್ದಾಡ್ತಾ ಇದ್ದಿವಿ...

- Advertisement -
- Advertisement -

ಕೋವಿಡ್ ಎರಡನೇ ಅಲೆ ಭಾರತವನ್ನು ತತ್ತರಿಸುವಂತೆ ಮಾಡಿದೆ. ಮೊದಲ ಅಲೆ ನಗರ ಪ್ರದೇಶದಲ್ಲಿ ತನ್ನ ಕರಾಳ ಬಾಹುಗಳನ್ನು ಚಾಚಿದ್ದರೆ, ಎರಡನೇ ಅಲೆ ಗ್ರಾಮಮಟ್ಟಕ್ಕೂ ಹರಡಿ ಅಪಾರ ಸಾವು ನೋವುಗಳಿಗೆ ಕಾರಣವಾಗಿದೆ. ನಗರಗಳಲ್ಲಿಯೇ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ, ಆಕ್ಸಿಜನ್ ಮತ್ತು ಔಷಧಗಳಿಗಾಗಿ ಹಾಹಾಕಾರವೆದ್ದಿರುವಾಗ ಗ್ರಾಮೀಣ ಪರಿಸ್ಥಿತಿಯಂತೂ ಇನ್ನು ಕೆಟ್ಟದಾಗಿದೆ. ಇಂತಹ ಸಂದರ್ಭದಲ್ಲಿ ‘ಕೋವಿಡ್ ನಿಯಂತ್ರಣದ ವಿಷಯದಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಹೀಗೇ ಮುಂದುವರೆದರೆ ಬರಲಿರುವ ದಿನಗಳಲ್ಲಿ ಜನ ದಂಗೆ ಏಳುವ ಸಾಧ್ಯತೆ ಇದೆ’ ಎಂಬ ಅಭಿಪ್ರಾಯ ವೈದ್ಯ ವಲಯದಿಂದಲೇ ಕೇಳಿಬರುತ್ತಿದೆ.

ಗ್ರಾಮೀಣ ತಾಲೂಕಾ ಭಾಗದಲ್ಲಿ ಖಾಸಗಿ ಆಸ್ಪತ್ರೆ ನಡೆಸುವ ಡಾ. ಬಿ.ಎನ್ ಪಾಟೀಲ್ ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿ “‘ಕೇವಲ ಬೆಂಗಳೂರು ಕೇಂದ್ರಿತ ನಿರ್ವಹಣೆ ಮಾಡಿದರೆ ಆಗುವುದಿಲ್ಲ. ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಲಿ. ನನ್ನನ್ನೂ ಸೇರಿ ಎಲ್ಲ ವೈದ್ಯರೂ 3 ತಿಂಗಳು ಕಾಲ ಯಾವುದೇ ಫಲಾಫೇಕ್ಷೆ ಇಲ್ಲದೇ ಕೆಲಸ ಮಾಡಬೇಕು. ಹಾಗಂತ ಹೊಸ ವೈದ್ಯರನ್ನು ಶೋಷಣೆ ಮಾಡಬಾರದು. ಅವರಿಗೆ ಸೂಕ್ತ ಸಂಬಳ ನೀಡಬೇಕು. ಸರ್ಕಾರಗಳು ಈಗಿಂದಲೇ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ತರಹದ ಜಾಹೀರಾತುಗಳನ್ನು ನಿಲ್ಲಿಸಬೇಕು. ನರ್ಸ್‌ಗಳು, ತಾಂತ್ರಿಕ ಸಿಬ್ಬಂದಿ ಮುಂತಾದವರ ಕುಟುಂಬಗಳು ನಡೆಯಲು ಅಗತ್ಯವಾದ ಸಂಬಳ ನೀಡಬೇಕು. ಬ್ಲಾಕ್ ಮಾರ್ಕೆಟಿನಲ್ಲಿ ಆಮ್ಲಜನಕ, ಇತರ ಔಷಧಿಗಳು ಖುಲ್ಲಂಖುಲ್ಲಾ ಮಾರಾಟ ಆಗುತ್ತಿವೆ. ಅದನ್ನು ಕೂಡಲೇ ತಡೆಯಲು ಕಠಿಣ ಕ್ರಮ ಘೋಷಿಸಬೇಕು’ ಎನ್ನುತ್ತಾರೆ.

ಹಿಂದುಳಿದ ತಾಲೂಕಾದ ಸಿಂಧನೂರಿನ ಅನ್ನದಾನೀಶ್ವರ ಆಸ್ಪತ್ರೆಯ ವೈದ್ಯ, ರಾಜ್ಯ ಸರ್ಜನ್ ವೈದ್ಯರ ಸಂಘದ ನಿಯೋಜಿತ ಅಧ್ಯಕ್ಷರು ಆಗಿರುವ ಡಾ.ಬಿ.ಎನ್ ಪಾಟೀಲ್ “ಕೋವಿಡ್ ಸಾವುಗಳು ಹೆಚ್ಚುತ್ತಿವೆಯಲ್ಲ, ಅದರಲ್ಲಿ ಬಹುಪಾಲು ಸಾವುಗಳು ಸರ್ಕಾರದ ಅವ್ಯವಸ್ಥೆಯಿಂದಾದ ಸಾವುಗಳು. ಮುಖ್ಯವಾಗಿ ಆಮ್ಲಜನಕ ಕೊರತೆಯೇ ಈಗಿನ ಬಹುಪಾಲು ಸಾವಿಗಳಿಗೆ ಕಾರಣ. ನಮ್ಮ ಖಾಸಗಿ ಆಸ್ಪತ್ರೆಗಳನ್ನು ಬಿಟ್ಟು ಕೊಡಲೂ ನಾವು ರೆಡಿ ಆಗಬೇಕು. ಮೆಡಿಕಲ್ ಎಮರ್ಜೆನ್ಸಿ ಸದ್ಯದ ತುರ್ತು ಅಗತ್ಯ. ನಾವೆಲ್ಲ (ವೈದ್ಯರು) ಎಂ.ಎಸ್, ಎಂ.ಡಿ, ಸ್ಪೆಷಾಲಿಸ್ಟ್ ಈ ಎಲ್ಲ ಅಹಂಗಳಿಂದ ಹೊರಗೆ ಬಂದು ಅಸಹಾಯಕ ರೋಗಿಗಳ ಪರ ಕೆಲಸ ಮಾಡಬೇಕು. ಇಲ್ಲದಿದ್ದರೆ, ಇಲ್ಲಿ ಸಾವಿನ ಸಂಖ್ಯೆ ಹೆಚ್ಚಿದಂತೆ, ಲಾಕ್‌ಡೌನ್ ಕಾರಣಕ್ಕೆ ಆರ್ಥಿಕ ವ್ಯವಸ್ಥೆ ಕುಸಿದಂತೆ ವರ್ಗ ಸಂಘರ್ಷ ಸಂಭವಿಸಲಿದೆ. ಮುಂದೆ ಕೋವಿಡ್ ಸಾವು ನೋಡಿದ ಕುಟಂಬಗಳ ಜನರು ಆಸ್ಪತ್ರೆಗಳ ಮೇಲೆ ಕಲ್ಲು ತೂರಬಹುದು, ವೈದ್ಯರ ಮೇಲೆ ಹಲ್ಲೆ ಮಾಡಬಹುದು. ಆಹಾರ ಧಾನ್ಯ ಪಡೆಯಲು ದಂಗೆ ಏಳಬಹುದು… ಅಸಹಾಯಕ ಸ್ಥಿತಿಯಲ್ಲಿ ಜನ ಇನ್ನೇನು ಮಾಡುತ್ತಾರೆ? ಇದು ತೀರಾ ಬಿಕ್ಕಟ್ಟಿನ ಸಮಯ” ಎಂದು ಆತಂಕ ವ್ಯಕ್ತಪಡಿಸಿದರು.

ಡಾ. ಬಿ.ಎನ್ ಪಾಟೀಲ್ ಮತ್ತು ಅವರ ಪತ್ನಿ ಡಾ. ಪದ್ಮಾ ಪಾಟೀಲ್

“ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದೆ. ನಮ್ಮ ಆರೋಗ್ಯ ವ್ಯವಸ್ಥೆ ಇದನ್ನೆಲ್ಲ ತಡೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ನೋವಾಗುತ್ತಿದೆ, ನಮ್ಮ ಜನರಿಗೆ ನಾವು ಹೆಲ್ಪ್ ಮಾಡೋಕೂ ಒದ್ದಾಡ್ತಾ ಇದ್ದಿವಲ್ಲ” ಎಂದು ಹೆಸರು ಹೇಳಲಿಚ್ಚಿಸದ ಧಾರವಾಡ ಜಿಲ್ಲೆಯ ಸರ್ಕಾರಿ ವೈದ್ಯರೊಬ್ಬರು ಹೇಳಿದ ಮಾತಿದು.

ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಯಾವುದು ಕೋವಿಡ್ ಸಾವು ಎಂದು ನಿರ್ಧರಿಸುವ ಮಾನದಂಡದ ವ್ಯಾಖ್ಯಾನವೇ ಇಲ್ಲ. ಹೀಗಾಗಿ ದಾಖಲೆಗಳಲ್ಲಿ ಕೋವಿಡ್ ಸಾವಿನ ಸಂಖ್ಯೆ ಕಡಿಮೆ ಕಾಣುತ್ತಿದೆ. ಮೆಡಿಕಲ್ ಎಮರ್ಜೆಸಿ ಲಾಗೂ ಮಾಡಿ ಎಲ್ಲ ವೈದ್ಯಕೀಯ ವ್ಯವಸ್ಥೆಗಳನ್ನು ಸರ್ಕಾರ ವಶಕ್ಕೆ ತೆಗೆದುಕೊಳ್ಳಬೇಕು’ ಎಂದರು.

ಗ್ರಾಮೀಣ ಹಿನ್ನೆಲೆಯ, 10ನೆ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ, ಈಗ ಗ್ರಾಮೀಣ ವಲಯದಲ್ಲೇ ಕೆಲಸ ಮಾಡುತ್ತಿರುವ ಈ ಇಬ್ಬರು ಯುವ ವೈದ್ಯರ ಆಕ್ರೋಶ, ಕಾಳಜಿ ಸರ್ಕಾರಕ್ಕೆ ಅರ್ಥವಾಗುತ್ತದೆಯೇ?

ಮೊನ್ನೆ ಡಾ. ಪಾಟೀಲ್ ಮತ್ತು ಅವರ ಪತ್ನಿ ಡಾ. ಪದ್ಮಾ ತಮ್ಮ ಅನ್ನದಾನೀಶ್ವರ ಆಸ್ಪತ್ರೆ ಮತ್ತು ಬಸವೇಶ್ವರ ಬ್ಯಾಂಕ್ (ಇದು ಸಿಂಧನೂರಿನ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರ ನೇತೃತ್ವದ ಬ್ಯಾಂಕ್) ಸಹಯೋಗದಲ್ಲಿ ಸರ್ಕಾರಿ ಆಸ್ಪತ್ರೆಗೆ 100 ಜಂಬೋ ಸಿಲಿಂಡರ್ ವಿತರಿಸಿ, ಮಾಧ್ಯಮಗಳ ಎದುರು ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಡಾ. ಪದ್ಮಾ ಪಾಟೀಲ್ ಅವರನ್ನು ಮಾತಾಡಿಸಿದಾಗ, ‘ನಾನು ಹಳ್ಳಿ ಹಿನ್ನೆಲೆಯಿಂದಲೇ ಬಂದವಳು. ರಾಜಕೀಯ ಹಿನ್ನಲೆಯ ಕುಟುಂಬ ನಮ್ಮದು. ಈಗಿನ ಸಂದರ್ಭ ಹೇಗಿದೆ ಎಂದರೆ ಎಲ್ಲರೂ ಸಮರೋಪಾದಿಯಲ್ಲಿ ಕೆಲಸ ಮಾಡಲೇಬೇಕು. ನಮ್ಮ ಜೀವಗಳನ್ನು ರಕ್ಷಿಸಿಕೊಳ್ಳುತ್ತಲೇ ಅಸಹಾಯಕ ಜನಸಾಮಾನ್ಯರ ಜೀವಗಳನ್ನೂ ರಕ್ಷಿಸಬೇಕು. ರೊಕ್ಕ ಗಳಿಸಿದೋ ಆಮೇಲೆ ಇದ್ದೇ ಇರುತ್ತೆ. ಸರ್ಕಾರ ನಮ್ಮೆಲ್ಲ ವೈದ್ಯ ಸಿಬ್ಬಂದಿಯನ್ನು ದುಡಿಸಿಕೊಳ್ಳಲಿ’ ಎಂದರು.

ಕೇಂದ್ರ ಸರ್ಕಾರ, ಮೋದಿ ಸೇರಿದಂತೆ ನಮ್ಮ ಯಡಿಯೂರಪ್ಪ, ಸುಧಾಕರ್ ಈ ವಿಷಯ ಗಮನಿಸಲಿ. ಮೆಡಿಕಲ್ ಎಮರ್ಜೆನ್ಸಿ ಘೋಷಿಸಿ, ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ಸಾಧಿಸಿ ಎಂಬುದು ವೈದ್ಯರ ಅಭಿಪ್ರಾಯ ಕೂಡ ಆಗಿದೆ ಎಂಬುದನ್ನು ಅರಿತುಕೊಳ್ಳಲಿ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿ ಜನಪ್ರಿಯತೆ ದಿಢೀರ್ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...