Homeಕರ್ನಾಟಕಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

’ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್‌ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ'

- Advertisement -
- Advertisement -

ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್ ಎಂಬ ಪದ ಬಳಸದೆ ಇಂದಿನಿಂದ ಕಠಿಣ ಲಾಕ್‌ಡೌನ್ ಘೋಷಿಸಿದೆ. ಜನ ಸಾಮನ್ಯರಿಗೆ ಪರಿಹಾರ ನೀಡುವ ಬದಲು ರಸ್ತೆಗೆ ಇಳಿಯುವ ಜನರ ಮೇಲೆ ದರ್ಪ ಪ್ರದರ್ಶಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ‘ಲಾಕ್‌ಡೌನ್ ಅಲ್ಲದ ಕಠಿಣ ಲಾಕ್‌ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್‌ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್‌ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್‌ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್‌ಡೌನ್ ಆಗಿತ್ತು’ ಎಂದಿದ್ದಾರೆ.

’ಲಾಕ್‌ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ನಾನು ಮೊದಲೇ ಹೇಳಿದ್ದೆ. ಹಾಗೆ ಹೇಳುವಾಗ ಲಾಕ್‌ಡೌನ್ ನಿಂದ ಜನ ಜೀವನಕ್ಕೆ ಆಗುವ ತೊಂದರೆಗಳಿಗೆ ಪರಿಹಾರ ಕ್ರಮಗಳಿರಬೇಕು, ಜನರ ಅಗತ್ಯವನ್ನು ಸರ್ಕಾರ ಭರಿಸಬೇಕೆಂದು ಹೇಳಿದ್ದೆ. ಆದರೆ, ಲಾಕ್ ಡೌನ್ ಸಂದರ್ಭದಲ್ಲಿ ನೀಡಬೇಕಾದ ಪರಿಹಾರ ಕ್ರಮಗಳಿಂದ ವಿಮುಖವಾಗಿರುವ ಸರ್ಕಾರ ಬೇಜವಾಬ್ದಾರಿತನ ತೋರಿದೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್ ಟ್ಯಾಂಕ್, ಕೋವಿಡ್ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಿ: ಪ್ರಧಾನಿಗೆ ಮಮತಾ ಬ್ಯಾನರ್ಜಿ ಆಗ್ರಹ

’ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್‌ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ. ಕಠಿಣ ನಿಯಮ ಎಂದು ಹೇಳಿ ಲಾಕ್‌ಡೌನ್ ನಿಂದ ದೂರ ನಿಂತಿದೆ. ಕೇಂದ್ರವೂ ಇದೇ ಕುತಂತ್ರದ ನಡೆಯನ್ನು ಅನುಸರಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಲಾಕ್‌ಡೌನ್ ಎಂದರೆ ಜನ ಹೊರ ಹೋಗಲಾಗದ ಪರಿಸ್ಥಿತಿ. ಬದುಕಿನ ಅಗತ್ಯವನ್ನು ದುಡಿದುಕೊಳ್ಳಲಾಗದ ದುಸ್ಥಿತಿ. ಸರ್ಕಾರವೇ ಇದರ ಹೊಣೆಗಾರ, ಅದಕ್ಕೆ ಸರ್ಕಾರವೇ ಪರಿಹಾರ ನೀಡಬೇಕು ಎಂಬುದೂ ನನ್ನ ನಿಲುವು, ಸಲಹೆ. ಸರ್ಕಾರ ಸಂಪೂರ್ಣ ಲಾಕ್‌ಡೌನ್ ಘೋಷಿಸಬೇಕಿತ್ತು ಮತ್ತು ಪರಿಹಾರ ನೀಡಬೇಕಿತ್ತು. ಆದರೆ ಈವರೆಗೆ ಪರಿಹಾರ ಪ್ಯಾಕೇಜ್ ನ ಮಾತೇ ಇಲ್ಲ’ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ಓದಿ: ತಮಿಳು ನಾಡಿನಲ್ಲಿ ಕೋಮು ರಾಜಕೀಯಕ್ಕೆ ಸ್ಥಾನವಿಲ್ಲ!: ಸಸಿಕಾಂತ್ ಸೆಂಥಿಲ್

ಮಹಾರಾಷ್ಟ್ರ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಕೇಂದ್ರ ಸರ್ಕಾರಕ್ಕೆ ಕಾಯದೇ ಲಾಕ್ ಡೌನ್ ಮಾಡಿವೆ. ಜನರಿಗೆ ಆಹಾರ ಸೇರಿದಂತೆ ಪರಿಹಾರ ಘೋಷಿಸಿವೆ. ಆಂಧ್ರದಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಇದು ಸರ್ಕಾರಗಳ ಜವಾಬ್ದಾರಿಯುತ ನಡೆ. ಆದರೆ, ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೇಂದ್ರದ ದುರ್ನಡೆಯನ್ನು ರಾಜ್ಯ ಅನುಸರಿಸಬಾರದು ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಮನೆಗಳಿಂದ ಹೊರ ಬರುವ ಜನರ ಮೇಲೆ ದರ್ಪ ಪ್ರದರ್ಶಿಸುವುದನ್ನು ಬಿಟ್ಟು,  ಜನ ಹೊರಗೆ ಬಾರದಂತೆ ಅವರ ಅಗತ್ಯಗಳನ್ನು ಪೂರೈಸುವ, ಪರಿಹಾರ ಒದಗಿಸುವ ಕ್ರಮಗಳತ್ತ ಸರ್ಕಾರ ಗಮನಹರಿಸಬೇಕು. ಈ ವಿಚಾರದಲ್ಲಿ ನೆರೆ ರಾಜ್ಯಗಳು ಅನುಸರಿಸುತ್ತಿರುವ ಕ್ರಮಗಳನ್ನು ರಾಜ್ಯ ಅವಲೋಕಿಸಬೇಕು. ಜನರ ಆರೋಗ್ಯ ಎಷ್ಟು ಮುಖ್ಯವೋ ಜನರ ಬದುಕೂ ಅಷ್ಟೇ ಮುಖ್ಯವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...