Homeಮುಖಪುಟಕೋಮು ಸಾಮರಸ್ಯ ಕದಡಿದ ಆರೋಪ: ಪ್ರಕಾಶ್ ಬೆಳವಾಡಿ ವಿರುದ್ಧ ದೂರು ಸಲ್ಲಿಸಿದ ವಕೀಲ

ಕೋಮು ಸಾಮರಸ್ಯ ಕದಡಿದ ಆರೋಪ: ಪ್ರಕಾಶ್ ಬೆಳವಾಡಿ ವಿರುದ್ಧ ದೂರು ಸಲ್ಲಿಸಿದ ವಕೀಲ

- Advertisement -
- Advertisement -

‘ಕೋಮು ಸಾಮರಸ್ಯ ಕದಡಿದ ಆರೋಪದ ಮೇಲೆ ರಂಗಕರ್ಮಿ ಪ್ರಕಾಶ್ ಬೆಳವಾಡಿ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಬೆಳಗಾವಿ ಎಸ್‌ಪಿ ಅವರಿಗೆ ಅಥಣಿಯ ವಕೀಲರಾದ ಭೀಮನಗೌಡ ಪರಗೊಂಡ ದೂರು ಸಲ್ಲಿಸಿದ್ದಾರೆ. ದೂರಿನ ಪ್ರತಿಯನ್ನು ಹಿರಿಯ ಪೊಲೀಸ್ ಅಧಿಕಾರಿಗಳಿಗೂ ತಲುಪಿಸಿದ್ದಾರೆ.

ಬಂಗಾಳ ಚುನಾವಣೆ ಫಲಿತಾಂಶದ ನಂತರ ಪ್ರಕಾಶ್ ಬೆಳವಾಡಿ ಹಾಕಿದ್ದ ಫೇಸ್‌ಬುಕ್ ಪೋಸ್ಟಿನಲ್ಲಿ ಅವರು, ‘ಸದ್ಯದಲ್ಲೇ ಬಂಗಾಳದಲ್ಲಿ ಮುಸ್ಲಿಮರ ಮೇಲೆ ವ್ಯವಸ್ಥಿತ, ಭಯಾನಕ ದಾಳಿ ನಡೆಯಲಿದೆ, ಯಾರೂ ಇದನ್ನು ತಡೆಯಲಾಗದು’ ಎಂದು ಬರೆದಿದ್ದಲ್ಲದೇ, 2002ರ ಗುಜರಾತ್ ಹತ್ಯಾಕಾಂಡವನ್ನು ಸಮರ್ಥೀಸುವ ರೀತಿಯಲ್ಲಿ ಬರೆದಿದ್ದರು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ನಂತರ ಅವರು ತಮ್ಮ ಪೋಸ್ಟ್ ಅನ್ನು ಡಿಲೀಟ್ ಮಾಡಿ ಪ್ರೋಫೈಲ್ ಅನ್ನು ಡಿ-ಆಕ್ಟಿವೇಟ್ ಮಾಡಿದ್ದರು.

ಈ ಕುರಿತು ಅಥಣಿಯಲ್ಲಿ ದೂರು ಸಲ್ಲಿಸಲು ಓಡಾಡಿದ ವಕೀಲ ಭೀಮನಗೌಡ ಪರಗೊಂಡರಿಗೆ ಪೊಲೀಸರು ಹಲವು ತಾಂತ್ರಿಕ ಸಮಸ್ಯೆಗಳನ್ನು (ಸೈಬರ್ ಕಾನೂನುಗಳ ತಿಳುವಳಿಕೆಯ ಕೊರತೆ ಅಥವಾ ಇಂತಹ ಕೇಸುಗಳಲ್ಲಿ ಅವರಿಗೆ ಸೂಕ್ತ ಅಧಿಕಾರವೇ ಇಲ್ಲದಿರಬಹುದು) ಮುಂದೆ ಮಾಡಿದರು.

ಈಗ ಅಥಣಿಯ ಪೊಲೀಸರ ಸಲಹೆಯಂತೆ, ಪರಗೊಂಡ ಅವರು, ನೇರವಾಗಿ ಬೆಳಗಾವಿ ಎಸ್.ಪಿ ಮತ್ತು ರಾಜ್ಯದ ಇತರ ಹಿರಿಯ ಪೊಲೀಸ್ ಅಧಿಕಾರಿಗಳಿಗೆ, ಬೆಳವಾಡಿ ವಿರುದ್ಧ ದೂರು ದಾಖಲಿಸಿ ಎಂದು ಮನವಿ ಸಲ್ಲಿಸಿದ್ದಾರೆ. ತಮ್ಮ ದೂರನ್ನು ರಿಜಿಸ್ಟ್ರೆಡ್ ಪೋಸ್ಟ್ ಮೂಲಕವಲ್ಲದೇ, ವ್ಯಾಟ್ಸಾಪ್ ಮತ್ತು ಇ-ಮೇಲ್ ಮೂಲಕವು ಎಸ್‌ಪಿ ಅವರಿಗೆ ತಲುಪಿಸಿದ್ದಾರೆ.

ಪ್ರಕಾಶ್ ಬೆಳವಾಡಿ ವಿರುದ್ಧ ದೂರು ನೀಡಿದ ಭೀಮನಗೌಡ ಪರಗೊಂಡ

ಈ ಬಗ್ಗೆ ನಾನುಗೌರಿ.ಕಾಂ ಬೆಳಗಾವಿಯ ಎಸ್‌ಪಿ ಲಕ್ಷ್ಮಣ ನಿಂಬರಗಿ ಅವರನ್ನು ಸಂಪರ್ಕಿಸಿದಾಗ, ‘ಬೇರೆ ಕೆಲಸಗಳ ಒತ್ತಡದಿಂದ ವಾಟ್ಸಾಪ್ ನೋಡಲು ನೋಡಿಲ್ಲ. ನೋಡಿದ ತಕ್ಷಣ ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಮಾಡುತ್ತೇನೆ. ನಾಳೆ ಸಂಜೆಯೊಳಗೆ ತೀರ್ಮಾನ ಹೇಳುತ್ತೇನೆ’ ಎಂದರು.

ಪ್ರಕಾಶ್ ಬೆಳವಾಡಿಯವರ ಪೋಸ್ಟ್‌ಗೆ ಸಾಕಷ್ಟು ಸಾಮಾಜಿಕ ಜಾಲತಾಣ ಬಳಕೆದಾರರು ಆಕ್ಷೇಪ ವ್ಯಕ್ತಪಡಿಸಿದ್ದು, ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದರು.


ಇದನ್ನೂ ಓದಿ: ’ಬಂಗಾಳದಲ್ಲಿ ಮುಸ್ಲಿಮರ ಮೇಲೆ ಭೀಕರ ದಾಳಿ ನಡೆಯಲಿದೆ’- ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕಾಶ್‌‌ ಬೆಳವಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...