Homeಕರೋನಾ ತಲ್ಲಣಕೇಂದ್ರ ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ, ಬೇಜವಾಬ್ದಾರಿತನೇ ಆಕ್ಸಿಜನ್ ಬಿಕ್ಕಟ್ಟಿಗೆ ಕಾರಣ: ರಾಜೇಂದ್ರ ಪ್ರಸಾದ್

ಕೇಂದ್ರ ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ, ಬೇಜವಾಬ್ದಾರಿತನೇ ಆಕ್ಸಿಜನ್ ಬಿಕ್ಕಟ್ಟಿಗೆ ಕಾರಣ: ರಾಜೇಂದ್ರ ಪ್ರಸಾದ್

- Advertisement -
- Advertisement -

ಕಳೆದ ವರ್ಷ ಕೋವಿಡ್‌ನಿಂದ ಬೇರೆ ಬೇರೆ ದೇಶಗಳು ಆಕ್ಸಿಜನ್‌ ಕೊರತೆ ಸಮಸ್ಯೆಯನ್ನು ಎದುರಿಸಿದ್ದವು. ಇದನ್ನರಿತ್ತಿದ್ದ ಭಾರತವು ಕೂಡ ಕೋವಿಡ್‌ ಎರಡನೇ ಅಲೆಯನ್ನು ಎದುರಿಸಲು ಸಮರ್ಪಕ ತಯಾರಿ ಮಾಡಿಕೊಳ್ಳದೇ ಇರುವುದು ಸರ್ಕಾರದ ಬೇಜವಾಬ್ದಾರಿತನವನ್ನು ತೋರಿಸುತ್ತದೆ ಎಂದು ಪ್ರಸಾದ್‌ ಗ್ಯಾಸ್‌ ಸಪ್ಲೈಯರ್ಸ್‌ ಮಾಲೀಕರು ಮತ್ತು ಸಂಕಥನದ ಸಂಪಾದಕರಾಗಿರುವ ರಾಜೇಂದ್ರ ಪ್ರಸಾದ್‌ ಅವರು ಅಭಿಪ್ರಾಯಪಟ್ಟರು.

ಕರ್ನಾಟಕ ಜನಾರೋಗ್ಯ ಚಳವಳಿ ಸಂಘಟನೆಯು ಕರ್ನಾಟಕ ಕೋವಿಡ್‌ ವಾಲೆಂಟಿಯರ್ಸ್‌ ಟೀಮ್‌ ಮತ್ತು ಜನಸಹಾಯ ಸಹಭಾಗಿತ್ವದಲ್ಲಿ ಆಯೋಜಿಸಿದ್ದ `ಆಕ್ಸಿಜನ್‌ ಸಮಸ್ಯೆಯ ಮೂಲ ಎಲ್ಲಿದೆ?’ ವೆಬಿನಾರ್ ಮತ್ತು ಸಮಾಲೋಚನ ಸಭೆಯಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಮೊದಲಿನಿಂದಲೂ ಆಕ್ಸಿಜನ್ ವಿಷಯದಲ್ಲಿ ನಿರ್ಲಕ್ಷ್ಯ ಧೋರಣೆಯನ್ನು ತೋರಿಸುತ್ತಲೇ ಬಂದಿದೆ. ದೇಶದ ಬೇರೆ ಬೇರೆ ರಾಜ್ಯಗಳು ಕೋವಿಡ್‌ ಎರಡನೇ ಅಲೆ ಎದುರಿಸಲು ಪೂರ್ವ ಸಿದ್ಧತೆ ನಡೆಸಿದ್ದವು. ಆದರೆ ನಮ್ಮ ರಾಜ್ಯ ಸರ್ಕಾರವು ಈ ಕುರಿತು ಯಾವುದೇ ಪೂರ್ವ ಸಿದ್ಧತೆ ನಡೆಸಿಲ್ಲದೇ ಇರುವುದು ಕೋವಿಡ್‌ ಪಿಡುಗು ಹೆಚ್ಚಾಗಲು ಕಾರಣವಾಯಿತು ಎಂದರು.

ಕೋವಿಡ್‌ ಎರಡನೇ ಅಲೆ ಉಲ್ಬಣಗೊಂಡ ಸಮಯದಲ್ಲಾದರೂ ಬೇರೆ ಬೇರೆ ದೇಶಗಳಿಂದ ಆಕ್ಸಿಜನ್‌ ಕಾನ್ಸಟ್ರೇಟರ್‌, ಸಿಲೆಂಡರ್‌ಗಳನ್ನು ಆಮದು ಮಾಡಿಕೊಳ್ಳಬೇಕಿತ್ತು. ಆದರೆ ಸರ್ಕಾರವು ತಾನೂ ಮಾಡಲಿಲ್ಲ, ಬದಲಿಗೆ ಸಾರ್ವಜನಿಕರು ಸೇವೆ ಮಾಡುತ್ತಿರುವಾಗ ಅವರಿಗೆ ಜಿಎಸ್‌ಟಿಯನ್ನು ವಿಧಿಸುತ್ತಾ ಸಮಸ್ಯೆ ಮಾಡುತ್ತಿದೆ ಎಂದರು.

ಕೋವಿಡ್‌ ಪೂರ್ವಸಿದ್ಧತೆಯಾಗಿ ಬೇರೆ ಬೇರೆ ಜಿಲ್ಲೆಗಳಲ್ಲಿರುವ ಆಕ್ಸಿಜನ್‌ ಘಟಕಗಳನ್ನು ಸೋಂಕಿತರಿಗೆ ಅನುಗುಣವಾಗಿ ವಿವಿಧ ಜಿಲ್ಲೆಗಳಿಗೆ ವಿತರಣೆ ಮಾಡಬಹುದಿತ್ತು. ಆದರೆ ರಾಜ್ಯ ಸರ್ಕಾರಕ್ಕೆ ಯಾವುದೇ ಮುನ್ನೋಟ ಇರದೇ ಇದ್ದ ಕಾರಣ ಚಾಮರಾಜನಗರದಂತಹ ದುರ್ಘಟನೆ ನಡೆಯಲು ಕಾರಣವಾಗಿದೆ. ಕರ್ನಾಟಕದ ದಕ್ಷಿಣ ಭಾಗದಲ್ಲಿ ಹಲವು ಸೌಲಭ್ಯಗಳು ಇರುವಾಗಲೂ ತೀರಾ ಸಮಸ್ಯೆ ಉಂಟಾಗಿರುವಾಗ ಸಾರಿಗೆ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳೇ ಇಲ್ಲದೇ ಇರುವ ಉತ್ತರ ಕರ್ನಾಟಕದಲ್ಲಿ ಕೋವಿಡ್‌ ಸಾಂಕ್ರಾಮಿಕವನ್ನು ಹೇಗೆ ಎದುರಿಸುತ್ತಾರೆ ಎಂದು ಅವರು ಪ್ರಶ್ನಿಸಿದರು.

ಆಮ್ಲಜನಕದ ನ್ಯಾಯಯುತ ವಿತರಣೆ ಕೇಂದ್ರ ಸರ್ಕಾರದಿಂದ ಸಾಧ್ಯವಿಲ್ಲವೆಂದು ಅರಿತ ಸುಪ್ರೀಂ ಕೋರ್ಟ್ ತಾನು ಆ ಹೊಣೆಯನ್ನು ಟಾಸ್ಕ್ ಫೋರ್ಸ್ ಸಮಿತಿಗೆ ನೀಡಿದೆ. ಆದರೆ ಅಲ್ಲಿಯೂ ಆಮ್ಲಜನಕ ಉತ್ಪಾದನೆ, ವಿತರಣೆ ಕುರಿತು ತಜ್ಞರು ಇಲ್ಲ. ನಮ್ಮ ರಾಜ್ಯ ಸರ್ಕಾರ ಕೂಡ ಈ ವಿಚಾರದಲ್ಲಿ ತಜ್ಞರನ್ನು ಪರಿಗಣಿಸುತ್ತಿಲ್ಲ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಕಾರ್ಯೋನ್ಮುಖವಾಗಬೇಕು. ಕೋವಿಡ್‌ ಎರಡನೇ ಅಲೆ ಶಿಖರ ಮುಟ್ಟಿರುವ ಇಂದಿನ ದಿನಗಳಲ್ಲಿ ಮುಂಬರುವ ಕೋವಿಡ್‌ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಸಜ್ಜಾಗಲೇಬೇಕು. ಈಗಲಾದರೂ ಜಿಲ್ಲೆ, ತಾಲ್ಲೂಕು ಹೋಬಳಿ ಮಟ್ಟದಲ್ಲಿ ಪರಿಣಿತರ ಸಮಿತಿ ರಚಿಸಿ ಎಲ್ಲರಿಗೂ ಎಲ್ಲಾ ಜಿಲ್ಲೆಗಳಿಗೂ ಲಿಕ್ವಿಡ್‌ ರೂಪದ ಆಕ್ಸಿಜನ್‌ ಬಳಕೆಗೆ ಸಿಗುವಂತೆ ಮಾಡಬೇಕು. ಸಾಧ್ಯವಾದಲ್ಲಿ ವಿದೇಶಗಳಿಂದ ಆಕ್ಸಿಜನ್‌ ಕಾನ್ಸಂಟ್ರೇಟರ್‌, ಸಿಲೆಂಡರ್‌ಗಳನ್ನು ಆಮದು ಮಾಡಿಕೊಳ್ಳಬೇಕು. ಖಾಸಗಿ ಸಹಭಾಗಿತ್ವದಲ್ಲಿ ಈಗಲಾದರೂ ಆಕ್ಸಿಜನ್‌ ಕಾನ್ಸಟ್ರೇಟರ್‌ಗಳನ್ನು ಸ್ಥಾಪಿಸಲು ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.

ಸರ್ಕಾರದ ಪ್ರಯತ್ನ ಮಾತ್ರವಲ್ಲದೇ ಸಾಮುದಾಯಿಕ ಪ್ರಯತ್ನಗಳು ಕೂಡ ಆಗಬೇಕಿದ್ದು, ಗ್ರಾಮೀಣ ಭಾಗದಲ್ಲಿರುವ ಸಮುದಾಯ ಭವನ, ಕಲ್ಯಾಣ ಮಂಟಪಗಳನ್ನು ಕೋವಿಡ್‌ ಸೆಂಟರ್‌ಗಳಾಗಿ ಪುನರ್‌ಸ್ಥಾಪಿಸಬೇಕು. ಇಬ್ಬರು ಸೋಂಕಿತರಿಗೆ ಒಂದು ಸಿಲೆಂಡರ್‌ನಂತೆ ಆಕ್ಸಿಜನ್‌ ಪೂರೈಸಿದಲ್ಲಿ ಸೋಂಕಿತರ ಆರೋಗ್ಯ ಸುಧಾರಿಸುವಂತೆ ನೋಡಿಕೊಳ್ಳಬಹುದು. ಸಿಖ್‌ ಸಮುದಾಯವು ಗುರುದ್ವಾರಗಳಲ್ಲಿ ಆಕ್ಸಿಜನ್‌ ಬೆಡ್‌ಗಳನ್ನು ಸ್ಥಾಪಿಸಿರುವುದು ಸಾಮುದಾಯಿಕ ಪ್ರಯತ್ನಕ್ಕೆ ಉದಾಹರಣೆಯಾಗಿದೆ ಎಂದರು.

ಸರ್ಕಾರ ಕೋವಿಡ್ ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸಬೇಕಿತ್ತು. ಆಕ್ಸಿಜನ್‌ ಕಾನ್ಸಟ್ರೇಟರ್‌, ಆಕ್ಸಿಜನ್‌ ಸಿಲೆಂಡರ್‌ ತರಿಬೇಕಾದದ್ದು, ಸರ್ಕಾರದ ಜವಾಬ್ದಾರಿಯಾಗಿತ್ತು. ಆದರೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಜನರು ಸಾಯುತ್ತಿರುವುದನ್ನು ನಾವು ನೋಡಿದ್ದೇವೆ. ನಾಗರೀಕರಾಗಿ ಈ ಹೊಣೆಯನ್ನು ನಾವು ನಮ್ಮ ಮೇಲೆ ಹಾಕಿಕೊಂಡು ಕೆಲಸ ಮಾಡುತ್ತಿದ್ದೇವೆ. ಎರಡು ಮತ್ತು ಮೂರನೇ ಅಲೆ ನಡುವೆ ಹೆಚ್ಚು ಸಮಯವಿಲ್ಲದೇ ಇರುವುದರಿಂದ ಸರ್ಕಾರವು ಹೆಚ್ಚು ಮುತುವರ್ಜಿಯಿಂದ ಕೆಲಸ ಮಾಡುವಂತೆ ನಾಗರೀಕರಾಗಿ ನಾವು ಒತ್ತಾಯಿಸಬೇಕು ಎಂದು ಕರ್ನಾಟಕ ಜನಾರೋಗ್ಯ ಚಳವಳಿಯ ಡಾ. ಅಖಿಲಾ ವಾಸನ್‌ ಅಭಿಪ್ರಾಯಪಟ್ಟರು.

ಪ್ರಸ್ತುತ ಬೆಂಗಳೂರಿನಲ್ಲಿ ಉಂಟಾಗಿರುವ ಆರೋಗ್ಯ ಬಿಕ್ಕಟ್ಟು ಜಿಲ್ಲಾ ಮಟ್ಟದಲ್ಲಿಯೂ ಆರಂಭವಾಗಿವೆ. ನಾವು ಬೆಂಗಳೂರು ಮಾತ್ರವಲ್ಲದೇ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿರುವ ಆರೋಗ್ಯ ಅವ್ಯವಸ್ಥೆಯನ್ನು ಬಯಲಿಗೆಳೆದು, ಅದನ್ನು ಕೂಡಲೇ ಸರಿಪಡಿಸುವಂತೆ ಒತ್ತಾಯಿಸಬೇಕು ಎಂದು ಅವರು ತಿಳಿಸಿದರು.

ಡಾ. ವಾಸು ಎಚ್.ವಿ ಅವರು ಮಾತನಾಡಿ “ಕಳೆದ ವರ್ಷವೇ ತಜ್ಞರು ಎರಡನೇ ಅಲೆ ಬಗ್ಗೆ ಎಚ್ಚರಿಸಿದ್ದರು. ಆದರೆ ಮಾರ್ಚ್ ತಿಂಗಳಿನಲ್ಲಿ ಈ ದೇಶದ ಆರೋಗ್ಯ ಸಚಿವರು ನಾವು ಕೋವಿಡ್‌ ಅಂತ್ಯದಲ್ಲಿದ್ದೇವೆ ಎಂದು ಹೇಳಿಕೆ ನೀಡಿ ಅದನ್ನು ಕಡೆಗಣಿಸಿದರು. ಅದೇ ರೀತಿಯಲ್ಲಿ ಕರ್ನಾಟಕ ಸರ್ಕಾರವು ಸಹ ಏಪ್ರಿಲ್ ಮೂರರಂದು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದು ಮೇ 5ರಂದು ರಾಜ್ಯದಲ್ಲಿ ಹತ್ತಿರತ್ತಿರ ನಾಲ್ಕು ಲಕ್ಷ ಸಕ್ರಿಯ ಪ್ರಕರಣಗಳು ಇರುವ ಸಾಧ್ಯತೆಯಿದೆ ಎಂದು ಹೇಳಿತ್ತು. ಅದೇ ರೀತಿಯಲ್ಲಿ ಮೇ 5ರಂದು ನಮ್ಮ ರಾಜ್ಯದಲ್ಲಿ 4,60,000 ಪ್ರಕರಣಗಳಿದ್ದವು. ಅಂದರೆ ಸರ್ಕಾರಕ್ಕೆ ಗೊತ್ತಿದ್ದರೂ ಇಂತಹ ಸಂದರ್ಭದಲ್ಲಿ ಯಾವ ರೀತಿಯಲ್ಲಿ ಸಮರೋಪಾದಿಯಲ್ಲಿ ಕಾರ್ಯಚರಣೆ ನಡೆಯಬೇಕೊ ಹಾಗೆ ಅದು ಮಾಡಲಿಲ್ಲ. ಆಕ್ಸಿಜನ್ ಬಿಕ್ಕಟ್ಟು ಪರಿಹರಿಸಲು ಇತರೆಡೆಗಳಿಂದ ನೆರವು ಪಡೆದುಕೊಳ್ಳಲು ಇವತ್ತಿನವರೆಗೂ ಸಹ ಸರ್ಕಾರ ಯತ್ನಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಎಂಸಿ-92 ಬ್ಯಾಚ್‌ನ ವೈದ್ಯರೆಲ್ಲರೂ ಸೇರಿ ಕೋವಿಡ್‌ ಸೋಂಕಿತರಿಗೆ ಉಚಿತವಾಗಿ ನೆರವು ನೀಡಲು ಮುಂದಾಗಿದ್ದೇವೆ. ಬೇರೆ ಬೇರೆ ದೇಶಗಳಲ್ಲಿರುವ ವೈದ್ಯರು ಸೇರಿ ಬೆಂಗಳೂರಿಗೆ 350 ಆಕ್ಸಿಜೆನ್‌ ಕಾನ್ಸಂಟ್ರೇಟರ್‌ಗಳನ್ನು ಕಳುಹಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.


ಇದನ್ನೂ ಓದಿ: ಬೆಡ್, ಆಕ್ಸಿಜನ್, ವ್ಯಾಕ್ಸಿನ್, ಸಮಗ್ರ ಪಡಿತರ & ಆರ್ಥಿಕ ನೆರವು ನೀಡಿ: 400 ಸಾಮಾಜಿಕ ಕಾರ್ಯಕರ್ತರ ಜನಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...