Homeಕರೋನಾ ತಲ್ಲಣ‘ಜನ ದಂಗೆ ಏಳುವ ಮುನ್ನ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ’: ಗ್ರಾಮೀಣ ಭಾಗದ ವೈದ್ಯರ ಆಕ್ರೋಶ

‘ಜನ ದಂಗೆ ಏಳುವ ಮುನ್ನ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ’: ಗ್ರಾಮೀಣ ಭಾಗದ ವೈದ್ಯರ ಆಕ್ರೋಶ

ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದೆ. ನಮ್ಮ ಆರೋಗ್ಯ ವ್ಯವಸ್ಥೆ ಇದನ್ನೆಲ್ಲ ತಡೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ನೋವಾಗುತ್ತಿದೆ, ನಮ್ಮ ಜನರಿಗೆ ನಾವು ಹೆಲ್ಪ್ ಮಾಡೋಕೂ ಒದ್ದಾಡ್ತಾ ಇದ್ದಿವಿ...

- Advertisement -
- Advertisement -

ಕೋವಿಡ್ ಎರಡನೇ ಅಲೆ ಭಾರತವನ್ನು ತತ್ತರಿಸುವಂತೆ ಮಾಡಿದೆ. ಮೊದಲ ಅಲೆ ನಗರ ಪ್ರದೇಶದಲ್ಲಿ ತನ್ನ ಕರಾಳ ಬಾಹುಗಳನ್ನು ಚಾಚಿದ್ದರೆ, ಎರಡನೇ ಅಲೆ ಗ್ರಾಮಮಟ್ಟಕ್ಕೂ ಹರಡಿ ಅಪಾರ ಸಾವು ನೋವುಗಳಿಗೆ ಕಾರಣವಾಗಿದೆ. ನಗರಗಳಲ್ಲಿಯೇ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ, ಆಕ್ಸಿಜನ್ ಮತ್ತು ಔಷಧಗಳಿಗಾಗಿ ಹಾಹಾಕಾರವೆದ್ದಿರುವಾಗ ಗ್ರಾಮೀಣ ಪರಿಸ್ಥಿತಿಯಂತೂ ಇನ್ನು ಕೆಟ್ಟದಾಗಿದೆ. ಇಂತಹ ಸಂದರ್ಭದಲ್ಲಿ ‘ಕೋವಿಡ್ ನಿಯಂತ್ರಣದ ವಿಷಯದಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಹೀಗೇ ಮುಂದುವರೆದರೆ ಬರಲಿರುವ ದಿನಗಳಲ್ಲಿ ಜನ ದಂಗೆ ಏಳುವ ಸಾಧ್ಯತೆ ಇದೆ’ ಎಂಬ ಅಭಿಪ್ರಾಯ ವೈದ್ಯ ವಲಯದಿಂದಲೇ ಕೇಳಿಬರುತ್ತಿದೆ.

ಗ್ರಾಮೀಣ ತಾಲೂಕಾ ಭಾಗದಲ್ಲಿ ಖಾಸಗಿ ಆಸ್ಪತ್ರೆ ನಡೆಸುವ ಡಾ. ಬಿ.ಎನ್ ಪಾಟೀಲ್ ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿ “‘ಕೇವಲ ಬೆಂಗಳೂರು ಕೇಂದ್ರಿತ ನಿರ್ವಹಣೆ ಮಾಡಿದರೆ ಆಗುವುದಿಲ್ಲ. ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಲಿ. ನನ್ನನ್ನೂ ಸೇರಿ ಎಲ್ಲ ವೈದ್ಯರೂ 3 ತಿಂಗಳು ಕಾಲ ಯಾವುದೇ ಫಲಾಫೇಕ್ಷೆ ಇಲ್ಲದೇ ಕೆಲಸ ಮಾಡಬೇಕು. ಹಾಗಂತ ಹೊಸ ವೈದ್ಯರನ್ನು ಶೋಷಣೆ ಮಾಡಬಾರದು. ಅವರಿಗೆ ಸೂಕ್ತ ಸಂಬಳ ನೀಡಬೇಕು. ಸರ್ಕಾರಗಳು ಈಗಿಂದಲೇ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ತರಹದ ಜಾಹೀರಾತುಗಳನ್ನು ನಿಲ್ಲಿಸಬೇಕು. ನರ್ಸ್‌ಗಳು, ತಾಂತ್ರಿಕ ಸಿಬ್ಬಂದಿ ಮುಂತಾದವರ ಕುಟುಂಬಗಳು ನಡೆಯಲು ಅಗತ್ಯವಾದ ಸಂಬಳ ನೀಡಬೇಕು. ಬ್ಲಾಕ್ ಮಾರ್ಕೆಟಿನಲ್ಲಿ ಆಮ್ಲಜನಕ, ಇತರ ಔಷಧಿಗಳು ಖುಲ್ಲಂಖುಲ್ಲಾ ಮಾರಾಟ ಆಗುತ್ತಿವೆ. ಅದನ್ನು ಕೂಡಲೇ ತಡೆಯಲು ಕಠಿಣ ಕ್ರಮ ಘೋಷಿಸಬೇಕು’ ಎನ್ನುತ್ತಾರೆ.

ಹಿಂದುಳಿದ ತಾಲೂಕಾದ ಸಿಂಧನೂರಿನ ಅನ್ನದಾನೀಶ್ವರ ಆಸ್ಪತ್ರೆಯ ವೈದ್ಯ, ರಾಜ್ಯ ಸರ್ಜನ್ ವೈದ್ಯರ ಸಂಘದ ನಿಯೋಜಿತ ಅಧ್ಯಕ್ಷರು ಆಗಿರುವ ಡಾ.ಬಿ.ಎನ್ ಪಾಟೀಲ್ “ಕೋವಿಡ್ ಸಾವುಗಳು ಹೆಚ್ಚುತ್ತಿವೆಯಲ್ಲ, ಅದರಲ್ಲಿ ಬಹುಪಾಲು ಸಾವುಗಳು ಸರ್ಕಾರದ ಅವ್ಯವಸ್ಥೆಯಿಂದಾದ ಸಾವುಗಳು. ಮುಖ್ಯವಾಗಿ ಆಮ್ಲಜನಕ ಕೊರತೆಯೇ ಈಗಿನ ಬಹುಪಾಲು ಸಾವಿಗಳಿಗೆ ಕಾರಣ. ನಮ್ಮ ಖಾಸಗಿ ಆಸ್ಪತ್ರೆಗಳನ್ನು ಬಿಟ್ಟು ಕೊಡಲೂ ನಾವು ರೆಡಿ ಆಗಬೇಕು. ಮೆಡಿಕಲ್ ಎಮರ್ಜೆನ್ಸಿ ಸದ್ಯದ ತುರ್ತು ಅಗತ್ಯ. ನಾವೆಲ್ಲ (ವೈದ್ಯರು) ಎಂ.ಎಸ್, ಎಂ.ಡಿ, ಸ್ಪೆಷಾಲಿಸ್ಟ್ ಈ ಎಲ್ಲ ಅಹಂಗಳಿಂದ ಹೊರಗೆ ಬಂದು ಅಸಹಾಯಕ ರೋಗಿಗಳ ಪರ ಕೆಲಸ ಮಾಡಬೇಕು. ಇಲ್ಲದಿದ್ದರೆ, ಇಲ್ಲಿ ಸಾವಿನ ಸಂಖ್ಯೆ ಹೆಚ್ಚಿದಂತೆ, ಲಾಕ್‌ಡೌನ್ ಕಾರಣಕ್ಕೆ ಆರ್ಥಿಕ ವ್ಯವಸ್ಥೆ ಕುಸಿದಂತೆ ವರ್ಗ ಸಂಘರ್ಷ ಸಂಭವಿಸಲಿದೆ. ಮುಂದೆ ಕೋವಿಡ್ ಸಾವು ನೋಡಿದ ಕುಟಂಬಗಳ ಜನರು ಆಸ್ಪತ್ರೆಗಳ ಮೇಲೆ ಕಲ್ಲು ತೂರಬಹುದು, ವೈದ್ಯರ ಮೇಲೆ ಹಲ್ಲೆ ಮಾಡಬಹುದು. ಆಹಾರ ಧಾನ್ಯ ಪಡೆಯಲು ದಂಗೆ ಏಳಬಹುದು… ಅಸಹಾಯಕ ಸ್ಥಿತಿಯಲ್ಲಿ ಜನ ಇನ್ನೇನು ಮಾಡುತ್ತಾರೆ? ಇದು ತೀರಾ ಬಿಕ್ಕಟ್ಟಿನ ಸಮಯ” ಎಂದು ಆತಂಕ ವ್ಯಕ್ತಪಡಿಸಿದರು.

ಡಾ. ಬಿ.ಎನ್ ಪಾಟೀಲ್ ಮತ್ತು ಅವರ ಪತ್ನಿ ಡಾ. ಪದ್ಮಾ ಪಾಟೀಲ್

“ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದೆ. ನಮ್ಮ ಆರೋಗ್ಯ ವ್ಯವಸ್ಥೆ ಇದನ್ನೆಲ್ಲ ತಡೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ನೋವಾಗುತ್ತಿದೆ, ನಮ್ಮ ಜನರಿಗೆ ನಾವು ಹೆಲ್ಪ್ ಮಾಡೋಕೂ ಒದ್ದಾಡ್ತಾ ಇದ್ದಿವಲ್ಲ” ಎಂದು ಹೆಸರು ಹೇಳಲಿಚ್ಚಿಸದ ಧಾರವಾಡ ಜಿಲ್ಲೆಯ ಸರ್ಕಾರಿ ವೈದ್ಯರೊಬ್ಬರು ಹೇಳಿದ ಮಾತಿದು.

ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಯಾವುದು ಕೋವಿಡ್ ಸಾವು ಎಂದು ನಿರ್ಧರಿಸುವ ಮಾನದಂಡದ ವ್ಯಾಖ್ಯಾನವೇ ಇಲ್ಲ. ಹೀಗಾಗಿ ದಾಖಲೆಗಳಲ್ಲಿ ಕೋವಿಡ್ ಸಾವಿನ ಸಂಖ್ಯೆ ಕಡಿಮೆ ಕಾಣುತ್ತಿದೆ. ಮೆಡಿಕಲ್ ಎಮರ್ಜೆಸಿ ಲಾಗೂ ಮಾಡಿ ಎಲ್ಲ ವೈದ್ಯಕೀಯ ವ್ಯವಸ್ಥೆಗಳನ್ನು ಸರ್ಕಾರ ವಶಕ್ಕೆ ತೆಗೆದುಕೊಳ್ಳಬೇಕು’ ಎಂದರು.

ಗ್ರಾಮೀಣ ಹಿನ್ನೆಲೆಯ, 10ನೆ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ, ಈಗ ಗ್ರಾಮೀಣ ವಲಯದಲ್ಲೇ ಕೆಲಸ ಮಾಡುತ್ತಿರುವ ಈ ಇಬ್ಬರು ಯುವ ವೈದ್ಯರ ಆಕ್ರೋಶ, ಕಾಳಜಿ ಸರ್ಕಾರಕ್ಕೆ ಅರ್ಥವಾಗುತ್ತದೆಯೇ?

ಮೊನ್ನೆ ಡಾ. ಪಾಟೀಲ್ ಮತ್ತು ಅವರ ಪತ್ನಿ ಡಾ. ಪದ್ಮಾ ತಮ್ಮ ಅನ್ನದಾನೀಶ್ವರ ಆಸ್ಪತ್ರೆ ಮತ್ತು ಬಸವೇಶ್ವರ ಬ್ಯಾಂಕ್ (ಇದು ಸಿಂಧನೂರಿನ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರ ನೇತೃತ್ವದ ಬ್ಯಾಂಕ್) ಸಹಯೋಗದಲ್ಲಿ ಸರ್ಕಾರಿ ಆಸ್ಪತ್ರೆಗೆ 100 ಜಂಬೋ ಸಿಲಿಂಡರ್ ವಿತರಿಸಿ, ಮಾಧ್ಯಮಗಳ ಎದುರು ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಡಾ. ಪದ್ಮಾ ಪಾಟೀಲ್ ಅವರನ್ನು ಮಾತಾಡಿಸಿದಾಗ, ‘ನಾನು ಹಳ್ಳಿ ಹಿನ್ನೆಲೆಯಿಂದಲೇ ಬಂದವಳು. ರಾಜಕೀಯ ಹಿನ್ನಲೆಯ ಕುಟುಂಬ ನಮ್ಮದು. ಈಗಿನ ಸಂದರ್ಭ ಹೇಗಿದೆ ಎಂದರೆ ಎಲ್ಲರೂ ಸಮರೋಪಾದಿಯಲ್ಲಿ ಕೆಲಸ ಮಾಡಲೇಬೇಕು. ನಮ್ಮ ಜೀವಗಳನ್ನು ರಕ್ಷಿಸಿಕೊಳ್ಳುತ್ತಲೇ ಅಸಹಾಯಕ ಜನಸಾಮಾನ್ಯರ ಜೀವಗಳನ್ನೂ ರಕ್ಷಿಸಬೇಕು. ರೊಕ್ಕ ಗಳಿಸಿದೋ ಆಮೇಲೆ ಇದ್ದೇ ಇರುತ್ತೆ. ಸರ್ಕಾರ ನಮ್ಮೆಲ್ಲ ವೈದ್ಯ ಸಿಬ್ಬಂದಿಯನ್ನು ದುಡಿಸಿಕೊಳ್ಳಲಿ’ ಎಂದರು.

ಕೇಂದ್ರ ಸರ್ಕಾರ, ಮೋದಿ ಸೇರಿದಂತೆ ನಮ್ಮ ಯಡಿಯೂರಪ್ಪ, ಸುಧಾಕರ್ ಈ ವಿಷಯ ಗಮನಿಸಲಿ. ಮೆಡಿಕಲ್ ಎಮರ್ಜೆನ್ಸಿ ಘೋಷಿಸಿ, ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ಸಾಧಿಸಿ ಎಂಬುದು ವೈದ್ಯರ ಅಭಿಪ್ರಾಯ ಕೂಡ ಆಗಿದೆ ಎಂಬುದನ್ನು ಅರಿತುಕೊಳ್ಳಲಿ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೋವಿಡ್ ನಿರ್ವಹಣೆಯಲ್ಲಿ ವೈಫಲ್ಯ: ನರೇಂದ್ರ ಮೋದಿ ಜನಪ್ರಿಯತೆ ದಿಢೀರ್ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...